ETV Bharat / state

ರಾಜ್ಯದಲ್ಲಿ ಸದ್ಯದಲ್ಲೇ ಸರ್ಕಾರಿ ಒಡೆತನದ ಆಭರಣ ಮಳಿಗೆ ತಲೆ ಎತ್ತಲಿದೆ: ಸಚಿವ ಮುರುಗೇಶ್​ ನಿರಾಣಿ

author img

By

Published : Mar 18, 2021, 8:11 PM IST

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಳಿಗೆಗಳನ್ನು ತೆರೆಯಲಾಗುವುದು. ಪ್ರಾರಂಭಿಕವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ( ಟಯರ್ 1 ) ಮಳಿಗೆಗಳು ಕಾರ್ಯಾರಂಭ ಮಾಡಲಿವೆ. ರಾಜ್ಯದಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದರೆ ಮುಂಬರುವ ದಿನಗಳಲ್ಲಿ ಹೊರ ರಾಜ್ಯಗಳಲ್ಲೂ ಈ ಆಭರಣ ಮಳಿಗೆಗಳನ್ನು ತೆರೆಯುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

State government owned jewelery stores
ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಇದೀಗ ಮತ್ತೊಂದು ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದ್ದು, ಇದೇ ಮೊದಲ ಬಾರಿಗೆ ಹಾಗೂ ರಾಷ್ಟ್ರದಲ್ಲೇ ಪ್ರಥಮ ಎನ್ನಲಾದ ಸರ್ಕಾರಿ ಒಡೆತನದ ಆಭರಣಗಳ ಮಳಿಗೆ (ಜ್ಯುವೆಲ್ಲರಿ ಶಾಪ್) ರಾಜ್ಯದಲ್ಲಿ ಸದ್ಯದಲ್ಲೇ ತಲೆ ಎತ್ತಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ವಿಕಾಸಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮಳಿಗೆಗಳನ್ನು ಸರ್ಕಾರವೇ ನಿರ್ವಹಣೆ ಮಾಡಲಿದೆ. ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಭರಣಗಳನ್ನು ತಯಾರಿಸಲಿದೆ. ಮೈಸೂರು ಸಿಲ್ಕ್, ಮೈಸೂರು ಸ್ಯಾಂಡಲ್ ಸೋಪ್, ಕಾವೇರಿ ಕೈ ಮಗ್ಗ ( ಹ್ಯಾಂಡ್ ಲೂಮ್ಸ್ ) ಮಾದರಿಯಲ್ಲಿ ಸರ್ಕಾರಿ ಅಭರಣಗಳ ಮಳಿಗೆ ತೆರೆಯುವ ಮಹತ್ವದ ನಿರ್ಧಾರವನ್ನು ‌ಇಲಾಖೆ ತೆಗೆದುಕೊಂಡಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಳಿಗೆಗಳನ್ನು ತೆರೆಯಲಾಗುವುದು. ಪ್ರಾರಂಭಿಕವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ( ಟಯರ್ 1 ) ಈ ಮಳಿಗೆಗಳು ಕಾರ್ಯಾರಂಭ ಮಾಡಲಿವೆ. ರಾಜ್ಯದಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದರೆ ಮುಂಬರುವ ದಿನಗಳಲ್ಲಿ ಹೊರ ರಾಜ್ಯಗಳಲ್ಲೂ ಈ ಆಭರಣ ಮಳಿಗೆಗಳನ್ನು ತೆರೆಯುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ ಎಂದು ಹೇಳಿದರು.

