ಬೆಂಗಳೂರು: ತಮ್ಮ ಮೇಲಿನ ಹಲ್ಲೆ ಪ್ರಕರಣದ ತನಿಖೆ ಸಂಬಂಧ ಮಾಜಿ ಸಚಿವ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಗೃಹ ಸಚಿವರಿಗೆ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನ ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆದ್ರೆ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಅನ್ನೋದು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಸಂಬಂಧ ಸೂಕ್ತವಾಗಿ ತನಿಖೆ ನಡೆಯುತ್ತಿಲ್ಲ. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸುತ್ತೇನೆ. ನನ್ನ ಮೇಲಿನ ಹಲ್ಲೆಯ ಉದ್ದೇಶವನ್ನು ಪತ್ತೆ ಮಾಡಬೇಕು. ಪತ್ತೆ ಹಚ್ಚಿ ನನಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹ ಮಾಡಿದ್ದಾರೆ.