ETV Bharat / state

ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಸಿಎಂಗೆ ಸುರೇಶ್ ಕುಮಾರ್​‌ ಪತ್ರ‌

author img

By

Published : Mar 24, 2021, 10:15 PM IST

2008ರಲ್ಲಿ ಅಸ್ತಿತ್ವಕ್ಕೆ ಬಂದ ತಮ್ಮದೇ ನೇತೃತ್ವದ ನಮ್ಮ ಸರ್ಕಾರದ ಅವಧಿಯಲ್ಲಿ 1990ರಿಂದ 1995ರ ವರೆಗಿನ 5 ವರ್ಷಗಳಲ್ಲಿ ಆರಂಭವಾದ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತಹ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಅದು ನೆರವಾಗಿಲ್ಲ, ಇದೀಗ ಈ ನಿರ್ಣಯ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

suresh-kumar-letter-to-cm
ಸಿಎಂಗೆ ಸುರೇಶ್ ಕುಮಾರ್​‌ ಪತ್ರ

ಬೆಂಗಳೂರು: 1995 ರಿಂದ 2000ರ ವರೆಗಿನ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ.ಗಳನ್ನು ಹಂಚಿಕೆ ಮಾಡಿ ಆಯವ್ಯಯ ಚರ್ಚೆ ಸಂದರ್ಭದಲ್ಲಿ ಉತ್ತರ ನೀಡುವಾಗ ಘೋಷಿಸಬೇಕೆಂದು ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಸಮುದಾಯದವರು ಕಳೆದ ಎರಡು ವರ್ಷಗಳ ಬಜೆಟ್ ಪೂರ್ವಭಾವಿ ಇಂತಹ 685 ಪ್ರಾಥಮಿಕ, 211 ಪ್ರೌಢಶಾಲೆಗಳಿದ್ದು ಅವುಗಳನ್ನು ಅನುದಾನಕ್ಕೊಳಪಡಿಸುವ ನಿಟ್ಟಿನಲ್ಲಿ 134.39 ಕೋಟಿ ರೂ.ಗಳ ಹಣದ ಅಗತ್ಯವಿರುವುದನ್ನು ಇಲಾಖೆ ಅಂದಾಜಿಸಿದೆ.

suresh-kumar-letter-to-cm-about-grant-of-kannada-media-schools
ಸಿಎಂಗೆ ಸುರೇಶ್ ಕುಮಾರ್ ಬರೆದಿರುವ ಪತ್ರ

2008ರಲ್ಲಿ ಅಸ್ತಿತ್ವಕ್ಕೆ ಬಂದ ತಮ್ಮದೇ ನೇತೃತ್ವದ ನಮ್ಮ ಸರ್ಕಾರದ ಅವಧಿಯಲ್ಲಿ 1990ರಿಂದ 1995ರ ವರೆಗಿನ 5 ವರ್ಷಗಳಲ್ಲಿ ಆರಂಭವಾದ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೊಳಪಡಿಸುವಂತಹ ನಿರ್ಣಯ ಕೈಗೊಳ್ಳಲಾಗಿತ್ತು. ಆ ನಂತರ ಬಂದ ಯಾವುದೇ ಸರ್ಕಾರಗಳು ಇಂತಹ ನಿರ್ಣಯವನ್ನು ಕೈಗೊಳ್ಳಲೇ ಇಲ್ಲ. ಈಗಲೂ ತಮ್ಮದೇ ನೇತೃತ್ವದಲ್ಲಿ ನಮ್ಮ ಸರ್ಕಾರದಲ್ಲಿ 1995 ರಿಂದ 2000ರ ವರೆಗಿನ ಶಾಲೆಗಳನ್ನು ಅನುದಾನಕ್ಕೊಳಪಡಿಸುವ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.‌

ಶಿಕ್ಷಕರು ಯಾವುದೇ ಪ್ರತಿಭಟನೆ-ಹರತಾಳಗಳಿಗೆ ಮುಂದಾಗದೇ ಮಕ್ಕಳ ಪರೀಕ್ಷೆ ಮೌಲ್ಯಮಾಪನಗಳನ್ನು ಸಮಾಧಾನದಿಂದ ನೆರವೇರಿಸಿಕೊಡಬೇಕೆಂದು ಆಗ್ರಹಿಸಿ ಅವರ ಮನವೊಲಿಸಿದ್ದೇನೆ. ಈ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ತಮಗೆ ಸಲ್ಲಿಸಿರುವ ಪ್ರಸ್ತಾವನೆಯಂತೆ 150 ಕೋಟಿ ರೂ.ಗಳನ್ನು ಹಂಚಿಕೆ ಮಾಡಿ ಬಜೆಟ್ ಕುರಿತು ಚರ್ಚೆಯ ಉತ್ತರದ ಸಂದರ್ಭದಲ್ಲಿ ಘೋಷಣೆ ಮಾಡುವ ಮೂಲಕ ಶಿಕ್ಷಣ ಇಲಾಖೆಯ ಅತ್ಯಂತ ಪ್ರಮುಖ ಬೇಡಿಕೆಯನ್ನಾಗಿ ಪರಿಗಣಿಸಬೇಕೆಂದು ಕೋರಿದ್ದಾರೆ.

