ETV Bharat / state

ಕಬ್ಬು ಬೆಳೆಗಾರರ ಸಭೆಗೆ ಕೋಡಿಹಳ್ಳಿ ಚಂದ್ರಶೇಖರ್ ಬಂದಿದ್ದಕ್ಕೆ ರೈತರ ಆಕ್ಷೇಪ.. ಸಚಿವರ ಸಮ್ಮುಖವೇ ಜಟಾಪಟಿ

author img

By

Published : Oct 15, 2022, 2:20 PM IST

ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಭೆ. ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಉಪಸ್ಥಿತಿಗೆ ರೈತರ ಆಕ್ಷೇಪ. ಸಚಿವರ ಸಮ್ಮುಖ ರೈತರ ಮಧ್ಯೆ ಜಟಾಪಟಿ.

sugarcane farmers meeting
ಕೋಡಿಹಳ್ಳಿ ಚಂದ್ರಶೇಖರ್ ಉಪಸ್ಥಿತಿಗೆ ರೈತರ ಆಕ್ಷೇಪ

ಬೆಂಗಳೂರು: ಕಬ್ಬು ಬೆಲೆ ನಿಗದಿ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಉಪಸ್ಥಿತಿಗೆ ಕೆಲ ರೈತರು ಆಕ್ಷೇಪ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರೊಂದಿಗೆ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರೈತರ ಮಧ್ಯೆ ಕೆಲ ಹೊತ್ತು ಜಟಾಪಟಿ ನಡೆಯಿತು.‌ ಸಭೆ ನಡೆಯುವ ಮುನ್ನ ರೈತ ವಿಜಯ್ ಕುಮಾರ್ ಎಂಬವರು ಕೋಡಿಹಳ್ಳಿ ಚಂದ್ರಶೇಖರ್ ಸಭೆಯಲ್ಲಿ ಹಾಜರಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಉಪಸ್ಥಿತಿಗೆ ರೈತರ ಆಕ್ಷೇಪ

ಸಭಾ ಸೂಚನೆಯಲ್ಲಿ ಕೋಡಿಹಳ್ಳಿ ಹೆಸರಿಲ್ಲ. ಅದರೂ ಸಭೆಯಲ್ಲಿ ಕೋಡಿಹಳ್ಳಿ ಪಾಲ್ಗೊಂಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಾಕಷ್ಟು ಆರೋಪ‌ ಇದೆ. ಸಾರ್ವಜನಿಕ ವಲಯದಲ್ಲಿ ಅವರ ಮೇಲೆ ಆರೋಪ ಕೇಳಿ ಬಂದಿದೆ. ಅವರ ಸಮ್ಮುಖದಲ್ಲಿ ಚರ್ಚೆ ನಡೆಯುವುದ ಉಚಿತವಲ್ಲ. ಅವರ ಉಪಸ್ಥಿತಿಯಲ್ಲಿ ಸಭೆ ನಡೆಸುವುದು ಬೇಡ ಎಂದು ಸಚಿವರಲ್ಲಿ ಒತ್ತಾಯ ಮಾಡಿದರು.

ಈ ವೇಳೆ ಸಚಿವರು ಸದ್ಯ ಸಭೆಯಲ್ಲಿ ಯಾವುದೇ ಗೊಂದಲ ಆಗುವುದು ಬೇಡ. ಸಭೆ ನಡೆಸೋಣ. ಎಲ್ಲರೂ ಕೂಡಿ ಚರ್ಚೆ ಮಾಡೋಣ ಎಂದು ರೈತರಲ್ಲಿ ಮನವಿ ಮಾಡಿದರು. ಆದರೆ, ರೈತರು ತಮ್ಮ ಪಟ್ಟು ಬಿಡದೆ, ಅವರ ಉಪಸ್ಥಿತಿಯಲ್ಲಿ ಸಭೆ ನಡೆಸುವುದು ಸಮಂಜಸವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸಭೆಯಲ್ಲಿ ಇದ್ದ ಕೆಲವರು ಬೆಂಬಲ ಸೂಚಿಸಿದರೆ ಕೋಡಿಹಳ್ಳಿ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದರು.

ನಾವು ರೈತ ಪರವಾಗಿದ್ದೇವೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆರೋಪ ಇದೆ. ಆರೋಪ ಇಲ್ಲದೇ ಇದ್ದರೆ ನಾವು ಅವರನ್ನು ಒಪ್ಪಿಕೊಳ್ಳುತ್ತಿದ್ದೆವು. ಈ ನಿಟ್ಟಿನಲ್ಲಿ ಸಭೆಯಲ್ಲಿ ಅವರು ಭಾಗಿಯಾಗುವುದು ಸರಿಯಲ್ಲ ಎಂದರು ಅಸಮಾಧಾನ ಹೊರ ಹಾಕಿದರು.

