ETV Bharat / state

ಘನತ್ಯಾಜ್ಯ ವಿಲೇವಾರಿ ಹಾಗೂ ಸಾಗಾಣಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮ: ಪಿ.ಆರ್.ರಮೇಶ್​ ಆರೋಪ - Bangalore

ಬಿಬಿಎಂಪಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಹಾಗೂ ಸಾಗಾಣಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

Bangalore
ವಿಧಾನ ಪರಿಷತ್ ಸದಸ್ಯ ಪಿಆರ್ ರಮೇಶ್
author img

By

Published : Aug 28, 2020, 7:59 AM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಹಾಗೂ ಸಾಗಾಣಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಎಂಪಿಯ 198 ವಾರ್ಡ್​ಗಳ ಕಸ ವಿಲೇವಾರಿ ಟೆಂಡರ್ ಕಡತಗಳನ್ನು ಪರಿಶೀಲಿಸದೆ, ನ್ಯಾಯಯುತವಾಗಿ ಟೆಂಡರ್ ನೀಡಲ್ಲ ಎಂದು ಆರೋಪಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್

ಕಳೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಟೆಂಡರ್ ಪ್ರಕ್ರಿಯೆ ಮೌಲ್ಯಮಾಪನ ಮಾಡ ಕೈ ಬಿಡಲಾಗಿತ್ತು. ಆದ್ರೆ ಬಿಬಿಎಂಪಿಗೆ ಹೊಸದಾಗಿ ಬಂದಿರುವ ಆಯುಕ್ತರು, ಕೈ ಬಿಟ್ಟಿರುವ ಪ್ರಕ್ರಿಯೆಯನ್ನು ಬಿಬಿಎಂಪಿ ಕೌನ್ಸಿಲ್ ಸಭೆಯ ಗಮನಕ್ಕೆ ತರದೆ ವರ್ಕ್ ಆರ್ಡರ್ ಕೊಟ್ಟಿದ್ದಾರೆ. ಅಲ್ಲದೆ ವರ್ಕ್ ಆರ್ಡರ್ ಕೊಟ್ಟಿರುವ ಬಗ್ಗೆ ಕೌನ್ಸಿಲ್ ಸಮಿತಿಗೆ ದಾಖಲಾತಿ ಕೊಟ್ಟಿದ್ದಾರೆ. ಆದ್ರೆ ಆ ದಾಖಲೆಗಳು ಬಿಬಿಎಂಪಿ ನಿಯಮಗಳ ಪ್ರಕಾರ ಕಾನೂನು ಬದ್ಧವಾಗಿ, ಕ್ರಮಬದ್ಧವಾಗಿ ಇಲ್ಲ ಎಂದರು.

ಕೌನ್ಸಿಲ್ ಅಜೆಂಡಾ ಪ್ರಕಾರ ಯಾರಿಗೂ ಮಾಹಿತಿ ನೀಡಿಲ್ಲ. ಅವರ ಇಚ್ಛೆಯಂತೆ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಬಿಬಿಎಂಪಿ ಆಯುಕ್ತರ ಈ ನಿರ್ಧಾರದಲ್ಲಿ ಭ್ರಷ್ಟಾಚರಾದ ವಾಸನೆ ಇದೆ. ಇನ್ನು ಹದಿನೈದು ದಿನದಲ್ಲಿ ಮೇಯರ್ ಅಧಿಕಾರಾವಧಿ ಮುಗಿಯಲಿದ್ದು, ಅಧಿಕಾರ ಕಳೆದುಕೊಳ್ಳುವ ಮುಂಚೆ ಮೇಯರ್ ಮತ್ತು ಅವರ ತಂಡ ಅಕ್ರಮವಾಗಿ ಟೆಂಡರ್ ಕೊಟ್ಟು ಅಕ್ರಮದಲ್ಲಿ ಮುಳುಗಿದ್ದಾರೆ‌ ಎಂದು ರಮೇಶ್ ನೇರ ಆರೋಪ ಮಾಡಿದ್ದಾರೆ.

