ETV Bharat / state

ಸದನದಲ್ಲಿ ಸದ್ದು ಮಾಡಿದ ಟಿಪ್ಪು ಜಯಂತಿ ರದ್ದು... ಸರ್ಕಾರದ ನಿರ್ಧಾರಕ್ಕೆ ಸಿದ್ದು ಆಕ್ರೋಶ!

author img

By

Published : Jul 31, 2019, 4:59 PM IST

ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಸ್ಪೀಕರ್​ ಮುಂದೂಡಿದ್ದಾರೆ..

ಸದನದ ಕೊನೆ ಹಂತದಲ್ಲಿ ಸದ್ದು ಮಾಡಿದ ಟಿಪ್ಪು ಜಯಂತಿ ರದ್ದು!

ಬೆಂಗಳೂರು: ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಸ್ಪೀಕರ್​ ಮುಂದೂಡಿದ್ದಾರೆ.

ಸದನದ ಕೊನೆ ಹಂತದಲ್ಲಿ ಸದ್ದು ಮಾಡಿದ ಟಿಪ್ಪು ಜಯಂತಿ ರದ್ದು ವಿಷಯ!

ಸದನದಲ್ಲಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ನೂತನ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದನದಿಂದ ಹೊರ ನಡೆದರು. ಸಿದ್ಧರಾಮಯ್ಯ ಜೊತೆ ಕಾಂಗ್ರೆಸ್​ ಸದಸ್ಯರೆಲ್ಲರೂ ಎದ್ದು ನಿಂತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ನಡೆಸಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ನೂತನ ಸರ್ಕಾರದ ಕ್ರಮವನ್ನು ಖಂಡಿಸಿದ್ರು.

ಈ ಬಗ್ಗೆ ಮಧ್ಯಪ್ರವೇಶಿಸಿ ಮಾತಾನಾಡಿದ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ವಿಷಯ ಪ್ರಸ್ತಾಪವಾಗುತ್ತಿದೆ ಎಂದು ಯಾರಿಗೂ ಗೊತ್ತಿರಲಿಲ್ಲ. ಹಾಗೆಯೇ ಇದನ್ನು ಪ್ರಸ್ತಾಪ ಮಾಡುವ ಕುರಿತು ನನ್ನ ಗಮನಕ್ಕೂ ನೀವು ತಂದಿಲ್ಲ. ಸಭೆಯ ನಿಯಮಾವಳಿಗಳ ಪ್ರಕಾರ ನೀವು ಈ ವಿಷಯದ ಕುರಿತು ಮಾತನಾಡುವುದಿದ್ದರೆ ನನ್ನ ಗಮನಕ್ಕೆ ತರಬೇಕಿತ್ತು. ಆದರೆ ನೀವು ತಂದಿಲ್ಲ. ಅದೇ ರೀತಿ ವಿಷಯ ಗೊತ್ತಿಲ್ಲದೆ ಇರುವುದರಿಂದ ಸರ್ಕಾರದ ಪರಿವಾಗಿಯೂ ಯಾರು ಉತ್ತರಿಸಲು ಸಾಧ್ಯವಿಲ್ಲ ಎಂದರು.

ಆದರೆ ಸ್ಪೀಕರ್​ ಹೇಳಿಕೆಯನ್ನ ಒಪ್ಪದ ಸಿದ್ಧರಾಮಯ್ಯ, ಈ ಸದನದಲ್ಲಿ ನಾನು 1983ರಿಂದ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಪ್ರಸ್ತಾಪವಾಗುವ ಪ್ರತಿಯೊಂದು ವಿಷಯವನ್ನು ಸ್ಪೀಕರ್ ಗಮನಕ್ಕೆ ತಂದೇ ಪ್ರಸ್ತಾಪ ಮಾಡಬೇಕು ಎಂದೇನಿಲ್ಲ. ವಿಷಯ ಗಂಭೀರವಾದುದು. ಹೀಗಾಗಿ ಇಂದೇ ಈ ವಿಷಯವನ್ನು ಪ್ರಸ್ತಾಪ ಮಾಡಬೇಕಿದೆ. ಇದನ್ನು ಪ್ರಸ್ತಾಪ ಮಾಡುವಾಗ ಮುಖ್ಯಮಂತ್ರಿಗಳು ಕಡ್ಡಾಯವಾಗಿ ಇರಬೇಕು ಎಂದು ನೀವು ಹೇಳಬೇಕು.

