ETV Bharat / state

ನ.26ರನ್ನು 'ಸಂವಿಧಾನ ದಿನ'ವಾಗಿ ಆಚರಿಸಲು ಸಿಎಂಗೆ ಸ್ಪೀಕರ್ ಕಾಗೇರಿ ಮನವಿ - ಸಿಎಂಗೆ ಮನವಿ ಮಾಡಿದ ವಿಧಾನಸಭಾಧ್ಯಕ್ಷರು

ಸಂವಿಧಾನ ದಿನವನ್ನು ಸ್ಪೀಕರ್, ಸಿಎಂ ಕಚೇರಿ ಅಥವಾ ಪ್ರತಿಪಕ್ಷದ ನಾಯಕರ ಕಚೇರಿಗೆ ಸೀಮಿತಗೊಳಿಸಬಾರದು. ಸಾರ್ವಜನಿಕರಲ್ಲೂ ಈ ಕುರಿತು ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ನ.26 ರನ್ನು ‘ಸಂವಿಧಾನ ದಿನ ’ವನ್ನಾಗಿ ಆಚರಿಸಬೇಕೆಂದು ಸಿಎಂಗೆ ಮನವಿ ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ವಿಶ್ವೇಶ್ವರ ಹೆಗಡೆ ಕಾಗೇರಿ,vishweshwar hegde kageri
author img

By

Published : Nov 7, 2019, 6:48 PM IST

ಬೆಂಗಳೂರು: ರಾಜ್ಯಾದ್ಯಂತ ಸಂವಿಧಾನದ ಧ್ಯೇಯೋದ್ದೇಶಗಳ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನ.26 ರಂದು ‘ಸಂವಿಧಾನ ದಿನ’ವನ್ನಾಗಿ ಆಚರಿಸಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನ ಶ್ರೇಷ್ಠವಾದದ್ದು, ಸಂವಿಧಾನದ ವಿಚಾರಗಳು ನಮಗೆ ಈಗಲೂ ಪ್ರೇರಣೆಯಾಗಿವೆ. 1949 ರ ನ. 26 ರಂದು ಸಂವಿಧಾನವನ್ನು ಸ್ವೀಕರಿಸಿದ ದಿನ. 2015 ರಿಂದ ಈ ದಿನವನ್ನು ಸಂವಿಧಾನದ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಈ ದಿನವನ್ನು ಕೇವಲ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾನಿಲಯಗಳು, ಶಾಲಾ-ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಮಾತ್ರ ಆಚರಣೆ ಮಾಡದೆ ರಾಜ್ಯಾದ್ಯಂತ ಆಚರಿಸುವಂತಾಗಬೇಕು. ಯುವ ಪೀಳಿಗೆಗೆ ಸಂವಿಧಾನದ ಬಗ್ಗೆ ಬದ್ಧತೆ ಹೆಚ್ಚಿಸುವ ಸಲುವಾಗಿ ಪರಿಣಾಮಕಾರಿಯಾಗಿ ಅರಿವು ಮೂಡಿಸಲು 'ಸಂವಿಧಾನ ದಿನ' ಆಚರಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವುದಾಗಿ ಸ್ಪೀಕರ್​ ಮಾಹಿತಿ ನೀಡಿದರು.

ಸಂವಿಧಾನ ದಿನಾಚರಣೆ ಕೇವಲ ಸ್ಪೀಕರ್, ಸಿಎಂ ಕಚೇರಿ ಅಥವಾ ಪ್ರತಿಪಕ್ಷದ ನಾಯಕರ ಕಚೇರಿಗೆ ಸೀಮಿತಗೊಳ್ಳಬಾರದು. ಸಾರ್ವಜನಿಕರು ಇದರಲ್ಲಿ ಭಾಗವಹಿಸಿ ಆಚರಿಸುವಂತಾಗಬೇಕು. ಇಂದು ವಿಧಾನಸೌಧದ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ಸಂವಿಧಾನ ದಿನಾಚರಣೆಯ ಕಾರ್ಯಕ್ರಮದ ಸ್ವರೂಪ ಹೇಗಿರಬೇಕೆಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು. ಸಂವಿಧಾನ ಪ್ರತಿ ಕಡಿಮೆ ದರದಲ್ಲಿ ಜನರಿಗೆ ವಿತರಿಸುವ ಬಗ್ಗೆ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಬೆಂಗಳೂರು: ರಾಜ್ಯಾದ್ಯಂತ ಸಂವಿಧಾನದ ಧ್ಯೇಯೋದ್ದೇಶಗಳ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನ.26 ರಂದು ‘ಸಂವಿಧಾನ ದಿನ’ವನ್ನಾಗಿ ಆಚರಿಸಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನ ಶ್ರೇಷ್ಠವಾದದ್ದು, ಸಂವಿಧಾನದ ವಿಚಾರಗಳು ನಮಗೆ ಈಗಲೂ ಪ್ರೇರಣೆಯಾಗಿವೆ. 1949 ರ ನ. 26 ರಂದು ಸಂವಿಧಾನವನ್ನು ಸ್ವೀಕರಿಸಿದ ದಿನ. 2015 ರಿಂದ ಈ ದಿನವನ್ನು ಸಂವಿಧಾನದ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಈ ದಿನವನ್ನು ಕೇವಲ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾನಿಲಯಗಳು, ಶಾಲಾ-ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಮಾತ್ರ ಆಚರಣೆ ಮಾಡದೆ ರಾಜ್ಯಾದ್ಯಂತ ಆಚರಿಸುವಂತಾಗಬೇಕು. ಯುವ ಪೀಳಿಗೆಗೆ ಸಂವಿಧಾನದ ಬಗ್ಗೆ ಬದ್ಧತೆ ಹೆಚ್ಚಿಸುವ ಸಲುವಾಗಿ ಪರಿಣಾಮಕಾರಿಯಾಗಿ ಅರಿವು ಮೂಡಿಸಲು 'ಸಂವಿಧಾನ ದಿನ' ಆಚರಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವುದಾಗಿ ಸ್ಪೀಕರ್​ ಮಾಹಿತಿ ನೀಡಿದರು.