ಚಿನ್ನದ ನಾಣ್ಯ ಬಿಡುಗಡೆ:

ಮದುವೆ, ಸಮಾರಂಭ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಗ್ರಾಹಕರಿಗೆ ಉಡುಗೊರೆಯಾಗಿ ನೀಡಲು ಅನುಕೂಲವಾಗುವಂತೆ ಇನ್ಮುಂದೆ ಕರ್ನಾಟಕದ ಹೆಮ್ಮೆಯ ಲಾಂಛನವಾದ "ಗಂಡಬೇರುಂಡ" ಗುರುತಿನ ಚಿನ್ನದ ನಾಣ್ಯಗಳನ್ನು ಹೊರತರಲು ಇಲಾಖೆ ತೀರ್ಮಾನಿಸಿದೆ. ಚಿನ್ನದ ನಾಣ್ಯಗಳಿಗೆ ಗ್ರಾಹಕರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಇದನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಅಭರಣ ಮಾಲೀಕರ ಸಂಘ ಸಭೆಯಲ್ಲಿ ಮನವಿ ಮಾಡಲಾಗಿತ್ತು. ಇದಕ್ಕೂ ಅಸ್ತು ಎಂದ ಸಚಿವ ನಿರಾಣಿ, ಶೀಘ್ರದಲ್ಲೇ ಆಭರಣ ಮಳಿಗೆಗಳಲ್ಲಿ ಚಿನ್ನದ ನಾಣ್ಯಗಳನ್ನು ಹೊರತರುವುದಾಗಿ ಘೋಷಣೆ ಮಾಡಿದರು.

ಚಿನ್ನದ ವಿಶೇಷ ಆರ್ಥಿಕ ವಲಯ ಸ್ಥಾಪನೆ:

ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಚಿನ್ನದ ವಿಶೇಷ ಆರ್ಥಿಕ ವಲಯ ( ಎಸ್​ಇಜಡ್) ಸ್ಥಾಪನೆ ಮಾಡುವ ಮತ್ತೊಂದು ನಿರ್ಧಾರವನ್ನು ನಿರಾಣಿ ಪ್ರಕಟಿಸಿದರು. ವಿಶೇಷ ಆರ್ಥಿಕ ವಲಯ ಸ್ಥಾಪನೆಯಾದರೆ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬರಲಿದ್ದಾರೆ. ಇದರಿಂದ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಚಿನ್ನದ ಉತ್ಪಾದನೆ ದ್ವಿಗುಣ:

ಕರ್ನಾಟಕದಲ್ಲಿ ಈ ಬಾರಿ ಉತ್ಪಾದನಾ ಸಾಮರ್ಥ್ಯವನ್ನು ವರ್ಷದ ಅಂತ್ಯಕ್ಕೆ ದ್ವಿಗುಣಗೊಳಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಪ್ರಸ್ತುತ ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್​ನಿಂದ 1500-1800 ಕೆಜಿ ಚಿನ್ನವನ್ನು ಉತ್ಪಾದನೆ ಮಾಡಲಾಗುತ್ತದೆ. 2022ರ ವೇಳೆಗೆ ಉತ್ಪಾದನೆಯನ್ನು 5000 ಕೆಜಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.

ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಅತ್ಯಾಧುನಿಕ ಯಂತ್ರೋಪಕರಣಗಳಾದ ರಾಕ್ ಬ್ರೇಕರ್ಸ್, ಲೊಕೊ-ಲೋಡರ್ಸ್, ಜಂಬೊ ಡ್ರಿಲ್ಲಿಂಗ್, ಎಲ್‍ಎಚ್‍ಡಿಯ ಎಲ್‍ಪಿಡಿಟಿಗಳಂತಹ ಬಳಸಿಕೊಂಡು ಗಣನೀಯ ಪ್ರಮಾಣದಲ್ಲಿ ಉತ್ಪಾದನೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಹೆಚ್ಚು ಅಗತ್ಯವಿರುವ ತಾಂತ್ರಿಕ ಪರಿಣತಿಯನ್ನು ಆಳವಡಿಸಿಕೊಂಡು ಆಳವಾದ ಗಣಿಗಾರಿಕೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಹೊಸ ಸವಾಲುಗಳನ್ನು ತೆಗೆದುಕೊಳ್ಳಲು ಸಿದ್ಧವಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವುದಾಗಿ ತಿಳಿಸಿದರು.

