ETV Bharat / state

ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ನೀಡುವುದು ಅಕ್ಷಮ್ಯ ಅಪರಾಧ: ಸಿಎಂಗೆ ಸಿದ್ದರಾಮಯ್ಯ ಪತ್ರ

author img

By

Published : Nov 21, 2020, 8:17 PM IST

ಮಲೆನಾಡಿನ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ನೀಡಲು ಸರ್ಕಾರ ಮುಂದಾಗಿರುವುದಕ್ಕೆ ಈಗಾಗಲೇ ಮಲೆನಾಡಿನ ಜಿಲ್ಲೆಗಳಲ್ಲಿ ಜನ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಹೋರಾಟ ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಪರರು, ಪರಿಸರ ಹೋರಾಟಗಾರರು, ಜನಸಾಮಾನ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೂ ಮನವಿ ಪತ್ರ ಕೊಟ್ಟಿದ್ದಾರೆ.

Siddaramaiah said giving forest
ಸಿದ್ದರಾಮಯ್ಯ ಆರೋಪ

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ರೈತರು ಬೆಳೆದ ಬೆಳೆಯನ್ನೂ ಖಾಸಗಿಯವರ ಪಾದಕ್ಕೆ ಅರ್ಪಿಸಿದ್ದಾಯಿತು. ಈಗ ಅರಣ್ಯ ಪ್ರದೇಶವನ್ನೂ ಖಾಸಗಿಯವರಿಗೆ ನೀಡಲು ಸರ್ಕಾರ ಮುಂದಾಗುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Siddaramaiah said giving forest
ಸಿದ್ದರಾಮಯ್ಯ ಪತ್ರ

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಎಚ್ಚರಿಕೆ ನೀಡಿರುವ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ರೈತರ ಕೃಷಿ ಭೂಮಿಯನ್ನು ಖಾಸಗಿಯವರಿಗೆ ನೀಡಿ ಉಳ್ಳವನೇ ಹೊಲದೊಡೆಯ ಆಗಲು ಸರ್ಕಾರ ಒಪ್ಪಿಗೆ ಕೊಟ್ಟಿದ್ದಾಯಿತು. ಈಗ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಎಂಪಿಎಂ ಕಾರ್ಖಾನೆಗೆ ಕಚ್ಚಾ ವಸ್ತು ಪೂರೈಸಲು ನೀಡಲಾಗಿದ್ದ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಏಕಾಏಕಿ ಖಾಸಗಿಯವರಿಗೆ ಒಪ್ಪಿಸಲು ಸರ್ಕಾರ ಮುಂದಾಗಿರುವುದರ ವಿರುದ್ಧ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Siddaramaiah said giving forest
ಸಿದ್ದರಾಮಯ್ಯ ಪತ್ರ

ಮಲೆನಾಡಿನ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ನೀಡಲು ಸರ್ಕಾರ ಮುಂದಾಗಿರುವುದಕ್ಕೆ ಈಗಾಗಲೇ ಮಲೆನಾಡಿನ ಜಿಲ್ಲೆಗಳಲ್ಲಿ ಜನ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಹೋರಾಟ ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಪರರು, ಪರಿಸರ ಹೋರಾಟಗಾರರು, ಜನಸಾಮಾನ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೂ ಅಧಿಕ ಮನವಿ ಪತ್ರ ಕೊಟ್ಟಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಹೋರಾಟಗಾರರ ಒಕ್ಕೂಟದ ಜತೆ ಈ ಬಗ್ಗೆ ನಾನೂ ಚರ್ಚಿಸಿದ್ದೇನೆ. ಸರ್ಕಾರ ಪಾರದರ್ಶಕವಾಗಿ ವರ್ತಿಸದೆ ಗುಟ್ಟು ಗುಟ್ಟಾಗಿ 20 ಸಾವಿರ ಹೆಕ್ಟೇರ್ ಪ್ರದೇಶವನ್ನು ಖಾಸಗಿಯವರಿಗೆ ನೀಡಿ, ಈಗಾಗಲೇ ನೂರಾರು ಸಮಸ್ಯೆಗಳ ಸುಳಿಗೆ ಸಿಲುಕಿರುವ ಮಲೆನಾಡಿನ ಜನಜೀವನ ಮತ್ತು ಭವಿಷ್ಯದ ಜತೆಗೆ ಸರ್ಕಾರ ಹುಡುಗಾಟ ಆಡುತ್ತಿದೆ ಎಂದು ಆರೋಪಿಸಿದ್ದಾರೆ.

