ETV Bharat / state

ಅಣ್ಣಾಮಲೈ ರಾಜೀನಾಮೆ ಪತ್ರ ಅಂಗೀಕರಿಸಿದ ಕೇಂದ್ರ ಸರ್ಕಾರ.. ಮಾಜಿ ಐಪಿಎಸ್‌ ಅಧಿಕಾರಿ ಫ್ರೀ ಬರ್ಡ್‌.. - IPS Annamalai

ಐಪಿಎಸ್​ ಅಧಿಕಾರಿ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆನ್ನು ನಿಯಮಾನುಸಾರವಾಗಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌ ರಾಜು ಕೇಂದ್ರಕ್ಕೆ ಕಳುಹಿಸಿದ್ದರು. ರಾಜೀನಾಮೆ ಪತ್ರ ಕಳುಹಿಸಿ ಮೂರುವರೆ ತಿಂಗಳ ಬಳಿಕ ಕೇಂದ್ರವು ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದೆ.

ಅಣ್ಣಾಮಲೈ ರಾಜೀನಾಮೆ ಪತ್ರ ಅಂಗೀಕರಿಸಿದ ಕೇಂದ್ರ ಸರ್ಕಾರ
author img

By

Published : Oct 16, 2019, 8:31 PM IST


ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂದು ಖ್ಯಾತಿಯಾಗಿದ್ದ ಅಣ್ಣಾಮಲೈ ರಾಜೀನಾಮೆ ಪತ್ರವನ್ನು ಮೂರು ತಿಂಗಳ ನಂತರ ಕೇಂದ್ರ ಗೃಹ ಇಲಾಖೆ ಅಂಗೀಕರಿಸಿದೆ.

fedfedff
ಅಣ್ಣಾಮಲೈ ರಾಜೀನಾಮೆ ಪತ್ರ ಅಂಗೀಕರಿಸಿದ ಕೇಂದ್ರ ಸರ್ಕಾರ


ಕಳೆದ ಮೇ 28ರಂದು ಅಣ್ಣಾಮಲೈ ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದರು.ಈ ಸಂಬಂಧ ಮೇ 29ರಂದು ಪೊಲೀಸ್ ಇಲಾಖೆಯ ಡಿಜಿ ಹಾಗೂ ಐಜಿ ನೀಲಮಣಿ ಎನ್.ರಾಜುಗೆ ರಾಜೀನಾಮೆ ಪತ್ರ ಕಳುಹಿಸಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ರಾಜೀನಾಮೆಯ ನಿರ್ಧಾರ ತಿಳಿಸಿದ್ದರು. ಅಣ್ಣಾಮಲೈ ರಾಜೀನಾಮೆ ಪತ್ರ ನೀಡಿದ ಬಳಿಕ ಸುಮಾರು 15 ದಿನಗಳ ನಂತರ ಬೆಂಗಳೂರು ದಕ್ಷಿಣ ವಿಭಾಗಕ್ಕೆ ರೋಹಿಣಿ ಸಫೆಟ್ ನಿಯುಕ್ತಿಗೊಳಿಸಲಾಗಿತ್ತು. ಅಧಿಕೃತವಾಗಿ ಅಂದ್ರೇ ಅಣ್ಣಾಮಲೈ ಸೇವೆಯಿಂದ ಹಿಂದೆ ಸರಿದಿದ್ದರು.

ತಮಿಳುನಾಡು ಮೂಲದ ಅಣ್ಣಾಮಲೈ 2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಕರ್ನಾಟಕ ಕೇಡರ್‌ನಲ್ಲಿ ಆಯ್ಕೆಯಾಗಿದ್ದರು. ಮೊದಲ ವೃತ್ತಿ ಜೀವನ ಕಾರ್ಕಾಳದಿಂದ ಆರಂಭಿಸಿ ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಾಕಷ್ಟು ಜನಮನ್ನಣೆ ಗಳಿಸಿದ್ದರು. ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ದಕ್ಷಿಣ ವಿಭಾಗಕ್ಕೆ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದಾರೆ. ಇವರ ಕಾರ್ಯವೈಖರಿಗೆ ರಾಜಧಾನಿ ಜನರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂದು ಖ್ಯಾತಿಯಾಗಿದ್ದ ಅಣ್ಣಾಮಲೈ ರಾಜೀನಾಮೆ ಪತ್ರವನ್ನು ಮೂರು ತಿಂಗಳ ನಂತರ ಕೇಂದ್ರ ಗೃಹ ಇಲಾಖೆ ಅಂಗೀಕರಿಸಿದೆ.

