ETV Bharat / state

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಬಿಜೆಪಿ ವಿರುದ್ಧ ಉಗ್ರಪ್ಪ ಕಿಡಿ - bangalore latest news

ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದೆ. ಇದು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕಿಡಿಕಾರಿದ್ದಾರೆ.

The BJP has implemented an unannounced emergency in the state : V.S Ugrappa
ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದಾರೆ : ವಿ.ಎಸ್ ಉಗ್ರಪ್ಪ
author img

By

Published : Dec 19, 2019, 7:50 PM IST

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದು, ಇದು ಇತಿಹಾಸದಲ್ಲೇ ಮೊದಲು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ 144ನೇ ಸೆಕ್ಷನ್ ಜಾರಿಗೆ ತರಲಾಗಿದ್ದು, ರಾಜ್ಯ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸಿದೆ. ಪೌರತ್ವ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ ಎಂದರು.

ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದಾರೆ : ವಿ.ಎಸ್ ಉಗ್ರಪ್ಪ

ಮಹದಾಯಿ ನಾಲಾ ಯೋಜನೆಗೆ ಕೇಂದ್ರದ ತಡೆ ವಿಚಾರ ಕುರಿತು ಮಾತನಾಡಿ, 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ ಅಂದಿದ್ರಿ. ಸದ್ಯ ಕೇಂದ್ರ ಹಾಗೂ ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರವಿದೆ. ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಅದನ್ನ ಕೇಂದ್ರವೇ ತಡೆ ಹಿಡಿದಿದೆ. ಸರ್ಕಾರವೇ ಕ್ಲಿಯರೆನ್ಸ್ ಕೊಟ್ಟು, ಅದನ್ನು ಸರ್ಕಾರವೇ ತಡೆಯೋದು ಏಕೆ? 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಿದ್ರಾ, ಆ ಭಾಗದ ಜನರಿಗೆ ಕುಡಿಯುವ ನೀರು ಕೊಟ್ರಾ ಎಂದು ಪ್ರಶ್ನಿಸಿದರು.

ರಾಮಚಂದ್ರ ಗುಹಾ ನೇತೃತ್ವದಲ್ಲಿ ಟೌನ್ ಹಾಲ್ ಮುಂದೆ ನಡೆಸಿದ ಧರಣಿಗೆ ಸರ್ಕಾರ ಅಡ್ಡಿಪಡಿಸಿದೆ. ಜೊತೆಗೆ ಕಾಂಗ್ರೆಸ್ ನಾಯಕರಿಗೆ ಸಿಎಂ ಧಮ್ಕಿ ಹಾಕಿದ್ದಾರೆ. ಅಧಿಕಾರ ಶಾಶ್ವತವಲ್ಲ, ಇದು ನಿಮ್ಮ ಗಮನಕ್ಕಿರಲಿ ಎಂದು ಸಿಎಂಗೆ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಎಂಎಲ್​ಸಿ ಅಬ್ದುಲ್ ಜಬ್ಬಾರ್ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದು, ಇದು ಇತಿಹಾಸದಲ್ಲೇ ಮೊದಲು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ 144ನೇ ಸೆಕ್ಷನ್ ಜಾರಿಗೆ ತರಲಾಗಿದ್ದು, ರಾಜ್ಯ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸಿದೆ. ಪೌರತ್ವ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ ಎಂದರು.

ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದಾರೆ : ವಿ.ಎಸ್ ಉಗ್ರಪ್ಪ

ಮಹದಾಯಿ ನಾಲಾ ಯೋಜನೆಗೆ ಕೇಂದ್ರದ ತಡೆ ವಿಚಾರ ಕುರಿತು ಮಾತನಾಡಿ, 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ ಅಂದಿದ್ರಿ. ಸದ್ಯ ಕೇಂದ್ರ ಹಾಗೂ ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರವಿದೆ. ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಅದನ್ನ ಕೇಂದ್ರವೇ ತಡೆ ಹಿಡಿದಿದೆ. ಸರ್ಕಾರವೇ ಕ್ಲಿಯರೆನ್ಸ್ ಕೊಟ್ಟು, ಅದನ್ನು ಸರ್ಕಾರವೇ ತಡೆಯೋದು ಏಕೆ? 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸಿದ್ರಾ, ಆ ಭಾಗದ ಜನರಿಗೆ ಕುಡಿಯುವ ನೀರು ಕೊಟ್ರಾ ಎಂದು ಪ್ರಶ್ನಿಸಿದರು.

ರಾಮಚಂದ್ರ ಗುಹಾ ನೇತೃತ್ವದಲ್ಲಿ ಟೌನ್ ಹಾಲ್ ಮುಂದೆ ನಡೆಸಿದ ಧರಣಿಗೆ ಸರ್ಕಾರ ಅಡ್ಡಿಪಡಿಸಿದೆ. ಜೊತೆಗೆ ಕಾಂಗ್ರೆಸ್ ನಾಯಕರಿಗೆ ಸಿಎಂ ಧಮ್ಕಿ ಹಾಕಿದ್ದಾರೆ. ಅಧಿಕಾರ ಶಾಶ್ವತವಲ್ಲ, ಇದು ನಿಮ್ಮ ಗಮನಕ್ಕಿರಲಿ ಎಂದು ಸಿಎಂಗೆ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಎಂಎಲ್​ಸಿ ಅಬ್ದುಲ್ ಜಬ್ಬಾರ್ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಉಪಸ್ಥಿತರಿದ್ದರು.

