ETV Bharat / state

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿನಿ: ತಡೆದು ಮನವೊಲಿಸಿದ ಪ್ರಾಂಶುಪಾಲ

author img

By

Published : Mar 9, 2023, 1:20 PM IST

ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಕಟ್ಟುನಿಟ್ಟಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಈಗಾಗಲೇ ತಿಳಿಸಿದ್ದಾರೆ.

Malleshwaram College
ಮಲ್ಲೇಶ್ವರಂ ಕಾಲೇಜು

ಬೆಂಗಳೂರು: ನಗರದ ಮಲ್ಲೇಶ್ವರಂ ಕಾಲೇಜು ಒಂದರಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿನಿಗೆ ಅವಕಾಶ ನಿರಾಕರಿಸಲಾಗಿದ್ದು, ಹಿಜಾಬ್ ತೆಗೆದು ಕೇಂದ್ರದೊಳಗೆ ತೆರಳಿದ ಬಳಿಕವೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ಇಂದಿನಿಂದ ಆರಂಭವಾಗಿರುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ. ಸಮವಸ್ತ್ರ ಸಂಹಿತೆ ಪಾಲನೆಯಾಗಲಿದೆ. ಇದರಿಂದ ವಸ್ತ್ರಸಂಹಿತೆ ಪಾಲನೆ ಆಗದಿದ್ದರೆ ಅಂತಹವರಿಗೆ ಪರೀಕ್ಷೆ ಬರೆಯುವ ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಸೂಚನೆ ನೀಡಿದೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಕೂಡಾ ಇದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದರು. ಯಾವುದೇ ರೀತಿಯಲ್ಲೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬರುವಂತಿಲ್ಲ. ಅಂಥವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗದು. ಪರೀಕ್ಷೆ ಬರೆಯುವ ಆಶಯ ಇದ್ದವರು ಹಿಜಾಬ್ ತೆಗೆದಿಟ್ಟು ಬರುವಂತೆ ಕಟ್ಟುನಿಟ್ಟಾಗಿ ತಿಳಿಸಿದ್ದರು. ಶಿಕ್ಷಣ ಸಂಸ್ಥೆಗಳಿಗೂ ನಿಯಮ ಪಾಲನೆ ಮಾಡುವಂತೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರಂನ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಕೂರಲು ಅವಕಾಶ ನೀಡುವುದಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದರು. ಕಡೆ ಕ್ಷಣದವರೆಗೂ ವಿದ್ಯಾರ್ಥಿನಿ ಹಿಜಾಬ್ ತೆಗೆಯಲು ನಿರಾಕರಿಸುತ್ತಲೇ ಇದ್ದರು. ಪರೀಕ್ಷೆ ಆರಂಭವಾಗುವ ಕೆಲ ನಿಮಿಷ ಮುನ್ನ ಆಕೆಯ ಮನವೊಲಿಸಿ ಹಿಜಾಬ್ ತೆಗೆಸಿ ಪರೀಕ್ಷೆ ಕೇಂದ್ರದೊಳಗೆ ಕಳುಹಿಸಿಕೊಡಲಾಯಿತು. ವಿದ್ಯಾರ್ಥಿನಿ ಸದ್ಯ ಪರೀಕ್ಷೆ ಬರೆಯುತ್ತಿದ್ದು, ಕೇಂದ್ರವೂ ಸೇರಿದಂತೆ ನಗರದ ಯಾವುದೇ ಭಾಗದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ನಿರಾಕರಣೆಗೆ ಒಳಗಾದ ಪ್ರಕರಣ ವರದಿಯಾಗಿಲ್ಲ.

ಸಚಿವರೇ ಮಾಹಿತಿ ನೀಡಿದ್ದರು: ಹೈಕೋರ್ಟ್ ಆದೇಶ ಪಾಲನೆ ಹಾಗೂ ಕಳೆದ ವರ್ಷ ಕೈಗೊಂಡಿರುವ ನಿರ್ಧಾರಕ್ಕೆ ಬದ್ಧವಾಗಿರಲು ತೀರ್ಮಾನಿಸಿರುವ ರಾಜ್ಯ ಸರ್ಕಾರ ಈ ಸಾರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಸೇರಿದಂತೆ ಯಾವುದೇ ಪರೀಕ್ಷೆಗೆ ಬರುವವರಿಗೆ ವಸ್ತ್ರಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಿತ್ತು. ಸ್ವತಃ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಧ್ಯಮಗಳ ಮೂಲಕ ಸ್ಪಷ್ಟೀಕರಣ ನೀಡಿದ್ದು, ಕಳೆದ ವರ್ಷ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಈ ವರ್ಷವೂ ಬದ್ಧವಾಗಿದೆ. ಅಲ್ಲದೇ ವಸ್ತ್ರಸಂಹಿತೆ ವಿಚಾರದಲ್ಲಿ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು, ಅದರ ಪಾಲನೆ ಮಾಡಲಿದ್ದೇವೆ. ಹಿಜಾಬ್ ಧರಿಸಿ ಕೇಂದ್ರದೊಳಗೆ ತೆರಳಲು ಅವಕಾಶ ಇಲ್ಲ ಎಂದಿದ್ದರು.

