ETV Bharat / state

ಕೇವಲ ಬಾಯಿ ಮಾತಲ್ಲಿ ಲೆಕ್ಕ ಕೊಟ್ಟರೆ ಆಗುತ್ತಾ... ಸಚಿವ ಶ್ರೀರಾಮುಲುಗೆ ಸಿದ್ದರಾಮಯ್ಯ ಪ್ರಶ್ನೆ

author img

By

Published : Jul 20, 2020, 6:57 PM IST

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಶ್ರೀರಾಮುಲು ಸ್ಪಷ್ಟನೆ ಕೇಳಿದ್ದೆವು. ಅವರು ಲೆಕ್ಕ ಕೊಟ್ಟಿದ್ದಾರೆ. ಆದರೆ ಬಾಯಿ ಮಾತಿನಲ್ಲಿ ಲೆಕ್ಕ ಕೊಟ್ಟರೆ ಆಗುತ್ತಾ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Siddaramaiah
ಸಿದ್ದರಾಮಯ್ಯ

ಬೆಂಗಳೂರು: ಲೆಕ್ಕ ಕೊಡಿ ಅಂದ್ರೆ ಹಿಂಗಾ ಕೊಡೋದು. ಇವರು ಬಾಯಿ ಮಾತಿನಲ್ಲಿ ಲೆಕ್ಕ ಕೊಟ್ಟರೆ ಆಗುತ್ತಾ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ಶ್ರೀರಾಮುಲುಗೆ ಪ್ರಶ್ನೆ ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಶ್ರೀರಾಮುಲು ಅವರಿಂದ ಸ್ಪಷ್ಟನೆ ಕೇಳಿದ್ದೆವು. ಅವರು ಲೆಕ್ಕ ಕೊಟ್ಟಿದ್ದಾರೆ. ಆದರೆ ಇವರು ಬಾಯಿ ಮಾತಿನಲ್ಲಿ ಲೆಕ್ಕ ಕೊಟ್ಟರೆ ಆಗುತ್ತಾ? ಏನೇನು ಖರೀದಿ ಮಾಡಲಾಗಿದೆ? ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎಂಬ ಲೆಕ್ಕ ಬೇಡವಾ? ಇವರು ಬಾಯಿ ಮಾತಲ್ಲಿ ಹೇಳಿದರೆ ಹೇಗೆ ಎಂದು ಕೇಳಿದ್ದಾರೆ.

ದಾಖಲೆಗಳನ್ನ ತೋರಿಸಲಿ. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಕ್ತರ್ ನನಗೆ ಪತ್ರ ಬರೆದಿದ್ದಾರೆ. ಅವ್ಯವಹಾರ ಆರೋಪ ಸಾಬೀತುಪಡಿಸಿದರೆ ರಾಜೀನಾಮೆ ನೀಡುತ್ತೇನೆಂದು ಶ್ರೀರಾಮುಲು ಹೇಳಿದ್ದಾರೆ. ರಾಜೀನಾಮೆ ಕೊಡಬೇಕಿದ್ರೆ ಇವರು ಯಾಕೆ ಇಲ್ಲಿ ಇರಬೇಕಿತ್ತು ಎಂದು ಗುಡುಗಿದ್ದಾರೆ.

ಬೆಂಗಳೂರು: ಲೆಕ್ಕ ಕೊಡಿ ಅಂದ್ರೆ ಹಿಂಗಾ ಕೊಡೋದು. ಇವರು ಬಾಯಿ ಮಾತಿನಲ್ಲಿ ಲೆಕ್ಕ ಕೊಟ್ಟರೆ ಆಗುತ್ತಾ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ಶ್ರೀರಾಮುಲುಗೆ ಪ್ರಶ್ನೆ ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಶ್ರೀರಾಮುಲು ಅವರಿಂದ ಸ್ಪಷ್ಟನೆ ಕೇಳಿದ್ದೆವು. ಅವರು ಲೆಕ್ಕ ಕೊಟ್ಟಿದ್ದಾರೆ. ಆದರೆ ಇವರು ಬಾಯಿ ಮಾತಿನಲ್ಲಿ ಲೆಕ್ಕ ಕೊಟ್ಟರೆ ಆಗುತ್ತಾ? ಏನೇನು ಖರೀದಿ ಮಾಡಲಾಗಿದೆ? ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎಂಬ ಲೆಕ್ಕ ಬೇಡವಾ? ಇವರು ಬಾಯಿ ಮಾತಲ್ಲಿ ಹೇಳಿದರೆ ಹೇಗೆ ಎಂದು ಕೇಳಿದ್ದಾರೆ.

ದಾಖಲೆಗಳನ್ನ ತೋರಿಸಲಿ. ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಕ್ತರ್ ನನಗೆ ಪತ್ರ ಬರೆದಿದ್ದಾರೆ. ಅವ್ಯವಹಾರ ಆರೋಪ ಸಾಬೀತುಪಡಿಸಿದರೆ ರಾಜೀನಾಮೆ ನೀಡುತ್ತೇನೆಂದು ಶ್ರೀರಾಮುಲು ಹೇಳಿದ್ದಾರೆ. ರಾಜೀನಾಮೆ ಕೊಡಬೇಕಿದ್ರೆ ಇವರು ಯಾಕೆ ಇಲ್ಲಿ ಇರಬೇಕಿತ್ತು ಎಂದು ಗುಡುಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.