ETV Bharat / state

ಎಸ್​ಎಂ ಕೃಷ್ಣ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ... ಆಶೀರ್ವದಿಸಿ,  ಮಾರ್ಗದರ್ಶಿಸಿದ ಮಾಜಿ ಸಿಎಂ

author img

By ETV Bharat Karnataka Team

Published : Nov 13, 2023, 7:48 PM IST

Updated : Nov 13, 2023, 8:23 PM IST

ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಅವರನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾಗಿ ಆಶೀರ್ವಾದ ಪಡೆದರು.

State President Vijayendra met SM Krishna
ಎಸ್​ಎಂ ಕೃಷ್ಣರನ್ನು ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ
ಎಸ್​ಎಂ ಕೃಷ್ಣ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾದ ಸಂದರ್ಭದಲ್ಲಿ 'ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪ ಶ್ರಮಿಸಿದ್ದಾರೆ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಹೇಳಿದ್ದಾರೆ.

ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಇದೇ ವೇಳೆ, ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.

ಬಳಿಕ, ಯಡಿಯೂರಪ್ಪ ಅವರು ಕಟ್ಟಿದ ಅಸ್ಥಿಭಾರದ ಮೇಲೆ ವಿಜಯೇಂದ್ರ ಅವರು ಬೃಹತ್ ಪಕ್ಷವನ್ನು ಕಟ್ಟುವ ಹಾಗೂ ಮುಂದಿನ ಲೋಕಸಭಾ ಚುನಾವಣೆ, ನಂತರ ಬರುವ ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಛಾಪನ್ನು ಒತ್ತಿ ತೋರಿಸುವ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ. ಈ ಯುವ ಹೆಗಲಿನ ಮೇಲೆ ಅಂಥ ಹೊಣೆ ನೀಡಲಾಗಿದೆ. ಈ ಪ್ರತಿಭೆ ಗುರುತಿಸಿ, ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾರವರು ಮಹತ್ವದ ಹೊಣೆ ನೀಡಿದ್ದಾರೆ. ವಿಜಯೇಂದ್ರರಿಗೆ ಎಲ್ಲ ವಿಧದ ಯಶಸ್ಸು ಸಿಗಲಿ ಎಂದು ಹಾರೈಸುವುದಾಗಿ ತಿಳಿಸಿದರು.

ಯುವಕರಿಗೆ ಅಧ್ಯಕ್ಷ ಸ್ಥಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಲ್ಲ ನಾಳೆ ಯುವ ಪ್ರತಿಭೆಗಳು ಹೊರಹೊಮ್ಮಬೇಕು. ಅವರ ಜೊತೆ ಹಿರಿಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅದಕ್ಕೆ ನಾವು ಅನುವು ಮಾಡಿಕೊಟ್ಟು ಅವರ ಕೈಗಳನ್ನು ಬಲಪಡಿಸಬೇಕು. ಅವರಿಗೆ ಮಾರ್ಗದರ್ಶನ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ ಅವರು ಇದ್ದರು.

ಪೌರ ಕಾರ್ಮಿಕರಿಗೆ ಸಿಹಿ ಹಂಚಿದ ವಿಜಯೇಂದ್ರ: ಇದೇ ವೇಳೆ, ಸದಾಶಿವನಗರದಲ್ಲಿರುವ ಎಸ್​ಎಂಕೆ ನಿವಾಸದ ಎದುರು ವಿಜಯೇಂದ್ರ ಅವರಿಗೆ ಪೌರ ಕಾರ್ಮಿಕರು ದೀಪಾವಳಿ ಹಬ್ಬದ ಶುಭ ಕೋರಿದರು. ನಂತರ ಪೌರಕಾರ್ಮಿಕರಿಗೆ ವಿಜಯೇಂದ್ರ ಸಿಹಿ ಹಂಚಿ ಹಬ್ಬದ ಶುಭ ಕೋರಿದ್ದಲ್ಲದೇ, ಪೌರ ಕಾರ್ಮಿಕರಿಗೆ 5 ಸಾವಿರ ರೂ. ಹಣ ನೀಡಿದರು.

ಇದಕ್ಕೂ ಮುನ್ನ ಬಿವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ, ಅವರ ಆಶೀರ್ವಾದ ಪಡೆದಿದ್ದಾರೆ. ಜತೆಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಬಂದು ಆಶೀರ್ವದಿಸುವಂತೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: ದೇವೇಗೌಡರ ಆಶೀರ್ವಾದ ಪಡೆದ ವಿಜಯೇಂದ್ರ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ದೊಡ್ಡಗೌಡರ ಸಲಹೆ ಏನು?