ರಾಜ್ಯದ ವಿವಿಧ ಜಿಲ್ಲೆಯ ಮುಸಲ್ಮಾನ್ ಸಮುದಾಯದ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಕೋರಿದ್ದರೆ. ಈ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸ್ಪಷ್ಟ ಸೂಚನೆ ರವಾನೆ ಮಾಡಿತ್ತು. ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು.

ಆದರೆ ಪರೀಕ್ಷಾ ಕೇಂದ್ರದ ಒಳಗೆ ಹಿಜಾಬ್ ಧರಿಸಿ ಬರುವುದನ್ನು ಹೈಕೋರ್ಟ್ ಅನುಮತಿಸಿಲ್ಲ. ಅಲ್ಲದೇ ಈ ವಿಚಾರ ಈಗ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆಯಲ್ಲಿದೆ. ಕಾನೂನು ವ್ಯಾಪ್ತಿಯಲ್ಲಿ ವಿಚಾರ ಇರುವಾಗ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ. ಅಲ್ಲದೇ ತೀರ್ಪು ಬರುವವರೆಗೆ ಹಿಂದಿನ ಆದೇಶವೇ ಪಾಲನೆಯಲ್ಲಿ ಇರಲಿದೆ ಎಂದು ಸ್ವತಃ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದರು. ಈ ವಿಚಾರ ಇಟ್ಟುಕೊಂಡು ಭವಿಷ್ಯ ನಿರ್ಧರಿಸುವ ಪರೀಕ್ಷೆಯಿಂದ ವಿದ್ಯಾರ್ಥಿಯರು ದೂರ ಉಳಿಯುವುದಿಲ್ಲ. ಪರೀಕ್ಷೆಗೆ ಹಾಜರಾಗದೇ ಉಳಿಯುವುದಿಲ್ಲ ಎಂಬ ನಂಬಿಕೆ ಇದೆ. ಪಾಲಕರು ಸಹ ತಮ್ಮ ಮಕ್ಕಳನ್ನು ಪರೀಕ್ಷೆ ಕಳುಹಿಸುವ ಕಾರ್ಯ ಮಾಡಬೇಕೆಂದು ಮನವಿ ಮಾಡಿದ್ದರು.

ಹೈಕೋರ್ಟ್‌ ಹೇಳಿದ್ದೇನು?: ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್ ಮಹತ್ವದ ಮಾಹಿತಿ ನೀಡಿತ್ತು. ವಿದ್ಯಾರ್ಥಿಗಳು ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಬೇಕು ಎಂಬ 2022 ಫೆ. 5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಹಂತದಲ್ಲಿದೆ.

ಇದನ್ನೂ ಓದಿ: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ

ಬೆಂಗಳೂರು: ನಗರದ ಮಲ್ಲೇಶ್ವರಂ ಕಾಲೇಜು ಒಂದರಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿನಿಗೆ ಅವಕಾಶ ನಿರಾಕರಿಸಲಾಗಿದ್ದು, ಹಿಜಾಬ್ ತೆಗೆದು ಕೇಂದ್ರದೊಳಗೆ ತೆರಳಿದ ಬಳಿಕವೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ಇಂದಿನಿಂದ ಆರಂಭವಾಗಿರುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ. ಸಮವಸ್ತ್ರ ಸಂಹಿತೆ ಪಾಲನೆಯಾಗಲಿದೆ. ಇದರಿಂದ ವಸ್ತ್ರಸಂಹಿತೆ ಪಾಲನೆ ಆಗದಿದ್ದರೆ ಅಂತಹವರಿಗೆ ಪರೀಕ್ಷೆ ಬರೆಯುವ ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಸೂಚನೆ ನೀಡಿದೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಕೂಡಾ ಇದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದರು. ಯಾವುದೇ ರೀತಿಯಲ್ಲೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬರುವಂತಿಲ್ಲ. ಅಂಥವರಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗದು. ಪರೀಕ್ಷೆ ಬರೆಯುವ ಆಶಯ ಇದ್ದವರು ಹಿಜಾಬ್ ತೆಗೆದಿಟ್ಟು ಬರುವಂತೆ ಕಟ್ಟುನಿಟ್ಟಾಗಿ ತಿಳಿಸಿದ್ದರು. ಶಿಕ್ಷಣ ಸಂಸ್ಥೆಗಳಿಗೂ ನಿಯಮ ಪಾಲನೆ ಮಾಡುವಂತೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರಂನ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಕೂರಲು ಅವಕಾಶ ನೀಡುವುದಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದ್ದರು. ಕಡೆ ಕ್ಷಣದವರೆಗೂ ವಿದ್ಯಾರ್ಥಿನಿ ಹಿಜಾಬ್ ತೆಗೆಯಲು ನಿರಾಕರಿಸುತ್ತಲೇ ಇದ್ದರು. ಪರೀಕ್ಷೆ ಆರಂಭವಾಗುವ ಕೆಲ ನಿಮಿಷ ಮುನ್ನ ಆಕೆಯ ಮನವೊಲಿಸಿ ಹಿಜಾಬ್ ತೆಗೆಸಿ ಪರೀಕ್ಷೆ ಕೇಂದ್ರದೊಳಗೆ ಕಳುಹಿಸಿಕೊಡಲಾಯಿತು. ವಿದ್ಯಾರ್ಥಿನಿ ಸದ್ಯ ಪರೀಕ್ಷೆ ಬರೆಯುತ್ತಿದ್ದು, ಕೇಂದ್ರವೂ ಸೇರಿದಂತೆ ನಗರದ ಯಾವುದೇ ಭಾಗದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ನಿರಾಕರಣೆಗೆ ಒಳಗಾದ ಪ್ರಕರಣ ವರದಿಯಾಗಿಲ್ಲ.

