ETV Bharat / state

ರಾಜ್ಯದಲ್ಲಿ ದೇವಸ್ಥಾನಗಳ ಜಮೀನು ಒತ್ತುವರಿ ವಿರುದ್ಧ ಕಠಿಣ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

author img

By

Published : Dec 17, 2022, 7:50 PM IST

ರಾಜ್ಯದಲ್ಲಿ ದೇವಸ್ಥಾನಗಳ ಜಮೀನು ಒತ್ತುವರಿ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Strict action against land encroachment of temples in the state
ರಾಜ್ಯದಲ್ಲಿ ದೇವಸ್ಥಾನಗಳ ಜಮೀನು ಒತ್ತುವರಿ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ದೇವಸ್ಥಾನಗಳ ಜಮೀನು ಒತ್ತುವರಿ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ಬೆಂಗಳೂರು ನಗರ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ 15 ಎಕರೆ 12 ಗುಂಟೆ ಜಮೀನು ಒತ್ತುವರಿ ತೆರವು ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಇಂದು ನಗರದ ವಿವೇಕನಗರದಲ್ಲಿರುವ ನೀಲಸಂದ್ರ ಗ್ರಾಮದ ಸರ್ವೇ ನಂ 79 ರಲ್ಲಿ 15 ಎಕರೆ 12 ಗುಂಟೆ ಜಮೀನಿನ ಒತ್ತುವರಿ ಬಗ್ಗೆ ಪರಿವೀಕ್ಷಣೆ ನಡೆಸಿ ಮಾತನಾಡಿದ ಜೊಲ್ಲೆ ಬೆಂಗಳೂರು ನಗರದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿಗಳು ಒತ್ತುವರಿ ಆಗಿರುವ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ ಎಂದರು.

ನಂತರ ಮಾತನಾಡಿ 1965 ರಿಂದಲೂ ಈ ಜಮೀನಿನ ಬಗ್ಗೆ ನ್ಯಾಯಾಲಯದಲ್ಲಿ ಸಾಕಷ್ಟು ದಾವೆಗಳು ನಡೆದಿವೆ. ಈ ಎಲ್ಲ ದಾವೆಗಳಲ್ಲೂ ನಮ್ಮ ಪರ ಆದೇಶ ಬಂದಿದೆ. ಆದರೂ ಇದುವರೆಗೂ ದೇವಸ್ಥಾನಕ್ಕೆ ಸೇರಿದ ಜಮೀನನ್ನ ಸರಕಾರ ತನ್ನ ವಶಕ್ಕೆ ತಗೆದುಕೊಳ್ಳಲು ಸಾಧ್ಯವಾಗಿಲ್ಲ. ಈಗ ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ತಗೆದುಕೊಂಡಿದೆ. ಇಂದು ವಿಧಾನಪರಿಷತ್ತಿನ ಸದಸ್ಯ ರವಿಕುಮಾರ್‌ ಅವರ ಜೊತೆಯಲ್ಲಿ ಒತ್ತುವರಿ ಜಮೀನಿನ ಪರಿವೀಕ್ಷಣೆ ನಡೆಸಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಖಾಲಿ ಜಾಗಕ್ಕೆ ಕಾಂಪೌಂಡ್‌: ಎಂ ಮುನಿಸ್ವಾಮಿ ಎಂಬುವವರು ಕಳೆದ ಹಲವಾರು ದಶಕಗಳಿಂದ ಈ ಭೂಮಿಯ ಬಗ್ಗೆ ಹಲವಾರು ನ್ಯಾಯಾಲಯಗಳಲ್ಲಿ ದೂರಗಳನ್ನ ದಾಲಿಸಿದ್ದಾರೆ. ಸುಮಾರು 7 ಬಾರಿ ವಿವಿಧ ನ್ಯಾಯಾಲಯ ಈ ಜಮೀನು ದೇವಸ್ಥಾನಕ್ಕೆ ಸೇರಿದ್ದು ಎಂಬ ಆದೇಶಗಳು ಸಿಕ್ಕಿವೆ.

