ETV Bharat / state

ಬೆಂಗಳೂರು ವಿವಿ ಪ್ರಾಧ್ಯಾಪಕ ಡಾ.ಜಿ.ನಂಜುಂಡನ್​ ಅನುಮಾನಾಸ್ಪದ ಸಾವು - ಬೆಂಗಳೂರು ವಿವಿ ಪ್ರಾಧ್ಯಾಪಕ ನಂಜುಡನ್​ ಅನುಮಾನಸ್ಪಾದ ಸಾವು

ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಜಿ. ನಂಜುಂಡನ್​ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ನಡೆದಿದೆ.

Suspected death of university professor Nanjudan
ಮೃತ ವಿವಿ ಪ್ರಾಧ್ಯಾಪಕ ನಂಜುಡನ್
author img

By

Published : Dec 22, 2019, 12:40 PM IST

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಕೃತಿಗಳನ್ನು ತಮಿಳಿಗೆ ಭಾಷಾಂತರಿಸುತ್ತಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಿ.ನಂಜುಂಡನ್ ಅವರು ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

Suspected death of university professor Nanjudan
ಪ್ರಾಧ್ಯಾಪಕ ಡಾ.ಜಿ. ನಂಜುಂಡನ್

ಕೆಂಗೇರಿ ಬಳಿಯ ನಾಗದೇವನಹಳ್ಳಿಯಲ್ಲಿರುವ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಕಳೆದ 4 ದಿನಗಳಿಂದ ವಿವಿಗೆ ಬಾರದ ಕಾರಣ ವಿಭಾಗದ ಸಹಾಯಕರೊಬ್ಬರು ನಂಜುಂಡನ್ ಮನೆಗೆ ತೆರಳಿದ್ದಾರೆ. ಈ ವೇಳೆಯೂ ಮನೆ ಬಾಗಿಲು ತೆಗೆದಿರಲಿಲ್ಲ. ನಂತರ ತಮಿಳುನಾಡಿನ ಅವರ ಪತ್ನಿಗೆ ಮಾಹಿತಿ ರವಾನಿಸಿದ್ದು ಆಕೆ ನಿವಾಸಕ್ಕೆ ಬಂದು ಕರೆದಾಗಲೂ ಬಾಗಿಲು ತೆರೆಯದಿದ್ದಾಗ ಆತಂಕಗೊಂಡು ಕೆಂಗೇರಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಪೊಲೀಸರು ಮನೆ ಬಾಗಿಲು ತೆಗಿಸಿದಾಗ ಕೊಳೆತ ಸ್ಥಿತಿಯಲ್ಲಿ ನಂಜುಂಡನ್ ಶವ ಪತ್ತೆಯಾಗಿದೆ.

ನಂಜುಂಡನ್ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಕೃತಿಗಳನ್ನು ತಮಿಳಿಗೆ ಭಾಷಾಂತರಿಸುತ್ತಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಿ.ನಂಜುಂಡನ್ ಅವರು ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

Suspected death of university professor Nanjudan
ಪ್ರಾಧ್ಯಾಪಕ ಡಾ.ಜಿ. ನಂಜುಂಡನ್

ಕೆಂಗೇರಿ ಬಳಿಯ ನಾಗದೇವನಹಳ್ಳಿಯಲ್ಲಿರುವ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಕಳೆದ 4 ದಿನಗಳಿಂದ ವಿವಿಗೆ ಬಾರದ ಕಾರಣ ವಿಭಾಗದ ಸಹಾಯಕರೊಬ್ಬರು ನಂಜುಂಡನ್ ಮನೆಗೆ ತೆರಳಿದ್ದಾರೆ. ಈ ವೇಳೆಯೂ ಮನೆ ಬಾಗಿಲು ತೆಗೆದಿರಲಿಲ್ಲ. ನಂತರ ತಮಿಳುನಾಡಿನ ಅವರ ಪತ್ನಿಗೆ ಮಾಹಿತಿ ರವಾನಿಸಿದ್ದು ಆಕೆ ನಿವಾಸಕ್ಕೆ ಬಂದು ಕರೆದಾಗಲೂ ಬಾಗಿಲು ತೆರೆಯದಿದ್ದಾಗ ಆತಂಕಗೊಂಡು ಕೆಂಗೇರಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಪೊಲೀಸರು ಮನೆ ಬಾಗಿಲು ತೆಗಿಸಿದಾಗ ಕೊಳೆತ ಸ್ಥಿತಿಯಲ್ಲಿ ನಂಜುಂಡನ್ ಶವ ಪತ್ತೆಯಾಗಿದೆ.

