ETV Bharat / state

ಕೊರೊನಾ ಸಂಕಷ್ಟದ ವೇಳೆ ಖಾಸಗಿ ಆಸ್ಪತ್ರೆಗಳ ವರ್ತನೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆಕ್ರೋಶ!

author img

By

Published : Jul 9, 2020, 6:50 PM IST

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ನಡವಳಿಕೆ, ಹಣ ವಸೂಲಿ, ಸರ್ಕಾರದ ಜೊತೆ ಕೈ ಜೋಡಿಸದಿರುವುದು ಹಾಗೂ ಒಪ್ಪಂದದಂತೆ ನಡೆದುಕೊಳ್ಳದಿರುವುದಕ್ಕೆ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Meeting
Meeting

ಬೆಂಗಳೂರು: ಕೊರೊನಾ ಸಂಕಷ್ಟದ ಈ ವೇಳೆಯಲ್ಲಿ ಮಾನವೀಯತೆ ಮರೆತು ಹಣ ವಸೂಲಿ ದಂಧೆ ಮಾಡಿಕೊಂಡಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹಲವು ಸಚಿವರು ಒತ್ತಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ನಡವಳಿಕೆ, ಹಣ ವಸೂಲಿ, ಸರ್ಕಾರದ ಜೊತೆ ಕೈ ಜೋಡಿಸದಿರುವುದು ಹಾಗೂ ಒಪ್ಪಂದದಂತೆ ನಡೆದುಕೊಳ್ಳದಿರುವುದಕ್ಕೆ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸರ್ಕಾರದ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಖಾಸಗಿ ಆಸ್ಪತ್ರೆಗಳು ಬೆಡ್​​ಗಳನ್ನು ನೀಡಲೇಬೇಕು. ಯಾವ ಆಸ್ಪತ್ರೆಗಳು ಬೆಡ್ ನೀಡಲು ಹಿಂದೇಟು ಹಾಕುತ್ತವೆಯೋ ಅಂತಹ ಆಸ್ಪತ್ರೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಸರ್ಕಾರವೇ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂಬ ಅಭಿಪ್ರಾಯವು ಸಹ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕೊರೊನಾ ನಮ್ಮ ನಿರೀಕ್ಷೆ ಮೀರಿ ಹಬ್ಬುತ್ತಿದ್ದು, ಕಳೆದ ಎರಡು ವಾರಗಳಿಂದ ಪ್ರತಿದಿನ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಮಾನವೀಯತೆ ತೋರಬೇಕಿತ್ತು. ಆದರೆ ಕೋವಿಡ್ ನೆಪದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ದುಪ್ಪಟ್ಟು ದರದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಹಾಗಾಗಿ ನಾವು ಆಸ್ಪತ್ರೆಗಳ ಮೇಲೆ ಏಕೆ ಕ್ರಮ ಕೈಗೊಳ್ಳಬಾರದೆಂದು ಸಚಿವರು ಸಭೆಯಲ್ಲಿ ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ವಿಪ್ಪತ್ತು ನಿರ್ವಹಣಾ ಕಾಯ್ದೆಯಡಿ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ. ಹಾಗಾಗಿ ಅಂತಹ ಆಸ್ಪತ್ರೆಗಳನ್ನು ಕಪ್ಪು ಪಟ್ಟಿಗೆ ಇಲ್ಲವೇ ಪರಾವನಗಿ ರದ್ದು ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಚಿವರ ಮಾತುಗಳನ್ನು ಆಲಿಸಿದ ಸಿಎಂ, ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ನಿನ್ನೆ ಖಾಸಗಿ ಆಸ್ಪತ್ರೆಗಳ ಮಾಲೀಕರ ಜೊತೆ ಸಭೆ ನಡೆಸಿದ್ದಾರೆ. 3000 ಹಾಸಿಗೆಗಳನ್ನು ಕೊಡಲು ಒಪ್ಪಿಕೊಂಡಿದ್ದಾರೆ. ಒಂದೆರಡು ದಿನ ಕಾದು ನೋಡೋಣ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸುವುದು ನಮಗೂ ಗೊತ್ತು ಎಂದು ಸಚಿವರ ಆಕ್ರೋಶವನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಸದ್ಯದ ಸ್ಥಿತಿಯಲ್ಲಿ ಲಾಕ್​​ಡೌನ್ ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವರಿಗೆ ಸಿಎಂ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್​​ಡೌನ್ ಮಾಡಲಾಗಿದೆ. ಸಾಧ್ಯವಾದರೆ ಶನಿವಾರವೂ ಲಾಕ್​ಡೌನ್ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸೋಣ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​​ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು: ಕೊರೊನಾ ಸಂಕಷ್ಟದ ಈ ವೇಳೆಯಲ್ಲಿ ಮಾನವೀಯತೆ ಮರೆತು ಹಣ ವಸೂಲಿ ದಂಧೆ ಮಾಡಿಕೊಂಡಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹಲವು ಸಚಿವರು ಒತ್ತಡ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರ ನಡವಳಿಕೆ, ಹಣ ವಸೂಲಿ, ಸರ್ಕಾರದ ಜೊತೆ ಕೈ ಜೋಡಿಸದಿರುವುದು ಹಾಗೂ ಒಪ್ಪಂದದಂತೆ ನಡೆದುಕೊಳ್ಳದಿರುವುದಕ್ಕೆ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸರ್ಕಾರದ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಖಾಸಗಿ ಆಸ್ಪತ್ರೆಗಳು ಬೆಡ್​​ಗಳನ್ನು ನೀಡಲೇಬೇಕು. ಯಾವ ಆಸ್ಪತ್ರೆಗಳು ಬೆಡ್ ನೀಡಲು ಹಿಂದೇಟು ಹಾಕುತ್ತವೆಯೋ ಅಂತಹ ಆಸ್ಪತ್ರೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಸರ್ಕಾರವೇ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂಬ ಅಭಿಪ್ರಾಯವು ಸಹ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕೊರೊನಾ ನಮ್ಮ ನಿರೀಕ್ಷೆ ಮೀರಿ ಹಬ್ಬುತ್ತಿದ್ದು, ಕಳೆದ ಎರಡು ವಾರಗಳಿಂದ ಪ್ರತಿದಿನ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಮಾನವೀಯತೆ ತೋರಬೇಕಿತ್ತು. ಆದರೆ ಕೋವಿಡ್ ನೆಪದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ದುಪ್ಪಟ್ಟು ದರದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಹಾಗಾಗಿ ನಾವು ಆಸ್ಪತ್ರೆಗಳ ಮೇಲೆ ಏಕೆ ಕ್ರಮ ಕೈಗೊಳ್ಳಬಾರದೆಂದು ಸಚಿವರು ಸಭೆಯಲ್ಲಿ ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ವಿಪ್ಪತ್ತು ನಿರ್ವಹಣಾ ಕಾಯ್ದೆಯಡಿ ಆಸ್ಪತ್ರೆಗಳ ಮೇಲೆ ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ. ಹಾಗಾಗಿ ಅಂತಹ ಆಸ್ಪತ್ರೆಗಳನ್ನು ಕಪ್ಪು ಪಟ್ಟಿಗೆ ಇಲ್ಲವೇ ಪರಾವನಗಿ ರದ್ದು ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸಚಿವರ ಮಾತುಗಳನ್ನು ಆಲಿಸಿದ ಸಿಎಂ, ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ನಿನ್ನೆ ಖಾಸಗಿ ಆಸ್ಪತ್ರೆಗಳ ಮಾಲೀಕರ ಜೊತೆ ಸಭೆ ನಡೆಸಿದ್ದಾರೆ. 3000 ಹಾಸಿಗೆಗಳನ್ನು ಕೊಡಲು ಒಪ್ಪಿಕೊಂಡಿದ್ದಾರೆ. ಒಂದೆರಡು ದಿನ ಕಾದು ನೋಡೋಣ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸುವುದು ನಮಗೂ ಗೊತ್ತು ಎಂದು ಸಚಿವರ ಆಕ್ರೋಶವನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಸದ್ಯದ ಸ್ಥಿತಿಯಲ್ಲಿ ಲಾಕ್​​ಡೌನ್ ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವರಿಗೆ ಸಿಎಂ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್​​ಡೌನ್ ಮಾಡಲಾಗಿದೆ. ಸಾಧ್ಯವಾದರೆ ಶನಿವಾರವೂ ಲಾಕ್​ಡೌನ್ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸೋಣ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​​ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.