ಆದರೆ, ಅದರ ಮೇಲೆ ಮತ್ತೆ ಇನ್ನೊಂದು ದಾವೆಯನ್ನ ಹೂಡುವ ಮೂಲಕ ಈ ವಿಷಯವನ್ನು ಮತ್ತಷ್ಟು ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಒಂದು ತಾರ್ಕಿಕ ಅಂತ್ಯ ನೀಡುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದೇ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು, ಪ್ರಸ್ತುತ ಖಾಲಿ ಇರುವ ಜಮೀನಿಗೆ ಕಾಂಪೌಂಡ್‌ ನಿರ್ಮಿಸಲು ಕ್ರಮಗಳನ್ನು ತಗೆದುಕೊಳ್ಳಲಾಗುವುದು ಎಂದರು.

ರಾಜ್ಯಾದ್ಯಂತ ಕಠಿಣ ಕ್ರಮ: ದೇವಸ್ಥಾನಗಳಿಗೆ ಸೇರಿದ ಜಮೀನಿನ ಒತ್ತುವರಿ ಪ್ರಕರಣಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಒತ್ತುವರಿಗಳನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ದೇವಸ್ಥಾನಗಳಿಗೆ ಸೇರಿದ ಜಮೀನುಗಳನ್ನ ಒತ್ತುವರಿ ಪಡಿಸಿಕೊಂಡಿರುವರನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳ ವಿರುದ್ದ ಕ್ರಮ:ಕಳೆದ 30 ವರ್ಷಗಳಿಂದ ಸುಮಾರು 229 ಕಟ್ಟಡಗಳು ನಿರ್ಮಾಣವಾಗಿವೆ. ಈ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಅನಧಿಕೃತವಾಗಿ ಕಟ್ಟಲಾಗಿರುವ ಕಟ್ಟಡಗಳಿಗೆ ಸೌಲಭ್ಯಗಳನ್ನು ನೀಡಿರುವ ಹಾಗೂ ಕಟ್ಟಡಗಳನ್ನು ನಿರ್ಮಾಣಕ್ಕೆ ಅವಕಾಶ ನೀಡಿರುವ ಅಧಿಕಾರಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಲಾಖಾ ಮುಖ್ಯಸ್ಥರುಗಳ ನೇತೃತ್ವದ ಸಮಿತಿ: ಧರ್ಮರಾಯ ಸ್ವಾಮಿ ದೇವಸ್ಥಾನದ ಜಮೀನು ಒತ್ತುವರಿ ತೆರವಿಗೆ ಬಿಬಿಎಂಪಿ, ಬಿಡಬ್ಲೂಎಸ್‌ಎಸ್‌ಬಿ, ಪೊಲೀಸ್‌, ಕಂದಾಯ ಹೀಗೆ ಹಲವಾರು ಇಲಾಖೆಗಳ ಸಮನ್ವಯದ ಅಗತ್ಯತೆ ಇದೆ. ಸಮನ್ವಯಕ್ಕಾಗಿ ಇಲಾಖಾ ಮುಖ್ಯಸ್ಥರುಗಳ ಸಮಿತಿಯನ್ನು ರಚಿಸುವ ಬಗ್ಗೆ ಚಿಂತಿಸಲಾಗುವುದು. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಅಧಿಕಾರಿಗಳ ಮೇಲೆ ಜೊಲ್ಲೆ ಗರಂ: ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ಕಾಂಪೌಂಡ್‌ ನಿರ್ಮಿಸಿ ತಮ್ಮ ಹೆಸರಿನ ಬೋರ್ಡ್‌ ಹಾಕಿರುವುದನ್ನ ಕಂಡು ಸಚಿವರು ಅಧಿಕಾರಿಗಳ ಮೇಲೆ ಗರಂ ಆದರು. ನ್ಯಾಯಾಲಯದ ಆದೇಶ ಇದ್ದರೂ ಇಂತಹ ಬೋರ್ಡ್‌ಗಳ ಅಳವಡಿಕೆಗೆ ಅವಕಾಶ ನೀಡಿರುವುದು ಸರಿಯಲ್ಲ, ಕೂಡಲೇ ಬೋರ್ಡ್‌ಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಿದರು.

