ETV Bharat / state

ಹಣಕಾಸು ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ : ಹೆಚ್.ಡಿ. ದೇವೇಗೌಡ

author img

By

Published : May 24, 2021, 4:12 PM IST

Updated : May 24, 2021, 5:38 PM IST

ಸರ್ಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಅವರು ಲಾಕ್​ಡೌನ್​ ಮಾಡುವ ಬಗ್ಗೆ ಒಂದು ತಿಂಗಳ ಮುಂಚೆಯೇ ಸಲಹೆ ಕೊಟ್ಟಿದ್ದರು. ಆದರೆ ಆಗ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.

Devegowda
ಹೆಚ್ ಡಿ ದೇವೇಗೌಡ

ಬೆಂಗಳೂರು: ಕೊರೊನಾ 2ನೇ ಅಲೆ ವ್ಯಾಪಕವಾಗಿರುವ ಈ ಸಮಯದಲ್ಲಿ ಹಣಕಾಸು ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ನಮಗೆ (ಕರ್ನಾಟಕಕ್ಕೆ) ಅನ್ಯಾಯ ಮಾಡಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡುತ್ತಾರೆ. ಆದರೆ, ನಮ್ಮ ರಾಜ್ಯಕ್ಕೆ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದರು.

ಕೊರೊನಾ ವಿಚಾರದಲ್ಲಿ ಪ್ರಧಾನಿ‌ ಮೋದಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೊಟ್ಟಿದ್ದೇನೆ. ನಾನು 12 ಸಲಹೆಗಳನ್ನು ಕೊಟ್ಟಿದ್ದೆ. ಅದರಲ್ಲಿ ಕೆಲವು ಸಲಹೆಗಳನ್ನು ಕಾರ್ಯಗತ ಮಾಡುತ್ತಿದ್ದಾರೆ ಎಂದರು.

ಮೊದಲ ಅಲೆಯಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಿದರೆಂದು ಪ್ರಧಾನಿ ಮೋದಿ ಅವರನ್ನು ಎಲ್ಲರೂ ಹೊಗಳಿದ್ದರು. 2ನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚಳ ಆಗಿದೆ. ಜೊತೆಗೆ ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಬಗ್ಗೆ ಆತಂಕ ಉಂಟು ಮಾಡಿದೆ. ದೇಶ ವಿದೇಶಗಳ ಎಕ್ಸ್​ಪರ್ಟ್​ಗಳು ಇದರ ಬಗ್ಗೆ ಮಾತನಾಡುತ್ತಿದ್ದಾರೆ‌. ನನ್ನ ಜೀವಿತಾವಧಿಯಲ್ಲಿ ಇಂತಹ ದೊಡ್ಡ ಸಾಂಕ್ರಾಮಿಕ ರೋಗ ನೋಡಿಲ್ಲ. ಇದರಿಂದ ದೇಶದ ಜನ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮಾತನಾಡಿದರು

ರೆಮ್ಡಿಸಿವಿರ್​ ಲಸಿಕೆ ಕಳ್ಳದಾರಿಯಲ್ಲಿ ಮಾರಾಟ ಮಾಡ್ತಿದ್ದಾರೆ. ಈಗಾಗಲೇ ಅನೇಕ ಜನರನ್ನು ಬಂಧನ ಮಾಡಿದ್ದಾರೆ. ಆಡಳಿತದಲ್ಲಿ ಕೆಲ ಲೋಪಗಳು ಇರಬಹುದು. ಇದನ್ನು ಸರಿ ಮಾಡುವ ಕೆಲಸ ಸರ್ಕಾರ ತಕ್ಷಣ ಮಾಡಬೇಕು‌ ಎಂದು ಸಲಹೆ ನೀಡಿದರು.

ಸರ್ಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಲಾಕ್ ಡೌನ್ ಮಾಡುವ ಬಗ್ಗೆ ಒಂದು ತಿಂಗಳ ಮುಂಚೆಯೇ ಸಲಹೆ ಕೊಟ್ಟಿದ್ದರು. ಆದರೆ ಆಗ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಹಳ್ಳಿಗಳಲ್ಲೂ ಸೋಂಕು ಹೆಚ್ಚುತ್ತಿದೆ. ಹಾಗಾಗಿ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ ಎಂದು ಹೇಳಿದರು.

ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ನಮ್ಮ ಜಿಲ್ಲೆಗೂ ವೆಂಟಿಲೇಟರ್, ಔಷಧಿ ಕಳಿಸಿದ್ದಾರೆ. ಸರ್ಕಾರ ಏನೂ ಮಾಡಿಲ್ಲವೆಂದು ನಾನು ಹೇಳುವುದಿಲ್ಲ. ಆದರೆ ಇನ್ನೂ ಸಾಕಷ್ಟು ಕೆಲಸ ಮಾಡುವ ಅವಶ್ಯಕತೆ ಇದೆ. ಅರಸಿಕೆರೆ ತಾಲೂಕಿನಲ್ಲಿ ಸೋಂಕಿತರೊಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ 4 ಲಕ್ಷ ಖರ್ಚಾಗಿದೆ. ಅದೇ ಮನೆಯಲ್ಲಿ ತಾಯಿ, ಹೆಂಡತಿ, ತಂದೆಗೂ ಸೋಂಕು ಬಂದಿದೆ. ನಾನೇ ಮೆಡಿಕಲ್ ಅಧಿಕಾರಿಗಳಿಗೆ ಕರೆ ಮಾಡಿ ಕ್ರಮವಹಿಸಲು ಸೂಚನೆ ನೀಡಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಕೊರತೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಕರ್ಯಗಳ ಕೊರತೆ ಇದೆ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗಬೇಕಾಗುತ್ತಿದೆ. ವ್ಯವಸ್ಥೆಯಲ್ಲಿ ಕೆಲ ದೋಷಗಳು ಇವೆ. ಇದನ್ನು ಸರಿ ಮಾಡುವ ಕೆಲಸ ಸರ್ಕಾರ ಮಾಡಬೇಕು ಎಂದು ಗೌಡರು ಸಲಹೆ ನೀಡಿದರು.

ಕೇಂದ್ರದಿಂದ ಲಸಿಕೆ, ಔಷಧಿ, ವೆಂಟಿಲೇಟರ್, ಆಕ್ಸಿಜನ್ ನಿಡೋದ್ರಲ್ಲಿ ಮಲತಾಯಿ ಧೋರಣೆ ತೋರಿದೆ ಅನ್ನುವ ವಿಚಾರ ಮಾತನಾಡಿ, ಈ ಬಗ್ಗೆ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಕುಮಾರಸ್ವಾಮಿ ಅವರು ಕೂಡಾ ಈ ಬಗ್ಗೆ ಅನೇಕ ಬಾರಿ ಮಾತಾಡಿದ್ದಾರೆ ಎಂದು ಹೇಳಿದರು.

ಕೊರೊನಾ ಹೆಚ್ಚಳಕ್ಕೆ ಪಂಚ ರಾಜ್ಯಗಳ ಚುನಾವಣೆ ಕಾರಣವಾಯಿತೇ?: ಪ್ರಧಾನಿ ಮೋದಿ ಅವರ ಕ್ಷೇತ್ರದಲ್ಲೂ ಸೋಂಕು ಹೆಚ್ಚಾಗಿದೆ. ಸ್ವಲ್ಪ ಅವರು ಭಾವೋದ್ವೇಗಕ್ಕೆ ಒಳಗಾಗಿ ಮಾತಾಡಿದ್ದಾರೆ. ಕೇಂದ್ರ ಸರ್ಕಾರದವರು 5 ರಾಜ್ಯಗಳ ಚುನಾವಣೆ ಕಡೆ ಹೆಚ್ಚು ಗಮನ ಕೊಟ್ಟರು. ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಹೀಗೆ ಆಗುತ್ತಿರಲಿಲ್ಲವೇನೋ ಎಂದರು.

ಚುನಾವಣೆ ಕೆಲಸದಿಂದ ಕೊರೊನಾ ಕೆಲಸದಲ್ಲಿ ಮೋದಿ ಅವರು ಸ್ವಲ್ಪ ನೆಗ್ಲೆಕ್ಟ್ ಮಾಡಿದ್ರು ಅಂತ ಎಲ್ಲರೂ ಮಾತನಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಹೆಚ್ಚು ಸಮಸ್ಯೆ ಆಗೋದಕ್ಕೆ ಕಾರಣ ಆಗಿರಬಹುದು. ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣಕ್ಕೆ ಬಿದ್ದರು. ಚುನಾವಣೆ ಗಮನದಲ್ಲಿ ಕೊರೊನಾ ನಿರ್ವಹಣೆ ಮಾಡುವಲ್ಲಿ ಮೋದಿ ಅವರು ಮರೆತಿರಬಹುದು ಎಂದು ಹೇಳಿದರು.

