ETV Bharat / state

ಮಂಗಳೂರು ಪೊಲೀಸರ ವಶಕ್ಕೆ ಬಾಂಬ್‌ ಇರಿಸಿದ್ದ ಆರೋಪಿ ಆದಿತ್ಯ ರಾವ್​!​​

author img

By

Published : Jan 22, 2020, 5:45 PM IST

ಬಾಂಬ್‌ ಇಟ್ಟ ಆರೋಪಿಯನ್ನ ಹಲಸೂರುಗೇಟ್ ಪೊಲೀಸರು 1ನೇ ಎಸಿಎಂಎಂ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಇದೇ ವೇಳೆ ಮಂಗಳೂರು ಪೊಲೀಸರು ನ್ಯಾಯಾಲಯದ ಎದುರು ಹಾಜರಾಗಿದ್ದರು. ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ‌ಮನವಿ ಮಾಡಿದರು. ಹೀಗಾಗಿ ಆರೋಪಿ ಆದಿತ್ಯ ರಾವ್​​ನನ್ನ ನ್ಯಾಯಾಲಯ ಮಂಗಳೂರು ಪೊಲೀಸರ ವಶಕ್ಕೆ ನೀಡಿದೆ. ಸದ್ಯ ಆರೋಪಿಯನ್ನ‌ ಮಂಗಳೂರ ಪೊಲೀಸರು ಟ್ರಾನ್ಸಿಟ್ ವಾರೆಂಟ್ ಮೂಲಕ ಏರ್‌ಪೋರ್ಟ್​ಗೆ ಕರೆದೊಯ್ದಿದ್ದಾರೆ.

accused Aditya Rao to Mangalore
ಬಾಂಬ್​​ ರೂವಾರಿ ಆರೋಪಿ ಆದಿತ್ಯ ರಾವ್​​​

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾದ ಆರೋಪಿ ಆದಿತ್ಯ ರಾವ್​​​ನನ್ನು ಪೊಲೀಸರು 1ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಿದರು. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು ಮಂಗಳೂರಿಗೆ ಕರೆದೊಯ್ಯಲು ಅನುಮತಿ ನೀಡಿದ್ದಾರೆ.

ಮಂಗಳೂರು ಪೊಲೀಸರ ವಶಕ್ಕೆ ಆರೋಪಿ ಆದಿತ್ಯ ರಾವ್..​​​

ಬಾಂಬ್‌ ಇಟ್ಟ ಆರೋಪಿಯನ್ನ ಹಲಸೂರುಗೇಟ್ ಪೊಲೀಸರು 1ನೇ ಎಸಿಎಂಎಂ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಇದೇ ವೇಳೆ ಮಂಗಳೂರು ಪೊಲೀಸರು ನ್ಯಾಯಾಲಯದ ಎದುರು ಹಾಜರಾಗಿದ್ದರು. ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ‌ಮನವಿ ಮಾಡಿದರು. ಹೀಗಾಗಿ ಆರೋಪಿ ಆದಿತ್ಯ ರಾವ್​​ನನ್ನ ನ್ಯಾಯಾಲಯ ಮಂಗಳೂರು ಪೊಲೀಸರ ವಶಕ್ಕೆ ನೀಡಿದೆ. ಸದ್ಯ ಆರೋಪಿಯನ್ನ‌ ಮಂಗಳೂರ ಪೊಲೀಸರು ಟ್ರಾನ್ಸಿಟ್ ವಾರೆಂಟ್ ಮೂಲಕ ಏರ್‌ಪೋರ್ಟ್​ಗೆ ಕರೆದೊಯ್ದಿದ್ದಾರೆ.

ನ್ಯಾಯಾಲಯ ನಾಳೆ 5.30ರೊಳಗೆ ಮಂಗಳೂರು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಬೇಕು ಎಂದು ಆದೇಶಿಸಿದೆ. ಹೀಗಾಗಿ ಮಂಗಳೂರು ಪೊಲೀಸರು ಇಂದು ಆರೋಪಿಯನ್ನ ತಮ್ಮ ವಶದಲ್ಲೇ ಇರಿಸಿಕೊಂಡು ನಾಳೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಆರೋಪಿಯನ್ನ ಎಸಿಎಂಎಂ ನ್ಯಾಯಾಲಯದಿಂದ ಬಹಳ ಭದ್ರತೆಯಿಂದ ಪೊಲೀಸರು ಕರೆದೊಯ್ದಿದ್ದಾರೆ.

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾದ ಆರೋಪಿ ಆದಿತ್ಯ ರಾವ್​​​ನನ್ನು ಪೊಲೀಸರು 1ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಿದರು. ಬಳಿಕ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು ಮಂಗಳೂರಿಗೆ ಕರೆದೊಯ್ಯಲು ಅನುಮತಿ ನೀಡಿದ್ದಾರೆ.

ಮಂಗಳೂರು ಪೊಲೀಸರ ವಶಕ್ಕೆ ಆರೋಪಿ ಆದಿತ್ಯ ರಾವ್..​​​

ಬಾಂಬ್‌ ಇಟ್ಟ ಆರೋಪಿಯನ್ನ ಹಲಸೂರುಗೇಟ್ ಪೊಲೀಸರು 1ನೇ ಎಸಿಎಂಎಂ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಇದೇ ವೇಳೆ ಮಂಗಳೂರು ಪೊಲೀಸರು ನ್ಯಾಯಾಲಯದ ಎದುರು ಹಾಜರಾಗಿದ್ದರು. ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ‌ಮನವಿ ಮಾಡಿದರು. ಹೀಗಾಗಿ ಆರೋಪಿ ಆದಿತ್ಯ ರಾವ್​​ನನ್ನ ನ್ಯಾಯಾಲಯ ಮಂಗಳೂರು ಪೊಲೀಸರ ವಶಕ್ಕೆ ನೀಡಿದೆ. ಸದ್ಯ ಆರೋಪಿಯನ್ನ‌ ಮಂಗಳೂರ ಪೊಲೀಸರು ಟ್ರಾನ್ಸಿಟ್ ವಾರೆಂಟ್ ಮೂಲಕ ಏರ್‌ಪೋರ್ಟ್​ಗೆ ಕರೆದೊಯ್ದಿದ್ದಾರೆ.

ನ್ಯಾಯಾಲಯ ನಾಳೆ 5.30ರೊಳಗೆ ಮಂಗಳೂರು ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಬೇಕು ಎಂದು ಆದೇಶಿಸಿದೆ. ಹೀಗಾಗಿ ಮಂಗಳೂರು ಪೊಲೀಸರು ಇಂದು ಆರೋಪಿಯನ್ನ ತಮ್ಮ ವಶದಲ್ಲೇ ಇರಿಸಿಕೊಂಡು ನಾಳೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಆರೋಪಿಯನ್ನ ಎಸಿಎಂಎಂ ನ್ಯಾಯಾಲಯದಿಂದ ಬಹಳ ಭದ್ರತೆಯಿಂದ ಪೊಲೀಸರು ಕರೆದೊಯ್ದಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.