ಬೆಂಗಳೂರು: ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳ ಪ್ರಸ್ತಾಪಿಸಿರುವ ಯೋಜನೆಗಳ/ಆಡಳಿತ ವ್ಯವಸ್ಥೆ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸರ್ಕಾರ ಸಮಿತಿ ರಚಿಸಿದೆ.
ಸಾರಿಗೆ ಸಂಸ್ಥೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಚರ್ಚಿಸಿರುವಂತೆ ಈ ಕೆಳಕಂಡ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ.
ಓದಿ: ಬಿಸಿಯೂಟ ಸ್ಥಗಿತ ವಿಚಾರ: ಪಡಿತರ ವಿತರಣೆ ಬಗ್ಗೆ ಹೈಕೋರ್ಟ್ಗೆ ಮಾಹಿತಿ ನೀಡಿದ ಸರ್ಕಾರ
ಸಾರಿಗೆ ಸಂಸ್ಥೆಗಳ ನೌಕರರಿಗೆ ಆರೋಗ್ಯ ಭಾಗ್ಯ ವಿಮಾ ಯೋಜನೆಯನ್ನು ಅಳವಡಿಸಲು, ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ಹಾಗೂ ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆಯನ್ನು ರೂಪಿಸುವ ಸಂಬಂಧ ಈ ಕೆಳಕಂಡಂತೆ ಆದೇಶಿಸಿದೆ.
ಸಾರಿಗೆ ಇಲಾಖೆ ನೌಕರರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿದ ಸರ್ಕಾರ
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳ ಅಧಿಕಾರಿ/ನೌಕರರಿಗೆ ಕೆಳಕಂಡ ಯೋಜನೆಗಳನ್ನು, ಆಡಳಿತ ವ್ಯವಸ್ಥೆಗಳನ್ನು ಜಾರಿಗೊಳಿಸುವ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲು ಸಮಿತಿಯನ್ನು ರಚಿಸಿರುವ ಸರ್ಕಾರ, ಪರಿಶೀಲಿಸಿ ವರದಿ ನೀಡುವಂತೆ ಸಾರಿಗೆ ಇಲಾಖೆಗೆ ಆದೇಶಿಸಿದೆ.
ಸಾರಿಗೆ ನೌಕರರು ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು. ಇದಕ್ಕೆ ಮಣಿದ ಸರ್ಕಾರ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ನಿನ್ನೆ ಮಧ್ಯಾಹ್ನ ಸಾರಿಗೆ ನೌಕರರು ಮುಷ್ಕರವನ್ನು ವಾಪಸ್ ಪಡೆದರು.