ETV Bharat / state

ವಿದ್ಯಾಭ್ಯಾಸದ ಜೊತೆಗೆ ಸಾಮಾಜಿಕ ಕೌಶಲಗಳನ್ನೂ ಕಲಿಸಬೇಕು: ಭಾಸ್ಕರ್ ರಾವ್ ಅಭಿಮತ - Bhaskar rao City police commissioner banglore

ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ - 2019 ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಭಾಗವಹಿಸಿದ್ದರು.

ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ -2019 ಕಾರ್ಯಕ್ರಮ
author img

By

Published : Nov 16, 2019, 11:48 PM IST

ಬೆಂಗಳೂರು: ಶಾಲಾ ಕಾಲೇಜ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕ ತೆಗೆಯುವುದನ್ನೇ ಸಾಧನೆ ಎಂದು ಹೇಳಿ ಕೊಡಲಾಗ್ತಿದೆ. ಆದರೆ, ವಿದ್ಯಾಭ್ಯಾಸದ ಬಳಿಕ ಉದ್ಯೋಗ ಪಡೆದುಕೊಳ್ಳಬೇಕಾದ ಸಮಾಜ ಎದುರಿಸಬೇಕಾದ ಸಾಮಾಜಿಕ ಕೌಶಲ್ಯವನ್ನೂ ಕಲಿಸಬೇಕು ಎಂದು ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ -2019 ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ತಿಳಿಸಿದರು.

ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್​​​ರಾವ್, ನಮ್ಮಲ್ಲಿ ಜನರ ಕೊರತೆ ಇಲ್ಲ. ಆದ್ರೆ ಮಾನವ ಸಂಪನ್ಮೂಲದ ಕೊರತೆ ಇದೆ ಎಂದರು. ಪಠ್ಯ ವಿಷಯಗಳಲ್ಲಿ ಶೇ.95ರಷ್ಟು ಅಂಕ ಪಡೆದು ಸರಿಯಾದ ಉದ್ಯೋಗ ಸಿಗದಿದ್ದಾಗ ಬಹಳಷ್ಟು ಮಂದಿ ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತವೆ ಎಂದರು.

ಬೆಂಗಳೂರು ಬಂಟರ ಸಂಘದ ಸಂಪರ್ಕ 2019ರ ಕಾರ್ಯಕ್ರಮದ ಮೂಲಕ ಮಾನವ ಸಂಪನ್ಮೂಲ ಕ್ರೋಢಿಕರಿಸಿ ಬಲವರ್ಧನೆ ಮಾಡುವುದರ ಜೊತೆಗೆ ಸಮುದಾಯದ ಕಿರಿಯರಿಗೆ ಉದ್ಯೋಗ ಅವಕಾಶಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಆಭಿಪ್ರಾಯಪಟ್ಟರು.

ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಲುಮೇನ್ಸ್ ಗ್ರೂಪ್‍ನ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಸಿ. ಶೆಟ್ಟಿ ಭಾಗವಹಿಸಿದ್ದರು.

ಬೆಂಗಳೂರು: ಶಾಲಾ ಕಾಲೇಜ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕ ತೆಗೆಯುವುದನ್ನೇ ಸಾಧನೆ ಎಂದು ಹೇಳಿ ಕೊಡಲಾಗ್ತಿದೆ. ಆದರೆ, ವಿದ್ಯಾಭ್ಯಾಸದ ಬಳಿಕ ಉದ್ಯೋಗ ಪಡೆದುಕೊಳ್ಳಬೇಕಾದ ಸಮಾಜ ಎದುರಿಸಬೇಕಾದ ಸಾಮಾಜಿಕ ಕೌಶಲ್ಯವನ್ನೂ ಕಲಿಸಬೇಕು ಎಂದು ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ -2019 ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ತಿಳಿಸಿದರು.

ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್​​​ರಾವ್, ನಮ್ಮಲ್ಲಿ ಜನರ ಕೊರತೆ ಇಲ್ಲ. ಆದ್ರೆ ಮಾನವ ಸಂಪನ್ಮೂಲದ ಕೊರತೆ ಇದೆ ಎಂದರು. ಪಠ್ಯ ವಿಷಯಗಳಲ್ಲಿ ಶೇ.95ರಷ್ಟು ಅಂಕ ಪಡೆದು ಸರಿಯಾದ ಉದ್ಯೋಗ ಸಿಗದಿದ್ದಾಗ ಬಹಳಷ್ಟು ಮಂದಿ ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತವೆ ಎಂದರು.

ಬೆಂಗಳೂರು ಬಂಟರ ಸಂಘದ ಸಂಪರ್ಕ 2019ರ ಕಾರ್ಯಕ್ರಮದ ಮೂಲಕ ಮಾನವ ಸಂಪನ್ಮೂಲ ಕ್ರೋಢಿಕರಿಸಿ ಬಲವರ್ಧನೆ ಮಾಡುವುದರ ಜೊತೆಗೆ ಸಮುದಾಯದ ಕಿರಿಯರಿಗೆ ಉದ್ಯೋಗ ಅವಕಾಶಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಆಭಿಪ್ರಾಯಪಟ್ಟರು.

ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಲುಮೇನ್ಸ್ ಗ್ರೂಪ್‍ನ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಸಿ. ಶೆಟ್ಟಿ ಭಾಗವಹಿಸಿದ್ದರು.

