ETV Bharat / state

ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ? ಇಂದೇ 10 ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

author img

By

Published : Apr 18, 2023, 12:27 PM IST

ನಾಮಪತ್ರಿಕೆ ಸಲ್ಲಿಕೆಗೆ ಇನ್ನು ಕೇವಲ ಮೂರು ದಿನಗಳಷ್ಟೇ ಬಾಕಿ ಇರುವುದರಿಂದ ಕಾಂಗ್ರೆಸ್​ ಪಕ್ಷ ಇಂದೇ 4 ನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

cng
ಕಾಂಗ್ರೆಸ್​ ಪಕ್ಷ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಮೂರೇ ದಿನ ಬಾಕಿ ಇರುವ ಹಿನ್ನೆಲೆ ಅಭ್ಯರ್ಥಿಗಳಿಂದ ಸಾಕಷ್ಟು ಒತ್ತಡ ಕೇಳಿ ಬರುತ್ತಿದೆ. ಇನ್ನಷ್ಟು ವಿಳಂಬವಾದರೆ ಗೆಲ್ಲುವ ಅಭ್ಯರ್ಥಿಗಳು ಪಕ್ಷೇತರವಾಗಿ ಇಲ್ಲವೇ ಬೇರೆ ಪಕ್ಷದಿಂದ ಕಣಕ್ಕಿಳಿಯುವ ಆತಂಕ ಇರುವ ಹಿನ್ನೆಲೆ ಬಾಕಿ ಇರುವ 14ರ ಪೈಕಿ 10 ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿ ಹೆಸರು ಪ್ರಕಟಿಸುವ ಸಾಧ್ಯತೆ ಇದೆ.

ಮೊದಲ ಪಟ್ಟಿಯಲ್ಲಿ 124, ಎರಡನೇ ಪಟ್ಟಿಯಲ್ಲಿ 42 ಮತ್ತು ಮೂರನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್ ನಾಯಕರು ಹಾಲಿ ನಾಲ್ವರು ಶಾಸಕರಿರುವ ಹರಿಹರ (ರಾಮಪ್ಪ), ಪುಲಕೇಶಿ ನಗರ (ಅಖಂಡ ಶ್ರೀನಿವಾಸ್ ಮೂರ್ತಿ), ಶಿಡ್ಲಘಟ್ಟ (ವಿ ಮುನಿಯಪ್ಪ) ಹಾಗೂ ಲಿಂಗಸುಗೂರು (ಡಿಎಸ್ ಹೂಲಗೇರಿ) ಕ್ಷೇತ್ರ ಸೇರಿಸಿಕೊಂಡು 15 ಕ್ಷೇತ್ರಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿತ್ತು. ಈ ಮಧ್ಯೆ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ತ್ಯಜಿಸಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಗೆ ಆಗಮಿಸಿದ ಪಂಜಾಬ್ ಸಿಎಂ ಭಗವಂತ ಮಾನ್ ; ಎಎಪಿ ಅಭ್ಯರ್ಥಿಗಳ ಪರ ಪ್ರಚಾರ

ಇನ್ನೊಂದೆಡೆ ಬಾಕಿ ಉಳಿಸಿಕೊಂಡಿದ್ದ ಹುಬ್ಬಳ್ಳಿ - ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಟಿಕೆಟ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ನೀಡಲಾಗಿದೆ. ಇದರಿಂದ ಇನ್ನು 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸುವುದು ಬಾಕಿ ಇದೆ. ಉಳಿದೆಲ್ಲ ಕ್ಷೇತ್ರದಲ್ಲಿ ಘೋಷಿತ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಕೆ ಮಾಡಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇಂದು ನಾಳೆ ನಾಡಿದ್ದು ಮೂರೇ ದಿನಗಳ ಕಾಲ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಇದರಲ್ಲಿಯೂ ಗುರುವಾರ ಅಮಾವಾಸ್ಯೆ ಬಂದಿರುವ ಹಿನ್ನೆಲೆ ಕೆಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಇಚ್ಛಿಸುವುದಿಲ್ಲ. ಹೀಗಾಗಿ ಇಂದು ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ ಸಾಧ್ಯತೆ ಹೆಚ್ಚಿದೆ. ಬಾಕಿ ಇರುವ 14 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಸಾಧ್ಯತೆ ಇದ್ದು, ಉಳಿದ ಕ್ಷೇತ್ರಗಳಿಗೆ ಮೌಖಿಕವಾಗಿ ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಸೂಚಿಸುವ ಸಾಧ್ಯತೆ ಹೆಚ್ಚಿದೆ.

ಕಾಂಗ್ರೆಸ್ ನ ಘೋಷಣೆಯಾಗದ ಕ್ಷೇತ್ರಗಳು: ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ಸಿಟಿ, ಶಿಗ್ಗಾಂವಿ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸಗೂರು, ಹುಬ್ಬಳ್ಳಿ ಧಾರವಾಡ ಪಶ್ಚಿಮ, ಮಂಗಳೂರು ಉತ್ತರ, ಶಿಡ್ಲಘಟ್ಟ, ಕೆ ಆರ್ ಪುರಂ, ಚಿಕ್ಕಮಗಳೂರು, ಹರಿಹರ ಬಾಕಿ ಇದೆ.

