ETV Bharat / state

ಪಾದರಾಯನಪುರ ಗಲಭೆ ಪ್ರಕರಣ: ಎಫ್ಐಆರ್​​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ

author img

By

Published : Jun 2, 2020, 10:37 PM IST

ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ನಾಲ್ಕು ಪ್ರತ್ಯೇಕ ಎಫ್ಐಆರ್​​​​ಗಳನ್ನು ರದ್ದುಪಡಿಸುವಂತೆ ಕೋರಿ, ವಜೀರ್ ಖಾನ್ ಸೇರಿದಂತೆ ಎಲ್ಲಾ 126 ಆರೋಪಿಗಳು ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್​ ನ್ಯಾಯಮೂರ್ತಿ ಪಿ. ಭಜಂತ್ರಿ ಅವರಿದ್ದ ಪೀಠ ವಿಚಾರಣೆ ನಡೆಸಿದ್ದು, ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

The Padarayanapur riot case
ಎಫ್ಐಆರ್​​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳು, ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್​​​​​​​​​​​​​​ಗಳಿಗೆ ತಡೆ ನೀಡಬೇಕು ಎಂದು ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ನಾಲ್ಕು ಪ್ರತ್ಯೇಕ ಎಫ್ಐಆರ್​​​​ಗಳನ್ನು ರದ್ದುಪಡಿಸುವಂತೆ ಕೋರಿ, ವಜೀರ್ ಖಾನ್ ಸೇರಿದಂತೆ ಎಲ್ಲಾ 126 ಆರೋಪಿಗಳು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಪಿ. ಭಜಂತ್ರಿ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ ಅರ್ಜಿದಾರರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಪ್ರತಿಯೊಂದು ಎಫ್ಐಆರ್​​​​​ಗೂ ಸಂಬಂಧಿಸಿದ ದೂರು ಪ್ರತ್ಯೇಕವಾಗಿದೆ. ಅರ್ಜಿದಾರರು ದೂರಿರುವಂತೆ ಒಂದೇ ಕೃತ್ಯಕ್ಕೆ 2 ಎಫ್ಐಆರ್ ದಾಖಲಿಸಿಲ್ಲ. ಆದ್ದರಿಂದ ಅರ್ಜಿದಾರರ ಮನವಿಯನ್ನು ತಿರಸ್ಕರಿಸಬೇಕು ಎಂದು ಕೋರಿದರು. ಸರ್ಕಾರದ ಪರ ವಕೀಲರ ಕೋರಿಕೆ ಪುರಸ್ಕರಿಸಿದ ಪೀಠ, ಎಫ್ಐಆರ್​​​​ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿತು.

ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳು ಕಳೆದ ಮೇ 29ರಂದು ಹೈಕೋರ್ಟ್​​​​​ನಿಂದ ಷರತ್ತು ಬದ್ಧ ಜಾಮೀನು ಪಡೆದಿದ್ದಾರೆ. ಇದೀಗ ಎಫ್ಐಆರ್​​​​​​​ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್​​​​​ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸರು ದುರುದ್ದೇಶದಿಂದ ಒಂದೇ ಕೃತ್ಯಕ್ಕೆ 4 ಎಫ್ಐಆರ್​​​​​ಗಳನ್ನು ದಾಖಲಿಸಿದ್ದಾರೆ. ಆದ್ದರಿಂದ ಎಫ್ಐಆರ್​​​​ಗಳನ್ನು ರದ್ದುಪಡಿಸಬೇಕು ಮತ್ತು ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್​​​​​​ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದಾರೆ.

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳು, ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್​​​​​​​​​​​​​​ಗಳಿಗೆ ತಡೆ ನೀಡಬೇಕು ಎಂದು ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ನಾಲ್ಕು ಪ್ರತ್ಯೇಕ ಎಫ್ಐಆರ್​​​​ಗಳನ್ನು ರದ್ದುಪಡಿಸುವಂತೆ ಕೋರಿ, ವಜೀರ್ ಖಾನ್ ಸೇರಿದಂತೆ ಎಲ್ಲಾ 126 ಆರೋಪಿಗಳು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಪಿ. ಭಜಂತ್ರಿ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ ಅರ್ಜಿದಾರರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಆದರೆ, ಪ್ರತಿಯೊಂದು ಎಫ್ಐಆರ್​​​​​ಗೂ ಸಂಬಂಧಿಸಿದ ದೂರು ಪ್ರತ್ಯೇಕವಾಗಿದೆ. ಅರ್ಜಿದಾರರು ದೂರಿರುವಂತೆ ಒಂದೇ ಕೃತ್ಯಕ್ಕೆ 2 ಎಫ್ಐಆರ್ ದಾಖಲಿಸಿಲ್ಲ. ಆದ್ದರಿಂದ ಅರ್ಜಿದಾರರ ಮನವಿಯನ್ನು ತಿರಸ್ಕರಿಸಬೇಕು ಎಂದು ಕೋರಿದರು. ಸರ್ಕಾರದ ಪರ ವಕೀಲರ ಕೋರಿಕೆ ಪುರಸ್ಕರಿಸಿದ ಪೀಠ, ಎಫ್ಐಆರ್​​​​ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿತು.

ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳು ಕಳೆದ ಮೇ 29ರಂದು ಹೈಕೋರ್ಟ್​​​​​ನಿಂದ ಷರತ್ತು ಬದ್ಧ ಜಾಮೀನು ಪಡೆದಿದ್ದಾರೆ. ಇದೀಗ ಎಫ್ಐಆರ್​​​​​​​ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್​​​​​ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸರು ದುರುದ್ದೇಶದಿಂದ ಒಂದೇ ಕೃತ್ಯಕ್ಕೆ 4 ಎಫ್ಐಆರ್​​​​​ಗಳನ್ನು ದಾಖಲಿಸಿದ್ದಾರೆ. ಆದ್ದರಿಂದ ಎಫ್ಐಆರ್​​​​ಗಳನ್ನು ರದ್ದುಪಡಿಸಬೇಕು ಮತ್ತು ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್​​​​​​ಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.