ETV Bharat / state

Corruption case: ಜಮೀನು ಖಾತೆ ಬದಲಾವಣೆಗೆ ಲಂಚ.. ನಿವೃತ್ತ ಗ್ರಾಮಲೆಕ್ಕಾಧಿಕಾರಿಯ ಶಿಕ್ಷೆ ಅವಧಿ 1 ವರ್ಷಕ್ಕೆ ಇಳಿಸಿದ ಹೈಕೋರ್ಟ್

author img

By

Published : Jun 27, 2023, 3:47 PM IST

ಮೈಸೂರಿನ ವರುಣಾ ಹೋಬಳಿಯ ರೇಖಾ ಎಂಬುವರು ತಮ್ಮ ತಂದೆಯಿಂದ ಬಂದಿದ್ದ 1.3 ಗುಂಟೆ ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಗ್ರಾಮ ಲೆಕ್ಕಾಧಿಕಾರಿ ನಾಗೇಶ್​ಗೆ ಮನವಿ ಮಾಡಿದ್ದರು. ಇದಕ್ಕೆ ನಾಗೇಶ್ ಅವರು 1000 ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದರು.

High Court
ಹೈಕೋರ್ಟ್​

ಬೆಂಗಳೂರು: ಜಮೀನು ಖಾತೆ ಬದಲಾವಣೆ ಮಾಡಿಕೊಡುವುದಕ್ಕಾಗಿ ಸಾವಿರ ರೂಪಾಯಿ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿ ವಿಧಿಸಿದ್ದ ಮೂರು ವರ್ಷ ಶಿಕ್ಷೆಯ ಪ್ರಮಾಣವನ್ನು ಹೈಕೋರ್ಟ್ ಒಂದು ವರ್ಷಕ್ಕೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ ವರುಣಾ ಹೋಬಳಿ ಮೊಸನಬಾಯನಹಳ್ಳಿಯ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎನ್. ಪಿ. ನಾಗೇಶ (73) ಎಂಬುವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮೂರು ವರ್ಷದ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ಲಂಚಕ್ಕೆ ಬೇಡಿಕೆಯಿಟ್ಟು ಸ್ವೀಕರಿಸಿದ್ದಾರೆ. ಈ ಸಂಬಂಧ ತನಿಖಾಧಿಕಾರಿಗಳು ಸಾಕಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ. ಹೀಗಾಗಿ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶ ಸಮಂಜಸವಾಗಿದೆ. ಆದರೆ, ಸಾವಿರ ರೂ. ಲಂಚಕ್ಕೆ ಮೂರು ವರ್ಷ ಶಿಕ್ಷೆ ವಿಧಿಸಿರುವುದು ದೊಡ್ಡ ಪ್ರಮಾಣದ್ದಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಆದಾಗ್ಯೂ ಅರ್ಜಿದಾರರು 2007ರಲ್ಲಿ ನಿವೃತ್ತರಾಗಿದ್ದಾರೆ. ವಿಚಾರಣಾ ನ್ಯಾಯಾಲಯ 2011ರಲ್ಲಿ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ 73 ವರ್ಷ ವಯಸ್ಸಾಗಿದ್ದು, ಶಿಕ್ಷೆ ಪ್ರಮಾಣ ಕಡಿಮೆ ಮಾಡುತ್ತಿರುವುದಾಗಿ ಪೀಠ ಹೇಳಿದೆ. ಜತೆಗೆ, ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆ ಸೆಕ್ಷನ್ 7 (ಲಂಚ ಸ್ವೀಕಾರ) ರ ಅಡಿ 6 ತಿಂಗಳು ಮತ್ತು ಸೆಕ್ಷನ್ 13(2)(ಸರ್ಕಾರಿ ನೌಕರನ ಅಪರಾಧಿಕ ದುರ್ನಡತೆ)ರ ಅಡಿಯಲ್ಲಿ ಒಂದು ವರ್ಷಕ್ಕೆ ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು ? ಮೈಸೂರಿನ ವರುಣಾ ಹೋಬಳಿಯ ರೇಖಾ ಎಂಬುವರು ತಮ್ಮ ತಂದೆಯಿಂದ ಉಡುಗೊರೆಯಾಗಿ ಬಂದಿದ್ದ 1.3 ಗುಂಟೆ ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಕೋರಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ನಾಗೇಶ್ ಅವರಲ್ಲಿ ಮನವಿ ಮಾಡಿದ್ದರು.

