ETV Bharat / state

ಇಡಿ ದುರ್ಬಳಕೆ ಮಾಡಿಕೊಂಡು ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ : ಸಿದ್ದರಾಮಯ್ಯ

author img

By

Published : Jun 17, 2022, 9:07 PM IST

Updated : Jun 17, 2022, 9:26 PM IST

ಇಡಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇಡಿ ದುರ್ಬಳಕೆ ಮಾಡಿಕೊಂಡು ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ..

ಸಿದ್ದರಾಮಯ್ಯ
ಸಿದ್ದರಾಮಯ್ಯ

ಹುಬ್ಬಳ್ಳಿ : ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವರ್ಚಸ್ಸಿಗೆ ಧಕ್ಕೆ ತರಲು ಇಡಿ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇಡಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.

ರಾಜ್ಯದಲ್ಲಿರುವುದು ಆರ್​ಎಸ್​ಎಸ್ ಪ್ರಾಯೋಜಿತ ಸರ್ಕಾರ. ಹೀಗಾಗಿ, ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಅಗ್ನಿಪಥ ಯೋಜನೆ ವಿರುದ್ಧ ಯುವ ಜನಾಂಗ ಸಿಡಿದೆದ್ದಿದೆ. ಹಿಂದಿನ ಪದ್ಧತಿಯನ್ನೇ ಮುಂದುವರಿಸುವಂತೆ ಆಗ್ರಹಿಸುತ್ತಿದ್ದಾರೆ. ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಕೇಸರೀಕರಣ ಮಾಡಲು ಹೊರಟಿದ್ದಾರೆ. ಆ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ. ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲ: ಸಿದ್ದರಾಮಯ್ಯ

ಹುಬ್ಬಳ್ಳಿ : ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವರ್ಚಸ್ಸಿಗೆ ಧಕ್ಕೆ ತರಲು ಇಡಿ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇಡಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.

ರಾಜ್ಯದಲ್ಲಿರುವುದು ಆರ್​ಎಸ್​ಎಸ್ ಪ್ರಾಯೋಜಿತ ಸರ್ಕಾರ. ಹೀಗಾಗಿ, ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಅಗ್ನಿಪಥ ಯೋಜನೆ ವಿರುದ್ಧ ಯುವ ಜನಾಂಗ ಸಿಡಿದೆದ್ದಿದೆ. ಹಿಂದಿನ ಪದ್ಧತಿಯನ್ನೇ ಮುಂದುವರಿಸುವಂತೆ ಆಗ್ರಹಿಸುತ್ತಿದ್ದಾರೆ. ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಕೇಸರೀಕರಣ ಮಾಡಲು ಹೊರಟಿದ್ದಾರೆ. ಆ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ. ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲ: ಸಿದ್ದರಾಮಯ್ಯ

Last Updated : Jun 17, 2022, 9:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.