ETV Bharat / state

ತೋಟಗಾರಿಕಾ ಬೆಳೆ ಮೌಲ್ಯವರ್ಧನೆ, ರಫ್ತು, ಸಂಸ್ಕರಣೆಗೆ ಒತ್ತು: ವಿಶೇಷ ಅನುದಾನಗಳ ಘೋಷಣೆ

author img

By

Published : Feb 17, 2023, 1:07 PM IST

Updated : Feb 17, 2023, 1:32 PM IST

ಕೃಷಿ ಕ್ಷೇತ್ರಕ್ಕೆ ಬಂಪರ್​ ಅನುದಾನವನ್ನು ನೀಡಿರುವ ಬಸವರಾಜ ಬೊಮ್ಮಾಯಿ ಅವರು ತೋಟಗಾರಿಕಾ ಬೆಳೆಗಳ ಉತ್ತೇಜನಕ್ಕೂ ಬಜೆಟ್​ನಲ್ಲಿ ಪ್ರಾಮುಖ್ಯತೆ ನೀಡಿದ್ದಾರೆ.

Horticulture Department
ತೋಟಗಾರಿಕಾ ಇಲಾಖೆ
ತೋಟಗಾರಿಕಾ ಬಜೆಟ್​ ಮಂಡಿಸುತ್ತಿರುವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಕೊನೆಯ ಬಜೆಟ್​ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್​ನಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸೇರಿಸಿ ಒಟ್ಟು 9,456 ಕೋಟಿ ರೂ ಮೀಸಲಿಟ್ಟಿದ್ದಾರೆ. ಕೊಯ್ಲೋತ್ತರ ತಂತ್ರಜ್ಞಾನಕ್ಕೆ ಒತ್ತುಕೊಟ್ಟು ತೋಟಗಾರಿಕಾ ಬೆಳೆ ಮೌಲ್ಯವರ್ಧನೆ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಮತ್ತು ಸಂಸ್ಕರಣೆಯ ಉತ್ತೇಜನಕ್ಕೆ ರೈತ ಸಂಪದ ಯೋಜನೆ ಅಡಿ ಕೆಫೆಕ್ ಸಂಸ್ಥೆಯ ಮೂಲಕ 100 ಕೋಟಿ ರೂಗಳಲ್ಲಿ ಯೋಜನೆ ರೂಪಿಸಲು ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಜೊತೆಯಾಗಿ ಅನುದಾನ ಘೋಷಣೆ ಮಾಡಿದ್ದರೂ, ತೋಟಗಾರಿಕೆ ಇಲಾಖೆ ಬೆಳೆಗಳ ಉತ್ತೇಜನಕ್ಕೂ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಇದೇ ವರ್ಷ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಎಲ್ಲಾ ಪಕ್ಷಗಳು ಸಿದ್ಧಗೊಳ್ಳುತ್ತಿವೆ. ಅದರಲ್ಲೂ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಮುಂದಿನ ವಿಧಾನಸಭೆಯಲ್ಲೂ ಬಿಜೆಪಿ ಅಧಿಕ ಸ್ಥಾನಗಳನ್ನು ಪಡೆಯಬೇಕು. ಅಧಿಕಾರ ಕೈತಪ್ಪಿ ಹೋಗಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಬಜೆಟ್​ನಲ್ಲಿ ಪ್ರಾಮುಖ್ಯತೆಯನ್ನು ನೀಡುವ ಪ್ರಯತ್ನವನ್ನು ಮಾಡಿದೆ.

ಅಡಿಕೆ ಬೆಳೆಯ ರೋಗ ನಿರ್ವಹಣೆಗಾಗಿ ನೂತನ ತಂತ್ರಜ್ಞಾನ ಅಭಿವೃದ್ಧಿ ಮಾಡಲು 10 ಲಕ್ಷ ಕೋಟಿ ರೂ ಅನುದಾನ ಘೋಷಣೆ ಮಾಡಿದ್ದಾರೆ. ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ ಪ್ರಾರಂಭಿಸಲಾಗುವುದು. ದ್ರಾಕ್ಷಿ ಬೆಳಗಾರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ಮುಖಾಂತರ 100 ಕೋಟಿ ರೂ. ಗಳ ವೆಚ್ಚದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಜೆಟ್​ನಲ್ಲಿ ಸಿಎಂ ಪ್ರಕಟಿಸಿದರು.

