ETV Bharat / state

ಐಎಂಎ ಪ್ರಕರಣ: ಡಿಸಿ ಬಂಧನ ವಿಚಾರವಾಗಿ SIT ಸೇರಿ ಪ್ರತಿವಾದಿಗಳಿಗೆ ಹೈಕೋರ್ಟ್​ ನೋಟಿಸ್​​​ - undefined

ಐಎಂಎ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ಪರವಾಗಿ ವರದಿ ನೀಡಲು 1.5 ಕೋಟಿ ರೂ. ಲಂಚ ಪಡೆದ ಆರೋಪದಡಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ವಿಜಯಶಂಕರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿತು.

ಎಸ್ಐಟಿಗೆ ನೊಟೀಸ್ ನೀಡಿದ ಹೈಕೋರ್ಟ್
author img

By

Published : Jul 11, 2019, 10:59 PM IST

ಬೆಂಗಳೂರು: ಐಎಂಎ ಜುವೆಲ್ಲರ್ಸ್ ವಂಚನೆ ಪ್ರಕರಣ ಸಂಬಂಧ ಲಂಚ ಪಡೆದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್ ವಿರುದ್ಧ ಎಸ್‌ಐಟಿ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಗುರುವಾರ ಹೈಕೋರ್ಟ್ ವಿಚಾರಣೆ ನಡೆಸಿ ಕೇಂದ್ರ, ರಾಜ್ಯ ಸರ್ಕಾರ, ಸಿಬಿಐ, ಎಸ್‌ಐಟಿ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿದೆ.

ಹೈಕೋರ್ಟ್‌ನಲ್ಲಿ ಗುರುವಾರ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲರು, ಐಎಂಎ ಪ್ರಕರಣದಲ್ಲಿ ಆರೋಪಿ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾಗೊಳಿಸಬೇಕು. ಅಧೀನ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣದ ವಿಚಾರಣೆ ರದ್ದು ಮಾಡಬೇಕು. ಐಎಂಎ ಸಂಸ್ಥೆ ವಂಚನೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಸಿಬಿಐಗೆ ವಹಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಉದಯ ಹೊಳ್ಳ, ಐಎಂಎ ಸಂಸ್ಥೆ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಈಗಾಗಲೇ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ನೇತತ್ವದ ವಿಭಾಗೀಯ ಪೀಠದಲ್ಲಿ ಮೂರು ಅರ್ಜಿಗಳು ಬಂದಿವೆ. ಹೀಗಾಗಿ, ಈ ಅರ್ಜಿಯನ್ನು ಅಲ್ಲಿಗೆ ವರ್ಗಾಯಿಸಬಹುದೆಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ವಿಭಾಗೀಯ ಪೀಠದೆದುರು ಈ ಅರ್ಜಿಯನ್ನು ವರ್ಗಾಯಿಸುವ ಕುರಿತು ಮನವಿ ಮಾಡಿಕೊಳ್ಳಲು ಸರ್ಕಾರ, ಅರ್ಜಿದಾರರಿಗೆ ಒಂದು ವಾರದ ಕಾಲಾವಕಾಶ ನೀಡಿತು. ಅಲ್ಲದೆೇ, ಕೇಂದ್ರ, ರಾಜ್ಯ ಸರ್ಕಾರ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

ಬೆಂಗಳೂರು: ಐಎಂಎ ಜುವೆಲ್ಲರ್ಸ್ ವಂಚನೆ ಪ್ರಕರಣ ಸಂಬಂಧ ಲಂಚ ಪಡೆದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್ ವಿರುದ್ಧ ಎಸ್‌ಐಟಿ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಗುರುವಾರ ಹೈಕೋರ್ಟ್ ವಿಚಾರಣೆ ನಡೆಸಿ ಕೇಂದ್ರ, ರಾಜ್ಯ ಸರ್ಕಾರ, ಸಿಬಿಐ, ಎಸ್‌ಐಟಿ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿದೆ.

