ETV Bharat / state

ಸಿದ್ದರಾಮಯ್ಯ 'ಖಾನ್' ಆಗದೆ 'ಕೇಶವ' ಆಗಲು ಸಾಧ್ಯವೇ?: ಬಿಜೆಪಿ

author img

By

Published : Dec 5, 2022, 3:58 PM IST

ಸಿದ್ದರಾಮುಲ್ಲಾ ಖಾನ್​ ಎಂಬ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೇ ಸರಣಿ ಟ್ವೀಟ್​ ಮಾಡಿದೆ.

KN_BNG
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರಣಿ ಟ್ವೀಟ್​

ಬೆಂಗಳೂರು: ಕನ್ನಡಿಗರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಬಿಜೆಪಿ ತನ್ನ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸುತ್ತಿರುವುದನ್ನು ಸಮರ್ಥಿಸಿಕೊಂಡು ಸರಣಿ ಟ್ವೀಟ್ ಮಾಡಿರುವ ಬಿಜೆಪಿ,
ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಪಕ್ಷದಿಂದ ಹೊರಹಾಕಿದರು. ಆಗ ಕಾಂಗ್ರೆಸ್ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು ಮತ್ತು ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ ಎಂದು ಟೀಕಿಸಿದೆ.

  • ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್.

    ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?

    8/8

    — BJP Karnataka (@BJP4Karnataka) December 5, 2022 " class="align-text-top noRightClick twitterSection" data=" ">

ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದು ನಾವಲ್ಲ, ಜನರೇ ನೀಡಿದ್ದಾರೆ ಎಂದಿದೆ.

ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೇ?.

ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಟ್ವೀಟ್ ಮೂಲಕ ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: ಕನ್ನಡಿಗರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ಎಂದು ಬಿಜೆಪಿ ತನ್ನ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸುತ್ತಿರುವುದನ್ನು ಸಮರ್ಥಿಸಿಕೊಂಡು ಸರಣಿ ಟ್ವೀಟ್ ಮಾಡಿರುವ ಬಿಜೆಪಿ,
ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಪಕ್ಷದಿಂದ ಹೊರಹಾಕಿದರು. ಆಗ ಕಾಂಗ್ರೆಸ್ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು ಮತ್ತು ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ ಎಂದು ಟೀಕಿಸಿದೆ.

  • ಹಿಜಾಬ್‌‌ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್.

    ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ @siddaramaiah. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ?

    8/8

    — BJP Karnataka (@BJP4Karnataka) December 5, 2022 " class="align-text-top noRightClick twitterSection" data=" ">

ಕ್ಷಣವೂ ವಿವೇಚಿಸದೆ ತಲಾಖ್‌ ಎಂದು ಮಹಿಳೆಯರ ಬದುಕು ಬರ್ಬಾದ್‌ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೆ ಮತ್ತೇನೆಂದು ಕರೆದಾರು? ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್‌ ಎಂಬ ಬಿರುದು ನಾವಲ್ಲ, ಜನರೇ ನೀಡಿದ್ದಾರೆ ಎಂದಿದೆ.

ಟಿಪ್ಪು ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’‌ ಎಕ್ಸ್‌ಪ್ರೆಸ್‌ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ ಸಿದ್ದರಾಮಯ್ಯ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್‌ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೇ?.

ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ‌ ಸಿದ್ದರಾಮಯ್ಯ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಟ್ವೀಟ್ ಮೂಲಕ ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಕಾಲೇಜಿಗೆ ಅವಕಾಶವಿಲ್ಲ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.