ETV Bharat / state

ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ: ಶಿಕ್ಷಣ ಸಚಿವ ನಾಗೇಶ್

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ. ಕಲಿಕಾ ಚೇತರಿಕೆ ಕಾರ್ಯಕ್ರಮ ಇಡೀ ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗಿದೆ

author img

By

Published : Sep 5, 2022, 9:41 PM IST

ಶಿಕ್ಷಣ ಸಚಿವ ನಾಗೇಶ್
ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು: ದೇಶದ ಭವಿಷ್ಯವನ್ನು ಬರೆಯುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೋವಿಡ್ ಸಂದರ್ಭದಲ್ಲಿ ಮತ್ತು ನಂತರದ ದಿನಗಳಲ್ಲಿ ಶಿಕ್ಷಣದ ಮುಂದುವರಿಕೆ ಮತ್ತು ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿಕ್ಷಕರು ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೋವಿಡ್-19 ಕಾರಣ ಉಂಟಾದ ಕಲಿಕಾ ಹಿನ್ನೆಡೆ ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಇಡೀ ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗಿದೆ.

ಕೇಂದ್ರ ಶಿಕ್ಷಣ ಇಲಾಖೆಯಿಂದ ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಕಲಿಕಾ ಚೇತರಿಕೆಗಾಗಿ ಬೇಸಿಗೆ ರಜೆ ಕಡಿತಗೊಳಿಸಿ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಯಿತು. ಶಿಕ್ಷಕರು ಸಂಪೂರ್ಣ ಸಹಕಾರ ನೀಡಿದರು.

ಕೋವಿಡ್-19 ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳಲ್ಲಿ ಮಕ್ಕಳಿಗೆ ಪಾಠ ಮಾಡುವ ಜೊತೆಗೆ ಸರ್ಕಾರದಿಂದ ನೀಡಲಾದ ಹೆಚ್ಚುವರಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಶಿಕ್ಷಕರು ಶ್ರೇಷ್ಠ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ನಾಗೇಶ್
ಶಿಕ್ಷಣ ಸಚಿವ ನಾಗೇಶ್

ಭವಿಷ್ಯದ ಪ್ರಜೆಗಳಿಗೆ ಪಾಠ ಮಾಡುವ ಮೂಲಕ ದೇಶದ ಭವಿಷ್ಯ ಬರೆಯುವವರು ಶಿಕ್ಷಕರು ಎಂದು ಭಾರತ ರತ್ನ ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರು ಹೇಳಿದ್ದಾರೆ. ಪ್ರತಿಯೊಬ್ಬ ಶಿಕ್ಷಕ/ಶಿಕ್ಷಕಿ ಕೂಡ ತೋರಿದ ಮಾರ್ಗದರ್ಶನದಲ್ಲಿ ನಡೆಯಬೇಕು. ನಮ್ಮ ರಾಜ್ಯದ ಶಿಕ್ಷಕರು ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೌನ್ಸೆಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ: ಶಿಕ್ಷಕರ ಮನವಿಯಂತೆ 23 ಸಾವಿರ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಕೌನ್ಸೆಲಿಂಗ್ ದಿನವೇ ಆದೇಶ ಪ್ರತಿ ನೀಡಲಾಗಿದೆ. ಪಿಯು ಉಪನ್ಯಾಸಕರ ವರ್ಗಾವಣೆಯನ್ನು ಮಾಡಲಾಗುತ್ತದೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಬಡ್ತಿ ಪ್ರಕ್ರಿಯೆ ನಡೆಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸಗಳು ತ್ವರಿತಗತಿಯಲ್ಲಿ ನಡೆಸಲು, ಪಾರದರ್ಶಕತೆ ತರಲು ಹೊಸ ಪ್ರಯತ್ನಗಳನ್ನು ಮುಂಬರುವ ದಿನಗಳಲ್ಲಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಶಿಕ್ಷಕರ ಸಂಘಗಳ ಬೇಡಿಕೆ ಹಾಗೂ ವಿಧಾನ ಪರಿಷತ್ ಸದಸ್ಯರ ಕೋರಿಕೆಯಂತೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪರೀಕ್ಷೆ ಬದಲು ಜೇಷ್ಠತೆ ಆಧಾರದ ಮೇಲೆ ಪದೋನ್ನತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ನಡುವೆಯು ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳ ಆರಂಭ, ಪರೀಕ್ಷೆಗಳು, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ, ಪ್ರವೇಶಾತಿ ಪ್ರಕ್ರಿಯೆಗಳು ಸೇರಿದಂತೆ ಪ್ರತಿಯೊಂದು ಚಟುವಟಿಕೆಗಳನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಿಕ್ಷಕರ ಸಮರ್ಥ ಸಹಕಾರದಿಂದ ಉತ್ತಮವಾಗಿ ನಡೆಸಲು ಸಾಧ್ಯವಾಯಿತು ಎಂದು ಸಚಿವರು ಹೇಳಿದರು.

ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿ ಏಕಕಾಲದಲ್ಲಿ 8,100 ಶಾಲಾ ಕೊಠಡಿಗಳ ನಿರ್ಮಾಣ, 15 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಕ್ರಿಯೆ ನಡೆಯುತ್ತಿದೆ. ಶಿಕ್ಷಕರ ನೇಮಕ ಸಂಬಂಧಿಸಿದ ತಾತ್ಕಾಲಿಕ ಪಟ್ಟಿಯನ್ನು ಆದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ನುಡಿದರು.

778 ಪಿಯು ಉಪನ್ಯಾಸಕರ ನೇಮಕಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೂ ಮುಂಬರುವ ದಿನಗಳಲ್ಲಿ ಒಪ್ಪಿಗೆ ಸಿಗುವ ವಿಶ್ವಾಸವಿದೆ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಎಲ್ಲ ರೀತಿಯ ಪ್ರಯತ್ನಗಳು ರಾಜ್ಯ ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

ರಿಯಲ್ ಎಸ್ಟೇಟ್, ಭೂ ಮಾಫಿಯಾಗಳು ಸರ್ಕಾರಿ ಶಾಲೆಗಳ ಆಸ್ತಿ ಕಬಳಿಕೆಗೆ ಕಣ್ಣು ಹಾಕಿದ್ದವು. ಹೀಗಾಗಿ, ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಆಸ್ತಿ ಮೇಲೆ ಕಣ್ಣು ಹಾಕಿರುವವರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳೇ ಆಗಿರಲಿ ಬಿಡುವುದಿಲ್ಲ. ಶಾಲೆಗಳ ಆಸ್ತಿಯನ್ನು ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಳ್ಳಲು ಎಲ್ಲ ರೀತಿಯ ಪ್ರಯತ್ನಗಳು ಮಾಡಲಾಗುತ್ತದೆ. ಒಂದಿಂಚೂ ಜಾಗವನ್ನು ಬಿಡುವುದಿಲ್ಲ ಎಂದರು.

(ಇದನ್ನೂ ಓದಿ: ಶಿಕ್ಷಕರಿಗೆ ಶಿಸ್ತಿನ ಪಾಠ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ)

ಬೆಂಗಳೂರು: ದೇಶದ ಭವಿಷ್ಯವನ್ನು ಬರೆಯುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೋವಿಡ್ ಸಂದರ್ಭದಲ್ಲಿ ಮತ್ತು ನಂತರದ ದಿನಗಳಲ್ಲಿ ಶಿಕ್ಷಣದ ಮುಂದುವರಿಕೆ ಮತ್ತು ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿಕ್ಷಕರು ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೋವಿಡ್-19 ಕಾರಣ ಉಂಟಾದ ಕಲಿಕಾ ಹಿನ್ನೆಡೆ ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಇಡೀ ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲಾಗಿದೆ.

ಕೇಂದ್ರ ಶಿಕ್ಷಣ ಇಲಾಖೆಯಿಂದ ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಕಾರ್ಯಕ್ರಮ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಕಲಿಕಾ ಚೇತರಿಕೆಗಾಗಿ ಬೇಸಿಗೆ ರಜೆ ಕಡಿತಗೊಳಿಸಿ 15 ದಿನಗಳ ಮೊದಲೇ ಶಾಲೆಗಳನ್ನು ಆರಂಭಿಸಲಾಯಿತು. ಶಿಕ್ಷಕರು ಸಂಪೂರ್ಣ ಸಹಕಾರ ನೀಡಿದರು.

ಕೋವಿಡ್-19 ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳಲ್ಲಿ ಮಕ್ಕಳಿಗೆ ಪಾಠ ಮಾಡುವ ಜೊತೆಗೆ ಸರ್ಕಾರದಿಂದ ನೀಡಲಾದ ಹೆಚ್ಚುವರಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಶಿಕ್ಷಕರು ಶ್ರೇಷ್ಠ ಕಾರ್ಯ ನಿರ್ವಹಿಸಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ನಾಗೇಶ್
ಶಿಕ್ಷಣ ಸಚಿವ ನಾಗೇಶ್

