ETV Bharat / state

ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದ ದಿಕ್ಕು ಬದಲಾಗಲಿದೆ: ಡಿಸಿಎಂ ಅಶ್ವತ್ಥ ನಾರಾಯಣ - ಡಿಸಿಎಂ ಅಶ್ವತ್ಥನಾರಾಯಣ

ಕರ್ನಾಟಕ ನಮ್ಮ ದೇಶದ ಅತ್ಯಂತ ಪ್ರಗತಿಶೀಲ ರಾಜ್ಯ. ಹೀಗಾಗಿ ಶಿಕ್ಷಣ ನೀತಿ ಜಾರಿಯ ನಂತರ ನಮ್ಮ ರಾಜ್ಯದ ದಿಕ್ಕೇ ಬದಲಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

C. N. Ashwathnarayan
ಡಿಸಿಎಂ ಅಶ್ವತ್ಥನಾರಾಯಣ
author img

By

Published : Aug 24, 2020, 12:39 PM IST

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಬೇಕಿರುವ ಎಲ್ಲಾ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯಾಂಶಗಳು ಮತ್ತು ಜಾರಿ ಬಗ್ಗೆ ಹಮ್ಮಿಕೊಂಡಿದ್ದ ಐದು ದಿನಗಳ ಆನ್‌ಲೈನ್‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಿರ್ದಿಷ್ಟ ಗುರಿ ಹಾಗೂ ಸ್ಪಷ್ಟ ಕಾರ್ಯಸೂಚಿಯ ಮೂಲಕ ಸರ್ಕಾರ ಎಲ್ಲಾ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ಇಡೀ ದೇಶದಲ್ಲೇ ಈ ನೀತಿಯನ್ನು ಮೊದಲಿಗೆ ಜಾರಿ ಮಾಡಿದ ರಾಜ್ಯವಾಗಿ ಕರ್ನಾಟಕ ಹೊರ ಹೊಮ್ಮಲಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಜ್ಯವು ಮೊದಲಿನಿಂದಲೂ ಉತ್ಸುಕತೆ ಹೊಂದಿದೆ. ನೀತಿಯ ಕರಡು ಪ್ರತಿ ಕೈ ಸೇರುತ್ತಿದ್ದಂತೆ ನೀತಿಯ ಜಾರಿಗಾಗಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಲಾಯಿತು. ನೀತಿ ಪ್ರಕಟವಾಗುವುದಕ್ಕೂ ಮೊದಲು, ಪ್ರಕಟವಾದ ನಂತರ ಕಾರ್ಯಪಡೆ ಜತೆ ಹತ್ತು ಹಲವು ಮಹತ್ವದ ಸಭೆಗಳನ್ನು ನಡೆಸಲಾಗಿದೆ ಎಂದರು.‌ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡುವ ಬಗ್ಗೆ ಈಗಾಗಲೇ ಕಾರ್ಯಪಡೆ ಅತ್ಯಮೂಲ್ಯ ಸಲಹೆಗಳನ್ನು ನೀಡಿದೆ. ಇನ್ನು ಅಂತಿಮ ಹಂತದ ಶಿಫಾರಸುಗಳನ್ನಷ್ಟೇ ನೀಡುವುದು ಬಾಕಿ ಇದೆ. ಆ ಶಿಫಾರಸುಗಳು ಬಂದ ಕೂಡಲೇ ಸರ್ಕಾರ ನೀತಿಯ ಜಾರಿಯತ್ತ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಹೆಜ್ಜೆಗಳನ್ನು ಇಡಲಿದೆ. ಇನ್ನೊಂದು ವರ್ಷದ ಅವಧಿಯಲ್ಲಿ ಇಡೀ ನೀತಿಯ ಬಗ್ಗೆ ಎಲ್ಲರಿಗೂ ಮಾಹಿತಿ ನೀಡುವುದು ಹಾಗೂ ಆಂದೋಲನದಂತಹ ಕಾರ್ಯಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಎಲ್ಲರಿಗೂ ಗೊತ್ತಿರುವಂತೆ ಕರ್ನಾಟಕ ನಮ್ಮ ದೇಶದ ಅತ್ಯಂತ ಪ್ರಗತಿಶೀಲ ರಾಜ್ಯ. ಹೀಗಾಗಿ ಶಿಕ್ಷಣ ನೀತಿ ಜಾರಿಯ ನಂತರ ನಮ್ಮ ರಾಜ್ಯದ ದಿಕ್ಕೇ ಬದಲಾಗಲಿದೆ. ಎಲ್ಲಾ ಕ್ಷೇತ್ರಗಳಲ್ಲೂ ಬದಲಾವಣೆಯನ್ನು ಗುರುತರವಾಗಿ ತರಬಲ್ಲ ಈ ನೀತಿಯಿಂದ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶದ ಸ್ವರೂಪವೇ ಬದಲಾಗಲಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಬೋಧನೆ ಸಿಕ್ಕಿ ಇಡೀ ವ್ಯವಸ್ಥೆಯೇ ಸುಧಾರಿಸಲಿದೆ. ಶಿಕ್ಷಣದಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂಬ ಬಲವಾದ ನಂಬಿಕೆ ನನ್ನದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವೂ ಸುಧಾರಿಸುತ್ತದೆ. ಬದಲಾವಣೆಯ ಶಖೆ ಆರಂಭವಾಗಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು. ಯುಜಿಸಿ ಅಧ್ಯಕ್ಷ ಪ್ರೊ. ಡಿ.