ETV Bharat / state

ಸಿದ್ದರಾಮಯ್ಯ ಈಗ ಸವಕಲು ನಾಣ್ಯ: ಎಸ್.ಆರ್.ವಿಶ್ವನಾಥ್ - S.R Vishwanath slams siddaramaiah

ಕಾಂಗ್ರೆಸ್​ ಮುಖಂಡ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್​. ಆರ್.​ ವಿಶ್ವನಾಥ್​ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಸವಕಲು ನಾಣ್ಯ ಎಂದಿದ್ದಾರೆ.

ಎಸ್.ಆರ್.ವಿಶ್ವನಾಥ್
author img

By

Published : Nov 12, 2019, 3:16 PM IST

ಬೆಂಗಳೂರು: ಸಿದ್ದರಾಮಯ್ಯ ಈಗ ಸವಕಲು ನಾಣ್ಯ ಆಗಿದ್ದಾರೆ. ಅವರಿಗೆ ಅವರ ಪಕ್ಷದಲ್ಲೇ ಮಾನ್ಯತೆ ಸಿಗುತ್ತಿಲ್ಲ. ಅವರ ಪಕ್ಷದ ನಾಯಕರೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜತೆ ಬಿಜೆಪಿ ಹೊಂದಾಣಿಕೆ ಮಾಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಜೊತೆಯಲ್ಲಿ ಸರ್ಕಾರ ಮಾಡಿ ಈ ರೀತಿ ಹೇಳುವುದು ಹಾಸ್ಯಾಸ್ಪದ. ಇತ್ತೀಚೆಗೆ ಸಿದ್ದರಾಮಯ್ಯನವರು ಹಿಟ್ ಆ್ಯಂಡ್ ರನ್ ಹೇಳಿಕೆ ಕೊಡುತ್ತಾರೆ. ಒಳ ಒಪ್ಪಂದ ಮಾಡಿಕೊಂಡಿದ್ದರೆ ಜೆಡಿಎಸ್ ಶಾಸಕರು ಯಾಕೆ ರಾಜೀನಾಮೆ ನೀಡುತ್ತಿದ್ದರು? ಹಾಗಾಗಿದ್ದರೆ ಕಾಂಗ್ರೆಸ್ ಶಾಸಕರು ಮಾತ್ರ ರಾಜೀನಾಮೆ ನೀಡುತ್ತಿದ್ದರು. ಅವರ ತಪ್ಪಿನಿಂದ ಅಸಮಾಧಾನಗೊಂಡು ರಾಜೀನಾಮೆ ಕೊಟ್ಟಿದ್ದಾರೆ ಎಂದು ಟಾಂಗ್ ನೀಡಿದರು.

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾಳೆ ಕೋರ್ಟ್ ತೀರ್ಪು ನಂತರ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರವಾಗಲಿದೆ. ವರಿಷ್ಠರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಣ್ಣಪುಟ್ಟ ಗೊಂದಲ ಸಹಜ, ಎಲ್ಲವೂ ಸರಿ ಹೋಗುತ್ತದೆ‌‌ ಎಂದು ಸ್ಪಷ್ಟಪಡಿಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​. ಆರ್​ ವಿಶ್ವನಾಥ್ ಹೇಳಿಕೆ

ಕಾವೇರಿ ಸಾಫ್ಟ್‌ವೇರ್ ತಿರುಚಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ನಿವೇಶನ ತೆಗೆದುಕೊಳ್ಳುವವರಿಗೆ ಮೋಸ ಮಾಡಿ ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಹಿಂದೆ ಕೂಡ ಈ ರೀತಿ ನಡೆದಿತ್ತು. ಆಗ ಸಬ್ ರಿಜಿಸ್ಟ್ರಾರ್​ಗಳನ್ನು ಸಸ್ಪೆಂಡ್ ಮಾಡಿದ್ದರು. ಅಕ್ರಮ ಬಡಾವಣೆ, ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ದ್ರೋಹ ಮಾಡಿದ್ದಾರೆ ಎಂದರು.