ಆರೋಪ ಸಾಬೀತಾದರೆ ಶಿಕ್ಷೆಯಾಗಲಿ: ಇದೇ ವೇಳೆ ಮಧ್ಯಪ್ರವೇಶ ಮಾಡಿದ ಕೋಡಿಹಳ್ಳಿ ಚಂದ್ರಶೇಖರ್, ಆರೋಪ ಯಾರು ಬೇಕಾದರೂ ಮಾಡಬಹುದು. ನನ್ನ ವಿರುದ್ಧರ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ. ಆರೋಪ ಬಂದಿದೆ ಎಂಬ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಈ ರೀತಿಯಲ್ಲಿ ಸಭೆಯಲ್ಲಿ ಮಾತನಾಡಬಾರದು. ನಾನು ಅಪರಾಧಿ ಎಂದು ಸರ್ಕಾರ ಘೋಷಣೆ ಮಾಡಿದರೆ ಶಿಕ್ಷೆಗೆ ಸಿದ್ದ. ಅದರ ಬದಲಾಗಿ ವೈಯಕ್ತಿಕ ಭಿನ್ನಾಭಿಪ್ರಾಯವನ್ನು ಸಭೆಯಲ್ಲಿ ತರುವುದು ಸೂಕ್ತ ಅಲ್ಲ ಎಂದರು.

ಎರಡು ಗುಂಪುಗಳ ಮಧ್ಯೆ ಘರ್ಷಣೆ: ಈ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರು ಮತ್ತು ಇತರ ರೈತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಆರೋಪ‌ ಬಂದ ತಕ್ಷಣ ಅವರು ಅಪರಾಧಿ ಆಗಲ್ಲ.‌ ಅವರನ್ನು ಸಭೆಯಿಂದ ಹೊರ ಹೋಗಲು ಹೇಳುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಗೊಂದಲದ ಮಧ್ಯೆ ಮಾತನಾಡಿದ ಸಚಿವ ಶಂಕರ್ ಪಾಟೀಲ್, ಸಭೆಯಲ್ಲಿ ಗೊಂದಲ ಆಗುವುದು ಬೇಡ. ನಾವು ನಿಗದಿಪಡಿಸಿದ ವಿಚಾರ ಚರ್ಚೆ ಮಾಡೋಣ ಎಂದು ಎಲ್ಲರಲ್ಲಿ ವಿನಂತಿ ಮಾಡಿದರು.

ಸಭೆಯಲ್ಲಿ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್​, ಸುನೀತಾ ಪುಟ್ಟಣ್ಣಯ್ಯ ಸೇರಿದಂತೆ ಬೇರೆ ಬೇರೆ ರೈತ ಮುಖಂಡರು ಭಾಗಿಯಾಗಿದ್ದಾರೆ. ಸಭೆಯಲ್ಲಿ ವಿವಿಧ ಕಾರ್ಖಾನೆಗಳ ಮಾಲೀಕರು ಸಹ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ದ್ವಿಪಕ್ಷೀಯ ಒಪ್ಪಂದ

ಬೆಂಗಳೂರು: ಕಬ್ಬು ಬೆಲೆ ನಿಗದಿ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಉಪಸ್ಥಿತಿಗೆ ಕೆಲ ರೈತರು ಆಕ್ಷೇಪ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರೊಂದಿಗೆ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರೈತರ ಮಧ್ಯೆ ಕೆಲ ಹೊತ್ತು ಜಟಾಪಟಿ ನಡೆಯಿತು.‌ ಸಭೆ ನಡೆಯುವ ಮುನ್ನ ರೈತ ವಿಜಯ್ ಕುಮಾರ್ ಎಂಬವರು ಕೋಡಿಹಳ್ಳಿ ಚಂದ್ರಶೇಖರ್ ಸಭೆಯಲ್ಲಿ ಹಾಜರಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಉಪಸ್ಥಿತಿಗೆ ರೈತರ ಆಕ್ಷೇಪ

ಸಭಾ ಸೂಚನೆಯಲ್ಲಿ ಕೋಡಿಹಳ್ಳಿ ಹೆಸರಿಲ್ಲ. ಅದರೂ ಸಭೆಯಲ್ಲಿ ಕೋಡಿಹಳ್ಳಿ ಪಾಲ್ಗೊಂಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಾಕಷ್ಟು ಆರೋಪ‌ ಇದೆ. ಸಾರ್ವಜನಿಕ ವಲಯದಲ್ಲಿ ಅವರ ಮೇಲೆ ಆರೋಪ ಕೇಳಿ ಬಂದಿದೆ. ಅವರ ಸಮ್ಮುಖದಲ್ಲಿ ಚರ್ಚೆ ನಡೆಯುವುದ ಉಚಿತವಲ್ಲ. ಅವರ ಉಪಸ್ಥಿತಿಯಲ್ಲಿ ಸಭೆ ನಡೆಸುವುದು ಬೇಡ ಎಂದು ಸಚಿವರಲ್ಲಿ ಒತ್ತಾಯ ಮಾಡಿದರು.

