ETV Bharat / state

ಮೈತ್ರಿ ಸರ್ಕಾರಕ್ಕೆ ಏನೂ ಭಯವಿಲ್ಲ.. ಸಮಸ್ಯೆ ಬಂದ್ರೆ ಉಭಯ ಪಕ್ಷದ ನಾಯಕರೂ ನೋಡ್ಕೋತಾರೆ: ಹೆಚ್​ಡಿಡಿ

ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟರೆ ಅದನ್ನು ನೋಡಿಕೊಳ್ಳೋಕೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.

author img

By

Published : Jul 3, 2019, 3:14 PM IST

'ಕೈ' ಶಾಸಕರು ರಾಜೀನಾಮೆ ಕೊಟ್ರೆ ನೋಡಿಕೊಳ್ಳುವುದಕ್ಕೆ ಉಭಯ ನಾಯಕರಿದ್ದಾರೆ

ಬೆಂಗಳೂರು : ಕಾಂಗ್ರೆಸ್‌- ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇದೆ. ಹೀಗಾಗಿ ಸರ್ಕಾರಕ್ಕೆ ಯಾವುದೇ ಸಮಸ್ಯೆ‌ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಅಲ್ಪಸಂಖ್ಯಾತ ಘಟಕದ ಸಭೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟರೆ ಅದನ್ನು ನೋಡಿಕೊಳ್ಳೋಕೆ ಉಭಯ ನಾಯಕರು ಇದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದ್ದಾರೆ. ಇದೆಲ್ಲವ‌ನ್ನು ಅವರು ಸರಿ ಮಾಡುತ್ತಾರೆ ಎಂದರು.ಜಿಂದಾಲ್ ವಿಚಾರಕ್ಕೆ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿದ್ದರೆ ಅದನ್ನು ಸರಿ ಮಾಡುವ ಶಕ್ತಿ ಅವರ ನಾಯಕರಿಗಿದೆ. ಎಲ್ಲ ಸರಿ ಮಾಡುತ್ತಾರೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಪುನರುಚ್ಚರಿಸಿದರು.

'ಕೈ' ಶಾಸಕರು ರಾಜೀನಾಮೆ ಕೊಟ್ರೆ ನೋಡಿಕೊಳ್ಳುವುದಕ್ಕೆ ಉಭಯ ನಾಯಕರಿದ್ದಾರೆ

ನಮ್ಮ ಪಕ್ಷದ 37 ಶಾಸಕರು ಭದ್ರವಾಗಿದ್ದಾರೆ. ಕಾಂಗ್ರೆಸ್ ನ 78 ಜನ ಶಾಸಕರು ಭದ್ರವಾಗಿ ಇದ್ದಾರೆ. ಸರ್ಕಾರಕ್ಕೆ ಏನು ಸಮಸ್ಯೆ ಇಲ್ಲ. ಸರ್ಕಾರ ಸುಭದ್ರವಾಗಿ ಇರುತ್ತದೆ ಎಂದ್ರು. ಮಾಧ್ಯಮಗಳಿಗೆ ಸರ್ಕಾರ ಬಿಳೋದು ನೋಡುವ ಆಸೆ. ಆದರೆ ನಿಮ್ಮ ಆಸೆ ಈಡೇರೋದಿಲ್ಲ. ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗದಂತೆ ನಾವು ಕೆಲಸ ಮಾಡುತ್ತೇವೆ. ಸರ್ಕಾರಕ್ಕೆ ಸಮಸ್ಯೆ ಆಗದಂತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ನಾಳೆ ಬೆಂಗಳೂರಿನ 28 ಕ್ಷೇತ್ರಗಳ ಮುಖಂಡರು ಹಾಗೂ ವಿಧಾನಸಭೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳ ಸಭೆ ಕರೆದಿದ್ದೇನೆ ಎಂದು ತಿಳಿಸಿದ್ರು. ಆಗಸ್ಟ್ ನಲ್ಲಿ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸುಮಾರು 50 ಸಾವಿರ ಮಂದಿಯನ್ನು ಸೇರಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ರು.