ಒಂದೊಂದು ನೋಂದಣಿಗೂ 20-30 ಸಾವಿರ ದುಡ್ಡು ತೆಗೆದುಕೊಳ್ತಾರೆ. ಇದರಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆಗಿದೆ. ಸ್ಮಶಾನ, ಕೆರೆ ಜಾಗ, ಸರ್ಕಾರಿ ಜಮೀನನ್ನೂ ಸ್ವಾಹ ಮಾಡಿದ್ದಾರೆ ಎಂದು ಟೀಕಿಸಿದ್ರು.

ಬೆಂಗಳೂರು: ಸಿದ್ದರಾಮಯ್ಯ ಈಗ ಸವಕಲು ನಾಣ್ಯ ಆಗಿದ್ದಾರೆ. ಅವರಿಗೆ ಅವರ ಪಕ್ಷದಲ್ಲೇ ಮಾನ್ಯತೆ ಸಿಗುತ್ತಿಲ್ಲ. ಅವರ ಪಕ್ಷದ ನಾಯಕರೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜತೆ ಬಿಜೆಪಿ ಹೊಂದಾಣಿಕೆ ಮಾಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಜೊತೆಯಲ್ಲಿ ಸರ್ಕಾರ ಮಾಡಿ ಈ ರೀತಿ ಹೇಳುವುದು ಹಾಸ್ಯಾಸ್ಪದ. ಇತ್ತೀಚೆಗೆ ಸಿದ್ದರಾಮಯ್ಯನವರು ಹಿಟ್ ಆ್ಯಂಡ್ ರನ್ ಹೇಳಿಕೆ ಕೊಡುತ್ತಾರೆ. ಒಳ ಒಪ್ಪಂದ ಮಾಡಿಕೊಂಡಿದ್ದರೆ ಜೆಡಿಎಸ್ ಶಾಸಕರು ಯಾಕೆ ರಾಜೀನಾಮೆ ನೀಡುತ್ತಿದ್ದರು? ಹಾಗಾಗಿದ್ದರೆ ಕಾಂಗ್ರೆಸ್ ಶಾಸಕರು ಮಾತ್ರ ರಾಜೀನಾಮೆ ನೀಡುತ್ತಿದ್ದರು. ಅವರ ತಪ್ಪಿನಿಂದ ಅಸಮಾಧಾನಗೊಂಡು ರಾಜೀನಾಮೆ ಕೊಟ್ಟಿದ್ದಾರೆ ಎಂದು ಟಾಂಗ್ ನೀಡಿದರು.

ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾಳೆ ಕೋರ್ಟ್ ತೀರ್ಪು ನಂತರ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರವಾಗಲಿದೆ. ವರಿಷ್ಠರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಣ್ಣಪುಟ್ಟ ಗೊಂದಲ ಸಹಜ, ಎಲ್ಲವೂ ಸರಿ ಹೋಗುತ್ತದೆ‌‌ ಎಂದು ಸ್ಪಷ್ಟಪಡಿಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​. ಆರ್​ ವಿಶ್ವನಾಥ್ ಹೇಳಿಕೆ

ಕಾವೇರಿ ಸಾಫ್ಟ್‌ವೇರ್ ತಿರುಚಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ನಿವೇಶನ ತೆಗೆದುಕೊಳ್ಳುವವರಿಗೆ ಮೋಸ ಮಾಡಿ ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಹಿಂದೆ ಕೂಡ ಈ ರೀತಿ ನಡೆದಿತ್ತು. ಆಗ ಸಬ್ ರಿಜಿಸ್ಟ್ರಾರ್​ಗಳನ್ನು ಸಸ್ಪೆಂಡ್ ಮಾಡಿದ್ದರು. ಅಕ್ರಮ ಬಡಾವಣೆ, ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ದ್ರೋಹ ಮಾಡಿದ್ದಾರೆ ಎಂದರು.

ಒಂದೊಂದು ನೋಂದಣಿಗೂ 20-30 ಸಾವಿರ ದುಡ್ಡು ತೆಗೆದುಕೊಳ್ತಾರೆ. ಇದರಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆಗಿದೆ. ಸ್ಮಶಾನ, ಕೆರೆ ಜಾಗ, ಸರ್ಕಾರಿ ಜಮೀನನ್ನೂ ಸ್ವಾಹ ಮಾಡಿದ್ದಾರೆ ಎಂದು ಟೀಕಿಸಿದ್ರು.