ಹೈಕೋರ್ಟ್‌ನಲ್ಲಿ ಗುರುವಾರ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲರು, ಐಎಂಎ ಪ್ರಕರಣದಲ್ಲಿ ಆರೋಪಿ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾಗೊಳಿಸಬೇಕು. ಅಧೀನ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣದ ವಿಚಾರಣೆ ರದ್ದು ಮಾಡಬೇಕು. ಐಎಂಎ ಸಂಸ್ಥೆ ವಂಚನೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಸಿಬಿಐಗೆ ವಹಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಉದಯ ಹೊಳ್ಳ, ಐಎಂಎ ಸಂಸ್ಥೆ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಈಗಾಗಲೇ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ನೇತತ್ವದ ವಿಭಾಗೀಯ ಪೀಠದಲ್ಲಿ ಮೂರು ಅರ್ಜಿಗಳು ಬಂದಿವೆ. ಹೀಗಾಗಿ, ಈ ಅರ್ಜಿಯನ್ನು ಅಲ್ಲಿಗೆ ವರ್ಗಾಯಿಸಬಹುದೆಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು, ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ವಿಭಾಗೀಯ ಪೀಠದೆದುರು ಈ ಅರ್ಜಿಯನ್ನು ವರ್ಗಾಯಿಸುವ ಕುರಿತು ಮನವಿ ಮಾಡಿಕೊಳ್ಳಲು ಸರ್ಕಾರ, ಅರ್ಜಿದಾರರಿಗೆ ಒಂದು ವಾರದ ಕಾಲಾವಕಾಶ ನೀಡಿತು. ಅಲ್ಲದೆೇ, ಕೇಂದ್ರ, ರಾಜ್ಯ ಸರ್ಕಾರ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

Intro:nullBody:ಐಎಂಎ ಕೇಸ್ ನಲ್ಲಿ ಡಿಸಿ ಬಂಧನ ಪ್ರಕರಣ: ಎಸ್ಐಟಿಗೆ ನೊಟೀಸ್ ನೀಡಿದ ಹೈಕೋರ್ಟ್

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸಂಬಂಧ ಲಂಚ ಪಡೆದ ಆರೋಪದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್ ವಿರುದ್ಧ ಎಸ್‌ಐಟಿ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಗುರುವಾರ ಹೈಕೋರ್ಟ್ ವಿಚಾರಣೆ ನಡೆಸಿ ಕೇಂದ್ರ, ರಾಜ್ಯ ಸರ್ಕಾರ, ಸಿಬಿಐ,ಎಸ್‌ಐಟಿ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿದೆ.

ಹೈಕೋರ್ಟ್‌ನಲ್ಲಿ ಗುರುವಾರ ನ್ಯಾಯಮೂರ್ತಿ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ, ಐಎಂಎ ಕಂಪೆನಿ ಮಾಲಿಕ ಮೊಹಮ್ಮದ್ ಮನ್ಸೂರ್ ಖಾನ್ ಪರವಾಗಿ ವರದಿ ನೀಡಲು 1.5 ಕೋಟಿ ರೂ.ಲಂಚ ಪಡೆದ ಆರೋಪದಡಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ವಿಜಯಶಂಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ  ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಐಎಂಎ ಪ್ರಕರಣದಲ್ಲಿ ಆರೋಪಿ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾಗೊಳಿಸಬೇಕು. ಅಧೀನ ನ್ಯಾಯಾಲಯದಲ್ಲಿ ನಡೆಯುವ ಪ್ರಕರಣದ ವಿಚಾರಣೆ ರದ್ದು ಮಾಡಬೇಕು. ಐಎಂಎ ಸಂಸ್ಥೆ ವಂಚನೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಬದಲಿಗೆ ಸಿಬಿಐಗೆ ವಹಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಉದಯ ಹೊಳ್ಳ ಅವರು, ಐಎಂಎ ಸಂಸ್ಥೆ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಈಗಾಗಲೇ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ನೇತತ್ವದ ವಿಭಾಗೀಯ ಪೀಠದಲ್ಲಿ ಮೂರು ಅರ್ಜಿಗಳು ಬಂದಿವೆ. ಹೀಗಾಗಿ, ಈ ಅರ್ಜಿಯನ್ನು ಅಲ್ಲಿಗೆ ವರ್ಗಾಯಿಸಬಹುದೆಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ವಿಭಾಗೀಯ ಪೀಠದ ಎದುರು ಈ ಅರ್ಜಿಯನ್ನು ವರ್ಗಾಯಿಸುವ ಕುರಿತು ಮನವಿ ಮಾಡಿಕೊಳ್ಳಲು ಸರ್ಕಾರ, ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಿತು. ಅಲ್ಲದೆ, ಕೇಂದ್ರ, ರಾಜ್ಯ ಸರ್ಕಾರ ಸೇರಿ ಎಲ್ಲ ಪ್ರತಿವಾದಿಗಳಿಗೂ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

Conclusion:null

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.