ಬೆಂಗಳೂರು : ನಗರದ ಪೊಲೀಸ್ ಕ್ವಾಟ್ರಸ್ನಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಪೊಲೀಸ್ ಪೇದೆಯ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ. ಶೇಷಾದ್ರಿಪುರಂನ ಆನಂದರಾವ್ ವೃತ್ತದ ಪೊಲೀಸ್ ಕ್ವಾಟ್ರಸ್ನಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಸಿಸಿಟಿವಿ ಇಲ್ಲ : ನಗರದ ಪೊಲೀಸ್ ಕ್ವಾಟ್ರಸ್ನಲ್ಲಿ ಸಿಸಿಟಿವಿ ಇಲ್ಲದಿರುವುದನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಪೊಲೀಸರ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ ಎನ್ನಲಾಗುತ್ತಿದೆ.
ಬೀಗ ಮುರಿದು ಕಳ್ಳತನ : ಪೊಲೀಸ್ ಕ್ವಾಟ್ರಸ್ನಲ್ಲಿ ವಾಸವಿರುವ ಹೆಡ್ ಕಾನ್ಸ್ಟೇಬಲ್ ಮಾರುತಿ ರೈತರು ಭಾರತ್ ಬಂದ್ ಕರೆ ಕೊಟ್ಟ ದಿನ ಬೆಳಗ್ಗೆ 6 ಗಂಟೆಗೆ ಕರ್ತವ್ಯಕ್ಕೆ ತೆರಳಿದ್ದರು. ಅಂದು ರಾತ್ರಿ ತಮ್ಮ ಸ್ನೇಹಿತರ ಮನೆಯಲ್ಲಿ ಉಳಿದು ಮಾರನೆಯ ದಿನ ಮನೆಗೆ ಮರಳಿದ್ದರು. ಮನೆಗೆ ಬಂದು ನೋಡಿದಾಗ ಬೀಗ ಮುರಿದು ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.
ಚಿನ್ನ, ಬೆಳ್ಳಿ, ಮೊಬೈಲ್ ಕಳವು : ಕಳ್ಳರು ಮನೆಯಲ್ಲಿದ್ದ ಚಿನ್ನ, ಬೆಳ್ಳಿ, ಮೊಬೈಲ್ ಫೋನ್ ಸೇರಿ ಸುಮಾರು 85 ಸಾವಿರ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಹೆಡ್ ಕಾನ್ಸ್ಟೇಬಲ್ ಶೇಷಾದ್ರಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.