ETV Bharat / state

ಐಸಿಎಫ್‌ಎಕೆ ಸೆಮಿನಾರ್‌ನಲ್ಲಿ ಭಾಗವಹಿಸಲು ನಿರಾಕರಿಸಿದ್ದೇನೆ: ಸಿದ್ದರಾಮಯ್ಯ

author img

By

Published : Aug 27, 2022, 8:37 PM IST

ಸೈದ್ಧಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ಧವಾಗಿರುವ ಕಾರಣ ಐಸಿಎಫ್‌ಎಕೆ ಸೆಮಿನಾರ್​ನಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

siddaramaiah-clarified-on-india-china-friendship-association-seminar
ಐಸಿಎಫ್‌ಎಕೆ ಸೆಮಿನಾರ್‌ನಲ್ಲಿ ಭಾಗವಹಿಸಲು ನಿರಾಕರಿಸಿದ್ದೇನೆ: ಸಿದ್ದರಾಮಯ್ಯ

ಬೆಂಗಳೂರು: ಭಾರತ ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಷನ್ ಕರ್ನಾಟಕ (ಐಸಿಎಫ್‌ಎ-ಕೆ) ಸೆಮಿನಾರ್‌ನಲ್ಲಿ ಭಾಗವಹಿಸಲು ನಿರಾಕರಿಸಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು. ಸೈದ್ಧಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ಧವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದಿದ್ದಾರೆ.

  • India-China Friendship Association ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು.

    ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ. pic.twitter.com/ls0vGBmaaj

    — Siddaramaiah (@siddaramaiah) August 27, 2022 " class="align-text-top noRightClick twitterSection" data=" ">

ಬಿಜೆಪಿಯಿಂದ ಟ್ವೀಟ್ ಟೀಕೆ: ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಸ್ತಾಪಿಸಿ ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಚೀನಾ ಜೊತೆಗಿನ ಗಡಿ ಸಮಸ್ಯೆ ಪ್ರಸ್ತಾಪಿಸುವ ರಾಹುಲ್ ಗಾಂಧಿ ಅವರಿಗೆ ತಮ್ಮದೇ ಪಕ್ಷದ ನಾಯಕರು ಭಾರತ ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದೆ.

  • ಚೀನಾ ಜೊತೆಗಿನ ಗಡಿ ಸಮಸ್ಯೆ ಪ್ರಸ್ತಾಪಿಸುವ @RahulGandhi ಅವರಿಗೆ ತಮ್ಮದೇ ಪಕ್ಷದ ನಾಯಕರು "India-China Friendship Association" ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಕಾಣುತ್ತಿಲ್ಲವೇ?

    ಆಮಂತ್ರಣ ಪತ್ರಿಕೆಯ ಪೂರ್ತಿ ಕಾಂಗ್ರೆಸ್ ನಾಯಕರ ಹೆಸರುಗಳಿವೆ.

    ಕಾಂಗ್ರೆಸ್‌ಗೂ, ಚೀನಾ ದೇಶಕ್ಕೂ ಇರುವ ಸಂಬಂಧವೇನು?#ದೇಶದ್ರೋಹಿಕಾಂಗ್ರೆಸ್ pic.twitter.com/K5h4JoVcFd

    — BJP Karnataka (@BJP4Karnataka) August 27, 2022 " class="align-text-top noRightClick twitterSection" data=" ">

ಅಲ್ಲದೇ, ಟೀಕೆಗಳು ಕೇಳಿ ಬರುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನನ್ನ ಅನುಮತಿ ಇಲ್ಲದೆಯೇ ಹೆಸರು ಹಾಕಿದ್ದಾರೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ. ಇದು ಹೇಗೆ ಸಾಧ್ಯ?. ಕಾಂಗ್ರೆಸ್ ಪಕ್ಷದ ಪ್ರಭಾವಿ ಶಾಸಕರು, ಮಾಜಿ ಸಚಿವರೇ ಪ್ರಮುಖ ಆಹ್ವಾನಿತರಾಗಿರುವ ಈ ಕಾರ್ಯಕ್ರಮ ಕೆಪಿಸಿಸಿ ವತಿಯಿಂದಲೇ ಆಯೋಜನೆಗೊಂಡಿದ್ದೆ ಎಂದೂ ಬಿಜೆಪಿ ಕೇಳಿದೆ.

ಏನಿದು ವಿವಾದ?: ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಆಂತರಿಕ ವ್ಯವಹಾರಗಳಲ್ಲಿ ಯುಎಸ್ ಸಾಮ್ರಾಜ್ಯಶಾಹಿಯ ಹಸ್ತಕ್ಷೇಪ ಮತ್ತು ಚೀನಾದ ಛಾಯಾಚಿತ್ರ ಪ್ರದರ್ಶನದ ವಿಷಯದೊಂದಿಗೆ ತೈವಾನ್ ಕುರಿತು ಸೆಮಿನಾರ್​ಗೆ ಮಾಜಿ ಮುಖ್ಯಮಂತ್ರಿಯ ಹೆಸರನ್ನು ಮುಖ್ಯ ಅತಿಥಿಯಾಗಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಆಹ್ವಾನಿತರನ್ನಾಗಿ ಸೇರಿಸಿ ಆಹ್ವಾನ ಪತ್ರಿಕೆ ಸಿದ್ಧಪಡಿಸಲಾಗಿತ್ತು.

ಇದಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು ಎಂದು ಹೇಳಿ ಟ್ವೀಟ್​ ಮಾಡಿದ್ದಾರೆ. ಇತ್ತ, ಟೀಕೆಗಳು ಕೇಳಿ ಬರುತ್ತಿದ್ದಂತೆ ನನ್ನ ಅನುಮತಿ ಇಲ್ಲದೆಯೇ ಹೆಸರು ಹಾಕಿದ್ದಾರೆ ಎಂದು ಹೇಳಿ ಸಿದ್ದರಾಮಯ್ಯ ಕೈ ತೊಳೆದುಕೊಂಡಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಇದನ್ನೂ ಓದಿ: ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ: ಸಿದ್ದರಾಮಯ್ಯ

ಬೆಂಗಳೂರು: ಭಾರತ ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಷನ್ ಕರ್ನಾಟಕ (ಐಸಿಎಫ್‌ಎ-ಕೆ) ಸೆಮಿನಾರ್‌ನಲ್ಲಿ ಭಾಗವಹಿಸಲು ನಿರಾಕರಿಸಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು. ಸೈದ್ಧಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ಧವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ ಎಂದಿದ್ದಾರೆ.

  • India-China Friendship Association ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು.

    ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ. pic.twitter.com/ls0vGBmaaj

    — Siddaramaiah (@siddaramaiah) August 27, 2022 " class="align-text-top noRightClick twitterSection" data=" ">

ಬಿಜೆಪಿಯಿಂದ ಟ್ವೀಟ್ ಟೀಕೆ: ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಸ್ತಾಪಿಸಿ ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಚೀನಾ ಜೊತೆಗಿನ ಗಡಿ ಸಮಸ್ಯೆ ಪ್ರಸ್ತಾಪಿಸುವ ರಾಹುಲ್ ಗಾಂಧಿ ಅವರಿಗೆ ತಮ್ಮದೇ ಪಕ್ಷದ ನಾಯಕರು ಭಾರತ ಚೀನಾ ಫ್ರೆಂಡ್‌ಶಿಪ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದೆ.

  • ಚೀನಾ ಜೊತೆಗಿನ ಗಡಿ ಸಮಸ್ಯೆ ಪ್ರಸ್ತಾಪಿಸುವ @RahulGandhi ಅವರಿಗೆ ತಮ್ಮದೇ ಪಕ್ಷದ ನಾಯಕರು "India-China Friendship Association" ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಕಾಣುತ್ತಿಲ್ಲವೇ?

    ಆಮಂತ್ರಣ ಪತ್ರಿಕೆಯ ಪೂರ್ತಿ ಕಾಂಗ್ರೆಸ್ ನಾಯಕರ ಹೆಸರುಗಳಿವೆ.

    ಕಾಂಗ್ರೆಸ್‌ಗೂ, ಚೀನಾ ದೇಶಕ್ಕೂ ಇರುವ ಸಂಬಂಧವೇನು?#ದೇಶದ್ರೋಹಿಕಾಂಗ್ರೆಸ್ pic.twitter.com/K5h4JoVcFd

    — BJP Karnataka (@BJP4Karnataka) August 27, 2022 " class="align-text-top noRightClick twitterSection" data=" ">

ಅಲ್ಲದೇ, ಟೀಕೆಗಳು ಕೇಳಿ ಬರುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನನ್ನ ಅನುಮತಿ ಇಲ್ಲದೆಯೇ ಹೆಸರು ಹಾಕಿದ್ದಾರೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ. ಇದು ಹೇಗೆ ಸಾಧ್ಯ?. ಕಾಂಗ್ರೆಸ್ ಪಕ್ಷದ ಪ್ರಭಾವಿ ಶಾಸಕರು, ಮಾಜಿ ಸಚಿವರೇ ಪ್ರಮುಖ ಆಹ್ವಾನಿತರಾಗಿರುವ ಈ ಕಾರ್ಯಕ್ರಮ ಕೆಪಿಸಿಸಿ ವತಿಯಿಂದಲೇ ಆಯೋಜನೆಗೊಂಡಿದ್ದೆ ಎಂದೂ ಬಿಜೆಪಿ ಕೇಳಿದೆ.

ಏನಿದು ವಿವಾದ?: ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಆಂತರಿಕ ವ್ಯವಹಾರಗಳಲ್ಲಿ ಯುಎಸ್ ಸಾಮ್ರಾಜ್ಯಶಾಹಿಯ ಹಸ್ತಕ್ಷೇಪ ಮತ್ತು ಚೀನಾದ ಛಾಯಾಚಿತ್ರ ಪ್ರದರ್ಶನದ ವಿಷಯದೊಂದಿಗೆ ತೈವಾನ್ ಕುರಿತು ಸೆಮಿನಾರ್​ಗೆ ಮಾಜಿ ಮುಖ್ಯಮಂತ್ರಿಯ ಹೆಸರನ್ನು ಮುಖ್ಯ ಅತಿಥಿಯಾಗಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಆಹ್ವಾನಿತರನ್ನಾಗಿ ಸೇರಿಸಿ ಆಹ್ವಾನ ಪತ್ರಿಕೆ ಸಿದ್ಧಪಡಿಸಲಾಗಿತ್ತು.

ಇದಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು ಎಂದು ಹೇಳಿ ಟ್ವೀಟ್​ ಮಾಡಿದ್ದಾರೆ. ಇತ್ತ, ಟೀಕೆಗಳು ಕೇಳಿ ಬರುತ್ತಿದ್ದಂತೆ ನನ್ನ ಅನುಮತಿ ಇಲ್ಲದೆಯೇ ಹೆಸರು ಹಾಕಿದ್ದಾರೆ ಎಂದು ಹೇಳಿ ಸಿದ್ದರಾಮಯ್ಯ ಕೈ ತೊಳೆದುಕೊಂಡಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಇದನ್ನೂ ಓದಿ: ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.