ಬೆಂಗಳೂರು : ಕಾಂಗ್ರೆಸ್‌- ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇದೆ. ಹೀಗಾಗಿ ಸರ್ಕಾರಕ್ಕೆ ಯಾವುದೇ ಸಮಸ್ಯೆ‌ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಅಲ್ಪಸಂಖ್ಯಾತ ಘಟಕದ ಸಭೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟರೆ ಅದನ್ನು ನೋಡಿಕೊಳ್ಳೋಕೆ ಉಭಯ ನಾಯಕರು ಇದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದ್ದಾರೆ. ಇದೆಲ್ಲವ‌ನ್ನು ಅವರು ಸರಿ ಮಾಡುತ್ತಾರೆ ಎಂದರು.ಜಿಂದಾಲ್ ವಿಚಾರಕ್ಕೆ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿದ್ದರೆ ಅದನ್ನು ಸರಿ ಮಾಡುವ ಶಕ್ತಿ ಅವರ ನಾಯಕರಿಗಿದೆ. ಎಲ್ಲ ಸರಿ ಮಾಡುತ್ತಾರೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಪುನರುಚ್ಚರಿಸಿದರು.

'ಕೈ' ಶಾಸಕರು ರಾಜೀನಾಮೆ ಕೊಟ್ರೆ ನೋಡಿಕೊಳ್ಳುವುದಕ್ಕೆ ಉಭಯ ನಾಯಕರಿದ್ದಾರೆ

ನಮ್ಮ ಪಕ್ಷದ 37 ಶಾಸಕರು ಭದ್ರವಾಗಿದ್ದಾರೆ. ಕಾಂಗ್ರೆಸ್ ನ 78 ಜನ ಶಾಸಕರು ಭದ್ರವಾಗಿ ಇದ್ದಾರೆ. ಸರ್ಕಾರಕ್ಕೆ ಏನು ಸಮಸ್ಯೆ ಇಲ್ಲ. ಸರ್ಕಾರ ಸುಭದ್ರವಾಗಿ ಇರುತ್ತದೆ ಎಂದ್ರು. ಮಾಧ್ಯಮಗಳಿಗೆ ಸರ್ಕಾರ ಬಿಳೋದು ನೋಡುವ ಆಸೆ. ಆದರೆ ನಿಮ್ಮ ಆಸೆ ಈಡೇರೋದಿಲ್ಲ. ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗದಂತೆ ನಾವು ಕೆಲಸ ಮಾಡುತ್ತೇವೆ. ಸರ್ಕಾರಕ್ಕೆ ಸಮಸ್ಯೆ ಆಗದಂತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ನಾಳೆ ಬೆಂಗಳೂರಿನ 28 ಕ್ಷೇತ್ರಗಳ ಮುಖಂಡರು ಹಾಗೂ ವಿಧಾನಸಭೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳ ಸಭೆ ಕರೆದಿದ್ದೇನೆ ಎಂದು ತಿಳಿಸಿದ್ರು. ಆಗಸ್ಟ್ ನಲ್ಲಿ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸುಮಾರು 50 ಸಾವಿರ ಮಂದಿಯನ್ನು ಸೇರಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ರು.

