ಬೆಂಗಳೂರು: ದಂಡ ವಸೂಲಿ ಭರದಲ್ಲಿ ಸಂಚಾರಿ ಪೊಲೀಸರು ಮಾನವೀಯತೆಯನ್ನೇ ಮರೆತರೇ?. ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ರಸ್ತೆ ಮಧ್ಯದಲ್ಲಿ ತಡೆದ ಜಯನಗರ ಸಂಚಾರಿ ಠಾಣೆ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು, ಈ ಪ್ರಕರಣದ ವಿರುದ್ಧ ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರತಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಜಯನಗರ ಸಂಚಾರಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ ಇಂತಹ ಗಂಭೀರವಾದ ಆರೋಪ ಮಾಡಲಾಗಿದೆ.
![ayanagar traffic station police](https://etvbharatimages.akamaized.net/etvbharat/prod-images/17690186_thumb_kk.jpg)
ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ರಸ್ತೆಯಲ್ಲೇ ತಡೆದಿರುವ ಜಯನಗರ ಸಂಚಾರಿ ಠಾಣೆ ಪೊಲೀಸರು, ಒಂದು ಗಂಟೆಗೂ ಹೆಚ್ಚು ಕಾಲ ತಡೆದು ನಿಲ್ಲಿಸಿದ್ದಾರೆ. ಬಳಿಕ ದಂಡ ವಸೂಲಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಠಾಣೆಗೆ ನೀಡಿದ ದೂರಿನಲ್ಲಿ ಏನಿದೆ?: ಫೆಬ್ರವರಿ 2ರಂದು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ರಾಕೇಶ್ ಅವರ ಪೋಷಕರಾದ ಮಲ್ಲೇಶ್ ಹಾಗೂ ಮಂಗಳಾ ಅವರು ಸಂಗಂ ಸರ್ಕಲ್ ಬಳಿ ಜಯನಗರ ಸಂಚಾರಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ತಡೆದಿದ್ದಾರೆ. ವಾಹನದ ಮೇಲಿರುವವರರಿಗೆ ಐದು ಸಾವಿರ ರೂ. ದಂಡ ಪಾವತಿಸಲು ಸೂಚಿಸಿದ್ದಾರೆ. ಈ ವೇಳೆ, ''45 ವರ್ಷದ ತನ್ನ ಪತ್ನಿಗೆ ಸಕ್ಕರೆ ಖಾಯಿಲೆ ಹಾಗೂ ಬಿಪಿಯಿದ್ದು, ತಪಾಸಣೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೆವು. ಆಗ ನಮ್ಮ ಬಳಿ ಎರಡು ಸಾವಿರ ರೂ. ಮಾತ್ರ ಇದೆ. ಅಷ್ಟು ಮಾತ್ರ ಪಾವತಿ ಮಾಡುತ್ತೇನೆ' ಎಂದು ಮಲ್ಲೇಶ್ ಸಂಚಾರಿ ಠಾಣೆ ಪೊಲೀಸರಿಗೆ ಹೇಳಿದ್ದಾರೆ.
-
ಜಯನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯು 02/02/23ರಂದು ನನ್ನ ವೃದ್ಧ ತಂದೆ ಹಾಗೂ ಆಸ್ಪತ್ರೆಗೆ ತೆರಳುತ್ತಿದ್ದ ತಾಯಿಯನ್ನು ತಡೆದು ರಸ್ತೆಯಲ್ಲಿಯೇ 1 ಗಂಟೆಗಳ ಕಾಲ ನಿಲ್ಲಿಸಿ. ಏಕವಚನದಲ್ಲಿ ಮಾತನಾಡಿ ಅಮಾನವೀಯವಾಗಿ ವರ್ತಿಸಿ ದುರ್ನಡತೆ ತೋರಿಸಿರುತ್ತಾರೆ. 03/02/22 ರಂದು ಠಾಣಾಧಿಕಾರಿಗಳನ್ನು ಭೇಟಿ ಮಾಡಿ ಅವರ ಗಮನಕ್ಕೂ ಸಹ ತಂದಿರುತ್ತೇನೆ. pic.twitter.com/S7c1gaw2GP
— Rakesh NSUI (@NsuiRakesh) February 6, 2023 " class="align-text-top noRightClick twitterSection" data="
">ಜಯನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯು 02/02/23ರಂದು ನನ್ನ ವೃದ್ಧ ತಂದೆ ಹಾಗೂ ಆಸ್ಪತ್ರೆಗೆ ತೆರಳುತ್ತಿದ್ದ ತಾಯಿಯನ್ನು ತಡೆದು ರಸ್ತೆಯಲ್ಲಿಯೇ 1 ಗಂಟೆಗಳ ಕಾಲ ನಿಲ್ಲಿಸಿ. ಏಕವಚನದಲ್ಲಿ ಮಾತನಾಡಿ ಅಮಾನವೀಯವಾಗಿ ವರ್ತಿಸಿ ದುರ್ನಡತೆ ತೋರಿಸಿರುತ್ತಾರೆ. 03/02/22 ರಂದು ಠಾಣಾಧಿಕಾರಿಗಳನ್ನು ಭೇಟಿ ಮಾಡಿ ಅವರ ಗಮನಕ್ಕೂ ಸಹ ತಂದಿರುತ್ತೇನೆ. pic.twitter.com/S7c1gaw2GP
— Rakesh NSUI (@NsuiRakesh) February 6, 2023ಜಯನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯು 02/02/23ರಂದು ನನ್ನ ವೃದ್ಧ ತಂದೆ ಹಾಗೂ ಆಸ್ಪತ್ರೆಗೆ ತೆರಳುತ್ತಿದ್ದ ತಾಯಿಯನ್ನು ತಡೆದು ರಸ್ತೆಯಲ್ಲಿಯೇ 1 ಗಂಟೆಗಳ ಕಾಲ ನಿಲ್ಲಿಸಿ. ಏಕವಚನದಲ್ಲಿ ಮಾತನಾಡಿ ಅಮಾನವೀಯವಾಗಿ ವರ್ತಿಸಿ ದುರ್ನಡತೆ ತೋರಿಸಿರುತ್ತಾರೆ. 03/02/22 ರಂದು ಠಾಣಾಧಿಕಾರಿಗಳನ್ನು ಭೇಟಿ ಮಾಡಿ ಅವರ ಗಮನಕ್ಕೂ ಸಹ ತಂದಿರುತ್ತೇನೆ. pic.twitter.com/S7c1gaw2GP
— Rakesh NSUI (@NsuiRakesh) February 6, 2023