Intro:newsBody:ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದಾರೆ: ಉಗ್ರಪ್ಪ


ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯವರು ಅಘೋಷಿತ ತುರ್ತು ಪರಿಸ್ಥಿತಿ ಜಾರಿಗೆ ತಂದಿದ್ದಾರೆ. ಇದು ಇತಿಹಾಸದಲ್ಲೇ ಮೊದಲು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯಾದ್ಯಂತ 144 ನೇ ಸೆಕ್ಷನ್ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನ ಮೊಟಕುಗೊಳಿಸಿದೆ. ಪೌರತ್ವ ಕಾಯ್ದೆ ಸಂವಿಧಾನಕ್ಕೆ ವಿರುದ್ಧವಾಗಿದೆ. ಈ ಕಾಯ್ದೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ ಎಂದರು.
ಎಲ್ಲರೂ ಒಟ್ಟಾಗಿ ಪ್ರತಿಭಟನೆಗೆ ಧುಮುಕಿದ್ದಾರೆ. ಶಾಂತಿಯುತ ಧರಣಿಗೂ ಬ್ರೇಕ್ ಹಾಕಿದ್ದಾರೆ. ಅಸಂವಿಧಾನಿಕವಾಗಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಉಗ್ರಪ್ಪ ವಾಗ್ದಾಳಿ ನಡೆಸಿದರು.
ಕೇಂದ್ರವೇ ಏಕೆ ತಡೆಹಿಡಿದಿದೆ?
ಮಹದಾಯಿ ನಾಲಾ ಯೋಜನೆಗೆ ಕೇಂದ್ರದ ತಡೆ ವಿಚಾರ ಮಾತನಾಡಿ, 24 ಗಂಟೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ ಅಂದಿದ್ರಿ. ಇವತ್ತು ಕೇಂದ್ರ,ರಾಜ್ಯ ಎರಡರಲ್ಲೂ ನಿಮ್ಮ ಸರ್ಕಾರವಿದೆ. ಯೋಜನೆಗೆ ನಿಮ್ಮ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ ಅದನ್ನ ನಿಮ್ಮ ಕೇಂದ್ರವೇ ತಡೆ ಹಿಡಿದಿದೆ. ಇದು ಯಾಕೆ ಮಾಡಿದ್ದು ಜನರ ಮುಂದೆ ಬಹಿರಂಗ ಪಡಿಸಿ. ನೀವೇ ಕ್ಲಿಯರೆನ್ಸ್ ಕೊಟ್ಟು,ನೀವೆ ತಡೆಯೋದು ಏಕೆ? 24 ಗಂಟೆಯೊಳಗೆ ನೀವು ಸಮಸ್ಯೆ ಬಗೆಹರಿಸಿದ್ರಾ? ಆ ಭಾಗದ ಜನರಿಗೆ ಕುಡಿಯುವ ನೀರು ಕೊಟ್ರಾ ಎಂದರು.
ಗುಹಾ ಬಂಧನ ಸರಿಯಲ್ಲ
ರಾಮಚಂದ್ರ ಗುಹಾ ನೇತೃತ್ವದಲ್ಲಿ ಟೌನ್ ಹಾಲ್ ಮುಂದೆ ಧರಣಿಗೆ ಸರ್ಕಾರ ಅಡ್ಡಿಪಡಿಸಿದೆ. ಅವರನ್ನ, ಹೆಣ್ಣುಮಕ್ಕಳನ್ನ ಎಳೆದಾಡಿದ್ದಾರೆ. ಇದರ ಜೊತೆಗೆ ಸಿಎಂ ನೇರ ಧಮ್ಕಿ ಹಾಕಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಧಮ್ಕಿ ಹಾಕಿದ್ದಾರೆ. ಇದು ಸಿಎಂ ಯಡಿಯೂರಪ್ಪನವರ ವರ್ತನೆ ತೋರಿಸುತ್ತದೆ. ಧಮ್ಕಿ ಹಾಕಿ ಎದುರಿಸೋದು ಮೂರ್ಖತನ. ಅಧಿಕಾರ ಶಾಶ್ವತವಲ್ಲ,ಇದು ನಿಮ್ಮ ಗಮನಕ್ಕಿರಲಿ ಎಂದು ಸಿಎಂಗೆ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಎಂಎಲ್ ಸಿ ಅಬ್ದುಲ್ ಜಬ್ಬಾರ್ ಹಾಗೂ ಮಾಜಿ ಮೇಯರ್ ರಾಮಚಂದ್ರಪ್ಪ ಉಪಸ್ಥಿತರಿದ್ದರು.Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.