ETV Bharat / state

ಕಲಿಕೆಯಲ್ಲಿ ಬಾಲಕನ ತಪ್ಪು ಪದೋಚ್ಚಾರ: ಶಿಕ್ಷಕನ 'ಪಕ್ಕೆಲುಬಿ'ಗೆ ಬಂತು ಸಂಚಕಾರ - ಶಿಕ್ಷಕನ ವಿರುದ್ಧ ಕ್ರಮಕ್ಕೆ ಸಚಿವಸುರೇಶ್ ಕುಮಾರ್ ಸೂಚನೆ

ಸರ್ಕಾರಿ ಶಾಲೆಯ ಬಾಲಕನಿಗೆ 'ಪಕ್ಕೆಲುಬು' ಎಂಬ ಪದ ಹೇಳಲು ಬಾರದೆ ತೊದಲುವ ವಿಡಿಯೋ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಶಿಕ್ಷಕನ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
ಶಿಕ್ಷಕನ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
author img

By

Published : Jan 9, 2020, 11:41 PM IST

ಅಥಣಿ(ಬೆಳಗಾವಿ): ಸರ್ಕಾರಿ ಶಾಲೆಯ ಬಾಲಕನೊಬ್ಬ 'ಪಕ್ಕೆಲುಬು' ಎಂಬ ಪದ ಹೇಳಲು ಬಾರದೆ ತೊದಲುವ ವಿಡಿಯೋ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಶಾಲೆಯಲ್ಲಿ ಶಿಕ್ಷಕರೊಬ್ಬರು ಮಗುವಿಗೆ ಪಕ್ಕೆಲುಬು ಪದವನ್ನು ಉಚ್ಛಾರ ಮಾಡುವಂತೆ ಹೇಳುತ್ತಾರೆ. ಆದರೆ ಆ ಬಾಲಕ ಎಷ್ಟೇ ಪ್ರಯತ್ನಪಟ್ಟರೂ ಪಕ್ಕೆಲುಬು ಪದವನ್ನು ಉಚ್ಚರಿಸಲು ಸಾಧ್ಯವಾಗುವುದಿಲ್ಲ. ಆದ್ರೆ ಶಿಕ್ಷಕ, ವಿದ್ಯಾರ್ಥಿಯನ್ನು ಬೆದರಿಸಿ ಪಕ್ಕೆಲುಬು ಪದ ಉಚ್ಚಾರಣೆ ಮಾಡುವಂತೆ ಬಲವಂತ ಮಾಡುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವ ಎಸ್. ಸುರೇಶ್ ಕುಮಾರ್ ಸುತ್ತೋಲೆ ಹೊರಡಿಸಲಾಗಿದೆ.

ವೈರಲ್ ಆದ ವಿಡಿಯೋ

ಈ ವಿಡಿಯೋ ನೋಡಿರುವ ಸಚಿವ ಸುರೇಶ್ ಕುಮಾರ್, ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ಮಕ್ಕಳಿಗೆ ಶಿಕ್ಷಕರು ಸರಿಯಾಗಿ ಉಚ್ಛಾರ ಮಾಡುವುದನ್ನು ಕಲಿಸಬೇಕು. ಆದರೆ ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಅಪರಾಧ. ತಕ್ಷಣ ಮೇಲ್ಕಂಡ ಕೃತ್ಯ ಯಾವ ಶಾಲೆಯಲ್ಲಿ ನಡೆದಿದೆ ಮತ್ತು ಯಾವ ಶಿಕ್ಷಕರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹರಿಬಿಟ್ಟಿದ್ದಾರೆ ಎಂಬುದನ್ನು ಪತ್ತೆ ಮಾಡಿ, ಈ ಬಗ್ಗೆ ಸೈಬರ್ ಕ್ರೈಮ್ ಗೆ ದೂರು ನೀಡಬೇಕು. ಹಾಗೂ ಆ ಶಿಕ್ಷಕರು, ಶಾಲಾ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಸೂಚನೆ ನೀಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಸುರೇಶ್ ಕುಮಾರ್ ಸೂಚನೆ ಪತ್ರ
ಸಚಿವ ಸುರೇಶ್ ಕುಮಾರ್ ಸೂಚನೆ ಪತ್ರ