ಆದರೆ, ಈ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದನ್ನು ಬಿಟ್ಟರೆ ಒಬ್ಬ ಸಚಿವರೂ ಇಲ್ಲ. ಹೀಗಾಗಿ ಈ ವಿಷಯವನ್ನು ನಾವು ಯಾರ ಬಳಿ ಹೇಳಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸ್ಪೀಕರ್, ಯಡಿಯೂರಪ್ಪ ಅವರು ಎಲ್ಲಿಗೆ ಹೋಗುತ್ತಾರೆ ಎಂಬುದು ನಿಮಗೆ ತಿಳಿದಿದೆ. ಅಂತ್ಯ ಸಂಸ್ಕಾರವೊಂದರಲ್ಲಿ ಭಾಗವಹಿಸಲು ಅವರು ಚಿಕ್ಕಮಗಳೂರಿಗೆ ತೆರಳಬೇಕಿದೆ ಎಂದರು.

ಆದರೆ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನಾವು ಕೂಡಾ ಅಲ್ಲಿಗೆ ತೆರಳಬೇಕಿದೆ. ಹೀಗಾಗಿ ಇಲ್ಲೇ ಕುಳಿತು ಪ್ರತಿಪಕ್ಷಗಳ ಪ್ರಸ್ತಾಪವನ್ನು ಕೇಳಿ ಎಂದು ನೀವು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೇಳಬೇಕಿತ್ತು ಎಂದು ಒತ್ತಾಯಿಸಿದರು. ಆದರೆ ಸಿದ್ಧರಾಮಯ್ಯ ಅವರ ಮಾತನ್ನು ಒಪ್ಪದ ಸ್ಪೀಕರ್, ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿ ಹೊರನಡೆದರು.

ಬೆಂಗಳೂರು: ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಸ್ಪೀಕರ್​ ಮುಂದೂಡಿದ್ದಾರೆ.

ಸದನದ ಕೊನೆ ಹಂತದಲ್ಲಿ ಸದ್ದು ಮಾಡಿದ ಟಿಪ್ಪು ಜಯಂತಿ ರದ್ದು ವಿಷಯ!

ಸದನದಲ್ಲಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ನೂತನ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸದನದಿಂದ ಹೊರ ನಡೆದರು. ಸಿದ್ಧರಾಮಯ್ಯ ಜೊತೆ ಕಾಂಗ್ರೆಸ್​ ಸದಸ್ಯರೆಲ್ಲರೂ ಎದ್ದು ನಿಂತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ನಡೆಸಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ನೂತನ ಸರ್ಕಾರದ ಕ್ರಮವನ್ನು ಖಂಡಿಸಿದ್ರು.

ಈ ಬಗ್ಗೆ ಮಧ್ಯಪ್ರವೇಶಿಸಿ ಮಾತಾನಾಡಿದ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ವಿಷಯ ಪ್ರಸ್ತಾಪವಾಗುತ್ತಿದೆ ಎಂದು ಯಾರಿಗೂ ಗೊತ್ತಿರಲಿಲ್ಲ. ಹಾಗೆಯೇ ಇದನ್ನು ಪ್ರಸ್ತಾಪ ಮಾಡುವ ಕುರಿತು ನನ್ನ ಗಮನಕ್ಕೂ ನೀವು ತಂದಿಲ್ಲ. ಸಭೆಯ ನಿಯಮಾವಳಿಗಳ ಪ್ರಕಾರ ನೀವು ಈ ವಿಷಯದ ಕುರಿತು ಮಾತನಾಡುವುದಿದ್ದರೆ ನನ್ನ ಗಮನಕ್ಕೆ ತರಬೇಕಿತ್ತು. ಆದರೆ ನೀವು ತಂದಿಲ್ಲ. ಅದೇ ರೀತಿ ವಿಷಯ ಗೊತ್ತಿಲ್ಲದೆ ಇರುವುದರಿಂದ ಸರ್ಕಾರದ ಪರಿವಾಗಿಯೂ ಯಾರು ಉತ್ತರಿಸಲು ಸಾಧ್ಯವಿಲ್ಲ ಎಂದರು.

ಆದರೆ ಸ್ಪೀಕರ್​ ಹೇಳಿಕೆಯನ್ನ ಒಪ್ಪದ ಸಿದ್ಧರಾಮಯ್ಯ, ಈ ಸದನದಲ್ಲಿ ನಾನು 1983ರಿಂದ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಪ್ರಸ್ತಾಪವಾಗುವ ಪ್ರತಿಯೊಂದು ವಿಷಯವನ್ನು ಸ್ಪೀಕರ್ ಗಮನಕ್ಕೆ ತಂದೇ ಪ್ರಸ್ತಾಪ ಮಾಡಬೇಕು ಎಂದೇನಿಲ್ಲ. ವಿಷಯ ಗಂಭೀರವಾದುದು. ಹೀಗಾಗಿ ಇಂದೇ ಈ ವಿಷಯವನ್ನು ಪ್ರಸ್ತಾಪ ಮಾಡಬೇಕಿದೆ. ಇದನ್ನು ಪ್ರಸ್ತಾಪ ಮಾಡುವಾಗ ಮುಖ್ಯಮಂತ್ರಿಗಳು ಕಡ್ಡಾಯವಾಗಿ ಇರಬೇಕು ಎಂದು ನೀವು ಹೇಳಬೇಕು.