ಈ ವೇಳೆ ಸಚಿವರು ಸದ್ಯ ಸಭೆಯಲ್ಲಿ ಯಾವುದೇ ಗೊಂದಲ ಆಗುವುದು ಬೇಡ. ಸಭೆ ನಡೆಸೋಣ. ಎಲ್ಲರೂ ಕೂಡಿ ಚರ್ಚೆ ಮಾಡೋಣ ಎಂದು ರೈತರಲ್ಲಿ ಮನವಿ ಮಾಡಿದರು. ಆದರೆ, ರೈತರು ತಮ್ಮ ಪಟ್ಟು ಬಿಡದೆ, ಅವರ ಉಪಸ್ಥಿತಿಯಲ್ಲಿ ಸಭೆ ನಡೆಸುವುದು ಸಮಂಜಸವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಸಭೆಯಲ್ಲಿ ಇದ್ದ ಕೆಲವರು ಬೆಂಬಲ ಸೂಚಿಸಿದರೆ ಕೋಡಿಹಳ್ಳಿ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದರು.

ನಾವು ರೈತ ಪರವಾಗಿದ್ದೇವೆ. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆರೋಪ ಇದೆ. ಆರೋಪ ಇಲ್ಲದೇ ಇದ್ದರೆ ನಾವು ಅವರನ್ನು ಒಪ್ಪಿಕೊಳ್ಳುತ್ತಿದ್ದೆವು. ಈ ನಿಟ್ಟಿನಲ್ಲಿ ಸಭೆಯಲ್ಲಿ ಅವರು ಭಾಗಿಯಾಗುವುದು ಸರಿಯಲ್ಲ ಎಂದರು ಅಸಮಾಧಾನ ಹೊರ ಹಾಕಿದರು.

ಆರೋಪ ಸಾಬೀತಾದರೆ ಶಿಕ್ಷೆಯಾಗಲಿ: ಇದೇ ವೇಳೆ ಮಧ್ಯಪ್ರವೇಶ ಮಾಡಿದ ಕೋಡಿಹಳ್ಳಿ ಚಂದ್ರಶೇಖರ್, ಆರೋಪ ಯಾರು ಬೇಕಾದರೂ ಮಾಡಬಹುದು. ನನ್ನ ವಿರುದ್ಧರ ಆರೋಪ ಸಾಬೀತಾದರೆ ಶಿಕ್ಷೆ ಆಗಲಿ. ಆರೋಪ ಬಂದಿದೆ ಎಂಬ ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಈ ರೀತಿಯಲ್ಲಿ ಸಭೆಯಲ್ಲಿ ಮಾತನಾಡಬಾರದು. ನಾನು ಅಪರಾಧಿ ಎಂದು ಸರ್ಕಾರ ಘೋಷಣೆ ಮಾಡಿದರೆ ಶಿಕ್ಷೆಗೆ ಸಿದ್ದ. ಅದರ ಬದಲಾಗಿ ವೈಯಕ್ತಿಕ ಭಿನ್ನಾಭಿಪ್ರಾಯವನ್ನು ಸಭೆಯಲ್ಲಿ ತರುವುದು ಸೂಕ್ತ ಅಲ್ಲ ಎಂದರು.

ಎರಡು ಗುಂಪುಗಳ ಮಧ್ಯೆ ಘರ್ಷಣೆ: ಈ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರು ಮತ್ತು ಇತರ ರೈತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಆರೋಪ‌ ಬಂದ ತಕ್ಷಣ ಅವರು ಅಪರಾಧಿ ಆಗಲ್ಲ.‌ ಅವರನ್ನು ಸಭೆಯಿಂದ ಹೊರ ಹೋಗಲು ಹೇಳುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಗೊಂದಲದ ಮಧ್ಯೆ ಮಾತನಾಡಿದ ಸಚಿವ ಶಂಕರ್ ಪಾಟೀಲ್, ಸಭೆಯಲ್ಲಿ ಗೊಂದಲ ಆಗುವುದು ಬೇಡ. ನಾವು ನಿಗದಿಪಡಿಸಿದ ವಿಚಾರ ಚರ್ಚೆ ಮಾಡೋಣ ಎಂದು ಎಲ್ಲರಲ್ಲಿ ವಿನಂತಿ ಮಾಡಿದರು.

ಸಭೆಯಲ್ಲಿ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್​, ಸುನೀತಾ ಪುಟ್ಟಣ್ಣಯ್ಯ ಸೇರಿದಂತೆ ಬೇರೆ ಬೇರೆ ರೈತ ಮುಖಂಡರು ಭಾಗಿಯಾಗಿದ್ದಾರೆ. ಸಭೆಯಲ್ಲಿ ವಿವಿಧ ಕಾರ್ಖಾನೆಗಳ ಮಾಲೀಕರು ಸಹ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ದ್ವಿಪಕ್ಷೀಯ ಒಪ್ಪಂದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.