fedfedff
ಅಣ್ಣಾಮಲೈ ರಾಜೀನಾಮೆ ಪತ್ರ ಅಂಗೀಕರಿಸಿದ ಕೇಂದ್ರ ಸರ್ಕಾರ


ಕಳೆದ ಮೇ 28ರಂದು ಅಣ್ಣಾಮಲೈ ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದರು.ಈ ಸಂಬಂಧ ಮೇ 29ರಂದು ಪೊಲೀಸ್ ಇಲಾಖೆಯ ಡಿಜಿ ಹಾಗೂ ಐಜಿ ನೀಲಮಣಿ ಎನ್.ರಾಜುಗೆ ರಾಜೀನಾಮೆ ಪತ್ರ ಕಳುಹಿಸಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ರಾಜೀನಾಮೆಯ ನಿರ್ಧಾರ ತಿಳಿಸಿದ್ದರು. ಅಣ್ಣಾಮಲೈ ರಾಜೀನಾಮೆ ಪತ್ರ ನೀಡಿದ ಬಳಿಕ ಸುಮಾರು 15 ದಿನಗಳ ನಂತರ ಬೆಂಗಳೂರು ದಕ್ಷಿಣ ವಿಭಾಗಕ್ಕೆ ರೋಹಿಣಿ ಸಫೆಟ್ ನಿಯುಕ್ತಿಗೊಳಿಸಲಾಗಿತ್ತು. ಅಧಿಕೃತವಾಗಿ ಅಂದ್ರೇ ಅಣ್ಣಾಮಲೈ ಸೇವೆಯಿಂದ ಹಿಂದೆ ಸರಿದಿದ್ದರು.

ತಮಿಳುನಾಡು ಮೂಲದ ಅಣ್ಣಾಮಲೈ 2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಕರ್ನಾಟಕ ಕೇಡರ್‌ನಲ್ಲಿ ಆಯ್ಕೆಯಾಗಿದ್ದರು. ಮೊದಲ ವೃತ್ತಿ ಜೀವನ ಕಾರ್ಕಾಳದಿಂದ ಆರಂಭಿಸಿ ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಾಕಷ್ಟು ಜನಮನ್ನಣೆ ಗಳಿಸಿದ್ದರು. ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ದಕ್ಷಿಣ ವಿಭಾಗಕ್ಕೆ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದಾರೆ. ಇವರ ಕಾರ್ಯವೈಖರಿಗೆ ರಾಜಧಾನಿ ಜನರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Intro:Body:ಅಣ್ಣಾಮಲೈ ಅವರ ರಾಜೀನಾಮೆ ಪತ್ರ ಅಂಗೀಕರಿಸಿ ಕೇಂದ್ರ ಸರ್ಕಾರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿಯಾಗಿದ್ದ ಅಣ್ಣಾಮಲೈ ಅವರ ರಾಜೀನಾಮೆ ಪತ್ರವನ್ನು ಮೂರು ತಿಂಗಳ ನಂತರ ಕೇಂದ್ರ ಗೃಹ ಇಲಾಖೆ ಅಂಗೀಕರಿಸಿದೆ.
ಕಳೆದ ಮೇ 28ರಂದು ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ್ದರು. ಈ ಸಂಬಂಧ ಮೇ 29ರಂದು ಪೊಲೀಸ್ ಇಲಾಖೆಯ ಡಿಜಿ ಹಾಗೂ ಐಜಿ ನೀಲಮಣಿ ಎನ್.ರಾಜು ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜೀನಾಮೆಯ ನಿರ್ಧಾರ ತಿಳಿಸಿದ್ದರು.
ರಾಜೀನಾಮೆ ಪತ್ರ ನೀಡಿದ ಬಳಿಕ ಸುಮಾರು 15 ದಿನಗಳ ನಂತರ ಬೆಂಗಳೂರು ದಕ್ಷಿಣ ವಿಭಾಗಕ್ಕೆ ರೋಹಿಣಿ ಸಫೆಟ್ ಅವರನ್ನು ನಿಯುಕ್ತಿಗೊಳಿಸಲಾಗಿತ್ತು. ಅಧಿಕೃತವಾಗಿ ಅಂದೇ ಅಣ್ಣಾಮಲೈ ಸೇವೆಯಿಂದ ಹಿಂದೆ ಸರಿದಿದ್ದರು.ನಿಯಮಾನುಸಾರವಾಗಿ ಅಣ್ಣಾಮಲೈ ರಾಜೀನಾಮೆ ಪತ್ರವನ್ನು ನೀಲಮಣಿ ಅವರು ಕೇಂದ್ರಕ್ಕೆ ಕಳುಹಿಸಿದ್ದರು. ರಾಜೀನಾಮೆ ಪತ್ರ ಕಳುಹಿಸಿ ಮೂರುವರೆ ತಿಂಗಳ ಬಳಿಕ ಕೇಂದ್ರವು ಅಣ್ಣಾಮಲೈ ಅವರ ರಾಜೀನಾಮೆ ಅಂಗೀಕರಿಸಿದೆ.
ತಮಿಳುನಾಡು ಮೂಲದ ಅಣ್ಣಾಮಲೈ 2011ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು. ಕರ್ನಾಟಕ ಕೇಡರ್ನಲ್ಲಿ ಆಯ್ಕೆಯಾಗಿದ್ದರು. ಮೊದಲ ವೃತ್ತಿ ಜೀವನ ಕಾರ್ಕಾಳದಿಂದ ಆರಂಭಿಸಿ ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಾಕಷ್ಟು ಜನಮನ್ನಣೆ ಗಳಿಸಿದ್ದರು. ಮೈತ್ರಿ ಸರ್ಕಾರದಲ್ಲಿ ಬೆಂಗಳೂರು ದಕ್ಷಿಣ ವಿಭಾಗಕ್ಕೆ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದಾರೆ. ಇವರ ಕಾರ್ಯವೈಖರಿಗೆ ರಾಜಧಾನಿ ಜನರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.