ಬೆಂಗಳೂರು: ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು.
ಉಪ ಚುನಾವಣಾ ಪ್ರಚಾರ ಸಂಬಂಧ ಮಾತುಕತೆ ನಡೆಸಿದ ಅವರು, ನಂತರ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ತೆರಳಿದರು. ಪಕ್ಷದ ಅಭ್ಯರ್ಥಿ ಶರವಣ ಪರ ಸಿಎಂ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಸಿಎಂಗೆ ಶೋಭಾ ಕರಂದ್ಲಾಜೆ ಮತ್ತು ಕೋಟಾ ಶ್ರೀನಿವಾಸ ಪೂಜಾರಿ ಸಾಥ್ ನೀಡಿದ್ದಾರೆ.
ಶತಾಯಗತಾಯ ಶಿವಾಜಿನಗರ ಅಭ್ಯರ್ಥಿ ಗೆಲ್ಲಿಸಲು ಸಿಎಂ ಹರಸಾಹಸ ಪಡುತ್ತಿದ್ದು ಮೂರನೇ ಬಾರಿಗೆ ಪ್ರಚಾರಕ್ಕೆ ತೆರಳಿದ್ದಾರೆ.