ಲೀಸ್ ನೀಡಲಾಗಿತ್ತು:

1980ರಲ್ಲಿ ಭದ್ರಾವತಿಯ ಮೈಸೂರು ಪೇಪರ್ ಮಿಲ್ (ಎಂಪಿಎಂ) ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆಂದು ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಸೇರಿದ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಲೀಸ್ ನೀಡಲಾಗಿತ್ತು. ಈ ಲೀಸ್ ಅವಧಿ ಮುಗಿದ ಕೂಡಲೇ ಈ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸಬೇಕು ಎನ್ನುವ ಷರತ್ತು ವಿಧಿಸಲಾಗಿತ್ತು. ಇದೇ 2020ರ ಆಗಸ್ಟ್‌ನಲ್ಲಿ ಲೀಸ್ ಅವಧಿ ಮುಗಿದಿದೆ. ಜತೆಗೆ ಎಂಪಿಎಂ ಕಾರ್ಖಾನೆ ಕೆಲಸ ನಿಲ್ಲಿಸಿ ವರ್ಷವೇ ಕಳೆದಿದೆ. ಹೀಗಾಗಿ ನಿಯಮಾನುಸಾರ ಹಾಗೂ ಲೀಸ್ ನೀಡುವ ವೇಳೆಯಲ್ಲಿ ವಿಧಿಸಿದ್ದ ಷರತ್ತಿನ ಪ್ರಕಾರ 20 ಸಾವಿರ ಹೆಕ್ಟೇರ್ ಪ್ರದೇಶ ಈ ಕ್ಷಣವೇ ಅರಣ್ಯ ಇಲಾಖೆಗೆ ಹಿಂದಿರುಗಿಸಬೇಕು. ಅದರ ಬದಲು ಖಾಸಗಿಯವರಿಗೆ ಈ ಪ್ರದೇಶವನ್ನು ನೀಡಿ ಮಲೆನಾಡಿನ ಬದುಕನ್ನು ಇನ್ನಷ್ಟು ನರಕ ಮಾಡಲು ಯೋಜಿಸಿರುವಂತೆ ಕಾಣುತ್ತಿದೆ ಎಂದಿದ್ದಾರೆ.

Siddaramaiah said giving forest
ಸಿದ್ದರಾಮಯ್ಯ ಆರೋಪ

ಎಂಪಿಎಂ ಲೀಸ್‍ಗೆ ಪಡೆದಿದ್ದ ಮೂರು ಜಿಲ್ಲೆಗಳಿಗೆ ಸೇರಿದ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 525 ನೆಡುತೋಪುಗಳನ್ನು ಮಾಡಿದ್ದು, ಅವುಗಳಲ್ಲಿ ಬಹುಪಾಲು ಅಕೇಶಿಯಾ ಮತ್ತು ಪೈನೂಸ್ ಜಾತಿಯ ಮರಗಳನ್ನು ಬೆಳೆಯಲಾಗಿದೆ. ಈ ಎರಡೂ ಸಸ್ಯಗಳು ನಿತ್ಯಹರಿದ್ವರ್ಣದ ಸ್ವಾಭಾವಿಕ ಅರಣ್ಯಕ್ಕೆ ವ್ಯತಿರಿಕ್ತವಾದ ಸಸ್ಯಗಳಾಗಿದ್ದು, ಹಲವು ಪಕ್ಷಿ ಸಂಕುಲ ಮತ್ತು ಪ್ರಾಣಿ ಸಂಪತ್ತು ನಾಶವಾಗಿದೆ. ಪರಿಣಾಮಗಳನ್ನು ಸರಿಯಾಗಿ ಅಧ್ಯಯನ ಮಾಡದೆ, ಅಂದಾಜಿಸದೆ ಅಕೇಶಿಯಾದಂತಹ ಏಕ ಜಾತಿಯ ಮರಗಳನ್ನು ನೆಟ್ಟಿದ್ದರಿಂದ ವ್ಯಾಪಕ ಸಮಸ್ಯೆಗಳಾಗಿವೆ. ಕಳೆದ 20-25 ವರ್ಷಗಳಲ್ಲಿ ಮನುಷ್ಯನ ಅಳಿವು-ಉಳಿವನ್ನು ನಿರ್ಧರಿಸುವಂತಾಗಿವೆ.

