ಬೆಂಗಳೂರು: ಈಜಲು ಹೋಗಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಭಾಷ್ (16) ಮೃತ ದುರ್ದೈವಿ. ಬಿಸಿಲಿನ ತಾಪಕ್ಕೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಪಕ್ಕದ ಪಿಲ್ಲಗಾನಹಳ್ಳಿ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ.
ಬಾಲಕನಿಗಾಗಿ ಅಗ್ನಿಶಾಮಕ ದಳ ಹಾಗೂ ತಲಘಟ್ಟಪುರ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪಿಲ್ಲಗಾನಹಳ್ಳಿಯ ಮೃತನ ಮನೆಯಲ್ಲಿ ಮಗನ ಕಳೆದುಕೊಂಡ ದುಃಖ ಮಡುಗಟ್ಟಿದೆ.