ETV Bharat / state

ಪ್ರವಾಹದ ವಿಚಾರವಾಗಿ ಸಚಿವರು ಸಿಎಂ ಸೂಚನೆಯನ್ನೇ ಧಿಕ್ಕರಿಸಿದ್ದಾರೆ.. ಡಿಕೆಶಿ ಕಿಡಿ

author img

By

Published : Aug 8, 2020, 4:29 PM IST

ಸಚಿವರಿಗೂ ನೆರೆ ಪೀಡಿತ ಪ್ರದೇಶಗಳಿಗೆ ಹೋಗುವಂತೆ ಸಿಎಂ ಹೇಳಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡುವ ಬದಲು, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಈಶ್ವರಪ್ಪ ನವರ ವಿರುದ್ಧ ಕಿಡಿಕಾರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು : ಇಂದು ಮತ್ತು ನಾಳೆ ಎರಡು ದಿನ ಕೊಡಗು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಸ್ಥಳೀಯ ಮಟ್ಟದಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ನೆರೆಪೀಡಿತ ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಶನಿವಾರ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾವೇರಿ ಜಲ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಸರ್ಕಾರ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ. ಮುಖ್ಯಮಂತ್ರಿಗಳು ಆಸ್ಪತ್ರೆಯಲಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ. ಸಚಿವರಿಗೂ ನೆರೆ ಪೀಡಿತ ಪ್ರದೇಶಗಳಿಗೆ ಹೋಗುವಂತೆ ಹೇಳಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡುವ ಬದಲು, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಈಶ್ವರಪ್ಪನವರ ವಿರುದ್ಧ ಕಿಡಿಕಾರಿದರು.

ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿಗಳನ್ನೇ ಡಿಗ್ರೇಡ್ ಮಾಡೋಕೆ ಡಿಸಿಎಂ ಹೊರಟಿದ್ದಾರೆ. ಅವರು ಏನು ಮಾತನಾಡಿದರು ಎಲ್ಲ ಮಾಹಿತಿ ನಮಗೆ ಸಿಗುತ್ತೆ. ನಾವ್ಯಾಕೆ ಅವರ ವಿರುದ್ಧ ಆರೋಪ ಮಾಡೋಣ. ನಮಗೆ ಯಾರು ಏನು ಮಾತನಾಡಿದರು ಎಂಬುದು ಎಲ್ಲಾ ಗೊತ್ತಾಗುತ್ತೆ. ಬಿಜೆಪಿಯವರು ಏನು ಮಾತನಾಡಿದರು, ನಮ್ಮವರು ಏನು ಮಾತನಾಡಿದರು, ಎಲ್ಲವು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದರು.

ನೆರೆಗಿಂತಲೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಕಾಂಗ್ರೆಸ್ ನಾಯಕರು ಇದುವರೆಗೂ ನೆರೆ ಬಗ್ಗೆ ಮಾತನಾಡಿಲ್ಲ. ಆದರೆ, ಡಿಸಿಎಂ ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿಕೊಂಡ್ರು ಅನ್ನೋ ರೀತಿ ಮಾತನಾಡುತ್ತಿದ್ದಾರೆ. ಅವರೇ ಮೈಮೇಲೆ ವಿವಾದ ಎಳೆದುಕೊಳ್ಳುತ್ತಿದ್ದಾರೆ. ಕೆಲ ಸಚಿವರು ಇನ್ನೂ ತಮ್ಮ ಜಿಲ್ಲೆಗಳಿಗೆ ಹೋಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೆರೆ ಬಗ್ಗೆ ಅಧ್ಯಯನ ಮಾಡಲು ಕಾಂಗ್ರೆಸ್ ಹಾಲಿ-ಮಾಜಿ ಶಾಸಕರನ್ನೊಳಗೊಂಡ ಒಂದು ತಂಡ ರಚನೆ ಮಾಡುತ್ತೇವೆ. ಸರ್ಕಾರ ಪ್ರವಾಹದ ವಿಚಾರವಾಗಿ ಏನೆಲ್ಲ ಕ್ರಮ ಕೈಗೊಂಡಿದ್ದಾರೆ ಎಂದು ಈ ತಂಡ ವರದಿ ನೀಡಲಿದೆ ಎಂದು ಮಾಹಿತಿ ನೀಡಿದರು.

ಚಾಲಕರ ಸಂಘಟನೆಗಳ ಮುಖಂಡರ ಜತೆ ಡಿಕೆಶಿ ಸಮಾಲೋಚನೆ
ಚಾಲಕರ ಸಂಘಟನೆಗಳ ಮುಖಂಡರ ಜತೆ ಡಿಕೆಶಿ ಸಮಾಲೋಚನೆ

ಇದಕ್ಕೂ ಮುನ್ನ ಸದಾಶಿವನಗರ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಓಲಾ, ಊಬರ್, ಟ್ಯಾಕ್ಸಿ ಮತ್ತು ಆಟೋ ಚಾಲಕರ ಸಂಘಟನೆಗಳ ಮುಖಂಡರ ಜತೆ ಡಿಕೆಶಿ ಸಮಾಲೋಚನೆ ನಡೆಸಿದರು.