ನಂಜುಂಡನ್ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಯು.ಆರ್.ಅನಂತಮೂರ್ತಿ ಕೃತಿಗಳನ್ನು ತಮಿಳಿಗೆ ಅನುವಾದಿಸುತ್ತಿದ್ದ ಬೆಂಗಳೂರು ವಿವಿಯ ಪ್ರಾಧ್ಯಾಪಕ ಅನುಮಾನಸ್ಪಾದ ಸಾವು

ಬೆಂಗಳೂರಿನಲ್ಲಿ ಅನುವಾದಕ ಹಾಗೂ ಬೆಂಗಳೂರು ವಿವಿ ಪ್ರಾಧ್ಯಾಪಕ ಅನುಮಾನಸ್ಪಾದ ಸಾವನ್ನಪ್ಪಿದ್ದಾರೆ... ಬೆಂಗಳೂರು ವಿಶ್ವವಿದ್ಯಾಲಯದ ಸಾಂಖ್ಯಿಕ ವಿಭಾಗದ ಪ್ರಾಧ್ಯಾಪಕ ಜಿ.ನಂಜುಂಡನ್ ಅವರು ಕೆಂಗೇರಿ ಬಳಿಯ ನಾಗದೇವನಹಳ್ಳಿ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.ಕಳೆದ ನಾಲ್ಕು ದಿನಗಳಿಂದ ನಂಜುಂಡನ್ ಅವರು ವಿವಿಗೆ ಹೋಗಿರಲಿಲ್ಲ.. ಈ ಬಗ್ಗೆ ಅನುಮಾನಗೊಂಡು ವಿವಿ ವಿಭಾಗದ ಸಹಾಯಕ ನಂಜುಂಡನ್ ಮನೆಗೆ ಹೋಗಿದ್ದಾರೆ.
ಅದರೆ ಅವರಯ ನಂಜುಂಡನ್ ಮನೆ ಬಾಗಿಲು ತೆಗೆದಿರಲಿಲ್ಲ. ಬಳಿಕ ತಮಿಳುನಾಡಿನ ಅವರ ಪತ್ನಿಗೆ ಸಹಾಯಜ ಮಾಹಿತಿ ನೀಡಿದ್ದಾನೆ‌. ಪತ್ನಿ ಬಂದಾಗಲೂ ಬಾಗಿಲು ತೆರೆಯದಿದ್ದಾಗ ಕೆಂಗೇರಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ‌. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾಗಿಲು ಒಪನ್ ಮಾಡಿದಾಗ ಬಾಗಿಲು ಮಾಡಿದಾಗ ಕೊಳೆತ ಸ್ಥಿತಿಯಲ್ಲಿ ನಂಜುಂಡನ್ ಶವ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತವಾಗಿದೆ. ಸದ್ಯ ಮರಣೋತ್ತರ ಪರೀಕ್ಷೆ ನಂತರೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂಜುಂಡನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು‌ ಸಾಹಿತಿ ಯು.ಆರ್.ಅನಂತಮೂರ್ತಿ ಕೃತಿಗಳನ್ನು ತಮಿಳಿಗೆ ಅನುವಾದಿಸಿದ್ದರು. ಸದ್ಯ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.