Intro:ವಿದ್ಯಾಭ್ಯಾಸದ ಜೊತೆಗೆ ಸಾಮಾಜಿಕ ಕೌಶಲ್ಯಗಳು ಕಲಿಸಬೇಕು- ಭಾಸ್ಕರ್ ರಾವ್


ಬೆಂಗಳೂರು: ಶಾಲಾ ಕಾಲೇಜ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಅಂಕ ತೆಗೆಯುವುದನ್ನೇ ಸಾಧನೆ ಎಂದು ಹೇಳಿಕೊಡಲಾಗ್ತಿದೆ. ಆದರೆ ವಿದ್ಯಾಬ್ಯಾಸದ ಬಳಿಕ ಉದ್ಯೋಗ ಪಡೆದುಕೊಳ್ಳಬೇಕಾದ, ಸಮಾಜ ಎದುರಿಸಬೇಕಾದ ಸಾಮಾಜಿಕ ಕೌಶಲ್ಯವನ್ನೂ ಕಲಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ತಿಳಿಸಿದರು.
ಬೆಂಗಳೂರು ಬಂಟರ ಸಂಘ ಏರ್ಪಡಿಸಿದ್ದ ಸಂಪರ್ಕ -2019 ಕಾರ್ಯಕ್ರಮವನ್ನು ಉದ್ಥಾಟಿಸಿ ಮಾತನಾಡಿದ ಬೆಂಗಳೂರು ಪೋಲಿಸ್ ಆಯುಕ್ತರಾದ ಭಾಸ್ಕರ್ ರಾವ್, ನಮ್ಮಲ್ಲಿ ಜನರ ಕೊರತೆ ಇಲ್ಲ. ಆದ್ರೆ ಮಾನವ ಸಂಪನ್ಮೂಲದ ಕೊರತೆ ಇದೆ ಎಂದು ಹೇಳಿದ್ರು.
ಪಠ್ಯ ವಿಷಯಗಳಲ್ಲಿ ಶೇ.95ರಷ್ಟು ಅಂಕ ಪಡೆದು ಸರಿಯಾದ ಉದ್ಯೋಗ ಸಿಗದಿದ್ದಾಗ ಬಹಳಷ್ಟು ಮಂದಿ ಖಿನ್ನತೆಗೆ ಒಳಗಾಗುತ್ತಾರೆ. ಇದ್ರಿಂದ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತವೆ ಎಂದರು.
ಬೆಂಗಳೂರು ಬಂಟರ ಸಂಘ, ಸಂಪರ್ಕ 2019ರ ಕಾರ್ಯಕ್ರಮದ ಮೂಲಕ ಮಾನವ ಸಂಪನ್ಮೂಲ ಕ್ರೂಢಿಕರಿಸಿ ಬಲವರ್ಧನೆ ಮಾಡುವುದರ ಜೊತೆಗೆ ಸಮುದಾಯದ ಕಿರಿಯರಿಗೆ ಉದ್ಯೋಗ ಅವಕಾಶಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಆಭಿಪ್ರಾಯಪಟ್ಟರು.
ಇನ್ನು ಬಂಟ ಸಮುದಾಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಬೆಂಗಳೂರು ಪೊಲೀಸ್ ಆಯುಕ್ತರು, ಹಲವಾರು ವಲಯಗಳಲ್ಲಿ ಗುರುತಿಸಿಕೊಂಡಿರುವ ಬಂಟ ಸಮುದಾಯದವರು ಪ್ರಪಂಚದ ಯಾವುದೇ ಮೂಲೆಗೆ ಹೋದ್ರೂ ಕಾಣ ಸಿಗುತ್ತಾರೆ. ಸಮುದಾಯ ಬೆಳೆಯುವುದರ ಜೊತೆಗೆ ಇತರರಿಗೂ ಅವಕಾಶ ನೀಡಿ ಬೆಳೆಸುವಂತಹ ಗುಣ ಅವರಲ್ಲಿದೆ. ನಾನು ನೋಡಿದ ಹಾಗೇ ಜೈನರು, ಸಿಖ್ಖರು ಹಾಗೂ ಬಂಟ ಸಮುದಾಯದವರು ಯಾರಿಗೂ ತಲೆಬಾಗುವುದಿಲ್ಲ. ಸ್ವಾಭಿಮಾನಿಗಳಾಗಿ ಜೀವನ ಸಾಗಿಸುತ್ತಾರೆ ಎಂದು ಹೇಳಿದ್ರು.
ಮಂಗಳೂರು ಜನರು ಯಾರ ಕೈಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುವುದಿಲ್ಲ. ಬದಲಿಗೆ ತಮ್ಮ ಅಡಿಯಲ್ಲಿ ಜನರು ಕೆಲಸ ಕೇಳಿಕೊಂಡು ಬರುವ ಹಾಗೇ ಮಾಡುತ್ತಾರೆ. ಅಷ್ಟೇ ಅಲ್ಲ, ಸರ್ಕಾರಿ ಕೆಲಸಕ್ಕೆ ಬರುವವರ ಸಂಖ್ಯೆ ತುಂಬಾ ಕಮ್ಮಿಯಾಗಿದೆ. ಅದ್ರಲ್ಲೂ ಪೊಲೀಸ್ ಇಲಾಖೆಗೆ ಕರಾವಳಿ ಜನರು ಸೇರುತ್ತಿಲ್ಲ. ಹೀಗಾಗಿ ನಾವು ಉತ್ತರ ಕರ್ನಾಟಕದವರಿಗೆ ತುಳು ಕ್ಲಾಸ್ ಮಾಡೋ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ವಹಿಸಿದ್ದರು. ಮುಖ್ಯ ಆತಿಥಿಯಾಗಿ ಲುಮೇನ್ಸ್ ಗ್ರೂಪ್‍ನ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಸಿ. ಶೆಟ್ಟಿ ಭಾಗವಹಿಸಿದ್ದರು.




ಸೌಮ್ಯಶ್ರೀ
Kn_bng_02_bunts_Prgm_7202707Body:.Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.