ಸಂವಿಧಾನ ದಿನಾಚರಣೆ ಕೇವಲ ಸ್ಪೀಕರ್, ಸಿಎಂ ಕಚೇರಿ ಅಥವಾ ಪ್ರತಿಪಕ್ಷದ ನಾಯಕರ ಕಚೇರಿಗೆ ಸೀಮಿತಗೊಳ್ಳಬಾರದು. ಸಾರ್ವಜನಿಕರು ಇದರಲ್ಲಿ ಭಾಗವಹಿಸಿ ಆಚರಿಸುವಂತಾಗಬೇಕು. ಇಂದು ವಿಧಾನಸೌಧದ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ಸಂವಿಧಾನ ದಿನಾಚರಣೆಯ ಕಾರ್ಯಕ್ರಮದ ಸ್ವರೂಪ ಹೇಗಿರಬೇಕೆಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು. ಸಂವಿಧಾನ ಪ್ರತಿ ಕಡಿಮೆ ದರದಲ್ಲಿ ಜನರಿಗೆ ವಿತರಿಸುವ ಬಗ್ಗೆ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.

Intro:ಬೆಂಗಳೂರು : ಸರ್ಕಾರಿ ಕಚೇರಿಗಳೂ, ವಿಶ್ವವಿದ್ಯಾನಿಲಯಗಳು, ಶಾಲಾ-ಕಾಲೇಜು ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ರಾಜ್ಯಾದ್ಯಂತ ಸಂವಿಧಾನದ ದ್ಯೇಯೋದ್ದೇಶಗಳ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನವೆಂಬರ್ 26 ರಂದು ‘ಸಂವಿಧಾನ ದಿನ ’ವನ್ನಾಗಿ ಆಚರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.Body:ವಿಧಾನಸೌಧದಲ್ಲಿ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ. ಸಂವಿಧಾನದ ವಿಚಾರಗಳು ನಮಗೆ ಈಗಲೂ ಪ್ರೇರಣೆದಾಯಕ. 1949 ರ ನವೆಂಬರ್ 26 ರಂದು ಸಂವಿಧಾನವನ್ನು ಸ್ವೀಕರಿಸಿದ ದಿನ. ಸಂವಿಧಾನದ ದಿನವನ್ನಾಗಿ 2015 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಯುವ ಪೀಳಿಗೆಗೆ ವಿದ್ಯಾರ್ಥಿಗಳಿಗೆ, ಸಂಘ-ಸಂಸ್ಥೆಗಳಿಗೆ ಸಂವಿಧಾನದ ಬದ್ಧತೆ ಹೆಚ್ಚಿಸುವ ಸಲುವಾಗಿ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಸಂವಿಧಾನ ದಿನ ಆಚರಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ಸಂವಿಧಾನ ದಿನವನ್ನು ಸ್ಪೀಕರ್, ಸಿಎಂ ಕಚೇರಿ ಅಥವಾ ವಿರೋಧ ಪಕ್ಷದ ನಾಯಕರ ಕಚೇರಿಗೆ ಸೀಮಿತಗೊಳ್ಳಬಾರದು. ಸಾರ್ವಜನಿಕರು ಇದರಲ್ಲಿ ಭಾಗವಹಿಸಿ ಆಚರಿಸುವಂತಾಗಬೇಕು. ಇಂದು ವಿಧಾನಸೌಧದ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ಸಂವಿಧಾನ ದಿನಾಚರಣೆಯ ಕಾರ್ಯಕ್ರಮದ ಸ್ವರೂಪ ಹೇಗಿರಬೇಕೆಂದು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಸಂವಿಧಾನ ಪ್ರತಿ ಕಡಿಮೆ ದರದಲ್ಲಿ ಜನರಿಗೆ ವಿತರಿಸುವ ಬಗ್ಗೆ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.
ಸಂವಿಧಾನ ಬದಲಾವಣೆ ಬಗ್ಗೆ ಬಿಜೆಪಿ ನಾಯಕರು ಮಾತನಾಡಿರುವ ಕುರಿತು ಪ್ರಶ್ನಿಸಿದಾಗ, ಈ ಬಗ್ಗೆ ಪ್ರತಿಕ್ರಿಯೆ ನೀಡದ ಸ್ಪೀಕರ್, ಸಂವಿಧಾನ ಉಳಿಸೋಣ, ಸಂವಿಧಾನಕ್ಕೆ ಗೌರವಿಸೋಣ ಎಲ್ಲರೂ ಸೇರಿ ಸಂವಿಧಾನ ದಿನಾಚರಣೆ ಯಶಸ್ವಿಗೊಳಿಸೋಣ ಎಂದಷ್ಟೇ ಉತ್ತರಿಸಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.