ETV Bharat / state

ಕರ್ತವ್ಯಲೋಪ ಎಸಗಿದ 6 ಮಂದಿ ಸಿಬ್ಬಂದಿ ಅಮಾನತು ಮಾಡಿದ ಚುನಾವಣಾ ಆಯೋಗ

author img

By

Published : Nov 26, 2019, 11:46 PM IST

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭ ಕರ್ತವ್ಯಲೋಪ ಎಸಗಿದ 6 ಜನ ಸಿಬ್ಬಂದಿಯನ್ನು ಚುನಾವಣಾ ಆಯೋಗ ಅಮಾನತು ಮಾಡಿದೆ.

KN_BNG_08_ELECTION_COMMISSION_PN_SCRIPT_9020923
ಉಪ ಚುನಾವಣೆ ಕರ್ತವ್ಯ ಲೋಪ ಎಸಗಿದ ಸಿಬ್ಬಂದಿಗಳು: ಅಮಾನತು ಮಾಡಿದ ಚುನಾವಣಾ ಆಯೋಗ

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭ ಕರ್ತವ್ಯಲೋಪ ಎಸಗಿದ 6 ಜನ ಸಿಬ್ಬಂದಿಯನ್ನು ಚುನಾವಣಾ ಆಯೋಗ ಅಮಾನತು ಮಾಡಿದೆ.

ಬೆಂಗಳೂರು ನಗರದ ಚೆಕ್ ಪೋಸ್ಟ್​ಗಳಲ್ಲಿ ಚುನಾವಣಾ ಕರ್ತವ್ಯನಿರತ 6 ಮಂದಿ ಸಿಬ್ಬಂದಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಲಾಗಿದೆ. ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಟಿ.ಸಿ.ಪಾಳ್ಯ ಚೆಕ್ ಪೋಸ್ಟ್, ದೊಡ್ಡ ಗೊಲ್ಲರಹಟ್ಟಿ ಚೆಕ್​​ ಪೋಸ್ಟ್, ತಾವರಕೆರೆ ಚೆಕ್ ಪೋಸ್ಟ್​ಗಳಲ್ಲಿ ತಲಾ ಒಬ್ಬರು ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲಸೂರು ಚೆಕ್ ಪೋಸ್ಟ್​​ನಲ್ಲಿ ಇಬ್ಬರು ಸೇರಿ ಒಟ್ಟು 6 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, ತಕ್ಷಣ ಹಿರಿಯ ಐಎಎಸ್ ಅಧಿಕಾರಿ ಮೊನಿಷ್‌ ಮುದುಗಲ್‌ ಅವರನ್ನು ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಪರಿವೀಕ್ಷಕರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭ ಕರ್ತವ್ಯಲೋಪ ಎಸಗಿದ 6 ಜನ ಸಿಬ್ಬಂದಿಯನ್ನು ಚುನಾವಣಾ ಆಯೋಗ ಅಮಾನತು ಮಾಡಿದೆ.

ಬೆಂಗಳೂರು ನಗರದ ಚೆಕ್ ಪೋಸ್ಟ್​ಗಳಲ್ಲಿ ಚುನಾವಣಾ ಕರ್ತವ್ಯನಿರತ 6 ಮಂದಿ ಸಿಬ್ಬಂದಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಅಮಾನತು ಮಾಡಲಾಗಿದೆ. ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಟಿ.ಸಿ.ಪಾಳ್ಯ ಚೆಕ್ ಪೋಸ್ಟ್, ದೊಡ್ಡ ಗೊಲ್ಲರಹಟ್ಟಿ ಚೆಕ್​​ ಪೋಸ್ಟ್, ತಾವರಕೆರೆ ಚೆಕ್ ಪೋಸ್ಟ್​ಗಳಲ್ಲಿ ತಲಾ ಒಬ್ಬರು ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲಸೂರು ಚೆಕ್ ಪೋಸ್ಟ್​​ನಲ್ಲಿ ಇಬ್ಬರು ಸೇರಿ ಒಟ್ಟು 6 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, ತಕ್ಷಣ ಹಿರಿಯ ಐಎಎಸ್ ಅಧಿಕಾರಿ ಮೊನಿಷ್‌ ಮುದುಗಲ್‌ ಅವರನ್ನು ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಪರಿವೀಕ್ಷಕರಾಗಿ ನೇಮಿಸಿ ಆದೇಶ ಹೊರಡಿಸಿದೆ.

Intro:newsBody:ಉಪ ಚುನಾವಣೆ ಕರ್ತವ್ಯ ಲೋಪ ಎಸಗಿದ 6 ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡ ಚುನಾವಣಾ ಆಯೋಗ

ಬೆಂಗಳೂರು: ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂದರ್ಭ ಕರ್ತವ್ಯ ಲೋಪ ಎಸಗಿರುವುದಾಗಿ ಕಂಡು ಬಂದ‌ ಹಿನ್ನಲೆಯಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಲಾಗಿದೆ.
ಬೆಂಗಳೂರು ನಗರದ ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಒಬ್ಬರನ್ನು ವಿಚಾರಣೆಗೆ ಒಳಪಡಿಸಿದೆ. ನಗರದ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಟಿ.ಸಿ.ಪಾಳ್ಯ ಚೆಕ್ ಪೋಸ್ಟ್ ನಲ್ಲಿ ಒಬ್ಬರು, ಯಶವಂತಪುರದ ಮಾಗಡಿ ನೈಸ್ ರಸ್ತೆಯ ದೊಡ್ಡ ಗೊಲ್ಲರಹಟ್ಟಿ ಚೆಲ್ ಪೋಸ್ಟ್ ನಲ್ಲಿ ಒಬ್ಬರು, ತಾವರಕೆರೆ ಚೆಕ್ ಪೋಸ್ಟ್ ಒಬ್ಬರು ಮತ್ತು ಶಿವಾಜಿನಗರದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲಸೂರು ಚೆಕ್ ಪೋಸ್ಟ್ ನಲ್ಲಿ ಇಬ್ಬರು ಸೇರಿ ಒಟ್ಟು 6 ಅಧಿಕಾರಿ/ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರು ತಿಳಿಸಿದ್ದಾರೆ.
ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ತಕ್ಷಣದಿಂದ ಹಿರಿಯ ಐಎಎಸ್ ಅಧಿಕಾರಿ ಮೊನಿಷ್‌ ಮುದುಗಲ್‌ ಅವರನ್ನು ಚುನಾವಣಾ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಪರಿವೀಕ್ಷಕರಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ಸಿಸಿ ಟಿವಿ ವೆಬ್ ಕಾಸ್ಟಿಂಗ್ ತಂತ್ರಜ್ಞಾನದ‌ ಮೇಲ್ವಿಚಾರಣೆ ಕೇಂದ್ರಗಳನ್ನು ಆರಂಭಿಸಿದೆ. ಇದರಿಂದ ಹಿರಿಯ ಅಧಿಕಾರಿಗಳು ಚೆಕ್ ಪೋಸ್ಟ್ ಗಳ ವೀಡಿಯೋಗಳನ್ನು ನೇರಪ್ರಸಾರದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.