ETV Bharat / state

ಆರೋಪಿಗಳ ವಿರುದ್ಧ ಶಿಸ್ತು ಕ್ರಮ ಆಗಲೇಬೇಕಿದೆ: ಅಖಂಡ ಶ್ರೀನಿವಾಸಮೂರ್ತಿ

author img

By

Published : Jan 12, 2021, 3:06 PM IST

Updated : Jan 12, 2021, 4:33 PM IST

ಸಿಎಲ್​​​ಪಿ ನಾಯಕರಿಗೆ, ಜಮೀರ್​​​​​ಗೆ ಈ ಕುರಿತು ಹೇಳಿದ್ದೇನೆ. ಆರೋಪಿಗಳ ಮೇಲೆ ಶಿಸ್ತು ಕ್ರಮ ಆಗಬೇಕಿದೆ. ಶಿಸ್ತು ಕ್ರಮ ತೆಗೆದುಕೊಳ್ಳೋದು ಅವರಿಗೆ ಬಿಟ್ಟ ವಿಚಾರ. ನನಗೆ ಕ್ಷೇತ್ರದ ಜನ, ದೇವರ ಆಶೀರ್ವಾದ ಇದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಅಂತ ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.

Akhanda srinivas murthy
ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು: ನಮ್ಮ ಮನೆಗೆ ಬೆಂಕಿ ಹಾಕಿ ಐದು ತಿಂಗಳು ಆಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಮಾಜಿ ಮೇಯರ್, ಕಾರ್ಪೊರೇಟರ್ ಜೈಲಲ್ಲಿದ್ದಾರೆ. ನಮಗೆ ಅನ್ಯಾಯ ಆಗಿದೆ ಎಂದು ಮತ್ತೊಮ್ಮೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ ಹೊರಹಾಕಿದ್ದಾರೆ.

ಸಿಎಲ್​​​ಪಿ ನಾಯಕರಿಗೆ, ಜಮೀರ್​​​​​ಗೆ ಈ ಕುರಿತು ಹೇಳಿದ್ದೇನೆ. ಆರೋಪಿಗಳ ಮೇಲೆ ಶಿಸ್ತು ಕ್ರಮ ಆಗಬೇಕಿದೆ. ಶಿಸ್ತು ಕ್ರಮ ತೆಗೆದುಕೊಳ್ಳೋದು ಅವರಿಗೆ ಬಿಟ್ಟ ವಿಚಾರ. ನನಗೆ ಕ್ಷೇತ್ರದ ಜನ, ದೇವರ ಆಶೀರ್ವಾದ ಇದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಅಂತ ನಾನು ಒತ್ತಾಯಿಸುತ್ತೇನೆ ಎಂದರು.

ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಅಖಂಡ ಶ್ರೀನಿವಾಸಮೂರ್ತಿ

ಇದೇ ವೇಳೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಕ್ಷೇತ್ರದ ಜನತೆಗೆ ಆಹಾರ ಸಾಮಗ್ರಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 20 ಸಾವಿರ ಜನರಿಗೆ ಅಕ್ಕಿ ಹಾಗೂ ಆಹಾರ ಸಾಮಗ್ರಿ ವಿತರಿಸಲು ನಿರ್ಧರಿಸಲಾಗಿದ್ದು, ಈ ಕಾರ್ಯಕ್ರಮವನ್ನು ಶಾಸಕ ಕೃಷ್ಣಬೈರೇಗೌಡ ಉದ್ಘಾಟಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಆಹಾರ ಸಾಮಗ್ರಿ ವಿತರಣೆ ಮಾಡಲಾಯಿತು. 3 ಕೆಜಿ ಅಕ್ಕಿ, ಬೆಲ್ಲ, ಅರ್ಧ ಲೀಟರ್​​ ಎಣ್ಣೆ ವಿತರಿಸಲಾಯಿತು. ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ಇದನ್ನೂ ಓದಿ: ಕೇಂದ್ರದ ಮೂರು ಕೃಷಿ ಕಾನೂನುಗಳಿಗೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್​

ಬೆಂಗಳೂರು: ನಮ್ಮ ಮನೆಗೆ ಬೆಂಕಿ ಹಾಕಿ ಐದು ತಿಂಗಳು ಆಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಮಾಜಿ ಮೇಯರ್, ಕಾರ್ಪೊರೇಟರ್ ಜೈಲಲ್ಲಿದ್ದಾರೆ. ನಮಗೆ ಅನ್ಯಾಯ ಆಗಿದೆ ಎಂದು ಮತ್ತೊಮ್ಮೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ ಹೊರಹಾಕಿದ್ದಾರೆ.

ಸಿಎಲ್​​​ಪಿ ನಾಯಕರಿಗೆ, ಜಮೀರ್​​​​​ಗೆ ಈ ಕುರಿತು ಹೇಳಿದ್ದೇನೆ. ಆರೋಪಿಗಳ ಮೇಲೆ ಶಿಸ್ತು ಕ್ರಮ ಆಗಬೇಕಿದೆ. ಶಿಸ್ತು ಕ್ರಮ ತೆಗೆದುಕೊಳ್ಳೋದು ಅವರಿಗೆ ಬಿಟ್ಟ ವಿಚಾರ. ನನಗೆ ಕ್ಷೇತ್ರದ ಜನ, ದೇವರ ಆಶೀರ್ವಾದ ಇದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಅಂತ ನಾನು ಒತ್ತಾಯಿಸುತ್ತೇನೆ ಎಂದರು.

ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಅಖಂಡ ಶ್ರೀನಿವಾಸಮೂರ್ತಿ

ಇದೇ ವೇಳೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಕ್ಷೇತ್ರದ ಜನತೆಗೆ ಆಹಾರ ಸಾಮಗ್ರಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 20 ಸಾವಿರ ಜನರಿಗೆ ಅಕ್ಕಿ ಹಾಗೂ ಆಹಾರ ಸಾಮಗ್ರಿ ವಿತರಿಸಲು ನಿರ್ಧರಿಸಲಾಗಿದ್ದು, ಈ ಕಾರ್ಯಕ್ರಮವನ್ನು ಶಾಸಕ ಕೃಷ್ಣಬೈರೇಗೌಡ ಉದ್ಘಾಟಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಆಹಾರ ಸಾಮಗ್ರಿ ವಿತರಣೆ ಮಾಡಲಾಯಿತು. 3 ಕೆಜಿ ಅಕ್ಕಿ, ಬೆಲ್ಲ, ಅರ್ಧ ಲೀಟರ್​​ ಎಣ್ಣೆ ವಿತರಿಸಲಾಯಿತು. ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ಇದನ್ನೂ ಓದಿ: ಕೇಂದ್ರದ ಮೂರು ಕೃಷಿ ಕಾನೂನುಗಳಿಗೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್​

Last Updated : Jan 12, 2021, 4:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.