ETV Bharat / state

ನಾನು ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ; ಟಿ.ಬಿ. ಜಯಚಂದ್ರ - Siddaramayya latest news

ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಸಿದ್ದರಾಮಯ್ಯ ಇಂದು ತಮ್ಮನ್ನು ಭೇಟಿಯಾದ ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸಿದರು.

Siddaramayya
Siddaramayya
author img

By

Published : Aug 31, 2020, 4:48 PM IST

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಪಕ್ಷದ‌ ಮುಖಂಡರ ಜೊತೆ ಮಾತುಕತೆ ನಡೆಸಿದರು.

ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಹೋಂ ಕ್ವಾರಂಟೈನ್​ನಲ್ಲಿದ್ದ ಸಿದ್ದರಾಮಯ್ಯ ಅವರು ಇಂದಿನಿಂದ ದೈನಂದಿನ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಇಂದು ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು ಭೇಟಿ‌ ಮಾಡಿ ಚರ್ಚೆ ನಡೆಸಿದರು.

ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಅಕಾಲಿಕವಾಗಿ ಸತ್ಯನಾರಾಯಣ ಅವರು ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ಬಂದಿದೆ. ದಿನಾಂಕ ಯಾವ ಸಂದರ್ಭದಲ್ಲಿ ಘೋಷಣೆ ಆಗುತ್ತೊ ಗೊತ್ತಿಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ಚಿಂತಿಸುತ್ತಿದ್ದಾರೆ. ಸ್ವಾಭಾವಿಕವಾಗಿ ಕಾಂಗ್ರೆಸ್ ಅಧಿಕೃತ ಪ್ರತಿಪಕ್ಷ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಯಾವತ್ತೂ ಕೂಡ ಚುನಾವಣೆ ಎದುರಿಸಲು ಸಿದ್ಧವಿದೆ. ನಾನು ಸೋತಿದ್ದರೂ ಕೂಡ ಕ್ಷೇತ್ರ ಬಿಟ್ಟಿಲ್ಲ. ಯಾವತ್ತೂ ಜನಪರ ಕೆಲಸಗಳನ್ನು ಮಾಡಿಕೊಂಡೇ ಬಂದಿದ್ದೇನೆ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು.

ಸಿದ್ದರಾಮಯ್ಯ ಭೇಟಿ :
ಕೊರೊನಾ ಸೋಂಕಿನಿಂದ ಮುಕ್ತರಾದ ಬಳಿಕ ಸಿದ್ದರಾಮಯ್ಯ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿದೆ. ಶಿರಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದೇನೆ. ಮೂರನೇ ಬಾರಿ ಸೋತಿದ್ದೇನೆ. ಹೀಗಾಗಿ ನನಗೆ ಟಿಕೆಟ್ ಕೊಡುವ ಭರವಸೆ ಇದೆ. ಜಿಲ್ಲೆಯ ನಾಯಕರ ಜೊತೆ ಸಮನ್ವಯತೆ ಕೊರತೆ ವಿಚಾರ ಅಲ್ಲಗಳೆದ ಅವರು, ನಾನು, ರಾಜಣ್ಣ, ಪರಮೇಶ್ವರ್ ಸೇರಿ ಕೆಲಸ ಮಾಡಿದ್ದೇವೆ. ಸಣ್ಣಪುಟ್ಟ ಸಮಸ್ಯೆಗಳು ಇರುವುದು ನಿಜ, ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದರು.

ಡ್ರಗ್ಸ್ ದಂಧೆ ಬೆಂಗಳೂರಿಗೆ ಸೀಮಿತವಾಗಿಲ್ಲ :

ಡ್ರಗ್ಸ್ ಮಾಫಿಯಾ ಬೆಂಗಳೂರಿಗೆ ಮಾತ್ರ ಸೀಮಿತವಲ್ಲ, ಇದು ಹಳ್ಳಿಗಳಿಗೂ ಕೂಡ ವ್ಯಾಪಿಸಿದೆ. ಇದರ ಸಂಪೂರ್ಣ ನಿಯಂತ್ರಣಕ್ಕೆ ಒಂದು ಪ್ರಬಲ ಕಾನೂನಿನ ಅವಶ್ಯಕತೆ ಇದೆ. ಎಲ್ಲೆಂದರಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಇದನ್ನು ಸರ್ಕಾರ ಅತ್ಯಂತ ದಿಟ್ಟವಾಗಿ ನಿಯಂತ್ರಿಸಬೇಕಿದೆ ಎಂದು ಸಲಹೆ ನೀಡಿದರು.

