ETV Bharat / state

ಕೇಂದ್ರ ಬಜೆಟ್​ನಲ್ಲಿ ಸಬ್ ಅರ್ಬನ್, ಮೆಟ್ರೋ ರೈಲಿಗೆ ಹೆಚ್ಚಿನ ಅನುದಾನ ನಿರೀಕ್ಷೆ: ಮೇಯರ್

author img

By

Published : Jul 4, 2019, 8:51 PM IST

ಬಹುನಿರೀಕ್ಷಿತ ಕೇಂದ್ರ ಬಜೆಟ್ ಕುರಿತು ಬೆಂಗಳೂರು ಮೇಯರ್ ಗಂಗಾಂಬಿಕೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದು, ಸಿಲಿಕಾನ್​ ಸಿಟಿಗೆ ಈ ಸಲದ ಬಜೆಟ್​ನಲ್ಲಿ ಅತಿಹೆಚ್ಚು ಅನುದಾನ ಸಿಗುವ ಸಾಧ್ಯತೆ ಇದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೇಯರ್ ಗಂಗಾಂಬಿಕೆ

ಬೆಂಗಳೂರು: ನಾಳೆ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿದೆ. ರಾಜ್ಯ ಸರ್ಕಾರ ಸೇರಿದಂತೆ ಬಿಬಿಎಂಪಿಗೂ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಈ ಬಗ್ಗೆ ಮೇಯರ್ ಗಂಗಾಂಬಿಕೆಯವರು ಮಾತನಾಡಿದ್ದು, ನಗರಕ್ಕೆ ಸಬ್ ಅರ್ಬನ್ ರೈಲು ಪ್ರಾರಂಭಿಸಲು ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೇಯರ್ ಗಂಗಾಂಬಿಕೆ

ನಗರದ ಜನಸಂಖ್ಯೆ ಒಂದು ಕೋಟಿ ಮೂವತ್ತು ಲಕ್ಷಕ್ಕೆ ಏರಿಕೆಯಾಗಿದೆ. ಹೀಗಾಗಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನಬೇಕು. ನಗರದ ಅಭಿವೃದ್ಧಿಗಾಗಿ 15ನೇ ಹಣಕಾಸು ಆಯೋಗದಿಂದ 10 ಸಾವಿರ ಕೋಟಿ ರೂ. ಬೇಡಿಕೆ ಇಡಲಾಗಿದೆ. ಬೆಂಗಳೂರಿಗಾಗಿ ಇಷ್ಟು ಅನುದಾನ ಮೀಸಲಿಡುತ್ತಾರೆಂಬ ನಂಬಿಕೆ ಇದೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.

ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಬೇಕಾಗಿದ್ದು, ಮೆಟ್ರೋ ರೈಲಿನ ಸಂಪರ್ಕವನ್ನು ಇನ್ನೂ ವಿಸ್ತಾರ ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ನಗರದ ಎಲ್ಲಾ ಕಡೆ ಮೆಟ್ರೋ ಸಂಪರ್ಕ ನೀಡಬೇಕಾಗಿದ್ದು, ಕಾಮಗಾರಿಗೆ ಕೇಂದ್ರ ಸರ್ಕಾರದ ಅನುದಾನದ ಅಗತ್ಯವಿದೆ ಎಂದಿದ್ದಾರೆ.

ಬೆಂಗಳೂರು: ನಾಳೆ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿದೆ. ರಾಜ್ಯ ಸರ್ಕಾರ ಸೇರಿದಂತೆ ಬಿಬಿಎಂಪಿಗೂ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಈ ಬಗ್ಗೆ ಮೇಯರ್ ಗಂಗಾಂಬಿಕೆಯವರು ಮಾತನಾಡಿದ್ದು, ನಗರಕ್ಕೆ ಸಬ್ ಅರ್ಬನ್ ರೈಲು ಪ್ರಾರಂಭಿಸಲು ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೇಯರ್ ಗಂಗಾಂಬಿಕೆ

ನಗರದ ಜನಸಂಖ್ಯೆ ಒಂದು ಕೋಟಿ ಮೂವತ್ತು ಲಕ್ಷಕ್ಕೆ ಏರಿಕೆಯಾಗಿದೆ. ಹೀಗಾಗಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನಬೇಕು. ನಗರದ ಅಭಿವೃದ್ಧಿಗಾಗಿ 15ನೇ ಹಣಕಾಸು ಆಯೋಗದಿಂದ 10 ಸಾವಿರ ಕೋಟಿ ರೂ. ಬೇಡಿಕೆ ಇಡಲಾಗಿದೆ. ಬೆಂಗಳೂರಿಗಾಗಿ ಇಷ್ಟು ಅನುದಾನ ಮೀಸಲಿಡುತ್ತಾರೆಂಬ ನಂಬಿಕೆ ಇದೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.

ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಬೇಕಾಗಿದ್ದು, ಮೆಟ್ರೋ ರೈಲಿನ ಸಂಪರ್ಕವನ್ನು ಇನ್ನೂ ವಿಸ್ತಾರ ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ನಗರದ ಎಲ್ಲಾ ಕಡೆ ಮೆಟ್ರೋ ಸಂಪರ್ಕ ನೀಡಬೇಕಾಗಿದ್ದು, ಕಾಮಗಾರಿಗೆ ಕೇಂದ್ರ ಸರ್ಕಾರದ ಅನುದಾನದ ಅಗತ್ಯವಿದೆ ಎಂದಿದ್ದಾರೆ.

Intro:ಕೇಂದ್ರ ಬಜೆಟ್ ನಲ್ಲಿ ನಗರಕ್ಕೆ ಸಬ್ ಅರ್ಬನ್ ರೈಲು, ಮೆಟ್ರೋ ರೈಲಿಗೆ ಅನುದಾನದ ನಿರೀಕ್ಷೆಯಿದೆ- ಮೇಯರ್ ಗಂಗಾಂಬಿಕೆ
ಬೆಂಗಳೂರು- ನಾಳೆ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಬಜೆಟ್ ಮಂಡನೆಯಾಗಲಿದೆ. ರಾಜ್ಯ ಸರ್ಕಾರ ಸೇರಿದಂತೆ ಬಿಬಿಎಂಪಿಗೂ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಈ ಬಗ್ಗೆ ಮೇಯರ್ ಗಂಗಾಂಬಿಜೆಯವರನ್ನು ಕೇಳಿದ್ರೆ, ನಗರಕ್ಕೆ ಸಬ್ ಅರ್ಬನ್ ರೈಲಿಗಳನ್ನು ಆರಂಭಿಸಲು ಅನುದಾನ ಸಿಗುವ ನಿರೀಕ್ಷೆಯಿದೆ ಎಂದಿದ್ದಾರೆ.
ನಗರದ ಜನಸಂಖ್ಯೆ ಒಂದು ಕೋಟಿ ಮೂವತ್ತು ಲಕ್ಷಕ್ಕೆ ಏರಿದೆ. ಹೀಗಾಗಿ ನಗರದ ಮೂಲಸೌಕರ್ಯ ಅಭಿವೃದ್ಧಿ ಗೆ ಹೆಚ್ಚಿನ ಅನುದಾನ ಬೇಕು. ನಗರದ ಅಭಿವೃದ್ಧಿಗಾಗಿ ಹದಿನೈದನೇ ಹಣಕಾಸು ಆಯೋಗದಿಂದ ಹತ್ತು ಸಾವಿರ ಕೋಟಿ ರುಪಾಯಿ ಬೇಡಿಕೆ ಇಡಲಾಗಿದೆ. ಬೆಂಗಳೂರಿಗಾಗಿ ಇಷ್ಟು ಅನುದಾನ ಮೀಸಲಿಡುತ್ತಾರೆ ಎಂಬ ನಂಬಿಕೆ ಇದೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.
ನಗರದ ಟ್ರಾಫಿಕ್ ಜಾಂ ಸಮಸ್ಯೆಗೆ ಪರಿಹಾರ ಸಿಗಬೇಕು ಎಂದರು. ಮೆಟ್ರೋ ರೈಲಿನ ಸಂಪರ್ಕವನ್ನು ಇನ್ನೂ ಹೆಚ್ಚು ನೀಡಬೇಕಿದೆ. ನಗರದ ಎಲ್ಲಾ ಕಡೆ ಮೆಟ್ರೋ ಸಂಪರ್ಕ ನೀಡಬೇಕಂದ್ರೆ ಕಾಮಗಾರಿಗೆ ಕೇಂದ್ರ ಸರ್ಕಾರದ ಅನುದಾನದ ಅಗತ್ಯವಿದೆ ಎಂದರು.

ಸೌಮ್ಯಶ್ರೀ


Know_Bng_02_budget_bbmp_expectations_7202707Body:..Conclusion:..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.