ಎಸ್​ಎಂ ಕೃಷ್ಣ ಭೇಟಿಯಾದ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾದ ಸಂದರ್ಭದಲ್ಲಿ 'ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪ ಶ್ರಮಿಸಿದ್ದಾರೆ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಹೇಳಿದ್ದಾರೆ.

ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ಇದೇ ವೇಳೆ, ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.

ಬಳಿಕ, ಯಡಿಯೂರಪ್ಪ ಅವರು ಕಟ್ಟಿದ ಅಸ್ಥಿಭಾರದ ಮೇಲೆ ವಿಜಯೇಂದ್ರ ಅವರು ಬೃಹತ್ ಪಕ್ಷವನ್ನು ಕಟ್ಟುವ ಹಾಗೂ ಮುಂದಿನ ಲೋಕಸಭಾ ಚುನಾವಣೆ, ನಂತರ ಬರುವ ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಛಾಪನ್ನು ಒತ್ತಿ ತೋರಿಸುವ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ. ಈ ಯುವ ಹೆಗಲಿನ ಮೇಲೆ ಅಂಥ ಹೊಣೆ ನೀಡಲಾಗಿದೆ. ಈ ಪ್ರತಿಭೆ ಗುರುತಿಸಿ, ಪ್ರಧಾನಿ ನರೇಂದ್ರ ಮೋದಿಯವರು, ಗೃಹ ಸಚಿವ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾರವರು ಮಹತ್ವದ ಹೊಣೆ ನೀಡಿದ್ದಾರೆ. ವಿಜಯೇಂದ್ರರಿಗೆ ಎಲ್ಲ ವಿಧದ ಯಶಸ್ಸು ಸಿಗಲಿ ಎಂದು ಹಾರೈಸುವುದಾಗಿ ತಿಳಿಸಿದರು.

ಯುವಕರಿಗೆ ಅಧ್ಯಕ್ಷ ಸ್ಥಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಲ್ಲ ನಾಳೆ ಯುವ ಪ್ರತಿಭೆಗಳು ಹೊರಹೊಮ್ಮಬೇಕು. ಅವರ ಜೊತೆ ಹಿರಿಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅದಕ್ಕೆ ನಾವು ಅನುವು ಮಾಡಿಕೊಟ್ಟು ಅವರ ಕೈಗಳನ್ನು ಬಲಪಡಿಸಬೇಕು. ಅವರಿಗೆ ಮಾರ್ಗದರ್ಶನ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ ಅವರು ಇದ್ದರು.

ಪೌರ ಕಾರ್ಮಿಕರಿಗೆ ಸಿಹಿ ಹಂಚಿದ ವಿಜಯೇಂದ್ರ: ಇದೇ ವೇಳೆ, ಸದಾಶಿವನಗರದಲ್ಲಿರುವ ಎಸ್​ಎಂಕೆ ನಿವಾಸದ ಎದುರು ವಿಜಯೇಂದ್ರ ಅವರಿಗೆ ಪೌರ ಕಾರ್ಮಿಕರು ದೀಪಾವಳಿ ಹಬ್ಬದ ಶುಭ ಕೋರಿದರು. ನಂತರ ಪೌರಕಾರ್ಮಿಕರಿಗೆ ವಿಜಯೇಂದ್ರ ಸಿಹಿ ಹಂಚಿ ಹಬ್ಬದ ಶುಭ ಕೋರಿದ್ದಲ್ಲದೇ, ಪೌರ ಕಾರ್ಮಿಕರಿಗೆ 5 ಸಾವಿರ ರೂ. ಹಣ ನೀಡಿದರು.

ಇದಕ್ಕೂ ಮುನ್ನ ಬಿವೈ ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ, ಅವರ ಆಶೀರ್ವಾದ ಪಡೆದಿದ್ದಾರೆ. ಜತೆಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಬಂದು ಆಶೀರ್ವದಿಸುವಂತೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: ದೇವೇಗೌಡರ ಆಶೀರ್ವಾದ ಪಡೆದ ವಿಜಯೇಂದ್ರ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ದೊಡ್ಡಗೌಡರ ಸಲಹೆ ಏನು?

Last Updated : Nov 13, 2023, 8:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.