ಇದನ್ನೂಓದಿ: 'ಸುಧಾಕರ್ ಹೇಳಿಕೆ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತನಿಖೆ ಆಗಲಿ'

ಬೆಂಗಳೂರು: 1995 ರಿಂದ 2000ರ ವರೆಗಿನ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ.ಗಳನ್ನು ಹಂಚಿಕೆ ಮಾಡಿ ಆಯವ್ಯಯ ಚರ್ಚೆ ಸಂದರ್ಭದಲ್ಲಿ ಉತ್ತರ ನೀಡುವಾಗ ಘೋಷಿಸಬೇಕೆಂದು ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಸಮುದಾಯದವರು ಕಳೆದ ಎರಡು ವರ್ಷಗಳ ಬಜೆಟ್ ಪೂರ್ವಭಾವಿ ಇಂತಹ 685 ಪ್ರಾಥಮಿಕ, 211 ಪ್ರೌಢಶಾಲೆಗಳಿದ್ದು ಅವುಗಳನ್ನು ಅನುದಾನಕ್ಕೊಳಪಡಿಸುವ ನಿಟ್ಟಿನಲ್ಲಿ 134.39 ಕೋಟಿ ರೂ.ಗಳ ಹಣದ ಅಗತ್ಯವಿರುವುದನ್ನು ಇಲಾಖೆ ಅಂದಾಜಿಸಿದೆ.

suresh-kumar-letter-to-cm-about-grant-of-kannada-media-schools
ಸಿಎಂಗೆ ಸುರೇಶ್ ಕುಮಾರ್ ಬರೆದಿರುವ ಪತ್ರ

2008ರಲ್ಲಿ ಅಸ್ತಿತ್ವಕ್ಕೆ ಬಂದ ತಮ್ಮದೇ ನೇತೃತ್ವದ ನಮ್ಮ ಸರ್ಕಾರದ ಅವಧಿಯಲ್ಲಿ 1990ರಿಂದ 1995ರ ವರೆಗಿನ 5 ವರ್ಷಗಳಲ್ಲಿ ಆರಂಭವಾದ ಅನುದಾನರಹಿತ ಶಾಲೆಗಳನ್ನು ಅನುದಾನಕ್ಕೊಳಪಡಿಸುವಂತಹ ನಿರ್ಣಯ ಕೈಗೊಳ್ಳಲಾಗಿತ್ತು. ಆ ನಂತರ ಬಂದ ಯಾವುದೇ ಸರ್ಕಾರಗಳು ಇಂತಹ ನಿರ್ಣಯವನ್ನು ಕೈಗೊಳ್ಳಲೇ ಇಲ್ಲ. ಈಗಲೂ ತಮ್ಮದೇ ನೇತೃತ್ವದಲ್ಲಿ ನಮ್ಮ ಸರ್ಕಾರದಲ್ಲಿ 1995 ರಿಂದ 2000ರ ವರೆಗಿನ ಶಾಲೆಗಳನ್ನು ಅನುದಾನಕ್ಕೊಳಪಡಿಸುವ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.‌

ಶಿಕ್ಷಕರು ಯಾವುದೇ ಪ್ರತಿಭಟನೆ-ಹರತಾಳಗಳಿಗೆ ಮುಂದಾಗದೇ ಮಕ್ಕಳ ಪರೀಕ್ಷೆ ಮೌಲ್ಯಮಾಪನಗಳನ್ನು ಸಮಾಧಾನದಿಂದ ನೆರವೇರಿಸಿಕೊಡಬೇಕೆಂದು ಆಗ್ರಹಿಸಿ ಅವರ ಮನವೊಲಿಸಿದ್ದೇನೆ. ಈ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ತಮಗೆ ಸಲ್ಲಿಸಿರುವ ಪ್ರಸ್ತಾವನೆಯಂತೆ 150 ಕೋಟಿ ರೂ.ಗಳನ್ನು ಹಂಚಿಕೆ ಮಾಡಿ ಬಜೆಟ್ ಕುರಿತು ಚರ್ಚೆಯ ಉತ್ತರದ ಸಂದರ್ಭದಲ್ಲಿ ಘೋಷಣೆ ಮಾಡುವ ಮೂಲಕ ಶಿಕ್ಷಣ ಇಲಾಖೆಯ ಅತ್ಯಂತ ಪ್ರಮುಖ ಬೇಡಿಕೆಯನ್ನಾಗಿ ಪರಿಗಣಿಸಬೇಕೆಂದು ಕೋರಿದ್ದಾರೆ.

ಇದನ್ನೂಓದಿ: 'ಸುಧಾಕರ್ ಹೇಳಿಕೆ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತನಿಖೆ ಆಗಲಿ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.