ಬೀದಿಗೆ ಬಂದು ಪ್ರತಿಭಟನೆ ಮಾಡುವುದಿಲ್ಲ: ಕೊರೊನಾ ಹಿನ್ನೆಲೆ ಬೀದಿಗಳಿದು ಹೋರಾಟ ಮಾಡುವ ಸ್ಥಿತಿ ಇಲ್ಲ. ಆದರೆ ಸರ್ಕಾರವನ್ನು ಎಚ್ಚರಿಸುವ ಕೆಲಸ ನಾವು ಮಾಡುತ್ತೇವೆ. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನತೆಯ ಸಂಕಷ್ಟಕ್ಕೆ ನೆರವಾಗಬೇಕೆಂದು ಮಾಧ್ಯಮದವರ ಮೂಲಕ ಮನವಿ ಮಾಡುತ್ತೇನೆ ಎಂದರು.

ಚುನಾವಣೆಗಳಿಗೆ ಸಿದ್ದತೆ : ಬಿಬಿಎಂಪಿ ಚುನಾವಣೆ, ಮುಂದಿನ ವಿಧಾನಸಭೆ ಚುನಾವಣೆ ಸಂಬಂಧ ನಮ್ಮ ಮುಖಂಡರ ಜೊತೆ ಸಭೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ರಾಜ್ಯದಲ್ಲಿ 3 ವಿಭಾಗಗಳಾಗಿ ಮಾಡಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಎಲ್ಲಾ ಜಿಲ್ಲೆಗಳ ಮುಖಂಡರ ಸಭೆಯನ್ನು ಕುಮಾರಸ್ವಾಮಿ ಅವರೇ ಮಾಡಿ ಮುಂದಿನ ನಿರ್ಧಾರ ಮಾಡುತ್ತಾರೆ. ಕುಮಾರಸ್ವಾಮಿ ಅವರು ಶಾಸಕರ ಜೊತೆ ನಿರಂತರ ಸಭೆ ಮಾಡ್ತಿದ್ದಾರೆ. ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ಟ್ವಿಟರ್ ಮೂಲಕ ಸಲಹೆಗಳನ್ನ ನೀಡುವ ಕೆಲಸ ಮಾಡ್ತಿದ್ದಾರೆ. ಅವರು ಶಾಸಕಾಂಗ ಪಕ್ಷದ ನಾಯಕರು, ಅವರೇ ಇಡೀ ರಾಜ್ಯದ ಕೆಲಸ ಮುಂದುವರಿಸುತ್ತಾರೆ ಎಂದು ಹೇಳಿದರು.

ನನ್ನ ಅವಧಿಯಲ್ಲಿ ಬೆಂಗಳೂರಿಗೆ, ರಾಜ್ಯಕ್ಕೆ ಏನು ಕೆಲಸ ಆಗಿದೆ. ಕುಮಾರಸ್ವಾಮಿ ಕಾಲದಲ್ಲಿ ಏನಾಗಿದೆ ಅಂತ ಮನೆ ಮನೆಗೂ ತಲುಪಿಸುವ ಕೆಲಸ ಆಗಬೇಕು. ಎಲ್ಲಾ ವಾರ್ಡ್​ಗಳ ಮುಖಂಡರನ್ನು ಭೇಟಿ ಮಾಡಿ ಚುನಾವಣೆಗೆ ಬರುವ ಮುನ್ನ ಎಲ್ಲಾ ವಾರ್ಡ್​ನಲ್ಲಿ ಸಭೆ ಮಾಡುತ್ತೇವೆ. ರಾಜ್ಯದ ಸಂಘಟನೆ ಸಂಬಂಧಿಸಿದಂತೆ ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ. ಈಗಾಗಲೇ ಪಂಚರತ್ನ ಯೋಜನೆ ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಾರೆ ಎಂದರು.

ಓದಿ: ಹಿಂದಿಯಲ್ಲಿ ಮಾತನಾಡಬೇಡಿ, ಇದು ಕರ್ನಾಟಕ, ಕನ್ನಡದಲ್ಲೇ ಮಾತನಾಡಿ : ಬೈಕ್​ ಸವಾರನಿಗೆ ತಹಶೀಲ್ದಾರ್​ ಪಾಠ!

