ETV Bharat / state

ಯುವತಿ-ಪೋಷಕರಿಗೆ ರಕ್ಷಣೆ ಕೊಡಲು ಸಿದ್ಧ, ನಿಷ್ಪಕ್ಷಪಾತ ತನಿಖೆ ನಡೆಯಲಿದೆ: ಬಸವರಾಜ ಬೊಮ್ಮಾಯಿ

author img

By

Published : Mar 25, 2021, 4:23 PM IST

Updated : Mar 25, 2021, 5:35 PM IST

ವಿಶೇಷ ತನಿಖಾ ತಂಡದ ತನಿಖೆಯಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಈಗಾಗಲೇ ಹೇಳಿದ್ದೇನೆ. ತನಿಖಾ ತಂಡವು ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಲಿದೆ. ಯಾರು ಏನೇ ಹೇಳಲಿ, ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದೇವೆ. ಅದಕ್ಕಾಗಿ ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆ ಮಾಡಿದ್ದೇವೆ ಮತ್ತು ಆ ಯುವತಿಯ ಹೇಳಿಕೆ ಪಡೆಯಲು ಸಿದ್ಧರಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ ಆ ಮಹಿಳೆಗೆ ರಕ್ಷಣೆ ಕೊಡಲು ಸಿದ್ಧರಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Basavaraja Bommai
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿಡಿ ಪ್ರಕರಣದ ವಿಚಾರದಲ್ಲಿ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದು, ತನಿಖೆಯಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಯುವತಿ ಹಾಗೂ ಅವರ ಪೋಷಕರಿಗೆ ಅಗತ್ಯ ರಕ್ಷಣೆ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ತನಿಖಾ ತಂಡದ ತನಿಖೆಯಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಈಗಾಗಲೇ ಹೇಳಿದ್ದೇನೆ. ತಂಡ ರಚನೆಯಾಗಿರುವುದರಿಂದ ಏನೂ ಹೇಳುವುದಿಲ್ಲ. ಯಾವುದೇ ಒಂದು ಪ್ರಕರಣದ ತನಿಖೆ ಆಗುವಾಗ ಹಲವಾರು ಬೆಳವಣಿಗೆಗಳು, ಹಲವಾರು ತಿರುವುಗಳು ಪಡೆಯುತ್ತವೆ. ಅವೆಲ್ಲದಕ್ಕೂ ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ ಎಂದು ಪ್ರಸ್ತುತ ಸಿಡಿ ತನಿಖಾ ಹಂತದ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಈಗಾಗಲೇ ನಮ್ಮ ತನಿಖಾ ತಂಡದ ಮುಖ್ಯಸ್ಥರು ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ. ಯಾರು ಏನೇ ಹೇಳಲಿ ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದೇವೆ. ಅದಕ್ಕಾಗಿ ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆ ಮಾಡಿದ್ದೇವೆ ಮತ್ತು ಆ ಯುವತಿಯ ಹೇಳಿಕೆ ಪಡೆಯಲು ಸಿದ್ಧರಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ ಆ ಮಹಿಳೆಗೆ ರಕ್ಷಣೆ ಕೊಡಲು ಸಿದ್ಧರಿದ್ದೇವೆ. ಅವರು ಎಲ್ಲಿದ್ದಾರೆ ಎಂದು ಹೇಳಿದರೆ ಅಲ್ಲಿಯೇ ರಕ್ಷಣೆ ಒದಗಿಸುತ್ತೇವೆ. ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿಕೊಡಲಾಗುತ್ತದೆ. ಪೊಲೀಸ್ ರಕ್ಷಣೆಯಲ್ಲಿ ಅವರು ಹೇಳಿಕೆ ಕೊಡಬಹುದು ಅಥವಾ ಇಲ್ಲಿಗೆ ಬಂದು ಹೇಳಿಕೆ ದಾಖಲಿಸಬಹುದು. ಇಲ್ಲಿಗೆ ಬರಲು ಕೂಡ ರಕ್ಷಣೆ ಒದಗಿಸುತ್ತೇವೆ ಎಂದರು.

