ETV Bharat / state

ಯಾರು ಏನೇ ಹೇಳಿದ್ರೂ ಸರಿ, ಟಿಪ್ಪು ಜಯಂತಿ ಆಚರಿಸಲು ಬದ್ಧ: ಬಿಜೆಪಿಗರಿಗೆ ಶರತ್ ಬಚ್ಚೇಗೌಡ ಸವಾಲು - ಶರತ್ ಬಚ್ಚೇಗೌಡ ಟಿಪ್ಪು ಸುತ್ತಾನ್ ಜಯಂತಿ ಹೇಳಿಕೆ

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಅವರ ಪುತ್ರ, ಹೊಸಕೋಟೆ ಟಿಕೆಟ್​ ಆಕಾಂಕ್ಷಿ ಶರತ್ ಬಚ್ಚೇಗೌಡ ಬಿಜೆಪಿಗೆ ಮತ್ತೊಂದು ಶಾಕ್​ ಕೊಟ್ಟಿದ್ದಾರೆ. ಮೊದಲಿನಿಂದಲೂ ಟಿಪ್ಪು ಜಯಂತಿ ವಿರೋಧಿಸುತ್ತ ಬಂದಿರುವ ಬಿಜೆಪಿ ನಾಯಕರಿಗೆ ಶರತ್​ ಬಚ್ಚೇಗೌಡರ ಹೇಳಿಕೆ ಮುಜುಗರ ತಂದಿಟ್ಟಿದೆ. ಈಗ ತಾವೇ ಮುಂದೆ ನಿಂತು ಮುಂಬರುವ ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಶರತ್ ಬಚ್ಚೇಗೌಡ
author img

By

Published : Oct 25, 2019, 5:59 PM IST

ಹೊಸಕೋಟೆ: ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದ್ರೆ ಇದಕ್ಕೆ ತದ್ವಿರುದ್ಧ ಎಂಬಂತೆ ಅದೇ ಪಕ್ಷದ ಟಿಕೆಟ್​ ಆಕಾಂಕ್ಷಿ ಶರತ್​ ಬಚ್ಚೇಗೌಡ ಟಿಪ್ಪು ಜಯಂತಿ ಆಚರಿಸುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದಾರೆ.

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಮತ್ತು ಹೊಸಕೋಟೆ ಉಪಚುನಾವಣೆಯ ಟಿಕೆಟ್​ ಆಕಾಂಕ್ಷಿಯಾಗಿರುವ ಶರತ್ ಬಚ್ಚೇಗೌಡ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಈಗ ತಾವೇ ಮುಂದೆ ನಿಂತು ಮುಂಬರುವ ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಗುರುವಾರ ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ‌ ಮಾತನಾಡಿ, ಟಿಪ್ಪು ಜಯಂತಿ ಆಚರಣೆ ಮಾಡಬೇಡಿ ಎಂದು ಬಹಳ ಜನ ಹೇಳಿದರೂ, ಆದರೆ ನಾನು ಅವರ ಮಾತನ್ನು ಕೇಳುವುದಿಲ್ಲ. ಟಿಪ್ಪು ಜಯಂತಿ ಆಚರಣೆ ಮಾಡೇ ತೀರುತ್ತೇನೆ ಎಂದು ಹೇಳಿದ್ದಾರೆ.

ಯಾರು ಏನೇ ಅಂದ್ರೂ ಟಿಪ್ಪು ಜಯಂತಿ ಮಾಡೇ ತಿರುತ್ತೇನೆ: ಶರತ್ ಬಚ್ಚೇಗೌಡ

ನನ್ನ ಗ್ರಾಮ ಬೆಂಡಿಗಾನಹಳ್ಳಿ ಪಕ್ಕದಲ್ಲಿರುವ ರಸನಹಳ್ಳಿಯಲ್ಲಿ ನಾನೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಿಸುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿಗೇ ಸವಾಲ್ ಹಾಕಿದ್ದಾರೆ.