ಬೆಂಗಳೂರು: ಕೊರೊನಾ 2ನೇ ಅಲೆ ವ್ಯಾಪಕವಾಗಿರುವ ಈ ಸಮಯದಲ್ಲಿ ಹಣಕಾಸು ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ನಮಗೆ (ಕರ್ನಾಟಕಕ್ಕೆ) ಅನ್ಯಾಯ ಮಾಡಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿಕ್ಕ ರಾಜ್ಯಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡುತ್ತಾರೆ. ಆದರೆ, ನಮ್ಮ ರಾಜ್ಯಕ್ಕೆ ಕಡಿಮೆ ಹಣ ಬಿಡುಗಡೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದರು.

ಕೊರೊನಾ ವಿಚಾರದಲ್ಲಿ ಪ್ರಧಾನಿ‌ ಮೋದಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೊಟ್ಟಿದ್ದೇನೆ. ನಾನು 12 ಸಲಹೆಗಳನ್ನು ಕೊಟ್ಟಿದ್ದೆ. ಅದರಲ್ಲಿ ಕೆಲವು ಸಲಹೆಗಳನ್ನು ಕಾರ್ಯಗತ ಮಾಡುತ್ತಿದ್ದಾರೆ ಎಂದರು.

ಮೊದಲ ಅಲೆಯಲ್ಲಿ ಯಶಸ್ವಿಯಾಗಿ ನಿರ್ವಹಣೆ ಮಾಡಿದರೆಂದು ಪ್ರಧಾನಿ ಮೋದಿ ಅವರನ್ನು ಎಲ್ಲರೂ ಹೊಗಳಿದ್ದರು. 2ನೇ ಅಲೆಯಲ್ಲಿ ಸೋಂಕು ತೀವ್ರವಾಗಿ ಹೆಚ್ಚಳ ಆಗಿದೆ. ಜೊತೆಗೆ ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಬಗ್ಗೆ ಆತಂಕ ಉಂಟು ಮಾಡಿದೆ. ದೇಶ ವಿದೇಶಗಳ ಎಕ್ಸ್​ಪರ್ಟ್​ಗಳು ಇದರ ಬಗ್ಗೆ ಮಾತನಾಡುತ್ತಿದ್ದಾರೆ‌. ನನ್ನ ಜೀವಿತಾವಧಿಯಲ್ಲಿ ಇಂತಹ ದೊಡ್ಡ ಸಾಂಕ್ರಾಮಿಕ ರೋಗ ನೋಡಿಲ್ಲ. ಇದರಿಂದ ದೇಶದ ಜನ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮಾತನಾಡಿದರು

ರೆಮ್ಡಿಸಿವಿರ್​ ಲಸಿಕೆ ಕಳ್ಳದಾರಿಯಲ್ಲಿ ಮಾರಾಟ ಮಾಡ್ತಿದ್ದಾರೆ. ಈಗಾಗಲೇ ಅನೇಕ ಜನರನ್ನು ಬಂಧನ ಮಾಡಿದ್ದಾರೆ. ಆಡಳಿತದಲ್ಲಿ ಕೆಲ ಲೋಪಗಳು ಇರಬಹುದು. ಇದನ್ನು ಸರಿ ಮಾಡುವ ಕೆಲಸ ಸರ್ಕಾರ ತಕ್ಷಣ ಮಾಡಬೇಕು‌ ಎಂದು ಸಲಹೆ ನೀಡಿದರು.

ಸರ್ಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಲಾಕ್ ಡೌನ್ ಮಾಡುವ ಬಗ್ಗೆ ಒಂದು ತಿಂಗಳ ಮುಂಚೆಯೇ ಸಲಹೆ ಕೊಟ್ಟಿದ್ದರು. ಆದರೆ ಆಗ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಹಳ್ಳಿಗಳಲ್ಲೂ ಸೋಂಕು ಹೆಚ್ಚುತ್ತಿದೆ. ಹಾಗಾಗಿ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ ಎಂದು ಹೇಳಿದರು.

ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ನಮ್ಮ ಜಿಲ್ಲೆಗೂ ವೆಂಟಿಲೇಟರ್, ಔಷಧಿ ಕಳಿಸಿದ್ದಾರೆ. ಸರ್ಕಾರ ಏನೂ ಮಾಡಿಲ್ಲವೆಂದು ನಾನು ಹೇಳುವುದಿಲ್ಲ. ಆದರೆ ಇನ್ನೂ ಸಾಕಷ್ಟು ಕೆಲಸ ಮಾಡುವ ಅವಶ್ಯಕತೆ ಇದೆ. ಅರಸಿಕೆರೆ ತಾಲೂಕಿನಲ್ಲಿ ಸೋಂಕಿತರೊಬ್ಬರಿಗೆ ಖಾಸಗಿ ಆಸ್ಪತ್ರೆಯಲ್ಲಿ 4 ಲಕ್ಷ ಖರ್ಚಾಗಿದೆ. ಅದೇ ಮನೆಯಲ್ಲಿ ತಾಯಿ, ಹೆಂಡತಿ, ತಂದೆಗೂ ಸೋಂಕು ಬಂದಿದೆ. ನಾನೇ ಮೆಡಿಕಲ್ ಅಧಿಕಾರಿಗಳಿಗೆ ಕರೆ ಮಾಡಿ ಕ್ರಮವಹಿಸಲು ಸೂಚನೆ ನೀಡಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯ ಕೊರತೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಕರ್ಯಗಳ ಕೊರತೆ ಇದೆ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗಬೇಕಾಗುತ್ತಿದೆ. ವ್ಯವಸ್ಥೆಯಲ್ಲಿ ಕೆಲ ದೋಷಗಳು ಇವೆ. ಇದನ್ನು ಸರಿ ಮಾಡುವ ಕೆಲಸ ಸರ್ಕಾರ ಮಾಡಬೇಕು ಎಂದು ಗೌಡರು ಸಲಹೆ ನೀಡಿದರು.

ಕೇಂದ್ರದಿಂದ ಲಸಿಕೆ, ಔಷಧಿ, ವೆಂಟಿಲೇಟರ್, ಆಕ್ಸಿಜನ್ ನಿಡೋದ್ರಲ್ಲಿ ಮಲತಾಯಿ ಧೋರಣೆ ತೋರಿದೆ ಅನ್ನುವ ವಿಚಾರ ಮಾತನಾಡಿ, ಈ ಬಗ್ಗೆ ನಾನು ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಕುಮಾರಸ್ವಾಮಿ ಅವರು ಕೂಡಾ ಈ ಬಗ್ಗೆ ಅನೇಕ ಬಾರಿ ಮಾತಾಡಿದ್ದಾರೆ ಎಂದು ಹೇಳಿದರು.

ಕೊರೊನಾ ಹೆಚ್ಚಳಕ್ಕೆ ಪಂಚ ರಾಜ್ಯಗಳ ಚುನಾವಣೆ ಕಾರಣವಾಯಿತೇ?: ಪ್ರಧಾನಿ ಮೋದಿ ಅವರ ಕ್ಷೇತ್ರದಲ್ಲೂ ಸೋಂಕು ಹೆಚ್ಚಾಗಿದೆ. ಸ್ವಲ್ಪ ಅವರು ಭಾವೋದ್ವೇಗಕ್ಕೆ ಒಳಗಾಗಿ ಮಾತಾಡಿದ್ದಾರೆ. ಕೇಂದ್ರ ಸರ್ಕಾರದವರು 5 ರಾಜ್ಯಗಳ ಚುನಾವಣೆ ಕಡೆ ಹೆಚ್ಚು ಗಮನ ಕೊಟ್ಟರು. ಚುನಾವಣೆ ಹಿನ್ನೆಲೆಯಲ್ಲಿ ಕೊರೊನಾ ಬಗ್ಗೆ ಗಮನ ಕೊಡಲಿಲ್ಲ. ಚುನಾವಣೆ ಬದಲು ಕೊರೊನಾ ಕಡೆ ಗಮನ ಕೊಟ್ಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಹೀಗೆ ಆಗುತ್ತಿರಲಿಲ್ಲವೇನೋ ಎಂದರು.

ಚುನಾವಣೆ ಕೆಲಸದಿಂದ ಕೊರೊನಾ ಕೆಲಸದಲ್ಲಿ ಮೋದಿ ಅವರು ಸ್ವಲ್ಪ ನೆಗ್ಲೆಕ್ಟ್ ಮಾಡಿದ್ರು ಅಂತ ಎಲ್ಲರೂ ಮಾತನಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಹೆಚ್ಚು ಸಮಸ್ಯೆ ಆಗೋದಕ್ಕೆ ಕಾರಣ ಆಗಿರಬಹುದು. ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣಕ್ಕೆ ಬಿದ್ದರು. ಚುನಾವಣೆ ಗಮನದಲ್ಲಿ ಕೊರೊನಾ ನಿರ್ವಹಣೆ ಮಾಡುವಲ್ಲಿ ಮೋದಿ ಅವರು ಮರೆತಿರಬಹುದು ಎಂದು ಹೇಳಿದರು.

