ETV Bharat / state

ಪತ್ರಕರ್ತರ ಮೇಲೆ ಗೂಂಡಾಗಿರಿ ವರ್ತನೆ ತೋರಿದ ಡಿಕೆಶಿ ವಿರುದ್ಧ ಕ್ರಮ ಕೈಗೊಳ್ಳಿ: ಚು. ಆಯೋಗಕ್ಕೆ ಶೋಭಾ ದೂರು

author img

By

Published : Apr 26, 2023, 8:24 PM IST

ಡಿಕೆ ಶಿವಕುಮಾರ್​​ ಮಾಧ್ಯಮಗೋಷ್ಟಿಗೆ ಬಂದಿಲ್ಲವೆಂದು ಪತ್ರಕರ್ತರ ಮೇಲೆ ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂದು ಶೋಭಾ ಕರಂದ್ಲಾಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು
ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ಬೆಂಗಳೂರು: ಪತ್ರಕರ್ತರ ಮೇಲೆ ಗೂಂಡಾಗಿರಿಯ ವರ್ತನೆ ತೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ ಅವರು ಡಿ ಕೆ ಶಿವಕುಮಾರ್ ವಿರುದ್ಧ ಎರಡು ದೂರುಗಳನ್ನು ಸಲ್ಲಿಕೆ ಮಾಡಿದರು.

ಡಿ. ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ಕರೆದಿದ್ದರು. ಕೆಲ ಪತ್ರಕರ್ತರು ಡಿಕೆಶಿ ಮಾಧ್ಯಮಗೋಷ್ಟಿಗೆ ಬಂದಿಲ್ಲ, ‘ಬಾರದವರ ಹೆಸರು ಬರೆದುಕೊಳ್ಳಿ. ಅವರ ಮ್ಯಾನೇಜ್ಮೆಂಟ್ ಜೊತೆ ಮಾತಾಡ್ತೀನಿ ಎಂದು ತಿಳಿಸಿದ ಶಿವಕುಮಾರ್, ಪತ್ರಕರ್ತರು ಚುನಾವಣಾ ಸಂದರ್ಭದಲ್ಲಿ ಒತ್ತಡದಲ್ಲಿ ಕೆಲಸ ಮಾಡುವುದನ್ನು ಮರೆತು ನಾನು ಪತ್ರಕರ್ತರನ್ನ ಕೊಂಡುಕೊಳ್ಳಬಲ್ಲೆ ಎಂದಿದ್ದಾರೆ. ಅವರ ಮ್ಯಾನೇಜ್ಮೆಂಟ್ ಹೇಳಿ ಕೆಲಸದಿಂದ ತೆಗೆಸುತ್ತೀನಿ ಅಂತ ಹೇಳಿದ್ದಾರೆ. ಅಲ್ಲದೆ ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ, "ಪತ್ರಕರ್ತರ ಜೊತೆ ನಾವಿದ್ದೇವೆ. ಪತ್ರಕರ್ತರನ್ನು ಹೆದರಿಸಿದ ಡಿಕೆಶಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೂಡಲೇ ಡಿಕೆಶಿಗೆ ನೋಟಿಸ್ ಹೊರಡಿಸಬೇಕು ಎಂದು ಮನವಿ ಮಾಡಿದ್ದೇವೆ'' ಎಂದು ತಿಳಿಸಿದರು.

ಎರಡನೇ ದೂರು: ಕಾಂಗ್ರೆಸ್ ಸೋಶಿಯಲ್ ಮೀಡಿಯಾ ದುರ್ಬಳಕೆ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ. ಸೋಶಿಯಲ್ ಮೀಡಿಯಾ ಕೆಟ್ಟದಾಗಿ ಬಳಸಿಕೊಂಡಿದ್ದಾರೆ. ತೆಲಂಗಾಣದ ವಿಡಿಯೋ ಬಳಸಿ, ಬಿಜೆಪಿಯ ಮೀಡಿಯಾ ವ್ಯಾನ್‍ಗೆ ಕಲ್ಲು ಹೊಡೆದಿದ್ದಾರೆ ಎಂದು ಬಿಂಬಿಸಿದ್ದಾರೆ ಎಂದು ಇನ್ನೊಂದು ದೂರಿನಲ್ಲಿ ತಿಳಿಸಲಾಗಿದೆ. ಸೋಶಿಯಲ್ ಮೀಡಿಯಾ ಟೀಮ್ ಫೋರ್ಜರಿ ಮಾಡಿದ್ದಲ್ಲದೆ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ಕೆಲಸ ಮಾಡಿದೆ. ಕಾಂಗ್ರೆಸ್ ಸೋಶಿಯಲ್ ಮೀಡಿಯಾವನ್ನ ಬ್ಯಾನ್ ಮಾಡಬೇಕು ಎಂದು ಮನವಿ ಮಾಡಿದ್ರು.