ನೆಡುತೋಪಿಗೆ ಅವಕಾಶ ಕೊಟ್ಟ ಕಾರಣದಿಂದ ಈಗಾಗಲೇ ಸಾಕಷ್ಟು ಅನಾಹುತಗಳಾಗಿವೆ. ಮತ್ತೊಂದು ಪ್ರಮುಖವಾದ ಸಂಗತಿ ಎಂದರೆ ಮಲೆನಾಡು ಮತ್ತು ಪಶ್ಚಿಮಘಟ್ಟದ ಕಾಡುಗಳು ಹಾಗೂ ಇಲ್ಲಿನ ಜನಜೀವನ ಮೊದಲಿನ ರೀತಿಯಲ್ಲಿ ಇಲ್ಲ. ಪಶ್ಚಿಮಘಟ್ಟದ ಪರಿಸರದ ಮೇಲೆ ಆದ ನಾನಾ ರೀತಿಯ ಆಕ್ರಮಣಗಳಿಂದಾಗಿ ಭೂ ಕುಸಿತದ ಸಮಸ್ಯೆ ತೀವ್ರವಾಗಿದೆ. ಮಳೆ ಪ್ರಮಾಣದಲ್ಲಿ ವ್ಯತ್ಯಾಸ ಆಗಿ ಪ್ರಾಣಿ ಮತ್ತು ಪಕ್ಷಿ ಸಂಕುಲಕ್ಕೆ ನೈಸರ್ಗಿಕವಾಗಿ ಸಿಗಬೇಕಾದ ಆಹಾರ ಸಿಗದ ಕಾರಣದಿಂದ ಜನವಸತಿ ಪ್ರದೇಶಗಳಿಗೆ ಆಹಾರ ಹುಡುಕಿಕೊಂಡು ಬರುತ್ತಿರುವ ಪ್ರಮಾಣವೂ ಹೆಚ್ಚಾಗುತ್ತಿದೆ. ಇದರಿಂದ ಅರಣ್ಯ ಜೀವಿ ಮತ್ತು ಮನುಷ್ಯನ ಸಂಘರ್ಷಗಳೂ ಹೆಚ್ಚುತ್ತಿದೆ. ಮಂಗಗಳ ಹಾವಳಿಯಿಂದ ಮಲೆನಾಡಿನ ಮಂದಿ ಬಸವಳಿದು ಹೋಗಿದ್ದಾರೆ ಎಂದು ವಿವರಿಸಿದ್ದಾರೆ.

ಬೊಕ್ಕಸದಿಂದ ಪರಿಹಾರ, ಸಂಬಳ ನೀಡಿ:

ಎಂಪಿಎಂ ಕಾರ್ಖಾನೆಯ ನೌಕರರಿಗೆ ಸರ್ಕಾರ ತನ್ನ ಬೊಕ್ಕಸದಿಂದಲೇ ಪರಿಹಾರ, ಸಂಬಳ ನೀಡಬೇಕು. ಅರಣ್ಯ ಮಾರಿ ಸಂಬಳ ಕೊಡುವಂತಹ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಬಾರದು. ಹಾಗೇನಾದರೂ ಆದರೆ ರಾಜ್ಯದ ಮರ್ಯಾದೆ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಕ್ಕೆ ಗುರಿಯಾಗಬೇಕಾಗುತ್ತದೆ.