ಪಿ.ಸಿಂಗ್‌, ಉಪಾಧ್ಯಕ್ಷ ಡಾ. ಭೂಷಣ್‌ ಪಟವರ್ಧನ್‌, ಬೆಂಗಳೂರು ವಿವಿ ಉಪ ಕುಲಪತಿ ಪ್ರೊ. ಕೆ.ಆರ್.‌ವೇಣುಗೋಪಾಲ್‌ ಹಾಜರಿದ್ದರು. ‌ಇನ್ನೂ 5 ದಿನಗಳ ಕಾಲ ಹಲವು ರಾಜ್ಯದ ತಜ್ಞರು ಈ ಕಾರ್ಯಾಗಾರದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಬೇಕಿರುವ ಎಲ್ಲಾ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯಾಂಶಗಳು ಮತ್ತು ಜಾರಿ ಬಗ್ಗೆ ಹಮ್ಮಿಕೊಂಡಿದ್ದ ಐದು ದಿನಗಳ ಆನ್‌ಲೈನ್‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಿರ್ದಿಷ್ಟ ಗುರಿ ಹಾಗೂ ಸ್ಪಷ್ಟ ಕಾರ್ಯಸೂಚಿಯ ಮೂಲಕ ಸರ್ಕಾರ ಎಲ್ಲಾ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ಇಡೀ ದೇಶದಲ್ಲೇ ಈ ನೀತಿಯನ್ನು ಮೊದಲಿಗೆ ಜಾರಿ ಮಾಡಿದ ರಾಜ್ಯವಾಗಿ ಕರ್ನಾಟಕ ಹೊರ ಹೊಮ್ಮಲಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ರಾಜ್ಯವು ಮೊದಲಿನಿಂದಲೂ ಉತ್ಸುಕತೆ ಹೊಂದಿದೆ. ನೀತಿಯ ಕರಡು ಪ್ರತಿ ಕೈ ಸೇರುತ್ತಿದ್ದಂತೆ ನೀತಿಯ ಜಾರಿಗಾಗಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಲಾಯಿತು. ನೀತಿ ಪ್ರಕಟವಾಗುವುದಕ್ಕೂ ಮೊದಲು, ಪ್ರಕಟವಾದ ನಂತರ ಕಾರ್ಯಪಡೆ ಜತೆ ಹತ್ತು ಹಲವು ಮಹತ್ವದ ಸಭೆಗಳನ್ನು ನಡೆಸಲಾಗಿದೆ ಎಂದರು.‌ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡುವ ಬಗ್ಗೆ ಈಗಾಗಲೇ ಕಾರ್ಯಪಡೆ ಅತ್ಯಮೂಲ್ಯ ಸಲಹೆಗಳನ್ನು ನೀಡಿದೆ. ಇನ್ನು ಅಂತಿಮ ಹಂತದ ಶಿಫಾರಸುಗಳನ್ನಷ್ಟೇ ನೀಡುವುದು ಬಾಕಿ ಇದೆ. ಆ ಶಿಫಾರಸುಗಳು ಬಂದ ಕೂಡಲೇ ಸರ್ಕಾರ ನೀತಿಯ ಜಾರಿಯತ್ತ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಹೆಜ್ಜೆಗಳನ್ನು ಇಡಲಿದೆ. ಇನ್ನೊಂದು ವರ್ಷದ ಅವಧಿಯಲ್ಲಿ ಇಡೀ ನೀತಿಯ ಬಗ್ಗೆ ಎಲ್ಲರಿಗೂ ಮಾಹಿತಿ ನೀಡುವುದು ಹಾಗೂ ಆಂದೋಲನದಂತಹ ಕಾರ್ಯಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಎಲ್ಲರಿಗೂ ಗೊತ್ತಿರುವಂತೆ ಕರ್ನಾಟಕ ನಮ್ಮ ದೇಶದ ಅತ್ಯಂತ ಪ್ರಗತಿಶೀಲ ರಾಜ್ಯ. ಹೀಗಾಗಿ ಶಿಕ್ಷಣ ನೀತಿ ಜಾರಿಯ ನಂತರ ನಮ್ಮ ರಾಜ್ಯದ ದಿಕ್ಕೇ ಬದಲಾಗಲಿದೆ. ಎಲ್ಲಾ ಕ್ಷೇತ್ರಗಳಲ್ಲೂ ಬದಲಾವಣೆಯನ್ನು ಗುರುತರವಾಗಿ ತರಬಲ್ಲ ಈ ನೀತಿಯಿಂದ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶದ ಸ್ವರೂಪವೇ ಬದಲಾಗಲಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ಬೋಧನೆ ಸಿಕ್ಕಿ ಇಡೀ ವ್ಯವಸ್ಥೆಯೇ ಸುಧಾರಿಸಲಿದೆ. ಶಿಕ್ಷಣದಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂಬ ಬಲವಾದ ನಂಬಿಕೆ ನನ್ನದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟವೂ ಸುಧಾರಿಸುತ್ತದೆ. ಬದಲಾವಣೆಯ ಶಖೆ ಆರಂಭವಾಗಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು. ಯುಜಿಸಿ ಅಧ್ಯಕ್ಷ ಪ್ರೊ. ಡಿ.ಪಿ.ಸಿಂಗ್‌, ಉಪಾಧ್ಯಕ್ಷ ಡಾ. ಭೂಷಣ್‌ ಪಟವರ್ಧನ್‌, ಬೆಂಗಳೂರು ವಿವಿ ಉಪ ಕುಲಪತಿ ಪ್ರೊ. ಕೆ.ಆರ್.‌ವೇಣುಗೋಪಾಲ್‌ ಹಾಜರಿದ್ದರು. ‌ಇನ್ನೂ 5 ದಿನಗಳ ಕಾಲ ಹಲವು ರಾಜ್ಯದ ತಜ್ಞರು ಈ ಕಾರ್ಯಾಗಾರದಲ್ಲಿ ಭಾಗಿಯಾಗಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.