ಜೊತೆಗೆ ಮಕ್ಕಳ ಬಗ್ಗೆ ಶಿಕ್ಷಕರು ವ್ಯಂಗ್ಯವಾಗಿ ತೋರಿಸುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಂತ ಕೃತ್ಯಕ್ಕೆ ಮುಂದಾದರೆ ಅಂತಹ ಶಿಕ್ಷಕರು, ಶಾಲಾ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಶಿಕ್ಷಣ ಸಚಿವರು ನೀಡಿದ್ದಾರೆ.

ಅಥಣಿ(ಬೆಳಗಾವಿ): ಸರ್ಕಾರಿ ಶಾಲೆಯ ಬಾಲಕನೊಬ್ಬ 'ಪಕ್ಕೆಲುಬು' ಎಂಬ ಪದ ಹೇಳಲು ಬಾರದೆ ತೊದಲುವ ವಿಡಿಯೋ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಶಾಲೆಯಲ್ಲಿ ಶಿಕ್ಷಕರೊಬ್ಬರು ಮಗುವಿಗೆ ಪಕ್ಕೆಲುಬು ಪದವನ್ನು ಉಚ್ಛಾರ ಮಾಡುವಂತೆ ಹೇಳುತ್ತಾರೆ. ಆದರೆ ಆ ಬಾಲಕ ಎಷ್ಟೇ ಪ್ರಯತ್ನಪಟ್ಟರೂ ಪಕ್ಕೆಲುಬು ಪದವನ್ನು ಉಚ್ಚರಿಸಲು ಸಾಧ್ಯವಾಗುವುದಿಲ್ಲ. ಆದ್ರೆ ಶಿಕ್ಷಕ, ವಿದ್ಯಾರ್ಥಿಯನ್ನು ಬೆದರಿಸಿ ಪಕ್ಕೆಲುಬು ಪದ ಉಚ್ಚಾರಣೆ ಮಾಡುವಂತೆ ಬಲವಂತ ಮಾಡುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವ ಎಸ್. ಸುರೇಶ್ ಕುಮಾರ್ ಸುತ್ತೋಲೆ ಹೊರಡಿಸಲಾಗಿದೆ.

ವೈರಲ್ ಆದ ವಿಡಿಯೋ

ಈ ವಿಡಿಯೋ ನೋಡಿರುವ ಸಚಿವ ಸುರೇಶ್ ಕುಮಾರ್, ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜ. ಮಕ್ಕಳಿಗೆ ಶಿಕ್ಷಕರು ಸರಿಯಾಗಿ ಉಚ್ಛಾರ ಮಾಡುವುದನ್ನು ಕಲಿಸಬೇಕು. ಆದರೆ ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಅಪರಾಧ. ತಕ್ಷಣ ಮೇಲ್ಕಂಡ ಕೃತ್ಯ ಯಾವ ಶಾಲೆಯಲ್ಲಿ ನಡೆದಿದೆ ಮತ್ತು ಯಾವ ಶಿಕ್ಷಕರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹರಿಬಿಟ್ಟಿದ್ದಾರೆ ಎಂಬುದನ್ನು ಪತ್ತೆ ಮಾಡಿ, ಈ ಬಗ್ಗೆ ಸೈಬರ್ ಕ್ರೈಮ್ ಗೆ ದೂರು ನೀಡಬೇಕು. ಹಾಗೂ ಆ ಶಿಕ್ಷಕರು, ಶಾಲಾ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಎಂದು ಸೂಚನೆ ನೀಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಸುರೇಶ್ ಕುಮಾರ್ ಸೂಚನೆ ಪತ್ರ
ಸಚಿವ ಸುರೇಶ್ ಕುಮಾರ್ ಸೂಚನೆ ಪತ್ರ