ಬೆಂಗಳೂರು : ಇಂದು ಮತ್ತು ನಾಳೆ ಎರಡು ದಿನ ಕೊಡಗು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ಸ್ಥಳೀಯ ಮಟ್ಟದಲ್ಲಿ ಮಾಹಿತಿ ಪಡೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ನೆರೆಪೀಡಿತ ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಶನಿವಾರ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾವೇರಿ ಜಲ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಸರ್ಕಾರ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ. ಮುಖ್ಯಮಂತ್ರಿಗಳು ಆಸ್ಪತ್ರೆಯಲಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ. ಸಚಿವರಿಗೂ ನೆರೆ ಪೀಡಿತ ಪ್ರದೇಶಗಳಿಗೆ ಹೋಗುವಂತೆ ಹೇಳಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡುವ ಬದಲು, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಈಶ್ವರಪ್ಪನವರ ವಿರುದ್ಧ ಕಿಡಿಕಾರಿದರು.

ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿಗಳನ್ನೇ ಡಿಗ್ರೇಡ್ ಮಾಡೋಕೆ ಡಿಸಿಎಂ ಹೊರಟಿದ್ದಾರೆ. ಅವರು ಏನು ಮಾತನಾಡಿದರು ಎಲ್ಲ ಮಾಹಿತಿ ನಮಗೆ ಸಿಗುತ್ತೆ. ನಾವ್ಯಾಕೆ ಅವರ ವಿರುದ್ಧ ಆರೋಪ ಮಾಡೋಣ. ನಮಗೆ ಯಾರು ಏನು ಮಾತನಾಡಿದರು ಎಂಬುದು ಎಲ್ಲಾ ಗೊತ್ತಾಗುತ್ತೆ. ಬಿಜೆಪಿಯವರು ಏನು ಮಾತನಾಡಿದರು, ನಮ್ಮವರು ಏನು ಮಾತನಾಡಿದರು, ಎಲ್ಲವು ಗೊತ್ತಾಗುತ್ತದೆ ಎಂದು ಟಾಂಗ್ ನೀಡಿದರು.

ನೆರೆಗಿಂತಲೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಕಾಂಗ್ರೆಸ್ ನಾಯಕರು ಇದುವರೆಗೂ ನೆರೆ ಬಗ್ಗೆ ಮಾತನಾಡಿಲ್ಲ. ಆದರೆ, ಡಿಸಿಎಂ ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿಕೊಂಡ್ರು ಅನ್ನೋ ರೀತಿ ಮಾತನಾಡುತ್ತಿದ್ದಾರೆ. ಅವರೇ ಮೈಮೇಲೆ ವಿವಾದ ಎಳೆದುಕೊಳ್ಳುತ್ತಿದ್ದಾರೆ. ಕೆಲ ಸಚಿವರು ಇನ್ನೂ ತಮ್ಮ ಜಿಲ್ಲೆಗಳಿಗೆ ಹೋಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೆರೆ ಬಗ್ಗೆ ಅಧ್ಯಯನ ಮಾಡಲು ಕಾಂಗ್ರೆಸ್ ಹಾಲಿ-ಮಾಜಿ ಶಾಸಕರನ್ನೊಳಗೊಂಡ ಒಂದು ತಂಡ ರಚನೆ ಮಾಡುತ್ತೇವೆ. ಸರ್ಕಾರ ಪ್ರವಾಹದ ವಿಚಾರವಾಗಿ ಏನೆಲ್ಲ ಕ್ರಮ ಕೈಗೊಂಡಿದ್ದಾರೆ ಎಂದು ಈ ತಂಡ ವರದಿ ನೀಡಲಿದೆ ಎಂದು ಮಾಹಿತಿ ನೀಡಿದರು.

ಚಾಲಕರ ಸಂಘಟನೆಗಳ ಮುಖಂಡರ ಜತೆ ಡಿಕೆಶಿ ಸಮಾಲೋಚನೆ
ಚಾಲಕರ ಸಂಘಟನೆಗಳ ಮುಖಂಡರ ಜತೆ ಡಿಕೆಶಿ ಸಮಾಲೋಚನೆ

ಇದಕ್ಕೂ ಮುನ್ನ ಸದಾಶಿವನಗರ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಓಲಾ, ಊಬರ್, ಟ್ಯಾಕ್ಸಿ ಮತ್ತು ಆಟೋ ಚಾಲಕರ ಸಂಘಟನೆಗಳ ಮುಖಂಡರ ಜತೆ ಡಿಕೆಶಿ ಸಮಾಲೋಚನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.