ಬೆಂಗಳೂರು: ಅಂಬೇಡ್ಕರ್ ಅವರ ಎಷ್ಟೋ ಸಂದೇಶಗಳು ನನಗೆ ಆದರ್ಶವಾಗಿವೆ. ಅವರ ಆದರ್ಶಗಳನ್ನ ನನ್ನ ಜೀನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ತೇಜಸ್ವಿ ಸೂರ್ಯ ಪುಷ್ಪಾಪರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಇಡೀ ಭಾರತವೇ ಗೆದ್ದಿದೆ. ಹೀಗಾಗಿ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆ. ನಿನ್ನೆ ಕೂಡ ಇಲ್ಲಿಗೆ ಬಂದು ನಮಸ್ಕರಿಸಿ ಹೋಗಿದ್ದೆ. ಮೋದಿಯವರಿಗೆ ಜನ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ. ಹಾಗೇ ನನ್ನನ್ನು ಗೆಲ್ಲಿಸಿರುವ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸುತ್ತೇನೆ ಎಂದರು.