ಜೊತೆಗೆ ಮಕ್ಕಳ ಬಗ್ಗೆ ಶಿಕ್ಷಕರು ವ್ಯಂಗ್ಯವಾಗಿ ತೋರಿಸುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಂತ ಕೃತ್ಯಕ್ಕೆ ಮುಂದಾದರೆ ಅಂತಹ ಶಿಕ್ಷಕರು, ಶಾಲಾ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಶಿಕ್ಷಣ ಸಚಿವರು ನೀಡಿದ್ದಾರೆ.

Intro:ಶಾಲೆಯಲ್ಲಿ ಮಗುವಿಗೊಂದು ಶಿಕ್ಷಕರೊಬ್ಬರು ಹೇಳಿಕೊಡುತ್ತಿರುವ 'ಪಕ್ಕೆಲುಬು' ಎಂಬ ಪದವನ್ನು ಸರಿಯಾಗಿ ಉಚ್ಚರಿಸಲು ಬಾರದೇ ಪದೇ ಪದೇ ತಪ್ಪು ಹೇಳುತ್ತಿರುವ ಕುರಿತು ವಿಡಿಯೋವೊಂದು ಸಾಮಾಜಿಕ
ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶಾಲೆಯ ಶಿಕ್ಷಕ ಹಾಗೂ ತಾಲೂಕು ತಿಳದಿದ್ದರೆ ಹೇಳಿ ಶಿಕ್ಷಣ ಸಚಿವರಿಂದ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್.


(ಸರ್ ಈ ಸುದ್ದಿ ಇನ್ನು ಬಂದಿಲ್ಲ ಅಂತ ನಾನು ಕಳಿಸುತ್ತೇನೆ ಮತ್ತು ನಾನು app ನಲ್ಲಿ ಗಮನಿಸಿದೆ ಯಲ್ಲೋ ಕಂಡು ಬಂದಿಲ್ಲ) ಬಂದಿದ್ದರೆ ಈ ಸುದ್ದಿ ಕ್ಯಾರಿ ಮಾಡಬೆಡಿ...Body:ಅಥಣಿ ವರದಿ
ಫಾರ್ಮೇಟ್_AV
ಸ್ಥಳ_ಅಥಣಿ
ಸ್ಲಗ್_ಶಾಲೆಯಲ್ಲಿ ಮಗುವಿಗೊಂದು ಶಿಕ್ಷಕರೊಬ್ಬರು ಹೇಳಿಕೊಡುತ್ತಿರುವ 'ಪಕ್ಕೆಲುಬು' ವಿಡಿಯೋ ವೈರಲ್, ಶಿಕ್ಷಣ ಸಚಿವರಿಂದ ಕ್ರಮ.

Anchor
ಶಾಲೆಯಲ್ಲಿ ಮಗುವಿಗೊಂದು ಶಿಕ್ಷಕರೊಬ್ಬರು ಹೇಳಿಕೊಡುತ್ತಿರುವ 'ಪಕ್ಕೆಲುಬು' ಎಂಬ ಪದವನ್ನು
ಸರಿಯಾಗಿ ಉಚ್ಚರಿಸಲು ಬಾರದೇ ಪದೇ ಪದೇ ತಪ್ಪು ಹೇಳುತ್ತಿರುವ ಕುರಿತು ವಿಡಿಯೋವೊಂದು ಸಾಮಾಜಿಕ
ಜಾಲತಾಣದಲ್ಲಿ ಕಳೆದ ಎರಡು ದಿನಗಳಿಂದ ವೈರಲ್ ಆಗುತ್ತಿದೆ.

ಇದನ್ನು ಗಮನಿಸಿದ ಕರ್ನಾಟಕ ಸರ್ಕಾರದ ಎಸ್. ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಚಿವರು ಕಾರ್ಯ ಪ್ರಬುದ್ಧವಾಗಿ ಸುತ್ತೋಲೆ ಹೊರಡಿಸಲಾಗಿದೆ.