ಪರಿವೀಕ್ಷಣೆಯಲ್ಲಿ ವಿಧಾನಪರಿಷತ್‌ ಸದಸ್ಯರಾದ ರವಿಕುಮಾರ್‌, ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಮಾನಸಿಕ ಸಮಸ್ಯೆ ಇಂದಿನ ಸಮಾಜದ ಪ್ರಮುಖ ಆರೋಗ್ಯ ಸಮಸ್ಯೆ ಆಗಿದೆ: ಡಾ ಕೆ ಸುಧಾಕರ್‌

ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ದೇವಸ್ಥಾನಗಳ ಜಮೀನು ಒತ್ತುವರಿ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ಬೆಂಗಳೂರು ನಗರ ತಿಗಳರಪೇಟೆಯಲ್ಲಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ 15 ಎಕರೆ 12 ಗುಂಟೆ ಜಮೀನು ಒತ್ತುವರಿ ತೆರವು ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಇಂದು ನಗರದ ವಿವೇಕನಗರದಲ್ಲಿರುವ ನೀಲಸಂದ್ರ ಗ್ರಾಮದ ಸರ್ವೇ ನಂ 79 ರಲ್ಲಿ 15 ಎಕರೆ 12 ಗುಂಟೆ ಜಮೀನಿನ ಒತ್ತುವರಿ ಬಗ್ಗೆ ಪರಿವೀಕ್ಷಣೆ ನಡೆಸಿ ಮಾತನಾಡಿದ ಜೊಲ್ಲೆ ಬೆಂಗಳೂರು ನಗರದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಶ್ರೀ ಧರ್ಮರಾಯಸ್ವಾಮಿ ದೇವಾಲಯಕ್ಕೆ ಸೇರಿದ ಆಸ್ತಿಗಳು ಒತ್ತುವರಿ ಆಗಿರುವ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ ಎಂದರು.

ನಂತರ ಮಾತನಾಡಿ 1965 ರಿಂದಲೂ ಈ ಜಮೀನಿನ ಬಗ್ಗೆ ನ್ಯಾಯಾಲಯದಲ್ಲಿ ಸಾಕಷ್ಟು ದಾವೆಗಳು ನಡೆದಿವೆ. ಈ ಎಲ್ಲ ದಾವೆಗಳಲ್ಲೂ ನಮ್ಮ ಪರ ಆದೇಶ ಬಂದಿದೆ. ಆದರೂ ಇದುವರೆಗೂ ದೇವಸ್ಥಾನಕ್ಕೆ ಸೇರಿದ ಜಮೀನನ್ನ ಸರಕಾರ ತನ್ನ ವಶಕ್ಕೆ ತಗೆದುಕೊಳ್ಳಲು ಸಾಧ್ಯವಾಗಿಲ್ಲ. ಈಗ ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ತಗೆದುಕೊಂಡಿದೆ. ಇಂದು ವಿಧಾನಪರಿಷತ್ತಿನ ಸದಸ್ಯ ರವಿಕುಮಾರ್‌ ಅವರ ಜೊತೆಯಲ್ಲಿ ಒತ್ತುವರಿ ಜಮೀನಿನ ಪರಿವೀಕ್ಷಣೆ ನಡೆಸಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಖಾಲಿ ಜಾಗಕ್ಕೆ ಕಾಂಪೌಂಡ್‌: ಎಂ ಮುನಿಸ್ವಾಮಿ ಎಂಬುವವರು ಕಳೆದ ಹಲವಾರು ದಶಕಗಳಿಂದ ಈ ಭೂಮಿಯ ಬಗ್ಗೆ ಹಲವಾರು ನ್ಯಾಯಾಲಯಗಳಲ್ಲಿ ದೂರಗಳನ್ನ ದಾಲಿಸಿದ್ದಾರೆ. ಸುಮಾರು 7 ಬಾರಿ ವಿವಿಧ ನ್ಯಾಯಾಲಯ ಈ ಜಮೀನು ದೇವಸ್ಥಾನಕ್ಕೆ ಸೇರಿದ್ದು ಎಂಬ ಆದೇಶಗಳು ಸಿಕ್ಕಿವೆ.

ಆದರೆ, ಅದರ ಮೇಲೆ ಮತ್ತೆ ಇನ್ನೊಂದು ದಾವೆಯನ್ನ ಹೂಡುವ ಮೂಲಕ ಈ ವಿಷಯವನ್ನು ಮತ್ತಷ್ಟು ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಒಂದು ತಾರ್ಕಿಕ ಅಂತ್ಯ ನೀಡುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದೇ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು, ಪ್ರಸ್ತುತ ಖಾಲಿ ಇರುವ ಜಮೀನಿಗೆ ಕಾಂಪೌಂಡ್‌ ನಿರ್ಮಿಸಲು ಕ್ರಮಗಳನ್ನು ತಗೆದುಕೊಳ್ಳಲಾಗುವುದು ಎಂದರು.