ಇವುಗಳ ಜೊತೆಗೆ ರೇಷ್ಮೆ ಬೆಳೆಯನ್ನು ಇನ್ನೂ 10 ಸಾವಿರ ಹೆಕ್ಟೇರ್​ ಪ್ರದೇಶಕ್ಕೆ ವಿಸ್ತರಣೆ ಮಾಡಲು ಕ್ರಮಗಳನ್ನು ತೋಟಗಾರಿಕಾ ಇಲಾಖೆಯಿಂದ ಕೈಗೊಳ್ಳಲಾಗುವುದು. ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆ ಅಡಿ 75 ಕೋಟಿ ರೂಗಳ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. 32 ಸ್ವಯಂ ಚಾಲಿತ ರೈಲಿಂಗ್ ಘಟಕಗಳ ಸ್ಥಾಪನೆಗೆ 10 ಕೋಟಿ ರೂಪಾಯಿ ಹಾಗೂ ಸಾವಿರ ರೇಷ್ಮೆ ಬೆಳೆಗಾರರಿಗೆ ಶ್ರೆಡ್ಡರ್ಸ್​ಗಳನ್ನು ಒದಗಿಸಲು 12 ಕೋಟಿ ರೂಗಳ ನೆರವು ನೀಡಲಾಗುವುದು. ರಾಜ್ಯದ 10 ಪ್ರಮುಖ ರೇಷ್ಮೆ ಬೆಳೆಯುವ ಪ್ರದೇಶಗಳಲ್ಲಿ ಡ್ರೈಯರ್ ಅಳವಡಿಸಲು 5 ಕೋಟಿ ರೂ ಅನುದಾನ ಮೀಸಲಿಡಲಾಗಿದೆ.

ತೋಟಗಾರಿಕೆ ಇಲಾಖೆ ಅಡಿ 12 ತೋಟಗಳಲ್ಲಿ ಒಂದು ತೋಟ ಒಂದು ಬೆಳೆ ಯೋಜನೆ ಅಡಿ ಉತ್ಪಾದಕತೆ ಹೆಚ್ಚಿಸಲು 10 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಘೋಷಣೆಯಾಗಿದೆ. ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಕ್ಕೆ ಹತ್ತು ಕೋಟಿ ರೂ. ನೆರವು ಘೋಷಣೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸಲಾಗುವುದು. ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲು ಎಂಟು ಕೋಟಿ ರೂ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್​ 2023: ಚರ್ಮಗಂಟು ರೋಗ ತಡೆಗಟ್ಟಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ

ತೋಟಗಾರಿಕಾ ಬಜೆಟ್​ ಮಂಡಿಸುತ್ತಿರುವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಕೊನೆಯ ಬಜೆಟ್​ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್​ನಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸೇರಿಸಿ ಒಟ್ಟು 9,456 ಕೋಟಿ ರೂ ಮೀಸಲಿಟ್ಟಿದ್ದಾರೆ. ಕೊಯ್ಲೋತ್ತರ ತಂತ್ರಜ್ಞಾನಕ್ಕೆ ಒತ್ತುಕೊಟ್ಟು ತೋಟಗಾರಿಕಾ ಬೆಳೆ ಮೌಲ್ಯವರ್ಧನೆ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಮತ್ತು ಸಂಸ್ಕರಣೆಯ ಉತ್ತೇಜನಕ್ಕೆ ರೈತ ಸಂಪದ ಯೋಜನೆ ಅಡಿ ಕೆಫೆಕ್ ಸಂಸ್ಥೆಯ ಮೂಲಕ 100 ಕೋಟಿ ರೂಗಳಲ್ಲಿ ಯೋಜನೆ ರೂಪಿಸಲು ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಜೊತೆಯಾಗಿ ಅನುದಾನ ಘೋಷಣೆ ಮಾಡಿದ್ದರೂ, ತೋಟಗಾರಿಕೆ ಇಲಾಖೆ ಬೆಳೆಗಳ ಉತ್ತೇಜನಕ್ಕೂ ಪ್ರಾಮುಖ್ಯತೆಯನ್ನು ನೀಡಿದ್ದಾರೆ. ಇದೇ ವರ್ಷ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಎಲ್ಲಾ ಪಕ್ಷಗಳು ಸಿದ್ಧಗೊಳ್ಳುತ್ತಿವೆ. ಅದರಲ್ಲೂ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಮುಂದಿನ ವಿಧಾನಸಭೆಯಲ್ಲೂ ಬಿಜೆಪಿ ಅಧಿಕ ಸ್ಥಾನಗಳನ್ನು ಪಡೆಯಬೇಕು. ಅಧಿಕಾರ ಕೈತಪ್ಪಿ ಹೋಗಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಬಜೆಟ್​ನಲ್ಲಿ ಪ್ರಾಮುಖ್ಯತೆಯನ್ನು ನೀಡುವ ಪ್ರಯತ್ನವನ್ನು ಮಾಡಿದೆ.