50 ಸಾವಿರ ಎಕರೆ ಅರಣ್ಯವೆಂದರೆ ಅದಕ್ಕೆ ಬೆಲೆ ಕಟ್ಟಲಾಗದು. ಆದ್ದರಿಂದ ಅರಣ್ಯ ಇಲಾಖೆಗೆ ಈ ಪ್ರದೇಶದಲ್ಲಿ ನೈಸರ್ಗಿಕ ಅರಣ್ಯ ಬೆಳೆಯಲು ಅವಕಾಶ ಮಾಡಿಕೊಡಬೇಕು. ಈ ಮೂಲಕ ಪಶ್ಚಿಮಘಟ್ಟ ಹಾಗೂ ಮಲೆನಾಡಿದ ಪರಿಸರವನ್ನು ಪುನರುಜ್ಜೀವನಗೊಳಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ರೈತರು ಬೆಳೆದ ಬೆಳೆಯನ್ನೂ ಖಾಸಗಿಯವರ ಪಾದಕ್ಕೆ ಅರ್ಪಿಸಿದ್ದಾಯಿತು. ಈಗ ಅರಣ್ಯ ಪ್ರದೇಶವನ್ನೂ ಖಾಸಗಿಯವರಿಗೆ ನೀಡಲು ಸರ್ಕಾರ ಮುಂದಾಗುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Siddaramaiah said giving forest
ಸಿದ್ದರಾಮಯ್ಯ ಪತ್ರ

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಎಚ್ಚರಿಕೆ ನೀಡಿರುವ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ರೈತರ ಕೃಷಿ ಭೂಮಿಯನ್ನು ಖಾಸಗಿಯವರಿಗೆ ನೀಡಿ ಉಳ್ಳವನೇ ಹೊಲದೊಡೆಯ ಆಗಲು ಸರ್ಕಾರ ಒಪ್ಪಿಗೆ ಕೊಟ್ಟಿದ್ದಾಯಿತು. ಈಗ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಎಂಪಿಎಂ ಕಾರ್ಖಾನೆಗೆ ಕಚ್ಚಾ ವಸ್ತು ಪೂರೈಸಲು ನೀಡಲಾಗಿದ್ದ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಏಕಾಏಕಿ ಖಾಸಗಿಯವರಿಗೆ ಒಪ್ಪಿಸಲು ಸರ್ಕಾರ ಮುಂದಾಗಿರುವುದರ ವಿರುದ್ಧ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Siddaramaiah said giving forest
ಸಿದ್ದರಾಮಯ್ಯ ಪತ್ರ

ಮಲೆನಾಡಿನ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ನೀಡಲು ಸರ್ಕಾರ ಮುಂದಾಗಿರುವುದಕ್ಕೆ ಈಗಾಗಲೇ ಮಲೆನಾಡಿನ ಜಿಲ್ಲೆಗಳಲ್ಲಿ ಜನ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಹೋರಾಟ ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಪರರು, ಪರಿಸರ ಹೋರಾಟಗಾರರು, ಜನಸಾಮಾನ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿ ಸರ್ಕಾರಕ್ಕೂ ಅಧಿಕ ಮನವಿ ಪತ್ರ ಕೊಟ್ಟಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಹೋರಾಟಗಾರರ ಒಕ್ಕೂಟದ ಜತೆ ಈ ಬಗ್ಗೆ ನಾನೂ ಚರ್ಚಿಸಿದ್ದೇನೆ. ಸರ್ಕಾರ ಪಾರದರ್ಶಕವಾಗಿ ವರ್ತಿಸದೆ ಗುಟ್ಟು ಗುಟ್ಟಾಗಿ 20 ಸಾವಿರ ಹೆಕ್ಟೇರ್ ಪ್ರದೇಶವನ್ನು ಖಾಸಗಿಯವರಿಗೆ ನೀಡಿ, ಈಗಾಗಲೇ ನೂರಾರು ಸಮಸ್ಯೆಗಳ ಸುಳಿಗೆ ಸಿಲುಕಿರುವ ಮಲೆನಾಡಿನ ಜನಜೀವನ ಮತ್ತು ಭವಿಷ್ಯದ ಜತೆಗೆ ಸರ್ಕಾರ ಹುಡುಗಾಟ ಆಡುತ್ತಿದೆ ಎಂದು ಆರೋಪಿಸಿದ್ದಾರೆ.