ಸಚಿವರೇ ಮಾಹಿತಿ ನೀಡಿದ್ದರು: ಹೈಕೋರ್ಟ್ ಆದೇಶ ಪಾಲನೆ ಹಾಗೂ ಕಳೆದ ವರ್ಷ ಕೈಗೊಂಡಿರುವ ನಿರ್ಧಾರಕ್ಕೆ ಬದ್ಧವಾಗಿರಲು ತೀರ್ಮಾನಿಸಿರುವ ರಾಜ್ಯ ಸರ್ಕಾರ ಈ ಸಾರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಸೇರಿದಂತೆ ಯಾವುದೇ ಪರೀಕ್ಷೆಗೆ ಬರುವವರಿಗೆ ವಸ್ತ್ರಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಿತ್ತು. ಸ್ವತಃ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಧ್ಯಮಗಳ ಮೂಲಕ ಸ್ಪಷ್ಟೀಕರಣ ನೀಡಿದ್ದು, ಕಳೆದ ವರ್ಷ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಈ ವರ್ಷವೂ ಬದ್ಧವಾಗಿದೆ. ಅಲ್ಲದೇ ವಸ್ತ್ರಸಂಹಿತೆ ವಿಚಾರದಲ್ಲಿ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು, ಅದರ ಪಾಲನೆ ಮಾಡಲಿದ್ದೇವೆ. ಹಿಜಾಬ್ ಧರಿಸಿ ಕೇಂದ್ರದೊಳಗೆ ತೆರಳಲು ಅವಕಾಶ ಇಲ್ಲ ಎಂದಿದ್ದರು.

ರಾಜ್ಯದ ವಿವಿಧ ಜಿಲ್ಲೆಯ ಮುಸಲ್ಮಾನ್ ಸಮುದಾಯದ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಕೋರಿದ್ದರೆ. ಈ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸ್ಪಷ್ಟ ಸೂಚನೆ ರವಾನೆ ಮಾಡಿತ್ತು. ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು.

ಆದರೆ ಪರೀಕ್ಷಾ ಕೇಂದ್ರದ ಒಳಗೆ ಹಿಜಾಬ್ ಧರಿಸಿ ಬರುವುದನ್ನು ಹೈಕೋರ್ಟ್ ಅನುಮತಿಸಿಲ್ಲ. ಅಲ್ಲದೇ ಈ ವಿಚಾರ ಈಗ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆಯಲ್ಲಿದೆ. ಕಾನೂನು ವ್ಯಾಪ್ತಿಯಲ್ಲಿ ವಿಚಾರ ಇರುವಾಗ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ. ಅಲ್ಲದೇ ತೀರ್ಪು ಬರುವವರೆಗೆ ಹಿಂದಿನ ಆದೇಶವೇ ಪಾಲನೆಯಲ್ಲಿ ಇರಲಿದೆ ಎಂದು ಸ್ವತಃ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದರು. ಈ ವಿಚಾರ ಇಟ್ಟುಕೊಂಡು ಭವಿಷ್ಯ ನಿರ್ಧರಿಸುವ ಪರೀಕ್ಷೆಯಿಂದ ವಿದ್ಯಾರ್ಥಿಯರು ದೂರ ಉಳಿಯುವುದಿಲ್ಲ. ಪರೀಕ್ಷೆಗೆ ಹಾಜರಾಗದೇ ಉಳಿಯುವುದಿಲ್ಲ ಎಂಬ ನಂಬಿಕೆ ಇದೆ. ಪಾಲಕರು ಸಹ ತಮ್ಮ ಮಕ್ಕಳನ್ನು ಪರೀಕ್ಷೆ ಕಳುಹಿಸುವ ಕಾರ್ಯ ಮಾಡಬೇಕೆಂದು ಮನವಿ ಮಾಡಿದ್ದರು.

ಹೈಕೋರ್ಟ್‌ ಹೇಳಿದ್ದೇನು?: ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್ ಮಹತ್ವದ ಮಾಹಿತಿ ನೀಡಿತ್ತು. ವಿದ್ಯಾರ್ಥಿಗಳು ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಬೇಕು ಎಂಬ 2022 ಫೆ. 5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಹಂತದಲ್ಲಿದೆ.

ಇದನ್ನೂ ಓದಿ: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.