ಓದಿ:ಕೋವಿಡ್ 2ನೇ ಅಲೆ ಸಮರ್ಥವಾಗಿ ಎದುರಿಸುತ್ತೇವೆ: ಸಚಿವ ಸುಧಾಕರ್

ಅದಿರು ಸಂಸ್ಕರಣೆಯ ಹೆಚ್ಚಳಕ್ಕೆ ಒತ್ತು ನೀಡಿ, ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಚ್‍ಜಿಎಂಎಲ್, ಅದಿರು ಸಂಸ್ಕರಣೆಯನ್ನು ಪ್ರಸ್ತುತ 2000 ಟನ್‍ಗಳಿಂದ ದಿನಕ್ಕೆ 3000 ಟನ್‍ಗಳಿಗೆ ಕೊಂಡೊಯ್ಯಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ನಿದೇರ್ಶನ ನೀಡಿದ್ದಾರೆ. ಈ ಗಣಿಗಳ ಅಕ್ಕಪಕ್ಕಗಳಲ್ಲಿ ಭಾರತೀಯ ಭೂ ವೈಜ್ಞಾನಿಕ ಸಂಸ್ಥೆ ಖನಿಜ ಅನ್ವೇಷಣ ನಿಗಮ, ಹಟ್ಟಿ ಗೋಲ್ಡ್ ಮೈನ್ ಮತ್ತು ಖಾಸಗಿ ಸಂಸ್ಥೆಗಳು ಹೊಸ ಹೊಸ ಚಿನ್ನದ ಗಣಿಗಳನ್ನು ಪತ್ತೆ ಮಾಡಿವೆ. ಭೂಮಿ ಆಳದಲ್ಲಿ ನಡೆಯುವ ಗಣಿಗಾರಿಕೆ ನಡೆಸಲು ಕಾರ್ಮಿಕರನ್ನು ಕರೆದೊಯ್ಯುವ ವಾಹನ ಸಾಮರ್ಥ್ಯವನ್ನು 90ರಿಂದ 100ಕ್ಕೆ ಹೆಚ್ಚಿಸಬೇಕು. ಪ್ರಸ್ತುತ 20 ಕಾರ್ಮಿಕರನ್ನು ಕರೆದೊಯ್ಯುವ ಸಾಮರ್ಥ್ಯವಿದೆ. ಇದನ್ನು ಹೆಚ್ಚಳ ಮಾಡಲು ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ನಮ್ಮಲ್ಲಿ 8 ಮಿಲಿಯನ್ ಕಬ್ಬಿಣದ ಅದಿರು ದಾಸ್ತಾನು ಇದೆ. ಸುಮಾರು 800 ಕೋಟಿ ರೂ. ಮೌಲ್ಯದ ಅದಿರು ಇದೆ. ಜಾಗತಿಕ ಟೆಂಡರ್ ಮೂಲಕ ಹರಾಜು ಮಾಡುತ್ತೇವೆ. ಸಂಗ್ರಹವಿರುವ ಮಾರಾಟದಿಂದ ಸ್ಟೀಲ್ ಕಂಪನಿಗಳಿಗೆ ಕಚ್ಚಾ ವಸ್ತು ದೊರೆಯಲಿದೆ. ಸ್ಟೀಲ್‌ ಬೆಲೆ ಕೂಡ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಹೆಸರು ಮರುನಾಮಕರಣ:

ಪ್ರಸ್ತುತ ಹಟ್ಟಿ ಮೈನ್ಸ್ ಗೋಲ್ಡ್ ಇನ್ನು ಮುಂದೆ "ಕರ್ನಾಟಕ ರಾಜ್ಯ (ಹಟ್ಟಿ) ಚಿನ್ನದ ಗಣಿ" ( ಕರ್ನಾಟಕ ಸ್ಟೇಟ್ ಗೋಲ್ಡ್ ಮೈನ್ಸ್ ) ಮರುನಾಮಕರಣವಾಗಿ ಬದಲಾಗಲಿದೆ. ಕರ್ನಾಟಕದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಬ್ರಾಂಡ್ ಮಾಡುವ ನಿಟ್ಟಿನಲ್ಲಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದರು.