Intro:ಬೆಂಗಳೂರು : ಕಾಂಗ್ರೆಸ್‌- ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇದೆ. ಹೀಗಾಗಿ ಸರ್ಕಾರಕ್ಜೆ ಯಾವುದೇ ಸಮಸ್ಯೆ‌ ಇಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ.Body:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಅಲ್ಪಸಂಖ್ಯಾತ ಘಟಕದ ಸಭೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟರೆ ಅದನ್ನು ನೋಡಿಕೊಳ್ಳೋಕೆ ಉಭಯ ನಾಯಕರು ಇದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇದ್ದಾರೆ. ಇದೆಲ್ಲವ‌ನ್ನು ಅವರು ಸರಿ ಮಾಡುತ್ತಾರೆ ಎಂದರು.
ಜಿಂದಾಲ್ ವಿಚಾರಕ್ಕೆ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿದ್ದರೆ ಅದನ್ನು ಸರಿ ಮಾಡುವ ಶಕ್ತಿ ಅವರ ನಾಯಕರಿಗಿದೆ. ಎಲ್ಲ ಸರಿ ಮಾಡುತ್ತಾರೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ ಎಂದು ಪುನರುಚ್ಚರಿಸಿದರು.
ಜೆಡಿಎಸ್ ಶಾಸಕರು ಆಪರೇಷನ್ ಕಮಲಕ್ಕೆ ತುತ್ತಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ನಿಮಗೆ ( ಮಾಧ್ಯಮದವರಿಗೆ) ಯಾಕೆ ಇಷ್ಟು ಸಂಕಟ. ನಮ್ಮ ಪಕ್ಷದ 37 ಶಾಸಕರು ಭದ್ರವಾಗಿದ್ದಾರೆ. ಕಾಂಗ್ರೆಸ್ ನ 78 ಜನ ಶಾಸಕರು ಭದ್ರವಾಗಿ ಇದ್ದಾರೆ. ಸರ್ಕಾರಕ್ಕೆ ಏನು ಸಮಸ್ಯೆ ಇಲ್ಲ. ಸರ್ಕಾರ ಸುಭದ್ರವಾಗಿ ಇರುತ್ತದೆ ಎಂದು ಹೇಳಿದರು.
ಮಾಧ್ಯಮಗಳಿಗೆ ಸರ್ಕಾರ ಬಿಳೋದು ನೋಡುವ ಆಸೆ. ಆದರೆ ನಿಮ್ಮ ಆಸೆ ಈಡೇರೋದಿಲ್ಲ. ಮೈತ್ರಿ ಸರ್ಕಾರಕ್ಕೆ ಧಕ್ಕೆ ಆಗದಂತೆ ನಾವು ಕೆಲಸ ಮಾಡುತ್ತೇವೆ. ಸರ್ಕಾರಕ್ಕೆ ಸಮಸ್ಯೆ ಆಗದಂತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.
ಕೇಂದ್ರದ ಬಿಜೆಪಿ ನಾಯಕರು ಸರ್ಕಾರ ಉರುಳಿಸಲು ಪ್ರಯತ್ನ ಮಾಡ್ತಿದ್ದಾರೆ ಅನ್ನೋ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಕೇಂದ್ರ ನಾಯಕರು ಆಪರೇಷನ್ ಮಾಡ್ತಿದ್ದಾರೆ ಅಂತ ಹೇಳೋಕೆ ನನ್ನ ಬಳಿ ಯಾವುದೇ ಪುರಾವೆ ಇಲ್ಲ. ನಾನು‌ ಈ ದೇಶದ ಮಾಜಿ ಪ್ರಧಾನಿ ಆಗಿದ್ದೆ. ಪುರಾವೆ ಇಲ್ಲದೆ ನಾನು ಮಾತನಾಡುವುದಿಲ್ಲ. ಅವರು, ಇವರ ಮೇಲೆ ಹೇಳುತ್ತಾರೆ. ಇವರು, ಅವರ ಮೇಲೆ ಹೇಳುತ್ತಾರೆ. ನಾನು ಯಾವುದೇ ಪುರಾವೆ ಇಲ್ಲದ ಮಾತನಾಡುವುದಿಲ್ಲ ಎಂದರು.
ಕೇಂದ್ರ ಬಿಜೆಪಿ ನಾಯಕರ ಕೈವಾಡ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಗೆ ಪ್ರತಿಕ್ರಿಸಿದ ಗೌಡರು, ಅವರ ನಾಯಕರು ದೆಹಲಿಯಲ್ಲಿ ಇದ್ದಾರೆ. ಅವರು ಈ ಬಗ್ಗೆ ಹೇಳಿರಬಹುದು. ಹೀಗಾಗಿ ಸಿದ್ದರಾಮಯ್ಯ ಹಾಗೇ ಹೇಳಿರಬಹುದು. ಹಾಗಾಗಿ ಅವರು ಅಂತಹ ಹೇಳಿಕೆ ನೀಡಿರಬಹುದು. ನಾನು ಅ ವಿಚಾರದಲ್ಲಿ ಮಾತಾಡಿ ಗೊಂದಲ ಉಂಟು ಮಾಡುವುದಿಲ್ಲ. ಸಿದ್ದರಾಮಯ್ಯ ಮಾತನ್ನು ನಾನು ಪುರಸ್ಕರಿಸುತ್ತೇನೆ ಎಂದು ಹೇಳಿದರು.
ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇನೆ. ನಾಳೆ ಬೆಂಗಳೂರಿನ 28 ಕ್ಷೇತ್ರಗಳ ಮುಖಂಡರು ಹಾಗೂ ವಿಧಾನಸಭೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳ ಸಭೆ ಕರೆದಿದ್ದೇನೆ. ಮತ್ತೆ ಜುಲೈ 6 ರಂದು ಸಭೆ ಕರೆಯಲಾಗುವುದು ಎಂದರು.
ನಾಳೆ ಪದಾಧಿಕಾರಿಗಳ ನೇಮಕ : ನಾಳೆ ಎಲ್ಲ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಅದೇ ರೀತಿ ಮಧು ಬಂಗಾರಪ್ಪ ನವರಿಗೂ ಒಳ್ಳೆ ಹುದ್ದೆ ನೀಡಲಾಗುವುದು ಎಙದು ಹೇಳಿದರು.
ಆಗಸ್ಟ್ ನಲ್ಲಿ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸುಮಾರು 50 ಸಾವಿರ ಮಂದಿಯನ್ನು ಸೇರಿಸಿ ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.