ಇದಕ್ಕಾಗಿ ನಾಗೇಶ್ 1000 ರೂಪಾಯಿ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ರೇಖಾ ಪತಿ ಲೋಕೇಶ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರು ಬೀಸಿದ ಬಲೆಯಲ್ಲಿ ನಾಗೇಶ್ ಸಿಕ್ಕಿಬಿದ್ದಿದ್ದರು. ಲೋಕೇಶ್ ಅವರಿಂದ ಸಾಲವಾಗಿ ಹಣ ಪಡೆದಿರುವುದಾಗಿ ನಾಗೇಶ್ ಸಮರ್ಥನೆ ಮಾಡಿದ್ದರು. ಆದರೂ ವಿಚಾರಣೆ ನಡೆಸಿದ್ದ ನ್ಯಾಯಾಲಯ ನಾಗೇಶ್ ಅವರ ವಿರುದ್ಧ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ತಪ್ಪಿತಸ್ಥ ಎಂದು ಘೋಷಣೆ ಮಾಡಿತ್ತು.

ಅಲ್ಲದೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 7ರ ಅಡಿಯಲಿ ಒಂದು ವರ್ಷ ಶಿಕ್ಷೆ ಮತ್ತು 5 ಸಾವಿರ ರೂ. ಗಳ ದಂಡ, ಸೆಕ್ಷನ್ 13(2)ರ ಅಡಿಯಲ್ಲಿ ಮೂರು ವರ್ಷ ಶಿಕ್ಷೆ ಮತ್ತು 20 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ನಾಗೇಶ್ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದೀಗ ಆರೋಪಿಯ ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಆದೇಶಿಸಿದೆ.

ಇದನ್ನೂಓದಿ: ಮುಸ್ಲಿಂ ಬಹುಸಂಖ್ಯಾತ ದೇಶಗಳಲ್ಲಿ ತ್ರಿವಳಿ ತಲಾಖ್ ಕಾನೂನು ಪದ್ಧತಿ ಇಲ್ಲ: ಪ್ರಧಾನಿ ಮೋದಿ