ಇದನ್ನೂ ಓದಿ: ಚುನಾವಣಾ ಅಖಾಡಕ್ಕಿಳಿದ ಪಿಎಸ್ಐ ಪರೀಕ್ಷೆ ಹಗರಣದ ಆರೋಪಿ.. 6.5 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ ಆರ್​ಡಿಪಿ

ಇದನ್ನೂ ಓದಿ: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನ್ನೂ ಘೋಷಣೆಯಾಗದ ಕಾಂಗ್ರೆಸ್ ಟಿಕೆಟ್.. ಇಬ್ಬರ ನಡುವೆ ಪ್ರಬಲ ಪೈಪೋಟಿ

ಬೆಂಗಳೂರು: ರಾಜ್ಯ ವಿಧಾನಸಭೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡುವ ಸಾಧ್ಯತೆ ಹೆಚ್ಚಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಮೂರೇ ದಿನ ಬಾಕಿ ಇರುವ ಹಿನ್ನೆಲೆ ಅಭ್ಯರ್ಥಿಗಳಿಂದ ಸಾಕಷ್ಟು ಒತ್ತಡ ಕೇಳಿ ಬರುತ್ತಿದೆ. ಇನ್ನಷ್ಟು ವಿಳಂಬವಾದರೆ ಗೆಲ್ಲುವ ಅಭ್ಯರ್ಥಿಗಳು ಪಕ್ಷೇತರವಾಗಿ ಇಲ್ಲವೇ ಬೇರೆ ಪಕ್ಷದಿಂದ ಕಣಕ್ಕಿಳಿಯುವ ಆತಂಕ ಇರುವ ಹಿನ್ನೆಲೆ ಬಾಕಿ ಇರುವ 14ರ ಪೈಕಿ 10 ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿ ಹೆಸರು ಪ್ರಕಟಿಸುವ ಸಾಧ್ಯತೆ ಇದೆ.

ಮೊದಲ ಪಟ್ಟಿಯಲ್ಲಿ 124, ಎರಡನೇ ಪಟ್ಟಿಯಲ್ಲಿ 42 ಮತ್ತು ಮೂರನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್ ನಾಯಕರು ಹಾಲಿ ನಾಲ್ವರು ಶಾಸಕರಿರುವ ಹರಿಹರ (ರಾಮಪ್ಪ), ಪುಲಕೇಶಿ ನಗರ (ಅಖಂಡ ಶ್ರೀನಿವಾಸ್ ಮೂರ್ತಿ), ಶಿಡ್ಲಘಟ್ಟ (ವಿ ಮುನಿಯಪ್ಪ) ಹಾಗೂ ಲಿಂಗಸುಗೂರು (ಡಿಎಸ್ ಹೂಲಗೇರಿ) ಕ್ಷೇತ್ರ ಸೇರಿಸಿಕೊಂಡು 15 ಕ್ಷೇತ್ರಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿತ್ತು. ಈ ಮಧ್ಯೆ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ತ್ಯಜಿಸಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಗೆ ಆಗಮಿಸಿದ ಪಂಜಾಬ್ ಸಿಎಂ ಭಗವಂತ ಮಾನ್ ; ಎಎಪಿ ಅಭ್ಯರ್ಥಿಗಳ ಪರ ಪ್ರಚಾರ

ಇನ್ನೊಂದೆಡೆ ಬಾಕಿ ಉಳಿಸಿಕೊಂಡಿದ್ದ ಹುಬ್ಬಳ್ಳಿ - ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಟಿಕೆಟ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ನೀಡಲಾಗಿದೆ. ಇದರಿಂದ ಇನ್ನು 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸುವುದು ಬಾಕಿ ಇದೆ. ಉಳಿದೆಲ್ಲ ಕ್ಷೇತ್ರದಲ್ಲಿ ಘೋಷಿತ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಕೆ ಮಾಡಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇಂದು ನಾಳೆ ನಾಡಿದ್ದು ಮೂರೇ ದಿನಗಳ ಕಾಲ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಇದರಲ್ಲಿಯೂ ಗುರುವಾರ ಅಮಾವಾಸ್ಯೆ ಬಂದಿರುವ ಹಿನ್ನೆಲೆ ಕೆಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಇಚ್ಛಿಸುವುದಿಲ್ಲ. ಹೀಗಾಗಿ ಇಂದು ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ ಸಾಧ್ಯತೆ ಹೆಚ್ಚಿದೆ. ಬಾಕಿ ಇರುವ 14 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಸಾಧ್ಯತೆ ಇದ್ದು, ಉಳಿದ ಕ್ಷೇತ್ರಗಳಿಗೆ ಮೌಖಿಕವಾಗಿ ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಸೂಚಿಸುವ ಸಾಧ್ಯತೆ ಹೆಚ್ಚಿದೆ.

ಕಾಂಗ್ರೆಸ್ ನ ಘೋಷಣೆಯಾಗದ ಕ್ಷೇತ್ರಗಳು: ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ಸಿಟಿ, ಶಿಗ್ಗಾಂವಿ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸಗೂರು, ಹುಬ್ಬಳ್ಳಿ ಧಾರವಾಡ ಪಶ್ಚಿಮ, ಮಂಗಳೂರು ಉತ್ತರ, ಶಿಡ್ಲಘಟ್ಟ, ಕೆ ಆರ್ ಪುರಂ, ಚಿಕ್ಕಮಗಳೂರು, ಹರಿಹರ ಬಾಕಿ ಇದೆ.

ಇದನ್ನೂ ಓದಿ: ಚುನಾವಣಾ ಅಖಾಡಕ್ಕಿಳಿದ ಪಿಎಸ್ಐ ಪರೀಕ್ಷೆ ಹಗರಣದ ಆರೋಪಿ.. 6.5 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ ಆರ್​ಡಿಪಿ

ಇದನ್ನೂ ಓದಿ: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನ್ನೂ ಘೋಷಣೆಯಾಗದ ಕಾಂಗ್ರೆಸ್ ಟಿಕೆಟ್.. ಇಬ್ಬರ ನಡುವೆ ಪ್ರಬಲ ಪೈಪೋಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.