ETV Bharat / state

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ

author img

By

Published : Jan 22, 2020, 2:20 AM IST

ನಮ್ಮ ಸರ್ಕಾರ ತಂದ ರೈತಪರ ಯೋಜನೆಯನ್ನು ಬಿಜೆಪಿ ಕೈ ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

siddaramaiah tweet against bjp government
ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ರೈತರ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ಧೋರಣೆ ತಾಳಿದ್ದು, ನಮ್ಮ ಸರ್ಕಾರ ತಂದ ರೈತಪರ ಯೋಜನೆಯನ್ನು ಬಿಜೆಪಿ ಕೈ ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

siddaramaiah tweet against bjp government
ಸಿದ್ದರಾಮಯ್ಯ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬರಪೀಡಿತ ತಾಲೂಕುಗಳಲ್ಲಿ ರೈತರಿಂದ ಸಹಕಾರಿ ಸಂಸ್ಥೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ನಮ್ಮ ಸರ್ಕಾರ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವುದು ಖಂಡನೀಯ. ಈ ಮೂಲಕ ಬಲವಂತದ ಸಾಲ ವಸೂಲಿಗೆ ಪರವಾನಿಗೆ ನೀಡಿರುವ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ ಎಂದಿದ್ದಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಪೀಡಿತ ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡುವ ದುಸ್ಸಾಹಸವನ್ನು ತಕ್ಷಣ ನಿಲ್ಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ರೈತರ ಜೊತೆ ನಮ್ಮ ಪಕ್ಷ ಕೂಡಾ ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

siddaramaiah tweet against bjp government
ಸಿದ್ದರಾಮಯ್ಯ ಟ್ವೀಟ್

15 ಜಿಲ್ಲೆಗಳ 55 ತಾಲೂಕುಗಳ ರೈತರು ಈಗಾಗಲೇ ಪ್ರವಾಹದಿಂದಾಗಿ ಬೆಳೆ ಇಳುವರಿಯನ್ನು ಕಳೆದುಕೊಂಡಿದ್ದಾರೆ. ಅವರು ಇನ್ನೂ ಸರ್ಕಾರದಿಂದ ಸರಿಯಾದ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಆದರೆ ಬದಲಾಗಿ, ಸರ್ಕಾರವು ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡಲು ಮತ್ತು ಕೆಟ್ಟದಾಗಿ ಚಿಕಿತ್ಸೆ ನೀಡಲು ಸಜ್ಜಾಗಿದೆ. ಬರಪೀಡಿತ ಪ್ರದೇಶಗಳಲ್ಲಿನ ರೈತರಿಂದ ಪಡೆದ ಸಾಲವನ್ನು ಬಲವಂತವಾಗಿ ವಸೂಲಿ ಮಾಡದಂತೆ ನಮ್ಮ ಸರ್ಕಾರ ಬ್ಯಾಂಕುಗಳಿಗೆ ಸೂಚಿಸಿತ್ತು. ಸಾಲಗಳನ್ನು ವಸೂಲಿ ಮಾಡಲು ಬ್ಯಾಂಕುಗಳಿಗೆ ಅವಕಾಶ ನೀಡುವ ಮೂಲಕ ಇದನ್ನು ಬಿಎಸ್​​ವೈ ನೇತೃತ್ವದ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದೆ. ಇದನ್ನು ಮಾಡುವ ಮೂಲಕ, ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನಮ್ಮ ರೈತರಿಗೆ ದ್ರೋಹ ಬಗೆದಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.

ಬೆಂಗಳೂರು: ರೈತರ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ಧೋರಣೆ ತಾಳಿದ್ದು, ನಮ್ಮ ಸರ್ಕಾರ ತಂದ ರೈತಪರ ಯೋಜನೆಯನ್ನು ಬಿಜೆಪಿ ಕೈ ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

siddaramaiah tweet against bjp government
ಸಿದ್ದರಾಮಯ್ಯ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬರಪೀಡಿತ ತಾಲೂಕುಗಳಲ್ಲಿ ರೈತರಿಂದ ಸಹಕಾರಿ ಸಂಸ್ಥೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ನಮ್ಮ ಸರ್ಕಾರ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವುದು ಖಂಡನೀಯ. ಈ ಮೂಲಕ ಬಲವಂತದ ಸಾಲ ವಸೂಲಿಗೆ ಪರವಾನಿಗೆ ನೀಡಿರುವ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ ಎಂದಿದ್ದಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಪೀಡಿತ ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡುವ ದುಸ್ಸಾಹಸವನ್ನು ತಕ್ಷಣ ನಿಲ್ಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ರೈತರ ಜೊತೆ ನಮ್ಮ ಪಕ್ಷ ಕೂಡಾ ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