ಆದರೆ, ಈ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದನ್ನು ಬಿಟ್ಟರೆ ಒಬ್ಬ ಸಚಿವರೂ ಇಲ್ಲ. ಹೀಗಾಗಿ ಈ ವಿಷಯವನ್ನು ನಾವು ಯಾರ ಬಳಿ ಹೇಳಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸ್ಪೀಕರ್, ಯಡಿಯೂರಪ್ಪ ಅವರು ಎಲ್ಲಿಗೆ ಹೋಗುತ್ತಾರೆ ಎಂಬುದು ನಿಮಗೆ ತಿಳಿದಿದೆ. ಅಂತ್ಯ ಸಂಸ್ಕಾರವೊಂದರಲ್ಲಿ ಭಾಗವಹಿಸಲು ಅವರು ಚಿಕ್ಕಮಗಳೂರಿಗೆ ತೆರಳಬೇಕಿದೆ ಎಂದರು.

ಆದರೆ ಇದಕ್ಕೂ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನಾವು ಕೂಡಾ ಅಲ್ಲಿಗೆ ತೆರಳಬೇಕಿದೆ. ಹೀಗಾಗಿ ಇಲ್ಲೇ ಕುಳಿತು ಪ್ರತಿಪಕ್ಷಗಳ ಪ್ರಸ್ತಾಪವನ್ನು ಕೇಳಿ ಎಂದು ನೀವು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೇಳಬೇಕಿತ್ತು ಎಂದು ಒತ್ತಾಯಿಸಿದರು. ಆದರೆ ಸಿದ್ಧರಾಮಯ್ಯ ಅವರ ಮಾತನ್ನು ಒಪ್ಪದ ಸ್ಪೀಕರ್, ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿ ಹೊರನಡೆದರು.