ಬೆಂಗಳೂರು: ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಇದೀಗ ಮತ್ತೊಂದು ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದ್ದು, ಇದೇ ಮೊದಲ ಬಾರಿಗೆ ಹಾಗೂ ರಾಷ್ಟ್ರದಲ್ಲೇ ಪ್ರಥಮ ಎನ್ನಲಾದ ಸರ್ಕಾರಿ ಒಡೆತನದ ಆಭರಣಗಳ ಮಳಿಗೆ (ಜ್ಯುವೆಲ್ಲರಿ ಶಾಪ್) ರಾಜ್ಯದಲ್ಲಿ ಸದ್ಯದಲ್ಲೇ ತಲೆ ಎತ್ತಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ವಿಕಾಸಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮಳಿಗೆಗಳನ್ನು ಸರ್ಕಾರವೇ ನಿರ್ವಹಣೆ ಮಾಡಲಿದೆ. ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಭರಣಗಳನ್ನು ತಯಾರಿಸಲಿದೆ. ಮೈಸೂರು ಸಿಲ್ಕ್, ಮೈಸೂರು ಸ್ಯಾಂಡಲ್ ಸೋಪ್, ಕಾವೇರಿ ಕೈ ಮಗ್ಗ ( ಹ್ಯಾಂಡ್ ಲೂಮ್ಸ್ ) ಮಾದರಿಯಲ್ಲಿ ಸರ್ಕಾರಿ ಅಭರಣಗಳ ಮಳಿಗೆ ತೆರೆಯುವ ಮಹತ್ವದ ನಿರ್ಧಾರವನ್ನು ‌ಇಲಾಖೆ ತೆಗೆದುಕೊಂಡಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಳಿಗೆಗಳನ್ನು ತೆರೆಯಲಾಗುವುದು. ಪ್ರಾರಂಭಿಕವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ( ಟಯರ್ 1 ) ಈ ಮಳಿಗೆಗಳು ಕಾರ್ಯಾರಂಭ ಮಾಡಲಿವೆ. ರಾಜ್ಯದಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದರೆ ಮುಂಬರುವ ದಿನಗಳಲ್ಲಿ ಹೊರ ರಾಜ್ಯಗಳಲ್ಲೂ ಈ ಆಭರಣ ಮಳಿಗೆಗಳನ್ನು ತೆರೆಯುವ ಯೋಜನೆಯನ್ನು ಇಲಾಖೆ ಹಾಕಿಕೊಂಡಿದೆ ಎಂದು ಹೇಳಿದರು.

ಚಿನ್ನದ ನಾಣ್ಯ ಬಿಡುಗಡೆ:

ಮದುವೆ, ಸಮಾರಂಭ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಗ್ರಾಹಕರಿಗೆ ಉಡುಗೊರೆಯಾಗಿ ನೀಡಲು ಅನುಕೂಲವಾಗುವಂತೆ ಇನ್ಮುಂದೆ ಕರ್ನಾಟಕದ ಹೆಮ್ಮೆಯ ಲಾಂಛನವಾದ "ಗಂಡಬೇರುಂಡ" ಗುರುತಿನ ಚಿನ್ನದ ನಾಣ್ಯಗಳನ್ನು ಹೊರತರಲು ಇಲಾಖೆ ತೀರ್ಮಾನಿಸಿದೆ. ಚಿನ್ನದ ನಾಣ್ಯಗಳಿಗೆ ಗ್ರಾಹಕರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಇದನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಅಭರಣ ಮಾಲೀಕರ ಸಂಘ ಸಭೆಯಲ್ಲಿ ಮನವಿ ಮಾಡಲಾಗಿತ್ತು. ಇದಕ್ಕೂ ಅಸ್ತು ಎಂದ ಸಚಿವ ನಿರಾಣಿ, ಶೀಘ್ರದಲ್ಲೇ ಆಭರಣ ಮಳಿಗೆಗಳಲ್ಲಿ ಚಿನ್ನದ ನಾಣ್ಯಗಳನ್ನು ಹೊರತರುವುದಾಗಿ ಘೋಷಣೆ ಮಾಡಿದರು.