siddaramaiah tweet against bjp government
ಸಿದ್ದರಾಮಯ್ಯ ಟ್ವೀಟ್

15 ಜಿಲ್ಲೆಗಳ 55 ತಾಲೂಕುಗಳ ರೈತರು ಈಗಾಗಲೇ ಪ್ರವಾಹದಿಂದಾಗಿ ಬೆಳೆ ಇಳುವರಿಯನ್ನು ಕಳೆದುಕೊಂಡಿದ್ದಾರೆ. ಅವರು ಇನ್ನೂ ಸರ್ಕಾರದಿಂದ ಸರಿಯಾದ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಆದರೆ ಬದಲಾಗಿ, ಸರ್ಕಾರವು ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡಲು ಮತ್ತು ಕೆಟ್ಟದಾಗಿ ಚಿಕಿತ್ಸೆ ನೀಡಲು ಸಜ್ಜಾಗಿದೆ. ಬರಪೀಡಿತ ಪ್ರದೇಶಗಳಲ್ಲಿನ ರೈತರಿಂದ ಪಡೆದ ಸಾಲವನ್ನು ಬಲವಂತವಾಗಿ ವಸೂಲಿ ಮಾಡದಂತೆ ನಮ್ಮ ಸರ್ಕಾರ ಬ್ಯಾಂಕುಗಳಿಗೆ ಸೂಚಿಸಿತ್ತು. ಸಾಲಗಳನ್ನು ವಸೂಲಿ ಮಾಡಲು ಬ್ಯಾಂಕುಗಳಿಗೆ ಅವಕಾಶ ನೀಡುವ ಮೂಲಕ ಇದನ್ನು ಬಿಎಸ್​​ವೈ ನೇತೃತ್ವದ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದೆ. ಇದನ್ನು ಮಾಡುವ ಮೂಲಕ, ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನಮ್ಮ ರೈತರಿಗೆ ದ್ರೋಹ ಬಗೆದಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.

Intro:newsBody:ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಸಿದ್ದರಾಮಯ್ಯ ತೀವ್ರ ಆಕ್ರೋಶ

ಬೆಂಗಳೂರು: ರೈತರ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ಧೋರಣೆ ತಾಳಿದ್ದು, ನಮ್ಮ ಸರ್ಕಾರ ತಂದ ರೈತಪರ ಯೋಜನೆಯನ್ನು ಬಿಜೆಪಿ ಕೈ ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬರಪೀಡಿತ ತಾಲ್ಲೂಕುಗಳಲ್ಲಿ ರೈತರಿಂದ ಸಹಕಾರಿ ಸಂಸ್ಥೆಗಳ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದೆಂದು ನಮ್ಮ‌ಸರ್ಕಾರ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವುದು ಖಂಡನೀಯ.
ಈ ಮೂಲಕ ಬಲವಂತದ ಸಾಲ ವಸೂಲಿಗೆ ಪರವಾನಿಗೆ ನೀಡಿರುವ ರಾಜ್ಯ‌ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ ಎಂದಿದ್ದಾರೆ.

ಅತಿವೃಷ್ಟಿ ಮತ್ತು ಅನಾವೃಷ್ಟಿ ಪೀಡಿತ ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡುವ ದುಸ್ಸಾಹಸವನ್ನು ತಕ್ಷಣ ನಿಲ್ಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ರೈತರ ಜೊತೆ ನಮ್ಮ ಪಕ್ಷ ಕೂಡಾ ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
15 ಜಿಲ್ಲೆಗಳ 55 ತಾಲ್ಲೂಕುಗಳ ರೈತರು ಈಗಾಗಲೇ ಪ್ರವಾಹದಿಂದಾಗಿ ಬೆಳೆ ಇಳುವರಿಯನ್ನು ಕಳೆದುಕೊಂಡಿದ್ದಾರೆ. ಅವರು ಇನ್ನೂ ಸರ್ಕಾರದಿಂದ ಸರಿಯಾದ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಆದರೆ ಬದಲಾಗಿ, ಸರ್ಕಾರವು ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡಲು ಮತ್ತು ಕೆಟ್ಟದಾಗಿ ಚಿಕಿತ್ಸೆ ನೀಡಲು ಸಜ್ಜಾಗಿದೆ. ಬರಪೀಡಿತ ಪ್ರದೇಶಗಳಲ್ಲಿನ ರೈತರಿಂದ ಪಡೆದ ಸಾಲವನ್ನು ಬಲವಂತವಾಗಿ ವಸೂಲಿ ಮಾಡದಂತೆ ನಮ್ಮ ಸರ್ಕಾರ ಬ್ಯಾಂಕುಗಳಿಗೆ ಸೂಚಿಸಿತ್ತು. ಕೆಟ್ಟ ಸಾಲಗಳನ್ನು ವಸೂಲಿ ಮಾಡಲು ಬ್ಯಾಂಕುಗಳಿಗೆ ಅವಕಾಶ ನೀಡುವ ಮೂಲಕ ಇದನ್ನು ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದೆ. ಇದನ್ನು ಮಾಡುವ ಮೂಲಕ, ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ನಮ್ಮ ರೈತರಿಗೆ ದ್ರೋಹ ಬಗೆದಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.