Intro:Body:KN_BNG_01_SRVISHWANATH_BYTE_SCRIPT_7201951

ಸಿದ್ದರಾಮಯ್ಯ ಸವಕಲು ನಾಣ್ಯ ಆಗಿದ್ದಾರೆ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ಸಿದ್ದರಾಮಯ್ಯ ಈಗ ಸವಕಲು ನಾಣ್ಯ ಆಗಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜತೆ ಬಿಜೆಪಿ ಹೊಂದಾಣಿಕೆ ಮಾಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿ ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಜೊತೆಯಲ್ಲಿ ಸರ್ಕಾರ ಮಾಡಿ ಈ ರೀತಿ ಹೇಳುವುದು ಹಾಸ್ಯಾಸ್ಪದ. ಇತ್ತೀಚೆಗೆ ಸಿದ್ದರಾಮಯ್ಯನವರು ಹಿಟ್ ಅಂಡ್ ರನ್ ಹೇಳಿಕೆ ಕೊಡುತ್ತಾರೆ. ಸಿದ್ದರಾಮಯ್ಯ ಸವಕಲು ನಾಣ್ಯ ಆಗಿದ್ದಾರೆ. ಅವರಿಗೆ ಅವರ ಪಕ್ಷದಲ್ಲೇ ಮಾನ್ಯತೆ ಸಿಗುತ್ತಿಲ್ಲ. ಅವರ ಪಕ್ಷದ ನಾಯಕರೇ ಅವರ ವಿರುದ್ಧ ತಿರುಗಿ ಬದ್ದಿದ್ದಾರೆ. ಒಳ ಒಪ್ಪಂದ ಮಾಡಿಕೊಂಡಿದ್ದರೆ ಜೆಡಿಎಸ್ ಶಾಸಕರು ಯಾಕೆ ರಾಜೀನಾಮೆ ನೀಡುತ್ತಿದ್ದರು?, ಹಾಗಾಗಿದ್ದರೆ ಕಾಂಗ್ರೆಸ್ ಶಾಸಕರು ಮಾತ್ರ ರಾಜೀನಾಮೆ ನೀಡುತ್ತಿದ್ದರು. ಅವರ ತಪ್ಪಿನಿಂದ ಅಸಮಧಾನಗೊಂಡು ರಾಜೀನಾಮೆ ಕೊಟ್ಟಿದ್ದಾರೆ ಎಂದು ಟಾಂಗ್ ನೀಡಿದರು.

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾಳೆ ಕೋರ್ಟ್ ತೀರ್ಪು ನಂತರ ಅಭ್ಯರ್ಥಿಗಳ ನಿರ್ಧಾರವಾಗಲಿದೆ. ವರಿಷ್ಠರು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಗಳಿಲ್ಲ. ಸಣ್ಣಪುಟ್ಟ ಗೊಂದಲ ಸಹಜ, ಎಲ್ಲವೂ ಸರಿ ಹೋಗುತ್ತದೆ‌‌ ಎಂದು ಸ್ಪಷ್ಟಪಡಿಸಿದರು.

ಕಾವೇರಿ ಸಾಫ್ಟ್ ವೇರ್ ತಿರುಚಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ನಿವೇಶನ ತೆಗೆದುಕೊಳ್ಳುವವರಿಗೆ ಮೋಸ ಮಾಡಿ. ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಹಿಂದೆ ಕೂಡ ಈ ರೀತಿ ನಡೆದಿತ್ತು, ಆಗ ಸಬ್ ರಿಜಿಸ್ಟ್ರಾರ್ ಗಳನ್ನು ಸಸ್ಪೆಂಡ್ ಮಾಡಿದ್ದರು. ಅಕ್ರಮ ಬಡಾವಣೆ, ನಿವೇಶನಗಳಿಗೆ ನಕಲಿ ದಾಖಲೆ ಸೃಷ್ಟಿಸಿ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.

ಒಂದೊಂದು ನೋಂದಣಿಗೂ 20-30 ಸಾವಿರ ದುಡ್ಡು ತೆಗೆದುಕೊಳ್ತಾರೆ. ಇದರಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆಗಿದೆ. ಸ್ಮಶಾನ, ಕೆರೆ ಜಾಗ, ಸರ್ಕಾರಿ ಜಮೀನನ್ನೂ ಸ್ವಾಹ ಮಾಡಿದ್ದಾರೆ ಎಂದು ವಿವರಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.