ರಾಜ್ಯಾದ್ಯಂತ ಕಠಿಣ ಕ್ರಮ: ದೇವಸ್ಥಾನಗಳಿಗೆ ಸೇರಿದ ಜಮೀನಿನ ಒತ್ತುವರಿ ಪ್ರಕರಣಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ಒತ್ತುವರಿಗಳನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ದೇವಸ್ಥಾನಗಳಿಗೆ ಸೇರಿದ ಜಮೀನುಗಳನ್ನ ಒತ್ತುವರಿ ಪಡಿಸಿಕೊಂಡಿರುವರನ್ನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳ ವಿರುದ್ದ ಕ್ರಮ:ಕಳೆದ 30 ವರ್ಷಗಳಿಂದ ಸುಮಾರು 229 ಕಟ್ಟಡಗಳು ನಿರ್ಮಾಣವಾಗಿವೆ. ಈ ಕಟ್ಟಡಗಳಿಗೆ ವಿದ್ಯುತ್‌, ನೀರು ಸರಬರಾಜು ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಅನಧಿಕೃತವಾಗಿ ಕಟ್ಟಲಾಗಿರುವ ಕಟ್ಟಡಗಳಿಗೆ ಸೌಲಭ್ಯಗಳನ್ನು ನೀಡಿರುವ ಹಾಗೂ ಕಟ್ಟಡಗಳನ್ನು ನಿರ್ಮಾಣಕ್ಕೆ ಅವಕಾಶ ನೀಡಿರುವ ಅಧಿಕಾರಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಲಾಖಾ ಮುಖ್ಯಸ್ಥರುಗಳ ನೇತೃತ್ವದ ಸಮಿತಿ: ಧರ್ಮರಾಯ ಸ್ವಾಮಿ ದೇವಸ್ಥಾನದ ಜಮೀನು ಒತ್ತುವರಿ ತೆರವಿಗೆ ಬಿಬಿಎಂಪಿ, ಬಿಡಬ್ಲೂಎಸ್‌ಎಸ್‌ಬಿ, ಪೊಲೀಸ್‌, ಕಂದಾಯ ಹೀಗೆ ಹಲವಾರು ಇಲಾಖೆಗಳ ಸಮನ್ವಯದ ಅಗತ್ಯತೆ ಇದೆ. ಸಮನ್ವಯಕ್ಕಾಗಿ ಇಲಾಖಾ ಮುಖ್ಯಸ್ಥರುಗಳ ಸಮಿತಿಯನ್ನು ರಚಿಸುವ ಬಗ್ಗೆ ಚಿಂತಿಸಲಾಗುವುದು. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಅಧಿಕಾರಿಗಳ ಮೇಲೆ ಜೊಲ್ಲೆ ಗರಂ: ದೇವಸ್ಥಾನಕ್ಕೆ ಸೇರಿದ ಜಮೀನಿನಲ್ಲಿ ಖಾಸಗಿ ವ್ಯಕ್ತಿಗಳು ಕಾಂಪೌಂಡ್‌ ನಿರ್ಮಿಸಿ ತಮ್ಮ ಹೆಸರಿನ ಬೋರ್ಡ್‌ ಹಾಕಿರುವುದನ್ನ ಕಂಡು ಸಚಿವರು ಅಧಿಕಾರಿಗಳ ಮೇಲೆ ಗರಂ ಆದರು. ನ್ಯಾಯಾಲಯದ ಆದೇಶ ಇದ್ದರೂ ಇಂತಹ ಬೋರ್ಡ್‌ಗಳ ಅಳವಡಿಕೆಗೆ ಅವಕಾಶ ನೀಡಿರುವುದು ಸರಿಯಲ್ಲ, ಕೂಡಲೇ ಬೋರ್ಡ್‌ಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಿದರು.

ಪರಿವೀಕ್ಷಣೆಯಲ್ಲಿ ವಿಧಾನಪರಿಷತ್‌ ಸದಸ್ಯರಾದ ರವಿಕುಮಾರ್‌, ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಮಾನಸಿಕ ಸಮಸ್ಯೆ ಇಂದಿನ ಸಮಾಜದ ಪ್ರಮುಖ ಆರೋಗ್ಯ ಸಮಸ್ಯೆ ಆಗಿದೆ: ಡಾ ಕೆ ಸುಧಾಕರ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.