ಹೊಸಕೋಟೆ ಶಾಸಕರಾಗಿದ್ದ ಎಂಟಿಬಿ ನಾಗರಾಜು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ ಉಪಚುನಾವಣೆ ನಡೆಯಲಿದೆ. ಆದರೆ ಬಿಜೆಪಿ ನಾಯಕರು ಎಂಟಿಬಿ ನಾಗರಾಜ್​ಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಹಾಗಾಗಿ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದು, ಮುಸ್ಲಿಂ ವರ್ಗದ ಜನರ ಮತವನ್ನು ಸೆಳೆಯರು ಯೋಜನೆ ರೂಪಿಸಿದ್ದಾರೆ ಎನ್ನಲಾಗ್ತಿದೆ.

ಹೊಸಕೋಟೆ: ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದ್ರೆ ಇದಕ್ಕೆ ತದ್ವಿರುದ್ಧ ಎಂಬಂತೆ ಅದೇ ಪಕ್ಷದ ಟಿಕೆಟ್​ ಆಕಾಂಕ್ಷಿ ಶರತ್​ ಬಚ್ಚೇಗೌಡ ಟಿಪ್ಪು ಜಯಂತಿ ಆಚರಿಸುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದಾರೆ.

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಮತ್ತು ಹೊಸಕೋಟೆ ಉಪಚುನಾವಣೆಯ ಟಿಕೆಟ್​ ಆಕಾಂಕ್ಷಿಯಾಗಿರುವ ಶರತ್ ಬಚ್ಚೇಗೌಡ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಈಗ ತಾವೇ ಮುಂದೆ ನಿಂತು ಮುಂಬರುವ ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಗುರುವಾರ ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ‌ ಮಾತನಾಡಿ, ಟಿಪ್ಪು ಜಯಂತಿ ಆಚರಣೆ ಮಾಡಬೇಡಿ ಎಂದು ಬಹಳ ಜನ ಹೇಳಿದರೂ, ಆದರೆ ನಾನು ಅವರ ಮಾತನ್ನು ಕೇಳುವುದಿಲ್ಲ. ಟಿಪ್ಪು ಜಯಂತಿ ಆಚರಣೆ ಮಾಡೇ ತೀರುತ್ತೇನೆ ಎಂದು ಹೇಳಿದ್ದಾರೆ.

ಯಾರು ಏನೇ ಅಂದ್ರೂ ಟಿಪ್ಪು ಜಯಂತಿ ಮಾಡೇ ತಿರುತ್ತೇನೆ: ಶರತ್ ಬಚ್ಚೇಗೌಡ

ನನ್ನ ಗ್ರಾಮ ಬೆಂಡಿಗಾನಹಳ್ಳಿ ಪಕ್ಕದಲ್ಲಿರುವ ರಸನಹಳ್ಳಿಯಲ್ಲಿ ನಾನೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಿಸುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿಗೇ ಸವಾಲ್ ಹಾಕಿದ್ದಾರೆ.

ಹೊಸಕೋಟೆ ಶಾಸಕರಾಗಿದ್ದ ಎಂಟಿಬಿ ನಾಗರಾಜು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ ಉಪಚುನಾವಣೆ ನಡೆಯಲಿದೆ. ಆದರೆ ಬಿಜೆಪಿ ನಾಯಕರು ಎಂಟಿಬಿ ನಾಗರಾಜ್​ಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಹಾಗಾಗಿ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದು, ಮುಸ್ಲಿಂ ವರ್ಗದ ಜನರ ಮತವನ್ನು ಸೆಳೆಯರು ಯೋಜನೆ ರೂಪಿಸಿದ್ದಾರೆ ಎನ್ನಲಾಗ್ತಿದೆ.

Intro:ಹೊಸಕೋಟೆ.

