ETV Bharat / state

ವಿವಿಧ ಸಮುದಾಯಗಳ ಮುಖಂಡರ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ - ಲಾಕ್​ಡೌನ್​

ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡ ಹಾಗೂ ಮಧ್ಯಮ ವರ್ಗದ ಶ್ರಮಿಕ ಜೀವಿಗಳ ಸಮಸ್ಯೆಗಳ ಬಗ್ಗೆ ವಿವಿಧ ಸಮುದಾಯಗಳ ಮುಖಂಡರ ಜೊತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಚರ್ಚೆ ನಡೆಸಿದರು.

Siddaramaiah convened Meeting
ಸಂಘಟನೆಗಳ ಮುಖಂಡರ ಸಭೆ ನಡೆಸಿದ ಸಿದ್ದರಾಮಯ್ಯ
author img

By

Published : Apr 28, 2020, 2:12 PM IST

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್ ಹೇರಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳಾಗುತ್ತಿದ್ದು, ನಿತ್ಯದ ದುಡಿಮೆ ನಂಬಿ ಬದುಕುತ್ತಿದ್ದವರ ಜೀವನ ದುಸ್ತರವಾಗಿದೆ. ಈ ಹಿನ್ನೆಲೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ವಿವಿಧ ಸಮುದಾಯಗಳು ಹಾಗೂ ಸಂಘಟನೆಗಳ ಮುಖಂಡರ ಸಭೆ ನಡೆಸಿ ಲಾಕ್​ಡೌನ್ ವೇಳೆ ಉಂಟಾಗಿರುವ ಸಂಕಷ್ಟಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆ ನಡೆಸಿದ ಸಿದ್ದರಾಮಯ್ಯ

ಸವಿತಾ ಸಮಾಜದವರು, ಮಡಿವಾಳರು, ನೇಕಾರರು, ಕುಂಬಾರರು, ಕಮ್ಮಾರರು, ಚಮ್ಮಾರರು ಹಾಗೂ ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿಬದಿಯ ವ್ಯಾಪಾರಿಗಳ ಸಂಘಟನೆಯ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಡವರು ಹಾಗೂ ಮಧ್ಯಮ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಅವರಿಗೆ ನೆರವು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹೆಚ್.ಎಂ.ರೇವಣ್ಣ, ಎಂ.ಸಿ.ವೇಣುಗೋಪಾಲ್, ಎಂ.ಡಿ.ಲಕ್ಷ್ಮಿನಾರಾಯಣ ಮತ್ತಿತರರ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್ ಹೇರಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳಾಗುತ್ತಿದ್ದು, ನಿತ್ಯದ ದುಡಿಮೆ ನಂಬಿ ಬದುಕುತ್ತಿದ್ದವರ ಜೀವನ ದುಸ್ತರವಾಗಿದೆ. ಈ ಹಿನ್ನೆಲೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ವಿವಿಧ ಸಮುದಾಯಗಳು ಹಾಗೂ ಸಂಘಟನೆಗಳ ಮುಖಂಡರ ಸಭೆ ನಡೆಸಿ ಲಾಕ್​ಡೌನ್ ವೇಳೆ ಉಂಟಾಗಿರುವ ಸಂಕಷ್ಟಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆ ನಡೆಸಿದ ಸಿದ್ದರಾಮಯ್ಯ

ಸವಿತಾ ಸಮಾಜದವರು, ಮಡಿವಾಳರು, ನೇಕಾರರು, ಕುಂಬಾರರು, ಕಮ್ಮಾರರು, ಚಮ್ಮಾರರು ಹಾಗೂ ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿಬದಿಯ ವ್ಯಾಪಾರಿಗಳ ಸಂಘಟನೆಯ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಡವರು ಹಾಗೂ ಮಧ್ಯಮ ವರ್ಗದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಅವರಿಗೆ ನೆರವು ಒದಗಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹೆಚ್.ಎಂ.ರೇವಣ್ಣ, ಎಂ.ಸಿ.ವೇಣುಗೋಪಾಲ್, ಎಂ.ಡಿ.ಲಕ್ಷ್ಮಿನಾರಾಯಣ ಮತ್ತಿತರರ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.