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಪಕ್ಷದ‌ ಮುಖಂಡರ ಜೊತೆ ಮಾತುಕತೆ ನಡೆಸಿದರು.

ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಹೋಂ ಕ್ವಾರಂಟೈನ್​ನಲ್ಲಿದ್ದ ಸಿದ್ದರಾಮಯ್ಯ ಅವರು ಇಂದಿನಿಂದ ದೈನಂದಿನ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ಇಂದು ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು ಭೇಟಿ‌ ಮಾಡಿ ಚರ್ಚೆ ನಡೆಸಿದರು.

ಸಿದ್ದರಾಮಯ್ಯ ಭೇಟಿ ಬಳಿಕ ಮಾಜಿ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಅಕಾಲಿಕವಾಗಿ ಸತ್ಯನಾರಾಯಣ ಅವರು ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ಬಂದಿದೆ. ದಿನಾಂಕ ಯಾವ ಸಂದರ್ಭದಲ್ಲಿ ಘೋಷಣೆ ಆಗುತ್ತೊ ಗೊತ್ತಿಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ಚಿಂತಿಸುತ್ತಿದ್ದಾರೆ. ಸ್ವಾಭಾವಿಕವಾಗಿ ಕಾಂಗ್ರೆಸ್ ಅಧಿಕೃತ ಪ್ರತಿಪಕ್ಷ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಯಾವತ್ತೂ ಕೂಡ ಚುನಾವಣೆ ಎದುರಿಸಲು ಸಿದ್ಧವಿದೆ. ನಾನು ಸೋತಿದ್ದರೂ ಕೂಡ ಕ್ಷೇತ್ರ ಬಿಟ್ಟಿಲ್ಲ. ಯಾವತ್ತೂ ಜನಪರ ಕೆಲಸಗಳನ್ನು ಮಾಡಿಕೊಂಡೇ ಬಂದಿದ್ದೇನೆ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು.

ಸಿದ್ದರಾಮಯ್ಯ ಭೇಟಿ :
ಕೊರೊನಾ ಸೋಂಕಿನಿಂದ ಮುಕ್ತರಾದ ಬಳಿಕ ಸಿದ್ದರಾಮಯ್ಯ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿದೆ. ಶಿರಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದೇನೆ. ಮೂರನೇ ಬಾರಿ ಸೋತಿದ್ದೇನೆ. ಹೀಗಾಗಿ ನನಗೆ ಟಿಕೆಟ್ ಕೊಡುವ ಭರವಸೆ ಇದೆ. ಜಿಲ್ಲೆಯ ನಾಯಕರ ಜೊತೆ ಸಮನ್ವಯತೆ ಕೊರತೆ ವಿಚಾರ ಅಲ್ಲಗಳೆದ ಅವರು, ನಾನು, ರಾಜಣ್ಣ, ಪರಮೇಶ್ವರ್ ಸೇರಿ ಕೆಲಸ ಮಾಡಿದ್ದೇವೆ. ಸಣ್ಣಪುಟ್ಟ ಸಮಸ್ಯೆಗಳು ಇರುವುದು ನಿಜ, ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದರು.

ಡ್ರಗ್ಸ್ ದಂಧೆ ಬೆಂಗಳೂರಿಗೆ ಸೀಮಿತವಾಗಿಲ್ಲ :

ಡ್ರಗ್ಸ್ ಮಾಫಿಯಾ ಬೆಂಗಳೂರಿಗೆ ಮಾತ್ರ ಸೀಮಿತವಲ್ಲ, ಇದು ಹಳ್ಳಿಗಳಿಗೂ ಕೂಡ ವ್ಯಾಪಿಸಿದೆ. ಇದರ ಸಂಪೂರ್ಣ ನಿಯಂತ್ರಣಕ್ಕೆ ಒಂದು ಪ್ರಬಲ ಕಾನೂನಿನ ಅವಶ್ಯಕತೆ ಇದೆ. ಎಲ್ಲೆಂದರಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಇದನ್ನು ಸರ್ಕಾರ ಅತ್ಯಂತ ದಿಟ್ಟವಾಗಿ ನಿಯಂತ್ರಿಸಬೇಕಿದೆ ಎಂದು ಸಲಹೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.