Intro:ಬೆಂಗಳೂರು : ಅಧಿಕಾರಕ್ಕೆ ಬಂದ ಕೂಡಲೇ ಟಿಪ್ಪು ಜಯಂತಿಯನ್ನು ರದ್ದುಪಡಿಸಿದ ಸರ್ಕಾರದ ನಿರ್ಧಾರದ ವಿರುದ್ದ ವಿಧಾನಸಭೆಯಲ್ಲಿ ಇಂದು ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ.Body:ಇಂದು ಬೆಳಗ್ಗೆ ಸದನ ಸೇರುತ್ತಿದ್ದಂತೆಯೇ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ವಿಧಾನ ಪೂರ್ಣಗೊಂಡಿತಲ್ಲದೆ ಬಿಜೆಪಿಯ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಪೀಕರ್ ಸ್ಥಾನದಲ್ಲಿ ಪ್ರತಿಷ್ಠಾಪಿತರಾದರು.
ತದ ನಂತರ ಮುಖ್ಯಮಂತ್ರಿಗಳು, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿದಂತೆ ಸದನದ ಹಲವರು ನೂತನ ಸ್ಪೀಕರ್‍ಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ನಂತರ ವಿಶ್ವೇಶ್ವರ ಹೆಗಡೆ ಕಾಗೇರಿಯವರೂ ಮಾತನಾಡಿ ಸದನಕ್ಕೆ ಧನ್ಯವಾದ ಸಲ್ಲಿಸಿದರು.
ಆನಂತರ ಸದನವನ್ನು ಮುಂದೂಡಲು ಅವರು ಸಜ್ಜಾದಾಗ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಎದ್ದು ನಿಂತು, ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದುಪಡಿಸಲು ನೂತನ ಸರ್ಕಾರ ನಿರ್ಧರಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅವರು ಹೀಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನದಿಂದ ಹೊರನಡೆಯುತ್ತಿದ್ದರೆ, ಸಿದ್ಧರಾಮಯ್ಯ ಮಾತ್ರ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಲು ಕೈಗೊಂಡ ತೀರ್ಮಾನ ತಪ್ಪು ಎಂದರು.
ಈ ಹಂತದಲ್ಲಿ ಸದನದಲ್ಲಿದ್ದ ಕಾಂಗ್ರೆಸ್ ಸದಸ್ಯರು ಮೇಲೆದ್ದು ನಿಂತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ನಡೆಸಲಾಗುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಪಡಿಸಿದ ನೂತನ ಸರ್ಕಾರದ ಕ್ರಮವನ್ನು ಖಂಡಿಸಿದರು.
ಮಧ್ಯ ಪ್ರವೇಶಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಈ ವಿಷಯ ಪ್ರಸ್ತಾಪವಾಗುತ್ತಿದೆ ಎಂದು ಯಾರಿಗೂ ಗೊತ್ತಿರಲಿಲ್ಲ. ಹಾಗೆಯೇ ಇದನ್ನು ಪ್ರಸ್ತಾಪ ಮಾಡುವ ಕುರಿತು ನನ್ನ ಗಮನಕ್ಕೂ ನೀವು ತಂದಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಹೇಳಿದರು.
ಸಭೆಯ ನಿಯಮಾವಳಿಗಳ ಪ್ರಕಾರ ನೀವು ಈ ವಿಷಯದ ಕುರಿತು ಮಾತನಾಡುವುದಿದ್ದರೆ ನನ್ನ ಗಮನಕ್ಕೆ ತರಬೇಕಿತ್ತು.ಆದರೆ ತಂದಿಲ್ಲ. ಅದೇ ರೀತಿ ವಿಷಯ ಗೊತ್ತಿಲ್ಲದೆ ಇರುವುದರಿಂದ ಸರ್ಕಾರದ ಪರಿವಾಗಿಯೂ ಯಾರು ಉತ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಆದರೆ ಇದನ್ನು ಒಪ್ಪದ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಈ ಸದನದಲ್ಲಿ ನಾನು 83 ರಿಂದ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಪ್ರಸ್ತಾಪವಾಗುವ ಪ್ರತಿಯೊಂದು ವಿಷಯವನ್ನು ಸ್ಪೀಕರ್ ಗಮನಕ್ಕೆ ತಂದೇ ಪ್ರಸ್ತಾಪ ಮಾಡಬೇಕು ಎಂದೇನಿಲ್ಲ ಅಂತ ಅಭಿಪ್ರಾಯಪಟ್ಟರು.
ವಿಷಯ ಗಂಭೀರವಾದುದು. ಹೀಗಾಗಿ ಇಂದೇ ಈ ವಿಷಯವನ್ನು ಪ್ರಸ್ತಾಪ ಮಾಡಬೇಕಿದೆ. ಇದನ್ನು ಪ್ರಸ್ತಾಪ ಮಾಡುವಾಗ ಮುಖ್ಯಮಂತ್ರಿಗಳು ಕಡ್ಡಾಯವಾಗಿ ಇರಬೇಕು ಎಂದು ನೀವು ಹೇಳಬೇಕು.ಆದರೆ ಈ ಸರ್ಕಾರದಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದನ್ನು ಬಿಟ್ಟರೆ ಒಬ್ಬ ಸಚಿವರೂ ಇಲ್ಲ. ಹೀಗಾಗಿ ಈ ವಿಷಯವನ್ನು ನಾವು ಯಾರ ಬಳಿ ಹೇಳಬೇಕು?ಎಂದವರು ಪ್ರಶ್ನಿಸಿದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಯಡಿಯೂರಪ್ಪ ಅವರು ಎಲ್ಲಿಗೆ ಹೋಗುತ್ತಾರೆ ಎಂಬುದು ನಿಮಗೆ ತಿಳಿದಿದೆ. ಅಂತ್ಯ ಸಂಸ್ಕಾರವೊಂದರಲ್ಲಿ ಭಾಗವಹಿಸಲು ಅವರು ಚಿಕ್ಕಮಗಳೂರು ಜಿಲ್ಲೆಗೆ ತೆರಳಬೇಕಿದೆ ಎಂದು ಹೇಳಿದರು.
ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನಾವು ಕೂಡಾ ತೆರಳಬೇಕಿದೆ. ಹೀಗಾಗಿ ಇಲ್ಲೇ ಕುಳಿತು ಪ್ರತಿಪಕ್ಷಗಳ ಪ್ರಸ್ತಾಪವನ್ನು ಕೇಳಿ ಎಂದು ನೀವು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೇಳಬೇಕಿತ್ತು ಎಂದು ಒತ್ತಾಯಿಸಿದರು.
ಆದರೆ ಸಿದ್ಧರಾಮಯ್ಯ ಅವರ ಮಾತನ್ನು ಒಪ್ಪದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿ ಹೊರನಡೆದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.