ಲೀಸ್ ನೀಡಲಾಗಿತ್ತು:

1980ರಲ್ಲಿ ಭದ್ರಾವತಿಯ ಮೈಸೂರು ಪೇಪರ್ ಮಿಲ್ (ಎಂಪಿಎಂ) ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆಂದು ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಸೇರಿದ 20 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಲೀಸ್ ನೀಡಲಾಗಿತ್ತು. ಈ ಲೀಸ್ ಅವಧಿ ಮುಗಿದ ಕೂಡಲೇ ಈ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸಬೇಕು ಎನ್ನುವ ಷರತ್ತು ವಿಧಿಸಲಾಗಿತ್ತು. ಇದೇ 2020ರ ಆಗಸ್ಟ್‌ನಲ್ಲಿ ಲೀಸ್ ಅವಧಿ ಮುಗಿದಿದೆ. ಜತೆಗೆ ಎಂಪಿಎಂ ಕಾರ್ಖಾನೆ ಕೆಲಸ ನಿಲ್ಲಿಸಿ ವರ್ಷವೇ ಕಳೆದಿದೆ. ಹೀಗಾಗಿ ನಿಯಮಾನುಸಾರ ಹಾಗೂ ಲೀಸ್ ನೀಡುವ ವೇಳೆಯಲ್ಲಿ ವಿಧಿಸಿದ್ದ ಷರತ್ತಿನ ಪ್ರಕಾರ 20 ಸಾವಿರ ಹೆಕ್ಟೇರ್ ಪ್ರದೇಶ ಈ ಕ್ಷಣವೇ ಅರಣ್ಯ ಇಲಾಖೆಗೆ ಹಿಂದಿರುಗಿಸಬೇಕು. ಅದರ ಬದಲು ಖಾಸಗಿಯವರಿಗೆ ಈ ಪ್ರದೇಶವನ್ನು ನೀಡಿ ಮಲೆನಾಡಿನ ಬದುಕನ್ನು ಇನ್ನಷ್ಟು ನರಕ ಮಾಡಲು ಯೋಜಿಸಿರುವಂತೆ ಕಾಣುತ್ತಿದೆ ಎಂದಿದ್ದಾರೆ.

Siddaramaiah said giving forest
ಸಿದ್ದರಾಮಯ್ಯ ಆರೋಪ

ಎಂಪಿಎಂ ಲೀಸ್‍ಗೆ ಪಡೆದಿದ್ದ ಮೂರು ಜಿಲ್ಲೆಗಳಿಗೆ ಸೇರಿದ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 525 ನೆಡುತೋಪುಗಳನ್ನು ಮಾಡಿದ್ದು, ಅವುಗಳಲ್ಲಿ ಬಹುಪಾಲು ಅಕೇಶಿಯಾ ಮತ್ತು ಪೈನೂಸ್ ಜಾತಿಯ ಮರಗಳನ್ನು ಬೆಳೆಯಲಾಗಿದೆ. ಈ ಎರಡೂ ಸಸ್ಯಗಳು ನಿತ್ಯಹರಿದ್ವರ್ಣದ ಸ್ವಾಭಾವಿಕ ಅರಣ್ಯಕ್ಕೆ ವ್ಯತಿರಿಕ್ತವಾದ ಸಸ್ಯಗಳಾಗಿದ್ದು, ಹಲವು ಪಕ್ಷಿ ಸಂಕುಲ ಮತ್ತು ಪ್ರಾಣಿ ಸಂಪತ್ತು ನಾಶವಾಗಿದೆ. ಪರಿಣಾಮಗಳನ್ನು ಸರಿಯಾಗಿ ಅಧ್ಯಯನ ಮಾಡದೆ, ಅಂದಾಜಿಸದೆ ಅಕೇಶಿಯಾದಂತಹ ಏಕ ಜಾತಿಯ ಮರಗಳನ್ನು ನೆಟ್ಟಿದ್ದರಿಂದ ವ್ಯಾಪಕ ಸಮಸ್ಯೆಗಳಾಗಿವೆ. ಕಳೆದ 20-25 ವರ್ಷಗಳಲ್ಲಿ ಮನುಷ್ಯನ ಅಳಿವು-ಉಳಿವನ್ನು ನಿರ್ಧರಿಸುವಂತಾಗಿವೆ.