ಬೀದಿಗೆ ಬಂದು ಪ್ರತಿಭಟನೆ ಮಾಡುವುದಿಲ್ಲ: ಕೊರೊನಾ ಹಿನ್ನೆಲೆ ಬೀದಿಗಳಿದು ಹೋರಾಟ ಮಾಡುವ ಸ್ಥಿತಿ ಇಲ್ಲ. ಆದರೆ ಸರ್ಕಾರವನ್ನು ಎಚ್ಚರಿಸುವ ಕೆಲಸ ನಾವು ಮಾಡುತ್ತೇವೆ. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನತೆಯ ಸಂಕಷ್ಟಕ್ಕೆ ನೆರವಾಗಬೇಕೆಂದು ಮಾಧ್ಯಮದವರ ಮೂಲಕ ಮನವಿ ಮಾಡುತ್ತೇನೆ ಎಂದರು.

ಚುನಾವಣೆಗಳಿಗೆ ಸಿದ್ದತೆ : ಬಿಬಿಎಂಪಿ ಚುನಾವಣೆ, ಮುಂದಿನ ವಿಧಾನಸಭೆ ಚುನಾವಣೆ ಸಂಬಂಧ ನಮ್ಮ ಮುಖಂಡರ ಜೊತೆ ಸಭೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲರ ಜೊತೆ ಚರ್ಚೆ ಮಾಡಿ ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ರಾಜ್ಯದಲ್ಲಿ 3 ವಿಭಾಗಗಳಾಗಿ ಮಾಡಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಎಲ್ಲಾ ಜಿಲ್ಲೆಗಳ ಮುಖಂಡರ ಸಭೆಯನ್ನು ಕುಮಾರಸ್ವಾಮಿ ಅವರೇ ಮಾಡಿ ಮುಂದಿನ ನಿರ್ಧಾರ ಮಾಡುತ್ತಾರೆ. ಕುಮಾರಸ್ವಾಮಿ ಅವರು ಶಾಸಕರ ಜೊತೆ ನಿರಂತರ ಸಭೆ ಮಾಡ್ತಿದ್ದಾರೆ. ಸರ್ಕಾರದ ವೈಫಲ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ಟ್ವಿಟರ್ ಮೂಲಕ ಸಲಹೆಗಳನ್ನ ನೀಡುವ ಕೆಲಸ ಮಾಡ್ತಿದ್ದಾರೆ. ಅವರು ಶಾಸಕಾಂಗ ಪಕ್ಷದ ನಾಯಕರು, ಅವರೇ ಇಡೀ ರಾಜ್ಯದ ಕೆಲಸ ಮುಂದುವರಿಸುತ್ತಾರೆ ಎಂದು ಹೇಳಿದರು.

ನನ್ನ ಅವಧಿಯಲ್ಲಿ ಬೆಂಗಳೂರಿಗೆ, ರಾಜ್ಯಕ್ಕೆ ಏನು ಕೆಲಸ ಆಗಿದೆ. ಕುಮಾರಸ್ವಾಮಿ ಕಾಲದಲ್ಲಿ ಏನಾಗಿದೆ ಅಂತ ಮನೆ ಮನೆಗೂ ತಲುಪಿಸುವ ಕೆಲಸ ಆಗಬೇಕು. ಎಲ್ಲಾ ವಾರ್ಡ್​ಗಳ ಮುಖಂಡರನ್ನು ಭೇಟಿ ಮಾಡಿ ಚುನಾವಣೆಗೆ ಬರುವ ಮುನ್ನ ಎಲ್ಲಾ ವಾರ್ಡ್​ನಲ್ಲಿ ಸಭೆ ಮಾಡುತ್ತೇವೆ. ರಾಜ್ಯದ ಸಂಘಟನೆ ಸಂಬಂಧಿಸಿದಂತೆ ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ. ಈಗಾಗಲೇ ಪಂಚರತ್ನ ಯೋಜನೆ ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಾರೆ ಎಂದರು.

ಓದಿ: ಹಿಂದಿಯಲ್ಲಿ ಮಾತನಾಡಬೇಡಿ, ಇದು ಕರ್ನಾಟಕ, ಕನ್ನಡದಲ್ಲೇ ಮಾತನಾಡಿ : ಬೈಕ್​ ಸವಾರನಿಗೆ ತಹಶೀಲ್ದಾರ್​ ಪಾಠ!

Last Updated : May 24, 2021, 5:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.