ಚಿನ್ನದ ವಿಶೇಷ ಆರ್ಥಿಕ ವಲಯ ಸ್ಥಾಪನೆ:

ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಚಿನ್ನದ ವಿಶೇಷ ಆರ್ಥಿಕ ವಲಯ ( ಎಸ್​ಇಜಡ್) ಸ್ಥಾಪನೆ ಮಾಡುವ ಮತ್ತೊಂದು ನಿರ್ಧಾರವನ್ನು ನಿರಾಣಿ ಪ್ರಕಟಿಸಿದರು. ವಿಶೇಷ ಆರ್ಥಿಕ ವಲಯ ಸ್ಥಾಪನೆಯಾದರೆ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬರಲಿದ್ದಾರೆ. ಇದರಿಂದ ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಚಿನ್ನದ ಉತ್ಪಾದನೆ ದ್ವಿಗುಣ:

ಕರ್ನಾಟಕದಲ್ಲಿ ಈ ಬಾರಿ ಉತ್ಪಾದನಾ ಸಾಮರ್ಥ್ಯವನ್ನು ವರ್ಷದ ಅಂತ್ಯಕ್ಕೆ ದ್ವಿಗುಣಗೊಳಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ. ಪ್ರಸ್ತುತ ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್​ನಿಂದ 1500-1800 ಕೆಜಿ ಚಿನ್ನವನ್ನು ಉತ್ಪಾದನೆ ಮಾಡಲಾಗುತ್ತದೆ. 2022ರ ವೇಳೆಗೆ ಉತ್ಪಾದನೆಯನ್ನು 5000 ಕೆಜಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.

ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಅತ್ಯಾಧುನಿಕ ಯಂತ್ರೋಪಕರಣಗಳಾದ ರಾಕ್ ಬ್ರೇಕರ್ಸ್, ಲೊಕೊ-ಲೋಡರ್ಸ್, ಜಂಬೊ ಡ್ರಿಲ್ಲಿಂಗ್, ಎಲ್‍ಎಚ್‍ಡಿಯ ಎಲ್‍ಪಿಡಿಟಿಗಳಂತಹ ಬಳಸಿಕೊಂಡು ಗಣನೀಯ ಪ್ರಮಾಣದಲ್ಲಿ ಉತ್ಪಾದನೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಹೆಚ್ಚು ಅಗತ್ಯವಿರುವ ತಾಂತ್ರಿಕ ಪರಿಣತಿಯನ್ನು ಆಳವಡಿಸಿಕೊಂಡು ಆಳವಾದ ಗಣಿಗಾರಿಕೆಯಲ್ಲಿ ಅಭಿವೃದ್ಧಿಗೆ ಪೂರಕವಾದ ಹೊಸ ಸವಾಲುಗಳನ್ನು ತೆಗೆದುಕೊಳ್ಳಲು ಸಿದ್ಧವಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವುದಾಗಿ ತಿಳಿಸಿದರು.