ನೆಡುತೋಪಿಗೆ ಅವಕಾಶ ಕೊಟ್ಟ ಕಾರಣದಿಂದ ಈಗಾಗಲೇ ಸಾಕಷ್ಟು ಅನಾಹುತಗಳಾಗಿವೆ. ಮತ್ತೊಂದು ಪ್ರಮುಖವಾದ ಸಂಗತಿ ಎಂದರೆ ಮಲೆನಾಡು ಮತ್ತು ಪಶ್ಚಿಮಘಟ್ಟದ ಕಾಡುಗಳು ಹಾಗೂ ಇಲ್ಲಿನ ಜನಜೀವನ ಮೊದಲಿನ ರೀತಿಯಲ್ಲಿ ಇಲ್ಲ. ಪಶ್ಚಿಮಘಟ್ಟದ ಪರಿಸರದ ಮೇಲೆ ಆದ ನಾನಾ ರೀತಿಯ ಆಕ್ರಮಣಗಳಿಂದಾಗಿ ಭೂ ಕುಸಿತದ ಸಮಸ್ಯೆ ತೀವ್ರವಾಗಿದೆ. ಮಳೆ ಪ್ರಮಾಣದಲ್ಲಿ ವ್ಯತ್ಯಾಸ ಆಗಿ ಪ್ರಾಣಿ ಮತ್ತು ಪಕ್ಷಿ ಸಂಕುಲಕ್ಕೆ ನೈಸರ್ಗಿಕವಾಗಿ ಸಿಗಬೇಕಾದ ಆಹಾರ ಸಿಗದ ಕಾರಣದಿಂದ ಜನವಸತಿ ಪ್ರದೇಶಗಳಿಗೆ ಆಹಾರ ಹುಡುಕಿಕೊಂಡು ಬರುತ್ತಿರುವ ಪ್ರಮಾಣವೂ ಹೆಚ್ಚಾಗುತ್ತಿದೆ. ಇದರಿಂದ ಅರಣ್ಯ ಜೀವಿ ಮತ್ತು ಮನುಷ್ಯನ ಸಂಘರ್ಷಗಳೂ ಹೆಚ್ಚುತ್ತಿದೆ. ಮಂಗಗಳ ಹಾವಳಿಯಿಂದ ಮಲೆನಾಡಿನ ಮಂದಿ ಬಸವಳಿದು ಹೋಗಿದ್ದಾರೆ ಎಂದು ವಿವರಿಸಿದ್ದಾರೆ.

ಬೊಕ್ಕಸದಿಂದ ಪರಿಹಾರ, ಸಂಬಳ ನೀಡಿ:

ಎಂಪಿಎಂ ಕಾರ್ಖಾನೆಯ ನೌಕರರಿಗೆ ಸರ್ಕಾರ ತನ್ನ ಬೊಕ್ಕಸದಿಂದಲೇ ಪರಿಹಾರ, ಸಂಬಳ ನೀಡಬೇಕು. ಅರಣ್ಯ ಮಾರಿ ಸಂಬಳ ಕೊಡುವಂತಹ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವಿಸಬಾರದು. ಹಾಗೇನಾದರೂ ಆದರೆ ರಾಜ್ಯದ ಮರ್ಯಾದೆ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಕ್ಕೆ ಗುರಿಯಾಗಬೇಕಾಗುತ್ತದೆ.

50 ಸಾವಿರ ಎಕರೆ ಅರಣ್ಯವೆಂದರೆ ಅದಕ್ಕೆ ಬೆಲೆ ಕಟ್ಟಲಾಗದು. ಆದ್ದರಿಂದ ಅರಣ್ಯ ಇಲಾಖೆಗೆ ಈ ಪ್ರದೇಶದಲ್ಲಿ ನೈಸರ್ಗಿಕ ಅರಣ್ಯ ಬೆಳೆಯಲು ಅವಕಾಶ ಮಾಡಿಕೊಡಬೇಕು. ಈ ಮೂಲಕ ಪಶ್ಚಿಮಘಟ್ಟ ಹಾಗೂ ಮಲೆನಾಡಿದ ಪರಿಸರವನ್ನು ಪುನರುಜ್ಜೀವನಗೊಳಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.