ಅಲ್ಲದೆ ಈ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದು, ಈ ವಿಷಯದ ಬಗ್ಗೆ ಅವರು ಕೂಡ ಗಂಭೀರವಾಗಿದ್ದು, ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ರಮೇಶ್ ಹೇಳಿದ್ದಾರೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಹಾಗೂ ಸಾಗಾಣಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಎಂಪಿಯ 198 ವಾರ್ಡ್​ಗಳ ಕಸ ವಿಲೇವಾರಿ ಟೆಂಡರ್ ಕಡತಗಳನ್ನು ಪರಿಶೀಲಿಸದೆ, ನ್ಯಾಯಯುತವಾಗಿ ಟೆಂಡರ್ ನೀಡಲ್ಲ ಎಂದು ಆರೋಪಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್

ಕಳೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಟೆಂಡರ್ ಪ್ರಕ್ರಿಯೆ ಮೌಲ್ಯಮಾಪನ ಮಾಡ ಕೈ ಬಿಡಲಾಗಿತ್ತು. ಆದ್ರೆ ಬಿಬಿಎಂಪಿಗೆ ಹೊಸದಾಗಿ ಬಂದಿರುವ ಆಯುಕ್ತರು, ಕೈ ಬಿಟ್ಟಿರುವ ಪ್ರಕ್ರಿಯೆಯನ್ನು ಬಿಬಿಎಂಪಿ ಕೌನ್ಸಿಲ್ ಸಭೆಯ ಗಮನಕ್ಕೆ ತರದೆ ವರ್ಕ್ ಆರ್ಡರ್ ಕೊಟ್ಟಿದ್ದಾರೆ. ಅಲ್ಲದೆ ವರ್ಕ್ ಆರ್ಡರ್ ಕೊಟ್ಟಿರುವ ಬಗ್ಗೆ ಕೌನ್ಸಿಲ್ ಸಮಿತಿಗೆ ದಾಖಲಾತಿ ಕೊಟ್ಟಿದ್ದಾರೆ. ಆದ್ರೆ ಆ ದಾಖಲೆಗಳು ಬಿಬಿಎಂಪಿ ನಿಯಮಗಳ ಪ್ರಕಾರ ಕಾನೂನು ಬದ್ಧವಾಗಿ, ಕ್ರಮಬದ್ಧವಾಗಿ ಇಲ್ಲ ಎಂದರು.

ಕೌನ್ಸಿಲ್ ಅಜೆಂಡಾ ಪ್ರಕಾರ ಯಾರಿಗೂ ಮಾಹಿತಿ ನೀಡಿಲ್ಲ. ಅವರ ಇಚ್ಛೆಯಂತೆ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಬಿಬಿಎಂಪಿ ಆಯುಕ್ತರ ಈ ನಿರ್ಧಾರದಲ್ಲಿ ಭ್ರಷ್ಟಾಚರಾದ ವಾಸನೆ ಇದೆ. ಇನ್ನು ಹದಿನೈದು ದಿನದಲ್ಲಿ ಮೇಯರ್ ಅಧಿಕಾರಾವಧಿ ಮುಗಿಯಲಿದ್ದು, ಅಧಿಕಾರ ಕಳೆದುಕೊಳ್ಳುವ ಮುಂಚೆ ಮೇಯರ್ ಮತ್ತು ಅವರ ತಂಡ ಅಕ್ರಮವಾಗಿ ಟೆಂಡರ್ ಕೊಟ್ಟು ಅಕ್ರಮದಲ್ಲಿ ಮುಳುಗಿದ್ದಾರೆ‌ ಎಂದು ರಮೇಶ್ ನೇರ ಆರೋಪ ಮಾಡಿದ್ದಾರೆ.

ಅಲ್ಲದೆ ಈ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದು, ಈ ವಿಷಯದ ಬಗ್ಗೆ ಅವರು ಕೂಡ ಗಂಭೀರವಾಗಿದ್ದು, ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ರಮೇಶ್ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.