ಮಕ್ಕಳು ತಪ್ಪು ಉಚ್ಚಾರ ಮಾಡುವುದು ಸಹಜವೇ ಹೌದು. ನಿರಂತರ ಕಲಿಕೆಯ ನಂತರ ಆ ಪದದ
ಕುರಿತು ಮಗುವಿಗೆ ಸ್ಪಷ್ಟತೆ ದೊರೆತಾಗ ಸರಿಯಾದ ಉಚ್ಚಾರ ಸಾಧ್ಯವಾಗುತ್ತದೆ. ಆದರೆ ಮಗುವೊಂದು ಕಲಿಕೆ
ಹಂತದಲ್ಲಿ ತಪ್ಪು ಉಚ್ಚಾರ ಮಾಡುವುದನ್ನು ವಿಡಿಯೋದಲ್ಲಿ ಪ್ರಸಾರ ಮಾಡುತ್ತಿದ್ದರೆ, ಅದು ಮಗುವಿಗೆ
ಗೊತ್ತಾದಾಗ ಮಗುವಿನ ಆತ್ಮವಿಶ್ವಾಸಕ್ಕೆ ಧಕ್ಕೆ ಯಾಗಿ ಆದು ಕಲಿಕೆಯಲ್ಲಿ ಹಿಂದುಳಿಯುತ್ತದೆ. ಶಿಕ್ಷಕರು ಮಕ್ಕಳಿಗೆ
ಸರಿಯಾಗಿ ಉಚ್ಚಾರ ಮಾಡುವುದನ್ನು ಕಲಿಸಬೇಕೆ ಹೊರತು ಅದನ್ನು: ದೊಡ್ಡ ಅಪರಾಧ ವೆಂಬಂತೆ ಬಿಂಬಿಸಿ
ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವಂತಹ ಕೆಲಸ ನಿಜಕ್ಕೂ ಅಪರಾಧವೇ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಕ್ಷಣವೇ ಮೇಲ್ಕಂಡ ಕೃತ್ಯ ಯಾವ ಶಾಲೆಯಲ್ಲಿ ನಡೆದಿದೆ ಮತ್ತು ಯಾವ ಶಿಕ್ಷಕರು ಈ ವಿಡಿಯೋ
ಮಾಡಿ ಸಾಮಾಜಿಕ ಜಾಲ ತಾಣಗಳಿಗೆ ಹರಿಯ ಬಿಟ್ಟಿದ್ದಾರೆಂಬ ಕುರಿತು ಪತ್ತೆ ಮಾಡಲು ಸೈಬರ್ ಕ್ರೈಂ ಠಾಣೆಗೆ ದೂರು ನೀಡುವುದು ಹಾಗೂ ಈ ಶಿಕ್ಷಕರ, ಶಾಲಾ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲು
ಸೂಚಿಸಿದ್ದಾರೆ. ಅತಿ ಮುಖ್ಯವಾಗಿ ಶಿಕ್ಷಕರು ಪುಟ್ಟ ಮಕ್ಕಳ ಕಲಿಕೆಯನ್ನು ಈ ರೀತಿಯಲ್ಲಿ ವ್ಯಂಗ್ಯ ರೀತಿಯಲ್ಲಿ
ತೋರಿಸುವಂತಹ, ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವಂತಹ ಕೃತ್ಯಗಳಿಗೆ ಮುಂದಾದರೆ ಅಂತರ ಶಿಕ್ಷಕರು, ಶಾಲಾ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದು ಸೇರಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದೆಂಬ ಸೂತ್ತೋಲೆ ಹೊರಡಿಸಬೇಕೆಂದು ಸೂಚಿಸಲಾಗಿದೆ. ಎಂದು ಅವರ ಸಾಮಾಜಿಕ ಜಾಲತಾಣಗಳಲ್ಲಿ ಖಾತೆಗಳಲ್ಲಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
Conclusion:ಅಥಣಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.