ಟಿಪ್ಪು ಜಯಂತಿ ಮಾಡೇ ಮಾಡ್ತೀವಿ: ಬಿಜೆಪಿ ಮುಖಂಡ ಶರತ್ ಬಚ್ಚೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಆದರೆ ಈಗ ಅದೇ ಬಿಜೆಪಿಯ ಮಾಜಿ ಅಭ್ಯರ್ಥಿ ತಾವು ಟಿಪ್ಪು ಜಯಂತಿ ಆಚರಿಸುತ್ತೇವೆ ಎಂದಿದ್ದಾರೆ.

ಬಿಜೆಪಿ ಸಂಸದ
ಬಿ.ಎನ್.ಬಚ್ಚೇಗೌಡ ಪುತ್ರ.
ಶರತ್ ಬಚ್ಚೇಗೌಡ ಅವರು
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು
ಈಗ ತಾವೇ ಮುಂದೆ ನಿಂತು ಮುಂಬರುವ ಟಿಪ್ಪು ಜಯಂತಿ ಆಚರಣೆ ಮಾಡುವುದಾಗಿ ಹೇಳಿದ್ದಾರೆ.

ನಿನ್ನೆ ಹೊಸಕೋಟೆಯಲ್ಲಿ ಆಯೋಜಿಸಿದ್ದ ಉರುಸ್ ಕಾರ್ಯಕ್ರಮದಲ್ಲಿ‌
ಮಾತನಾಡಿದ ಶರತ್ ಬಚ್ಚೇಗೌಡ, ಟಿಪ್ಪು ಜಯಂತಿ ಆಚರಣೆ ಮಾಡಬೇಡಿ ಎಂದು ಬಹಳ ಜನ ಹೇಳಿದರು, ಆದರೆ ನಾನು ಅವರ ಮಾತು ಕೇಳುವುದಿಲ್ಲ ಟಿಪ್ಪು ಜಯಂತಿ
ನಾನು ಮಾಡುತ್ತೆನೆ
ಎಂದು ಹೇಳಿದರು.



Body:ನನ್ನ ಗ್ರಾಮ ಬೆಂಡಿಗಾನಹಳ್ಳಿ, ಆ ಗ್ರಾಮದ ಪಕ್ಕದಲ್ಲಿ ತಮ್ಮರಸನಹಳ್ಳಿ ಇದೆ, ಅದೇ ಗ್ರಾಮದಲ್ಲಿ ನಾನೇ ಮುಂದೆ ನಿಂತು ಟಿಪ್ಪು ಜಯಂತಿ ಆಚರಣೆ ಮಾಡುತ್ತೇನೆ Conclusion:
ಹೊಸಕೋಟೆ ಶಾಸಕರಾಗಿದ್ದ ಎಂಟಿಬಿ ನಾಗರಾಜು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ ಹೊಸಕೋಟೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಆದರೆ ಬಿಜೆಪಿಯು ಎಂಟಿಬಿ ನಾಗರಾಜು ಗೆ ಬಿಜೆಪಿ ಯಿಂದ ಟಿಕೆಟ್ ನೀಡುವ ಸಾಧ್ಯತೆ ಇದೆ. ಹಾಗಾಗಿ ಶರತ್ ಬಚ್ಚೇಗೌಡ ಅವರು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.ಮುಸ್ಲಿಂ
ವರ್ಗದ ಜನರ ಮತವನ್ನು ಪಡೆಯಲು ಪ್ಲಾನ್‌ ಮಾಡಿದ್ದಾರೆ.

ಈಗಾಗಲೇ ಹಸಕೋಟೆ ಕ್ಷೇತ್ರದಲ್ಲಿ ಸ್ವಾಭಿಮಾನಿ ಯಾತ್ರೆ ಹೆಸರಿನಲ್ಲಿ ಸಮಾವೇಶಗಳನ್ನು ನಡೆಸುತ್ತಿರುವ ಶರತ್ ಎಲ್ಲ ಹಳ್ಳಿಗಳಿಗೂ ಭೇಟಿ ಮತದಾರನ್ನು ತಮ್ಮತ್ತ ಸೆಳೆಯುವ ಕಾರ್ಯ ಮಾಡುತ್ತಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.