ETV Bharat / state

ಹನಿಟ್ರ್ಯಾಪ್​ಗಾಗಿ 500 ಕೋಟಿ ವ್ಯವಹಾರ: ಡಿಕೆಶಿ ಸೇರಿ ಐವರ ವಿರುದ್ಧ ತನಿಖೆ ನಡೆಸುವಂತೆ ದೂರು

author img

By

Published : Apr 2, 2021, 3:17 PM IST

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸಬೇಕು. ಸಿಡಿ ಪ್ರಕರಣದಲ್ಲಿ ಜಾರಕಿಹೊಳಿಯನ್ನು ಸಿಲುಕಿಸಲು ಹನಿಟ್ರ್ಯಾಪ್ ಮಾಡಲಾಗಿದೆ. ಇದಕ್ಕಾಗಿ ಸುಮಾರು 500 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ‌.

ಡಿಕೆಶಿ
ಡಿಕೆಶಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಗಾಗಿ 500 ಕೋಟಿ ರೂ. ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಶ್ರೀಧರ್ ಮೂರ್ತಿ ಎಂಬುವರು ಜಾರಿ ನಿರ್ದೇಶಾಲಯಕ್ಕೆ (ಇಡಿ) ದೂರು ನೀಡಿದ್ದಾರೆ.

ಡಿಕೆಶಿ ಜೊತೆಗೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಶಂಕಿತ ಆರೋಪಿ ನರೇಶ್ ಗೌಡ ಸೇರಿ ಐವರ ವಿರುದ್ಧ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವರು ದೂರು ನೀಡಿದ್ದು, ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡು ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸಬೇಕು. ಸಿಡಿ ಪ್ರಕರಣದಲ್ಲಿ ಜಾರಕಿಹೊಳಿಯನ್ನು ಸಿಲುಕಿಸಲು ಹನಿಟ್ರ್ಯಾಪ್ ಮಾಡಲಾಗಿದೆ. ಇದಕ್ಕಾಗಿ ಸುಮಾರು 500 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ‌. ಹೀಗಾಗಿ‌ ಇಸಿಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ದೆಹಲಿಯ ಇಡಿ ನಿರ್ದೇಶಕ ಹಾಗೂ ಬೆಂಗಳೂರಿನ ಜಂಟಿ ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆಗೊಳ್ಳಲಿದೆ: ಆರೋಗ್ಯ ಸಚಿವ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಗಾಗಿ 500 ಕೋಟಿ ರೂ. ವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಶ್ರೀಧರ್ ಮೂರ್ತಿ ಎಂಬುವರು ಜಾರಿ ನಿರ್ದೇಶಾಲಯಕ್ಕೆ (ಇಡಿ) ದೂರು ನೀಡಿದ್ದಾರೆ.

ಡಿಕೆಶಿ ಜೊತೆಗೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಶಂಕಿತ ಆರೋಪಿ ನರೇಶ್ ಗೌಡ ಸೇರಿ ಐವರ ವಿರುದ್ಧ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವರು ದೂರು ನೀಡಿದ್ದು, ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡು ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸಬೇಕು. ಸಿಡಿ ಪ್ರಕರಣದಲ್ಲಿ ಜಾರಕಿಹೊಳಿಯನ್ನು ಸಿಲುಕಿಸಲು ಹನಿಟ್ರ್ಯಾಪ್ ಮಾಡಲಾಗಿದೆ. ಇದಕ್ಕಾಗಿ ಸುಮಾರು 500 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ‌. ಹೀಗಾಗಿ‌ ಇಸಿಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ದೆಹಲಿಯ ಇಡಿ ನಿರ್ದೇಶಕ ಹಾಗೂ ಬೆಂಗಳೂರಿನ ಜಂಟಿ ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆಗೊಳ್ಳಲಿದೆ: ಆರೋಗ್ಯ ಸಚಿವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.