ಅಡಿಕೆ ಬೆಳೆಯ ರೋಗ ನಿರ್ವಹಣೆಗಾಗಿ ನೂತನ ತಂತ್ರಜ್ಞಾನ ಅಭಿವೃದ್ಧಿ ಮಾಡಲು 10 ಲಕ್ಷ ಕೋಟಿ ರೂ ಅನುದಾನ ಘೋಷಣೆ ಮಾಡಿದ್ದಾರೆ. ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ ಪ್ರಾರಂಭಿಸಲಾಗುವುದು. ದ್ರಾಕ್ಷಿ ಬೆಳಗಾರಿಗೆ ನೆರವಾಗಲು ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ಮುಖಾಂತರ 100 ಕೋಟಿ ರೂ. ಗಳ ವೆಚ್ಚದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಬಜೆಟ್​ನಲ್ಲಿ ಸಿಎಂ ಪ್ರಕಟಿಸಿದರು.

ಇವುಗಳ ಜೊತೆಗೆ ರೇಷ್ಮೆ ಬೆಳೆಯನ್ನು ಇನ್ನೂ 10 ಸಾವಿರ ಹೆಕ್ಟೇರ್​ ಪ್ರದೇಶಕ್ಕೆ ವಿಸ್ತರಣೆ ಮಾಡಲು ಕ್ರಮಗಳನ್ನು ತೋಟಗಾರಿಕಾ ಇಲಾಖೆಯಿಂದ ಕೈಗೊಳ್ಳಲಾಗುವುದು. ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆ ಅಡಿ 75 ಕೋಟಿ ರೂಗಳ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. 32 ಸ್ವಯಂ ಚಾಲಿತ ರೈಲಿಂಗ್ ಘಟಕಗಳ ಸ್ಥಾಪನೆಗೆ 10 ಕೋಟಿ ರೂಪಾಯಿ ಹಾಗೂ ಸಾವಿರ ರೇಷ್ಮೆ ಬೆಳೆಗಾರರಿಗೆ ಶ್ರೆಡ್ಡರ್ಸ್​ಗಳನ್ನು ಒದಗಿಸಲು 12 ಕೋಟಿ ರೂಗಳ ನೆರವು ನೀಡಲಾಗುವುದು. ರಾಜ್ಯದ 10 ಪ್ರಮುಖ ರೇಷ್ಮೆ ಬೆಳೆಯುವ ಪ್ರದೇಶಗಳಲ್ಲಿ ಡ್ರೈಯರ್ ಅಳವಡಿಸಲು 5 ಕೋಟಿ ರೂ ಅನುದಾನ ಮೀಸಲಿಡಲಾಗಿದೆ.

ತೋಟಗಾರಿಕೆ ಇಲಾಖೆ ಅಡಿ 12 ತೋಟಗಳಲ್ಲಿ ಒಂದು ತೋಟ ಒಂದು ಬೆಳೆ ಯೋಜನೆ ಅಡಿ ಉತ್ಪಾದಕತೆ ಹೆಚ್ಚಿಸಲು 10 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಘೋಷಣೆಯಾಗಿದೆ. ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಕ್ಕೆ ಹತ್ತು ಕೋಟಿ ರೂ. ನೆರವು ಘೋಷಣೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸಲಾಗುವುದು. ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲು ಎಂಟು ಕೋಟಿ ರೂ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್​ 2023: ಚರ್ಮಗಂಟು ರೋಗ ತಡೆಗಟ್ಟಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ

Last Updated : Feb 17, 2023, 1:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.