ಓದಿ:ಕೋವಿಡ್ 2ನೇ ಅಲೆ ಸಮರ್ಥವಾಗಿ ಎದುರಿಸುತ್ತೇವೆ: ಸಚಿವ ಸುಧಾಕರ್

ಅದಿರು ಸಂಸ್ಕರಣೆಯ ಹೆಚ್ಚಳಕ್ಕೆ ಒತ್ತು ನೀಡಿ, ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಚ್‍ಜಿಎಂಎಲ್, ಅದಿರು ಸಂಸ್ಕರಣೆಯನ್ನು ಪ್ರಸ್ತುತ 2000 ಟನ್‍ಗಳಿಂದ ದಿನಕ್ಕೆ 3000 ಟನ್‍ಗಳಿಗೆ ಕೊಂಡೊಯ್ಯಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ನಿದೇರ್ಶನ ನೀಡಿದ್ದಾರೆ. ಈ ಗಣಿಗಳ ಅಕ್ಕಪಕ್ಕಗಳಲ್ಲಿ ಭಾರತೀಯ ಭೂ ವೈಜ್ಞಾನಿಕ ಸಂಸ್ಥೆ ಖನಿಜ ಅನ್ವೇಷಣ ನಿಗಮ, ಹಟ್ಟಿ ಗೋಲ್ಡ್ ಮೈನ್ ಮತ್ತು ಖಾಸಗಿ ಸಂಸ್ಥೆಗಳು ಹೊಸ ಹೊಸ ಚಿನ್ನದ ಗಣಿಗಳನ್ನು ಪತ್ತೆ ಮಾಡಿವೆ. ಭೂಮಿ ಆಳದಲ್ಲಿ ನಡೆಯುವ ಗಣಿಗಾರಿಕೆ ನಡೆಸಲು ಕಾರ್ಮಿಕರನ್ನು ಕರೆದೊಯ್ಯುವ ವಾಹನ ಸಾಮರ್ಥ್ಯವನ್ನು 90ರಿಂದ 100ಕ್ಕೆ ಹೆಚ್ಚಿಸಬೇಕು. ಪ್ರಸ್ತುತ 20 ಕಾರ್ಮಿಕರನ್ನು ಕರೆದೊಯ್ಯುವ ಸಾಮರ್ಥ್ಯವಿದೆ. ಇದನ್ನು ಹೆಚ್ಚಳ ಮಾಡಲು ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ನಮ್ಮಲ್ಲಿ 8 ಮಿಲಿಯನ್ ಕಬ್ಬಿಣದ ಅದಿರು ದಾಸ್ತಾನು ಇದೆ. ಸುಮಾರು 800 ಕೋಟಿ ರೂ. ಮೌಲ್ಯದ ಅದಿರು ಇದೆ. ಜಾಗತಿಕ ಟೆಂಡರ್ ಮೂಲಕ ಹರಾಜು ಮಾಡುತ್ತೇವೆ. ಸಂಗ್ರಹವಿರುವ ಮಾರಾಟದಿಂದ ಸ್ಟೀಲ್ ಕಂಪನಿಗಳಿಗೆ ಕಚ್ಚಾ ವಸ್ತು ದೊರೆಯಲಿದೆ. ಸ್ಟೀಲ್‌ ಬೆಲೆ ಕೂಡ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಹೆಸರು ಮರುನಾಮಕರಣ:

ಪ್ರಸ್ತುತ ಹಟ್ಟಿ ಮೈನ್ಸ್ ಗೋಲ್ಡ್ ಇನ್ನು ಮುಂದೆ "ಕರ್ನಾಟಕ ರಾಜ್ಯ (ಹಟ್ಟಿ) ಚಿನ್ನದ ಗಣಿ" ( ಕರ್ನಾಟಕ ಸ್ಟೇಟ್ ಗೋಲ್ಡ್ ಮೈನ್ಸ್ ) ಮರುನಾಮಕರಣವಾಗಿ ಬದಲಾಗಲಿದೆ. ಕರ್ನಾಟಕದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಬ್ರಾಂಡ್ ಮಾಡುವ ನಿಟ್ಟಿನಲ್ಲಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.