ಓದಿ:ಸಿಡಿ ಪ್ರಕರಣ: ರಮೇಶ್​ ಜಾರಕಿಹೊಳಿ ವಿರುದ್ಧ ರಾಜ್ಯಪಾಲ-ಲೋಕಾಯುಕ್ತಕ್ಕೆ ದೂರು

ಯಾರ ಪರವಾಗಿಯೂ ನಮ್ಮ ತನಿಖೆ ಇಲ್ಲ, ಯಾರ ವಿರುದ್ಧವೂ ನಮ್ಮ ತನಿಖೆ ಇಲ್ಲ. ಸತ್ಯ ಹೊರಗೆ ಬರಬೇಕು ಎನ್ನುವ ದೃಷ್ಟಿಯಿಂದ ತನಿಖೆ ಮಾಡುತ್ತಿದ್ದೇವೆ. ತನಿಖೆ ಮಾಡುವಂತಹ ಸಂದರ್ಭದಲ್ಲಿ ಹಲವಾರು ತಿರುವುಗಳು ಬರಲಿವೆ. ಅವನ್ನೆಲ್ಲಾ ನಾವು ಸಕಾರಾತ್ಮಕವಾಗಿ ತೆಗೆದುಕೊಂಡು ಯಾರ ವಿರುದ್ಧವೂ ತೆಗೆದದುಕೊಳ್ಳದೆ ನಿಷ್ಪಕ್ಷಪಾತವಾಗಿ ನಿಷ್ಠುರವಾಗಿ ನಮ್ಮ ವಿಶೇಷ ತನಿಖಾ ತಂಡ ತನಿಖೆ ಮಾಡುತ್ತದೆ. ಮುಂದಿನ ಎಲ್ಲಾ ಬೆಳವಣಿಗೆಗೆ ನಮ್ಮ ಎಸ್ಐಟಿ ತಂಡ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಆ ಯುವತಿಯ ಪೋಷಕರಿಗೂ ರಕ್ಷಣೆ ಕೊಡುವ ವ್ಯವಸ್ಥೆಯನ್ನು ನಾವು ಮಾಡುತ್ತೇವೆ. ಆದರೆ ರಕ್ಷಣೆ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರಿಗೆ ಯಾಕೆ ಕೇಳಿದ್ದಾರೆ ಅಂತಾ ಗೊತ್ತಿಲ್ಲ. ಅದನ್ನು ಅವರಿಗೆ ಕೇಳಬೇಕು ಎಂದರು.

