ETV Bharat / state

ಹೆಚ್​ಡಿ ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಸ್ಪಟಿಕಪುರಿ, ಸಿರಿಗೆರೆಯ ಶ್ರೀಗಳು

author img

By

Published : Oct 6, 2022, 6:01 PM IST

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ಸ್ಪಟಿಕಪುರಿ, ಸಿರಿಗೆರೆಯ ಶ್ರೀಗಳು ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದರು.

spatikapuri-and-sirigere-shrees-meet-hd-deve-gowda
ಹೆಚ್​ಡಿ ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಸ್ಪಟಿಕಪುರಿ, ಸಿರಿಗೆರೆಯ ಶ್ರೀಗಳು

ಬೆಂಗಳೂರು: ಮಂಡಿ ನೋವಿನಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್​​ಡಿ ದೇವೇಗೌಡರನ್ನು ಇಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಮಹಾ ಸ್ವಾಮೀಜಿಗಳು ಹಾಗೂ ಸಿರಿಗೆರೆಯ ಜಗದ್ಗುರು ಬೃಹನ್ಮಠದ ಪೀಠಾಧಿಕಾರಿಗಳಾದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಇಬ್ಬರು ಶ್ರೀಗಳು, ಸ್ವಲ್ಪ ಹೊತ್ತು ಮಾತನಾಡಿ ಆರೋಗ್ಯದ ಬಗ್ಗೆ ಚರ್ಚೆ ನಡೆಸಿದರು. ಕಳೆದ ಹಲವು ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿರುವ ದೇವೇಗೌಡರನ್ನು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದರು.

ಬೆಂಗಳೂರು: ಮಂಡಿ ನೋವಿನಿಂದಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್​​ಡಿ ದೇವೇಗೌಡರನ್ನು ಇಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಮಹಾ ಸ್ವಾಮೀಜಿಗಳು ಹಾಗೂ ಸಿರಿಗೆರೆಯ ಜಗದ್ಗುರು ಬೃಹನ್ಮಠದ ಪೀಠಾಧಿಕಾರಿಗಳಾದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಇಬ್ಬರು ಶ್ರೀಗಳು, ಸ್ವಲ್ಪ ಹೊತ್ತು ಮಾತನಾಡಿ ಆರೋಗ್ಯದ ಬಗ್ಗೆ ಚರ್ಚೆ ನಡೆಸಿದರು. ಕಳೆದ ಹಲವು ದಿನಗಳಿಂದ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿರುವ ದೇವೇಗೌಡರನ್ನು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತಿತರರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದರು.

ಇದನ್ನೂ ಓದಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪ್​ಸೆಟ್​ಗಳಿಗೆ 24/7 ಉಚಿತ ವಿದ್ಯುತ್ : ಹೆಚ್ ಡಿ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.