ಬೆಂಗಳೂರು: ಜಮೀನು ಖಾತೆ ಬದಲಾವಣೆ ಮಾಡಿಕೊಡುವುದಕ್ಕಾಗಿ ಸಾವಿರ ರೂಪಾಯಿ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿ ವಿಧಿಸಿದ್ದ ಮೂರು ವರ್ಷ ಶಿಕ್ಷೆಯ ಪ್ರಮಾಣವನ್ನು ಹೈಕೋರ್ಟ್ ಒಂದು ವರ್ಷಕ್ಕೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ ವರುಣಾ ಹೋಬಳಿ ಮೊಸನಬಾಯನಹಳ್ಳಿಯ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎನ್. ಪಿ. ನಾಗೇಶ (73) ಎಂಬುವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮೂರು ವರ್ಷದ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ಲಂಚಕ್ಕೆ ಬೇಡಿಕೆಯಿಟ್ಟು ಸ್ವೀಕರಿಸಿದ್ದಾರೆ. ಈ ಸಂಬಂಧ ತನಿಖಾಧಿಕಾರಿಗಳು ಸಾಕಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ. ಹೀಗಾಗಿ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶ ಸಮಂಜಸವಾಗಿದೆ. ಆದರೆ, ಸಾವಿರ ರೂ. ಲಂಚಕ್ಕೆ ಮೂರು ವರ್ಷ ಶಿಕ್ಷೆ ವಿಧಿಸಿರುವುದು ದೊಡ್ಡ ಪ್ರಮಾಣದ್ದಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಆದಾಗ್ಯೂ ಅರ್ಜಿದಾರರು 2007ರಲ್ಲಿ ನಿವೃತ್ತರಾಗಿದ್ದಾರೆ. ವಿಚಾರಣಾ ನ್ಯಾಯಾಲಯ 2011ರಲ್ಲಿ ಶಿಕ್ಷೆ ಪ್ರಕಟಿಸಿದೆ. ಇದೀಗ ಅವರಿಗೆ 73 ವರ್ಷ ವಯಸ್ಸಾಗಿದ್ದು, ಶಿಕ್ಷೆ ಪ್ರಮಾಣ ಕಡಿಮೆ ಮಾಡುತ್ತಿರುವುದಾಗಿ ಪೀಠ ಹೇಳಿದೆ. ಜತೆಗೆ, ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆ ಸೆಕ್ಷನ್ 7 (ಲಂಚ ಸ್ವೀಕಾರ) ರ ಅಡಿ 6 ತಿಂಗಳು ಮತ್ತು ಸೆಕ್ಷನ್ 13(2)(ಸರ್ಕಾರಿ ನೌಕರನ ಅಪರಾಧಿಕ ದುರ್ನಡತೆ)ರ ಅಡಿಯಲ್ಲಿ ಒಂದು ವರ್ಷಕ್ಕೆ ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು ? ಮೈಸೂರಿನ ವರುಣಾ ಹೋಬಳಿಯ ರೇಖಾ ಎಂಬುವರು ತಮ್ಮ ತಂದೆಯಿಂದ ಉಡುಗೊರೆಯಾಗಿ ಬಂದಿದ್ದ 1.3 ಗುಂಟೆ ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಡುವಂತೆ ಕೋರಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ನಾಗೇಶ್ ಅವರಲ್ಲಿ ಮನವಿ ಮಾಡಿದ್ದರು.

ಇದಕ್ಕಾಗಿ ನಾಗೇಶ್ 1000 ರೂಪಾಯಿ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ರೇಖಾ ಪತಿ ಲೋಕೇಶ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರು ಬೀಸಿದ ಬಲೆಯಲ್ಲಿ ನಾಗೇಶ್ ಸಿಕ್ಕಿಬಿದ್ದಿದ್ದರು. ಲೋಕೇಶ್ ಅವರಿಂದ ಸಾಲವಾಗಿ ಹಣ ಪಡೆದಿರುವುದಾಗಿ ನಾಗೇಶ್ ಸಮರ್ಥನೆ ಮಾಡಿದ್ದರು. ಆದರೂ ವಿಚಾರಣೆ ನಡೆಸಿದ್ದ ನ್ಯಾಯಾಲಯ ನಾಗೇಶ್ ಅವರ ವಿರುದ್ಧ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ತಪ್ಪಿತಸ್ಥ ಎಂದು ಘೋಷಣೆ ಮಾಡಿತ್ತು.

ಅಲ್ಲದೆ, ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 7ರ ಅಡಿಯಲಿ ಒಂದು ವರ್ಷ ಶಿಕ್ಷೆ ಮತ್ತು 5 ಸಾವಿರ ರೂ. ಗಳ ದಂಡ, ಸೆಕ್ಷನ್ 13(2)ರ ಅಡಿಯಲ್ಲಿ ಮೂರು ವರ್ಷ ಶಿಕ್ಷೆ ಮತ್ತು 20 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ನಾಗೇಶ್ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದೀಗ ಆರೋಪಿಯ ಶಿಕ್ಷೆ ಪ್ರಮಾಣ ಕಡಿಮೆ ಮಾಡಿ ಆದೇಶಿಸಿದೆ.

ಇದನ್ನೂಓದಿ: ಮುಸ್ಲಿಂ ಬಹುಸಂಖ್ಯಾತ ದೇಶಗಳಲ್ಲಿ ತ್ರಿವಳಿ ತಲಾಖ್ ಕಾನೂನು ಪದ್ಧತಿ ಇಲ್ಲ: ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.