ಭವಿಷ್ಯದ ಪ್ರಜೆಗಳಿಗೆ ಪಾಠ ಮಾಡುವ ಮೂಲಕ ದೇಶದ ಭವಿಷ್ಯ ಬರೆಯುವವರು ಶಿಕ್ಷಕರು ಎಂದು ಭಾರತ ರತ್ನ ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರು ಹೇಳಿದ್ದಾರೆ. ಪ್ರತಿಯೊಬ್ಬ ಶಿಕ್ಷಕ/ಶಿಕ್ಷಕಿ ಕೂಡ ತೋರಿದ ಮಾರ್ಗದರ್ಶನದಲ್ಲಿ ನಡೆಯಬೇಕು. ನಮ್ಮ ರಾಜ್ಯದ ಶಿಕ್ಷಕರು ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೌನ್ಸೆಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ: ಶಿಕ್ಷಕರ ಮನವಿಯಂತೆ 23 ಸಾವಿರ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಕೌನ್ಸೆಲಿಂಗ್ ದಿನವೇ ಆದೇಶ ಪ್ರತಿ ನೀಡಲಾಗಿದೆ. ಪಿಯು ಉಪನ್ಯಾಸಕರ ವರ್ಗಾವಣೆಯನ್ನು ಮಾಡಲಾಗುತ್ತದೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಬಡ್ತಿ ಪ್ರಕ್ರಿಯೆ ನಡೆಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸಗಳು ತ್ವರಿತಗತಿಯಲ್ಲಿ ನಡೆಸಲು, ಪಾರದರ್ಶಕತೆ ತರಲು ಹೊಸ ಪ್ರಯತ್ನಗಳನ್ನು ಮುಂಬರುವ ದಿನಗಳಲ್ಲಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಶಿಕ್ಷಕರ ಸಂಘಗಳ ಬೇಡಿಕೆ ಹಾಗೂ ವಿಧಾನ ಪರಿಷತ್ ಸದಸ್ಯರ ಕೋರಿಕೆಯಂತೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪರೀಕ್ಷೆ ಬದಲು ಜೇಷ್ಠತೆ ಆಧಾರದ ಮೇಲೆ ಪದೋನ್ನತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ನಡುವೆಯು ಸುರಕ್ಷತಾ ಕ್ರಮಗಳೊಂದಿಗೆ ತರಗತಿಗಳ ಆರಂಭ, ಪರೀಕ್ಷೆಗಳು, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ, ಪ್ರವೇಶಾತಿ ಪ್ರಕ್ರಿಯೆಗಳು ಸೇರಿದಂತೆ ಪ್ರತಿಯೊಂದು ಚಟುವಟಿಕೆಗಳನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಿಕ್ಷಕರ ಸಮರ್ಥ ಸಹಕಾರದಿಂದ ಉತ್ತಮವಾಗಿ ನಡೆಸಲು ಸಾಧ್ಯವಾಯಿತು ಎಂದು ಸಚಿವರು ಹೇಳಿದರು.

ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿ ಏಕಕಾಲದಲ್ಲಿ 8,100 ಶಾಲಾ ಕೊಠಡಿಗಳ ನಿರ್ಮಾಣ, 15 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಕ್ರಿಯೆ ನಡೆಯುತ್ತಿದೆ. ಶಿಕ್ಷಕರ ನೇಮಕ ಸಂಬಂಧಿಸಿದ ತಾತ್ಕಾಲಿಕ ಪಟ್ಟಿಯನ್ನು ಆದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ನುಡಿದರು.

778 ಪಿಯು ಉಪನ್ಯಾಸಕರ ನೇಮಕಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೂ ಮುಂಬರುವ ದಿನಗಳಲ್ಲಿ ಒಪ್ಪಿಗೆ ಸಿಗುವ ವಿಶ್ವಾಸವಿದೆ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಎಲ್ಲ ರೀತಿಯ ಪ್ರಯತ್ನಗಳು ರಾಜ್ಯ ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

ರಿಯಲ್ ಎಸ್ಟೇಟ್, ಭೂ ಮಾಫಿಯಾಗಳು ಸರ್ಕಾರಿ ಶಾಲೆಗಳ ಆಸ್ತಿ ಕಬಳಿಕೆಗೆ ಕಣ್ಣು ಹಾಕಿದ್ದವು. ಹೀಗಾಗಿ, ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಆಸ್ತಿ ಮೇಲೆ ಕಣ್ಣು ಹಾಕಿರುವವರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳೇ ಆಗಿರಲಿ ಬಿಡುವುದಿಲ್ಲ. ಶಾಲೆಗಳ ಆಸ್ತಿಯನ್ನು ಶಿಕ್ಷಣ ಇಲಾಖೆಗೆ ನೋಂದಣಿ ಮಾಡಿಕೊಳ್ಳಲು ಎಲ್ಲ ರೀತಿಯ ಪ್ರಯತ್ನಗಳು ಮಾಡಲಾಗುತ್ತದೆ. ಒಂದಿಂಚೂ ಜಾಗವನ್ನು ಬಿಡುವುದಿಲ್ಲ ಎಂದರು.

(ಇದನ್ನೂ ಓದಿ: ಶಿಕ್ಷಕರಿಗೆ ಶಿಸ್ತಿನ ಪಾಠ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.