ಬೆಂಗಳೂರು: ಸಿಡಿ ಪ್ರಕರಣದ ವಿಚಾರದಲ್ಲಿ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದು, ತನಿಖೆಯಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಯುವತಿ ಹಾಗೂ ಅವರ ಪೋಷಕರಿಗೆ ಅಗತ್ಯ ರಕ್ಷಣೆ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ತನಿಖಾ ತಂಡದ ತನಿಖೆಯಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಈಗಾಗಲೇ ಹೇಳಿದ್ದೇನೆ. ತಂಡ ರಚನೆಯಾಗಿರುವುದರಿಂದ ಏನೂ ಹೇಳುವುದಿಲ್ಲ. ಯಾವುದೇ ಒಂದು ಪ್ರಕರಣದ ತನಿಖೆ ಆಗುವಾಗ ಹಲವಾರು ಬೆಳವಣಿಗೆಗಳು, ಹಲವಾರು ತಿರುವುಗಳು ಪಡೆಯುತ್ತವೆ. ಅವೆಲ್ಲದಕ್ಕೂ ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ ಎಂದು ಪ್ರಸ್ತುತ ಸಿಡಿ ತನಿಖಾ ಹಂತದ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಈಗಾಗಲೇ ನಮ್ಮ ತನಿಖಾ ತಂಡದ ಮುಖ್ಯಸ್ಥರು ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ. ಯಾರು ಏನೇ ಹೇಳಲಿ ನಾವು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದೇವೆ. ಅದಕ್ಕಾಗಿ ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆ ಮಾಡಿದ್ದೇವೆ ಮತ್ತು ಆ ಯುವತಿಯ ಹೇಳಿಕೆ ಪಡೆಯಲು ಸಿದ್ಧರಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ ಆ ಮಹಿಳೆಗೆ ರಕ್ಷಣೆ ಕೊಡಲು ಸಿದ್ಧರಿದ್ದೇವೆ. ಅವರು ಎಲ್ಲಿದ್ದಾರೆ ಎಂದು ಹೇಳಿದರೆ ಅಲ್ಲಿಯೇ ರಕ್ಷಣೆ ಒದಗಿಸುತ್ತೇವೆ. ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಿಕೊಡಲಾಗುತ್ತದೆ. ಪೊಲೀಸ್ ರಕ್ಷಣೆಯಲ್ಲಿ ಅವರು ಹೇಳಿಕೆ ಕೊಡಬಹುದು ಅಥವಾ ಇಲ್ಲಿಗೆ ಬಂದು ಹೇಳಿಕೆ ದಾಖಲಿಸಬಹುದು. ಇಲ್ಲಿಗೆ ಬರಲು ಕೂಡ ರಕ್ಷಣೆ ಒದಗಿಸುತ್ತೇವೆ ಎಂದರು.

ಓದಿ:ಸಿಡಿ ಪ್ರಕರಣ: ರಮೇಶ್​ ಜಾರಕಿಹೊಳಿ ವಿರುದ್ಧ ರಾಜ್ಯಪಾಲ-ಲೋಕಾಯುಕ್ತಕ್ಕೆ ದೂರು

ಯಾರ ಪರವಾಗಿಯೂ ನಮ್ಮ ತನಿಖೆ ಇಲ್ಲ, ಯಾರ ವಿರುದ್ಧವೂ ನಮ್ಮ ತನಿಖೆ ಇಲ್ಲ. ಸತ್ಯ ಹೊರಗೆ ಬರಬೇಕು ಎನ್ನುವ ದೃಷ್ಟಿಯಿಂದ ತನಿಖೆ ಮಾಡುತ್ತಿದ್ದೇವೆ. ತನಿಖೆ ಮಾಡುವಂತಹ ಸಂದರ್ಭದಲ್ಲಿ ಹಲವಾರು ತಿರುವುಗಳು ಬರಲಿವೆ. ಅವನ್ನೆಲ್ಲಾ ನಾವು ಸಕಾರಾತ್ಮಕವಾಗಿ ತೆಗೆದುಕೊಂಡು ಯಾರ ವಿರುದ್ಧವೂ ತೆಗೆದದುಕೊಳ್ಳದೆ ನಿಷ್ಪಕ್ಷಪಾತವಾಗಿ ನಿಷ್ಠುರವಾಗಿ ನಮ್ಮ ವಿಶೇಷ ತನಿಖಾ ತಂಡ ತನಿಖೆ ಮಾಡುತ್ತದೆ. ಮುಂದಿನ ಎಲ್ಲಾ ಬೆಳವಣಿಗೆಗೆ ನಮ್ಮ ಎಸ್ಐಟಿ ತಂಡ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಆ ಯುವತಿಯ ಪೋಷಕರಿಗೂ ರಕ್ಷಣೆ ಕೊಡುವ ವ್ಯವಸ್ಥೆಯನ್ನು ನಾವು ಮಾಡುತ್ತೇವೆ. ಆದರೆ ರಕ್ಷಣೆ ನೀಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಅವರಿಗೆ ಯಾಕೆ ಕೇಳಿದ್ದಾರೆ ಅಂತಾ ಗೊತ್ತಿಲ್ಲ. ಅದನ್ನು ಅವರಿಗೆ ಕೇಳಬೇಕು ಎಂದರು.

Last Updated : Mar 25, 2021, 5:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.