ಇದನ್ನೂ ಓದಿ: ಅಮಿತ್ ಶಾ ಪ್ರಚೋದಾನಾತ್ಮಕ ಹೇಳಿಕೆ ನೀಡುವುದನ್ನು ನಿಲ್ಲಿಸಲಿ: ಮಲ್ಲಿಕಾರ್ಜುನ‌ ಖರ್ಗೆ

ಬೆಂಗಳೂರು: ಪತ್ರಕರ್ತರ ಮೇಲೆ ಗೂಂಡಾಗಿರಿಯ ವರ್ತನೆ ತೋರಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ ಶೋಭಾ ಕರಂದ್ಲಾಜೆ ಅವರು ಡಿ ಕೆ ಶಿವಕುಮಾರ್ ವಿರುದ್ಧ ಎರಡು ದೂರುಗಳನ್ನು ಸಲ್ಲಿಕೆ ಮಾಡಿದರು.

ಡಿ. ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ಕರೆದಿದ್ದರು. ಕೆಲ ಪತ್ರಕರ್ತರು ಡಿಕೆಶಿ ಮಾಧ್ಯಮಗೋಷ್ಟಿಗೆ ಬಂದಿಲ್ಲ, ‘ಬಾರದವರ ಹೆಸರು ಬರೆದುಕೊಳ್ಳಿ. ಅವರ ಮ್ಯಾನೇಜ್ಮೆಂಟ್ ಜೊತೆ ಮಾತಾಡ್ತೀನಿ ಎಂದು ತಿಳಿಸಿದ ಶಿವಕುಮಾರ್, ಪತ್ರಕರ್ತರು ಚುನಾವಣಾ ಸಂದರ್ಭದಲ್ಲಿ ಒತ್ತಡದಲ್ಲಿ ಕೆಲಸ ಮಾಡುವುದನ್ನು ಮರೆತು ನಾನು ಪತ್ರಕರ್ತರನ್ನ ಕೊಂಡುಕೊಳ್ಳಬಲ್ಲೆ ಎಂದಿದ್ದಾರೆ. ಅವರ ಮ್ಯಾನೇಜ್ಮೆಂಟ್ ಹೇಳಿ ಕೆಲಸದಿಂದ ತೆಗೆಸುತ್ತೀನಿ ಅಂತ ಹೇಳಿದ್ದಾರೆ. ಅಲ್ಲದೆ ಗೂಂಡಾಗಿರಿ ವರ್ತನೆ ತೋರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ, "ಪತ್ರಕರ್ತರ ಜೊತೆ ನಾವಿದ್ದೇವೆ. ಪತ್ರಕರ್ತರನ್ನು ಹೆದರಿಸಿದ ಡಿಕೆಶಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೂಡಲೇ ಡಿಕೆಶಿಗೆ ನೋಟಿಸ್ ಹೊರಡಿಸಬೇಕು ಎಂದು ಮನವಿ ಮಾಡಿದ್ದೇವೆ'' ಎಂದು ತಿಳಿಸಿದರು.

ಎರಡನೇ ದೂರು: ಕಾಂಗ್ರೆಸ್ ಸೋಶಿಯಲ್ ಮೀಡಿಯಾ ದುರ್ಬಳಕೆ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ. ಸೋಶಿಯಲ್ ಮೀಡಿಯಾ ಕೆಟ್ಟದಾಗಿ ಬಳಸಿಕೊಂಡಿದ್ದಾರೆ. ತೆಲಂಗಾಣದ ವಿಡಿಯೋ ಬಳಸಿ, ಬಿಜೆಪಿಯ ಮೀಡಿಯಾ ವ್ಯಾನ್‍ಗೆ ಕಲ್ಲು ಹೊಡೆದಿದ್ದಾರೆ ಎಂದು ಬಿಂಬಿಸಿದ್ದಾರೆ ಎಂದು ಇನ್ನೊಂದು ದೂರಿನಲ್ಲಿ ತಿಳಿಸಲಾಗಿದೆ. ಸೋಶಿಯಲ್ ಮೀಡಿಯಾ ಟೀಮ್ ಫೋರ್ಜರಿ ಮಾಡಿದ್ದಲ್ಲದೆ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ಕೆಲಸ ಮಾಡಿದೆ. ಕಾಂಗ್ರೆಸ್ ಸೋಶಿಯಲ್ ಮೀಡಿಯಾವನ್ನ ಬ್ಯಾನ್ ಮಾಡಬೇಕು ಎಂದು ಮನವಿ ಮಾಡಿದ್ರು.

ಇದನ್ನೂ ಓದಿ: ಅಮಿತ್ ಶಾ ಪ್ರಚೋದಾನಾತ್ಮಕ ಹೇಳಿಕೆ ನೀಡುವುದನ್ನು ನಿಲ್ಲಿಸಲಿ: ಮಲ್ಲಿಕಾರ್ಜುನ‌ ಖರ್ಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.